Homeಕರ್ನಾಟಕಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

- Advertisement -
- Advertisement -

ಹಿಂದೂ ಮುಸ್ಲಿಂ ಯುವ ಮಿತ್ರರೇ, ನಾನು ಇತ್ತೀಚೆಗೆ ಕೋಮು ಗಲಭೆಯಾದರೆ, ಯಾರದರೂ ಸತ್ತರೆ ತೀರಾ ಭಾವನಾತ್ಮಕವಾಗಿ ಸ್ಪಂದಿಸುವುದನ್ನು ಕಡಿಮೆ ಮಾಡಿದ್ದೇನೆ. ಯಾಕೆಂದರೆ ಇವತ್ತು ಕೆಲವರು ಹೇಳುವುದನ್ನು ನಾನು 30 ವರ್ಷಗಳ ಹಿಂದೆ ಎಕಾಂಗಿಯಾಗಿ ಬೊಬ್ಬೆ ಹೊಡೆದು ಹೇಳಿದ್ದೆ. ಆಗ ಯಾರೂ ಕೂಡಾ ಅದನ್ನ ಕೇಳಿಸಿಕೊಳ್ಳಲಿಲ್ಲ. ಈಗ ಹೆಚ್ಚು ಜನರಿಗೆ ಅರ್ಥವಾದಂತಿದೆ.

ಬಡವರ ಮನೆಯ ಮಕ್ಕಳಿಗೆ ಮಾತ್ರ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದಲ್ಲಿ ಹೊಡೆದಾಡಿಕೊಳ್ಳುವ ಪರಿಸ್ಥಿತಿ ಯಾಕೆ? ಸಾಮಾಜಿಕವಾಗಿ ಆರ್ಥಿಕವಾಗಿ ಮೇಲೆ ಇರುವ ಯಾರಿಗೂ ಸಮಸ್ಯೆಗಳಾಗದ್ದು ಈ ಯುವಕರಿಗೇಕೆ ಸಮಸ್ಯೆ ಅಂತಾ ಕೇಳಿದ್ದೆ. ಹಿಂದೂ ಮುಸ್ಲಿಂನ ರಾಜಕೀಯ ನಾಯಕರ ಮನೆಯ ಮಕ್ಕಳು ಇಂತಹ ಸಂಘಟನೆಗಳಲ್ಲಿ ಕನಿಷ್ಠ ಸದಸ್ಯರಾಗಿಯೂ ಇರುವುದಿಲ್ಲ ಯಾಕೆ ಎಂದೂ ಕೇಳಿದ್ದೆ. ಈಗ ಅನೇಕರು ಈ ಪ್ರಶ್ನೆ ತಡವಾಗಿ ಕೇಳುತ್ತಿದ್ದಾರೆ. ಸಂತೋಷ.

ಹೀಗೆ ಹೇಳಿದ ತಕ್ಷಣ, “ಅರೇ ನಾವು ನಮ್ಮ ಧರ್ಮದ ಸಂಘಟನೆ ಮಾಡಿಕೊಳ್ಳುವುದು ತಪ್ಪಾ” ಅನ್ನುತ್ತೀರಿ. ಖಂಡಿತ ತಪ್ಪಲ್ಲ. ಅದು ನಿಮ್ಮ ನಿಮ್ಮ ಧರ್ಮದಲ್ಲಿನ ಉತ್ತಮ ವಿಷಯ ಪ್ರಚಾರಕ್ಕೆ, ಜೀವನ ಪದ್ಧತಿಯನ್ನು ಆದರ್ಶ ಮತ್ತು ಮೌಲ್ಯಗಳೊಂದಿಗೆ ಬದುಕಲು ಪ್ರೇರಣೆಯಾಗುವುದಕ್ಕೆ ಮತ್ತು ನಾವು ನಂಬುವ ದೇವರೊಂದಿಗೆ ಅನುಸಂಧಾನ ಮಾಡುವುದಕ್ಕೆ, ಮತೀಯ ಹೆಸರಲ್ಲಿ ಒಂದಿಷ್ಟು ಜನರ ಬದುಕು ಸರಿ ಮಾಡುವುದಕ್ಕೆ ಸಂಘಟನೆ ಮಾಡಿ. ಬೇಡ ಅನ್ನುವುದು ತಪ್ಪಾಗುತ್ತದೆ.

