Homeಕರ್ನಾಟಕ'ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ': ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

‘ರೆಬಲ್ ಆಗುವುದು ಗೊತ್ತಿಲ್ಲ, ನ್ಯಾಯ ಕೇಳುವುದನ್ನು ಬಿಡಲ್ಲ’: ಕೆ.ಎಸ್ ಈಶ್ವರಪ್ಪ ಪತ್ರಿಕಾಗೋಷ್ಠಿ

- Advertisement -
- Advertisement -

ಯಡಿಯೂರಪ್ಪ ವಿರುದ್ಧ ರಾಜ್ಯಪಾಲರಿಗೆ ಮತ್ತು ಕೇಂದ್ರದ ಬಿಜೆಪಿ ವರಿಷ್ಟರಿಗೆ ಪತ್ರ ಬರೆದಿದ್ದ ಸಚಿವ ಕೆ.ಎಸ್ ಈಶ್ವರಪ್ಪ ಇಂದು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ‘ನನಗೆ ರೆಬಲ್ ಆಗುವುದೇ ಗೊತ್ತಿಲ್ಲ, ಆದರೆ ನ್ಯಾಯ ಕೇಳುವುದನ್ನು ಬಿಡಲ್ಲ. ನಿಯಮ ಮತ್ತು ಪ್ರಕ್ರಿಯೆಯನ್ನು ಮೀರಬಾರದು ಎಂಬುದಷ್ಟೆ ನನ್ನ ಆಗ್ರಹ’ ಎಂದು ಹೇಳಿದ್ದಾರೆ.

“ನಾನು ನ್ಯಾಯ ಕೇಳಿದ್ದೇನೆ. ನಿಯಮ ಉಲ್ಲಂಘನೆಯಾಗಿರುವುದನ್ನು ನಾನು ಆಕ್ಷೇಪಿಸಿದ್ದೇನೆ ಅಷ್ಟೆ. ಆದರೆ ಸರ್ಕಾರದ ವಿರುದ್ಧ ನಾನು ಬಂಡಾಯ ಎದ್ದಿಲ್ಲ. ಅಥವಾ ಮುಖ್ಯಮಂತ್ರಿ ಮತ್ತು ನನ್ನ ನಡುವೆ ಯಾವುದೇ ವೈಯಕ್ತಿಕ ತಕರಾರಿಲ್ಲ. ಆದರೆ ಕೆಲವು ಮಾಧ್ಯಮಗಳು ನಾನು ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದೇನೆ ಎಂದು ವರದಿ ಮಾಡಿವೆ, ಅದು ಸುಳ್ಳು” ಎಂದು ಸ್ಪಷ್ಟನೆ ನೀಡಿದ್ದಾರೆ.

ಒಂದು ರಾಜ್ಯದಲ್ಲಿ ಹಣವನ್ನು ಯಾವುದೆ ಕೆಲಸಕ್ಕೆ ಬಳಸುವ ಪರಮಾಧಿಕಾರ ಸಿಎಂಗೆ ಇದೆ. ಆದರೆ ಒಂದು ಇಲಾಖೆಗೆ ಹಣ ಬಂದಮೇಲೆ ಅದು ಇಲಾಖೆಯ ಕೆಲಸ. ಈಗ ಸಿಎಂ ನಮ್ಮ ಇಲಾಖೆಗೆ ಬಂದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಬಜೆಟ್‌ನಲ್ಲಿ ಒಂದು ಇಲಾಖೆಗೆ ಬಿಡುಗಡೆಯಾಗಿರುವ ಹಣವನ್ನು ಇಲಾಖೆಯ ಸಚಿವರಿಗೆ ಗೊತ್ತಿಲ್ಲದೆ ಅಥವಾ ಮಾಹಿತಿ ನೀಡದೇ ಆ ಹಣವನ್ನು ಶಾಸಕರಿಗೆ ಅಥವಾ ಇತರೆ ಕೆಲಸಗಳಿಗೆ ಬಳಸಲಾಗಿದೆ. ಇದನ್ನು ಆರ್ಥಿಕ ಇಲಾಖೆಯೂ ಒಪ್ಪಿಕೊಂಡಿದೆ. ನಮ್ಮಿಂದ ತಪ್ಪಾಗಿದೆ ಎಂದೂ ಹೇಳಿದೆ. ಆದರೆ ಮುಖ್ಯಮಂತ್ರಿ ಹೇಳಿದ ಮೇಲೆ ಆ ಕೆಲಸ ಮಾಡಲೇಬೇಕಲ್ಲ ಎಂದು ಅವರು ಹೇಳಿದರು. ಹಾಗಾಗಿ ನ್ಯಾಯ ಕೇಳಿದ್ದೇನೆ ಅಷ್ಟೆ. ಈ ಕುರಿತು ಸಿಎಂ ಸೇರಿದಂತೆ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಈಶ್ವರಪ್ಪ v/s ಯಡಿಯೂರಪ್ಪ- ‘ಬಿಜೆಪಿ ಶಿಸ್ತಿನ ಪಕ್ಷ, ಶಿಸ್ತು ಉಲ್ಲಂಘನೆ ಆಗಬಾರದು’: ಗೃಹ ಸಚಿವ ಬೊಮ್ಮಾಯಿ

