Homeಮುಖಪುಟಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

ಸಂಪಾದಕರ ವಿರುದ್ಧ ಪತ್ರ: ಟೈಮ್ಸ್ ನೌ ಚಾನೆಲ್‌ನ ಹಾಲಿ, ಮಾಜಿ ಪತ್ರಕರ್ತರ ಜೊತೆ ನಿಲ್ಲೋಣ

- Advertisement -
- Advertisement -

ಕೋವಿಡ್ ಎರಡನೇ ಅಲೆಯಿಂದ ದೇಶ ತತ್ತರಿಸುತ್ತಿದ್ದರೂ ಟೈಮ್ಸ್ ನೌ ಮಾತ್ರ ಬಿಜೆಪಿಯ ಪಿಆರ್ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಟೈಮ್ಸ್ ನೌ ಇಂಗ್ಲಿಷ್ ಚಾನೆಲ್‌ನ ಮಾಜಿ ಮತ್ತು ಹಾಲಿ ವರದಿಗಾರರು, ಉದ್ಯೋಗಿಗಳು ಸಂಪಾದಕ ಮಂಡಳಿಗೆ ಬರೆದ ಪತ್ರಕ್ಕೆ ಶಿಕ್ಷಣ ತಜ್ಞ ಅನಿಲ್ ಸದ್ಗೋಪಾಲ್ ಪ್ರತಿಕ್ರಿಯಿಸಿದ್ದಾರೆ.

‘ಟೈಮ್ಸ್ ನೌ’ನ ಹಿಂದಿನ ಮತ್ತು ಪ್ರಸ್ತುತ ಉದ್ಯೋಗಿಗಳ’ ಈ ಪತ್ರವು ಕೇವಲ ದಂಗೆಯಲ್ಲ. ಸಂವಿಧಾನಕ್ಕೆ ಅನುಗುಣವಾಗಿ ಭಾರತವನ್ನು ನಿರ್ಮಿಸುವ ಆಕಾಂಕ್ಷೆಯದ್ದು. ಜಾತಿ ವಿರೋಧಿ ಮತ್ತು ಸಾಮ್ರಾಜ್ಯಶಾಹಿ-ವಿರೋಧಿ ನೆಲೆಯಲ್ಲಿ ಸ್ವಾತಂತ್ರ‍್ಯ ಹೋರಾಟದ ಆಕಾಂಕ್ಷೆಗಳಿಗೆ ಅನುಗುಣವಾಗಿ ಒಂದು ಪ್ರಮುಖ ಸಾಮಾಜಿಕ-ರಾಜಕೀಯ ಪರಿವರ್ತನೆಗಾಗಿ ಬಿತ್ತಲ್ಪಟ್ಟ ಬೀಜವಾಗಿದೆ ಎಂದು ಶಿಕ್ಷಣದ ಹಕ್ಕಿಗಾಗಿ ಅಖಿಲ ಭಾರತ ವೇದಿಕೆಯ ಮುಖಂಡರಾದ ಪ್ರೊ. ಅನಿಲ್ ಸದ್ಗೋಪಾಲ್ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: ಲಕ್ಷಾಂತರ ಮಕ್ಕಳಿಗೆ ಶಿಕ್ಷಣ ಸಿಗಲು ಕಾರಣರಾದ ನಿಜವಾದ ಶಿಕ್ಷಣದ ಸಂತ ಅನಿಲ್ ಸದ್ಗೋಪಾಲ್

ಈ ಐತಿಹಾಸಿಕ ಪತ್ರದ ಲೇಖಕರ ಧೈರ್ಯ, ನೇರ, ಒಳನೋಟ, ಸತ್ಯಕ್ಕೆ ಬದ್ಧತೆ ಮತ್ತು ಭಾರತದ ಜನರ ಮೇಲಿನ ಪ್ರೀತಿಗಾಗಿ ನಮಸ್ಕರಿಸೋಣ ಎಂದು ಅವರು ತಿಳಿಸಿದ್ದಾರೆ.

ಈ ಪತ್ರದ ಲೇಖಕರು, ಈಗ ಅಧಿಕಾರದ ಆಕ್ರಮಣಕ್ಕೆ ಒಳಗಾಗಿರುವ ಸಾರ್ವತ್ರಿಕ ಪತ್ರಿಕೋದ್ಯಮದ ಮೂರು ಮೂಲಭೂತ ಸಿದ್ಧಾಂತಗಳನ್ನು ರೂಪಿಸುವ ಬಗ್ಗೆ ಸ್ಪಷ್ಟವಾಗಿ ಹೇಳಿದ್ದಾರೆ. “ಯಾವಾಗಲೂ ಜನರ ಪರವಾಗಿರಿ. ಯಾವಾಗಲೂ ಮಾನವೀಯತೆಯ ಬದಿಯಲ್ಲಿರಿ. ತಪ್ಪುಗಳಾದಾಗ ಅಧಿಕಾರದಲ್ಲಿರುವವರನ್ನು ಜವಾಬ್ದಾರರನ್ನಾಗಿ ಮಾಡಿ…” ಎಂದಿದ್ದಾರೆ.

ನಮ್ಮ ದೇಶದ ಭವಿಷ್ಯಕ್ಕಾಗಿ ನಾವು ಮಾಡಬಹುದಾದ ಕನಿಷ್ಠವೆಂದರೆ, ಸತ್ಯ ದಾಖಲಿಸಲು ಧೈರ್ಯ ಮಾಡಿದ ಟೈಮ್ಸ್ ನೌ ಚಾನೆಲ್‌ನ ಈ ಮಾಜಿ ಮತ್ತು ಪ್ರಸ್ತುತ ಉದ್ಯೋಗಿಗಳೊಂದಿಗೆ ನಿಲ್ಲುವುದು ಎಂದು ಅನಿಲ್ ಸದ್ಗೋಪಾಲ್ ಕರೆ ನೀಡಿದ್ದಾರೆ.


ಇದನ್ನೂ ಓದಿ: ಜನರ ಸಂಕಷ್ಟ ಮರೆತು ಬಿಜೆಪಿಯ ಪಿಆರ್ ಕೆಲಸ ಮಾಡುತ್ತಿರುವ ಟೈಮ್ಸ್ ನೌ: ಸಂಪಾದಕರಿಗೆ ಚಾನೆಲ್ ವರದಿಗಾರರ ‘ದಿಟ್ಟ ಪತ್ರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಕೊನೆಗೂ ಪತ್ರಕರ್ತರು ಧ್ವನಿ ಎತ್ತುತ್ತಿರುವುದು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಒಂದು ಒಳ್ಳೆಯ ಲಕ್ಷಣ. ಜನ ಇವರ ಪರವಾಗಿ ನಿಲ್ಲಬೇಕಾಗಿದೆ. ಸರ್ವಾಧಿಕಾರದ ದೌರ್ಜನ್ಯವನ್ನು ಖಂಡಿಸಬೇಕಾಗಿದೆ.

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...