ನಮ್ಮ ಧರ್ಮದ ಅಳಿವು ಉಳಿವಿನ ಪ್ರಶ್ನೆ ಇದು. ಅದಕ್ಕಾಗಿ ಹೋರಾಟ ಮಾಡಲು, ಇದೊಂದು ಸೈನ್ಯ ಅಂತಿರಾ. ಸರಿ. ಧರ್ಮದ ಅಳಿವು ಉಳಿವಿನ ಪ್ರಶ್ನೆ ಅಂತಾದರೆ ಈ ಹೋರಾಟದಲ್ಲಿ ಶ್ರೀಮಂತರು, ಮೇಲ್ವರ್ಗದವರು, ಸನ್ಯಾಸಿಗಳು, ಪಾದ್ರಿಗಳು, ಮೌಲ್ವಿಗಳು ತಮ್ಮ ತಮ್ಮ ಧರ್ಮ ರಕ್ಷಣೆಗೆ ನಿಮ್ಮ ಜೊತೆ ಬೀದಿ ಹೋರಾಟಕ್ಕೆ ಯಾಕೆ ಬರುವುದಿಲ್ಲ? ನಿಮ್ಮ ಪರ ಕಿರಿಚಾಡುವ ಟಿವಿ ನಿರೂಪಕ ಯಾಕೆ ಬೀದಿಗಿಳಿಯಲಾರ. ಮತೀಯವಾಗಿ ಉದ್ರೇಕ ಹೇಳಿಕೆ ಕೊಡುವ ನಾಯಕನ ಕುಟುಂಬವನ್ನು ನೀವು ಹತ್ತಿರದಿಂದ ನೋಡಿದ್ದೀರಿ.

ಇದನ್ನೂ ಓದಿರಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಿಮ್ಮ ಬಳಿಯೇ ಇರುವ ಜನಪ್ರತಿನಿಧಿ ಅಥವಾ ಮತೀಯ ಸಂಘಟನೆಗಳ ಉನ್ನತ ನಾಯಕರನ್ನು ನೋಡಿ. ಅವರುಗಳ ಮನೆ, ವೈಭೋಗ, ಮಕ್ಕಳ ಉನ್ನತ ಶಿಕ್ಷಣ, ವ್ಯಾಪಾರ ವಹಿವಾಟು- ಅದು ನಿಮಗಿಲ್ಲ. ನಿಮ್ಮ ಹೋರಾಟದಲ್ಲಿ ಅವರಿಲ್ಲ. ಯಾಕೆ ಅಂತಾ ಯೋಚನೆ ಮಾಡಿದ್ದೀರಾ? ಹಾಗಾದರೆ ನೀವು ಕೆರಳಿ ಹೊಡೆದಾಡುವ ಮತೀಯ ಸಮಸ್ಯೆ ಅವರಿಗ್ಯಾರಿಗೂ ಇಲ್ಲವೆ? ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳಿ.

ಸಾಮಾಜಿಕ ಜಾಲತಾಣದಲ್ಲಿ ನಿಮ್ಮನ್ನು ಹುರಿದುಂಬಿಸುವವರ ವಾಲ್ ಗಳನ್ನು ನೋಡಿ ಬನ್ನಿ. ಅಸಲಿಗೆ ಗಲಾಟೆಯಾದಾಗ ಅವರು ಮನೆ ಬಾಗಿಲು ಹಾಕಿ ಒಳಗಿರುವ ಜನರೇ ಜಾಸ್ತಿ. ಅವರ ವಾಲ್ ಪೋಟೋ ನೋಡಿ. ಆಧುನಿಕತೆ ಪಾಶ್ಚಿಮಾತ್ಯ ಎಲ್ಲ ಸುಖ ಅನುಭವಿಸುತ್ತ, ವಿದೇಶದಲ್ಲಿ ಮಕ್ಕಳನ್ನು ಸುಖವಾಗಿಡುವ ಜನ (ಹೀಗೆ ಮಾಡುವವರ ಬಗ್ಗೆ ನನ್ನ ಆಕ್ಷೇಪವಿಲ್ಲ. ಆದರೆ ತಾವು ಹಾಗಿದ್ದುಕೊಂಡು ಬೇರೆಯವರ ಮಕ್ಕಳನ್ನು ದಾರಿಗೆ ತಳ್ಳುವವರ ವಿರೋಧಿ ನಾನು). ಇಂಥವರು ನಿಮ್ಮ ಜೊತೆ ಬೀದಿ ಹೋರಾಟಕ್ಕೆ ಬಂದದ್ದು ಉಂಟಾ?