“ಯಡಿಯೂರಪ್ಪ ರಾಜೀನಾಮೆ ಕೊಡಲಿ ಅಥವಾ ಈಶ್ವರಪ್ಪ ರಾಜೀನಾಮೆ ಕೊಡಲಿ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಅದು ಖಂಡಿತಾ ಸಾಧ್ಯವಿಲ್ಲ. ನಾನು ಯಡಿಯೂರಪ್ಪ ಯಾವಾಗಲೂ ಒಂದೇ” ಎಂದು ಹೇಳಿದ್ದಾರೆ.

ಯಡಿಯೂರಪ್ಪ ಮತ್ತು ಈಶ್ವರಪ್ಪನವರ ನಡುವಿನ ಭಿನ್ನಾಭಿಪ್ರಾಯ ಕುರಿತು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸುತ್ತಾ, “ಇದು ಹೊಸದಲ್ಲ, ಮೊದಲಿನಿಂದಲೂ ಇದೆ. ನಾವು ಒಂದೇ ತಟ್ಟೆಯಲ್ಲಿ ಊಟಮಾಡಿದ್ದೇವೆ, ಬಿಜಿನಸ್ ಪಾರ್ಟ್ನರ್ ನಾವು. ಯಡಿಯೂರಪ್ಪ ಬಿಜೆಪಿಯಿಂದ ಹೊರಗೆ ಹೋಗಿ ಕೆಜೆಪಿ ಕಟ್ಟಿದ್ದರು. ಆಗ ಅವರೂ ಬಿಜೆಪಿಯ ವಿರುದ್ಧ ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು. ನಾವೂ ಕೂಡ ತಕ್ಕ ಉತ್ತರ ಕೊಟ್ಟಿದ್ದೆವು. ನಂತರ ಬಿಜೆಪಿಯೊಳಗೆ ವಿಲೀನವಾಗಬೇಕು ಎನ್ನುವ ವಿಷಯ ಬಂದಾಗ ನಾನು ಯಡಿಯೂರಪ್ಪನವರನ್ನು ನೋಡಿ, ‘ಮೊದಲೇ ಹೇಳಿದ್ದೆ ಕೆಜೆಪಿ ಬೇಡ ಎಂದು. ಈಗ ನೋಡಿ ನಮಗೂ ನಿಮಗೂ ತ್ರಾಸ’ ಎಂದು ಹೇಳಿದೆ. ಅದಕ್ಕೆ ನೋವಿನಿಂದಲೇ ಉತ್ತರಿಸಿದ ಯಡಿಯೂರಪ್ಪ, ‘ನಾನು ಕೆಜೆಪಿ ಕಟ್ಟಬೇಕೆಂದೂ, ತಾವು ಜೊತೆಗೆ ಬರುತ್ತೇವೆ ಎಂದೂ ಹಲವರು ಒತ್ತಾಯಿಸಿದ್ದರು. ಆದರೆ ಪಕ್ಷ ಕಟ್ಟಿದ ನಂತರ ಯಾರೂ ಹತ್ತಿರ ಸುಳಿಯಲಿಲ್ಲ’ ಎಂದು ಹೇಳಿದ್ದರು. ಇದನ್ನು ಯಾಕೆ ಹೇಳುತ್ತಿದ್ದೇನೆ ಎಂದರೆ, ಯಡಿಯೂರಪ್ಪ ತನ್ನ ಸುತ್ತಲಿನವರ ಮಾತನ್ನು ಬೇಗ ನಂಬುತ್ತಾರೆ. ಬಹುಶಃ ಈಗಲೂ ಅದೇ ಆಗಿದೆ ಎನ್ನುವುದು ನನ್ನ ಅಭಿಪ್ರಾಯ ಎಂದು ಹೇಳಿದರು.


ಇದನ್ನೂ ಓದಿ: ಈಶ್ವರಪ್ಪನವರು ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...