ಒಂದಿಷ್ಟು ಸಮಸ್ಯೆ ಇದೆ. ಮುಸ್ಲಿಮರು ಹಿಂದೂಗಳನ್ನು ಆಕ್ರಮಿಸಿ ಇದನ್ನು ಮುಸ್ಲಿಂ ರಾಷ್ಟ್ರ ಮಾಡುತ್ತಾರೆ ಅನ್ನುವುದು ಕೆಲವರ ಭಯ. ಹಿಂದೂಗಳು ಮುಸ್ಲಿಂ, ಕ್ರೈಸ್ತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುತ್ತಾರೆ ಅನ್ನುವ ಭಯ. ಈ ಭಯಕ್ಕೆ ಮೂಲ ಯಾವುದು? ಕಾರಣಗಳೇನು? ಅದು ನಿಜವೇ ಆಗಿದ್ದರೆ ಅದಕ್ಕೆ ಪರಿಹಾರವೇನು ಅನ್ನುವ ಪ್ರಶ್ನೆಗೆ ಇಡೀ ಹಿಂದೂ ಜನಾಂಗ, ಮುಸ್ಲಿಂ ಜನಾಂಗ, ಕ್ರೈಸ್ತ ಸಮಾಜ ಸಾಮೂಹಿಕವಾಗಿ ಉತ್ತರದಾಯಿತ್ವವಾಗಬೇಕಲ್ಲವೇ? ನೀವು ಮಾತ್ರ ಬಲಿಯಾಗುವುದು ಯಾಕೆ?

ನಿಮ್ಮಲ್ಲೊಂದು ಹೆಣ ಸುಟ್ಟು ಭಸ್ಮವಾಗುವ ಮುನ್ನವೇ, ಅಲ್ಲೆಲ್ಲೋ ವೇದಿಕೆಯಲ್ಲಿ ಎಲ್ಲಾ ಧರ್ಮದ ಗುರುಗಳೂ ಒಟ್ಟಾಗಿ ಕೂತು ಖುುಷಿಯಾಗಿ ಮಾತನಾಡುವುದನ್ನು ನೋಡಿದೆ. ಇನ್ನೆಲ್ಲೋ ಕಾರ್ಯಕ್ರಮದಲ್ಲಿ ವಿವಿಧ ಧರ್ಮದ ರಾಜಕೀಯ ನಾಯಕರು ಊಟ ಮಾಡುವುದನ್ನೂ ನೋಡಿದೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ನೀವು ಹೇಳುವ ಸಮಸ್ಯೆಯ ಹೋರಾಟಕ್ಕೆ ಸ್ವಾಮಿಗಳು, ಫಾದರ್‌ಗಳು, ಮೌಲ್ವಿಗಳು, ಬರುವುದಿಲ್ಲ. ಅವರು ಪರಸ್ಪರ ಅನ್ಯೋನ್ಯವಾಗಿರುವುದನ್ನೂ ನೋಡಿದೆ. ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಕೋಟಿಗಟ್ಟಲೇ ಪರಸ್ಪರ ವ್ಯವಹಾರ ಮಾಡುವವರು ಮಾಡುತ್ತಲೇ ಇರುವುದನ್ನು, ರಾತ್ರಿ ಡೀಲ್ ಗಳನ್ನೂ ನೋಡಿದೆ. ಹೀಗೆ ನೋಡಿ ಅರ್ಥವಾದಾಗ ನಿಮ್ಮಂತೆ ಯೋಚಿಸುತ್ತಿದ್ದ ನಾನು 30 ವರ್ಷಗಳ ಹಿಂದೆ ಎಲ್ಲವನ್ನೂ ಬಿಟ್ಟೆ.

ಸಮಾಜದಲ್ಲಿ ಯಾರಿಗೂ ಇಲ್ಲದ ಸಮಸ್ಯೆ ನಿಮ್ಮ ತಲೆಗೆ ಕಟ್ಟುವವರು ಯಾರು? ಹಾಗೇ ಸಮಸ್ಯೆ ಹೊತ್ತುಕೊಂಡು ಹೊಡೆದಾಡಿ ಸಾಯುವ ನೀವು ಯಾರು?- ಪ್ರಶ್ನಿಸಿಕೊಳ್ಳಿ. ಧರ್ಮಕ್ಕೆ ಸಮಸ್ಯೆ ಬಂದರೆ ಅದನ್ನು ಸರಿಮಾಡಬೇಕಾದುದು ಮಠ, ಚರ್ಚ್, ಮಸೀದಿಗಳು, ಸರ್ಕಾರಗಳು. ಪೂರ್ಣ ಸಮಾಜದ ಹೊಣೆಗಾರಿಕೆ ಅದು.
ಅವರು ಇರೋದು ಯಾಕೆ? ಅವರು ಜವಾಬ್ದಾರಿ ತೆಗೆದುಕೊಳ್ಳಬೇಕಲ್ಲವೇ?

ಒಮ್ಮೆ ಪರೀಕ್ಷಿಸುವುದಕ್ಕಾಗಿ ಇದನ್ನು ಮಾಡಿ ನೋಡಿ. ನೀವು ಬೀದಿಗಿಳಿದು ಹೋರಾಟಕ್ಕೆ ಹೋಗುವ ಸಂಗತಿಗಳನ್ನು ತಿಳಿಸಿ, ನಿಮ್ಮ ನಾಯಕರ ಮನೆಯ ಸದಸ್ಯರನ್ನು, ರಾಜಕೀಯ ಮುಖಂಡರ ಮನೆಯ ಸದಸ್ಯರನ್ನು , ಫೇಸ್‌ಬುಕ್‌ ನಲ್ಲಿ ಕುಟ್ಟುವ ಅಂಕಲ್, ಆಂಟಿ, ಬ್ರೋ, ಸಿಸ್‌ಗಳನ್ನು, ಟಿವಿ ಲಿ ಅರಚುವವರ ಮನೆಯ ಮಕ್ಕಳನ್ನು ಒಮ್ಮೆ ಕರೆದು ನೋಡಿ. ಎಲ್ಲರೂ ಬಂದರೆ ಸೂಪರ್. ಹೋರಾಡಿ.

ಒಂದು ಮಾತು. ನೀವು ನಿಮ್ಮ ಊರಿನಲ್ಲಿ ಇಂತಹ ಬೀದಿ ಹೋರಾಟಕ್ಕೆ ಹೋಗುವಾಗ, ನಿಮ್ಮ ಊರಿನ ಜನಸಂಖ್ಯೆ ಲೆಕ್ಕ ಹಾಕಿ. ನೀವು ಎಷ್ಟು ಜನ ಅಂತಾ ನೋಡಿ. 25 ಲಕ್ಷ ಜನಸಂಖ್ಯೆಯ ಜಿಲ್ಲೆಯಲ್ಲಿ ಇಂತಹ ಹೋರಾಟಕ್ಕೆ ಬರುವವರು ಕೇವಲ ನೂರು, ಸಾವಿರ. ಅಂದರೆ ಇಡೀ ಸಮಾಜಕ್ಕೆ ಇಲ್ಲದ ಮಂಡೆ ಬಿಸಿ ನಿಮಗೆ ಮಾತ್ರ. ದೇಶದ ಸೈನ್ಯದಲ್ಲಿ ಯೋಧರಾಗಿ ಸಾಯುವುದು ಶ್ರೇಷ್ಠ. ಆದರೆ ಇಂತಹ ಹೊಡೆದಾಟದಲ್ಲಿ ಸೈನಿಕನಾಗಿ ಸಾಯುವುದಲ್ಲ. ಬೇರೆಯವರ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಯಾಗುವುದು.

ನಾನು ನನ್ನ ಮಕ್ಕಳನ್ನು ಕಳಿಸುವುದಿಲ್ಲ. ಅವರು ಒಳ್ಳೆಯ ಉದ್ಯೋಗ ಮಾಡಿ, ಸಮಾಜಕ್ಕೆ ಎನಾದರೂ ನೀಡಲಿ ಎಂದು ಬಯಸುವೆ. ಅದಕ್ಕೆ ನೀವೂ ಹಾಗೇ ಆಗಬೇಕೆಂಬ ಹಾರೈಕೆ. ನಿಮ್ಮ ನಿಮ್ಮ ಧರ್ಮದ ಪುನರುತ್ಥಾನ , ಪ್ರಚಾರ, ಅಭಿವೃದ್ಧಿಗೆ ಸಾವಿರ ಸಭ್ಯ ದಾರಿಗಳಿದೆ. ನಿಮ್ಮ ಮರಣದಿಂದ ಏನೂ ಆಗುವುದಿಲ್ಲ.

  • ಎಂ.ಜಿ.ಹೆಗಡೆ, ಶಿಕ್ಷಣ ತಜ್ಞರು
    ಹಾಗೂ ಕರಾವಳಿ ಭಾಗದ ಹಿರಿಯ ಸಾಮಾಜಿಕ ಹೋರಾಟಗಾರರು

ಇದನ್ನೂ ಓದಿರಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...