Homeಕರ್ನಾಟಕಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

- Advertisement -
- Advertisement -

ಹಿಂದೂ ಮುಸ್ಲಿಂ ಯುವ ಮಿತ್ರರೇ, ನಾನು ಇತ್ತೀಚೆಗೆ ಕೋಮು ಗಲಭೆಯಾದರೆ, ಯಾರದರೂ ಸತ್ತರೆ ತೀರಾ ಭಾವನಾತ್ಮಕವಾಗಿ ಸ್ಪಂದಿಸುವುದನ್ನು ಕಡಿಮೆ ಮಾಡಿದ್ದೇನೆ. ಯಾಕೆಂದರೆ ಇವತ್ತು ಕೆಲವರು ಹೇಳುವುದನ್ನು ನಾನು 30 ವರ್ಷಗಳ ಹಿಂದೆ ಎಕಾಂಗಿಯಾಗಿ ಬೊಬ್ಬೆ ಹೊಡೆದು ಹೇಳಿದ್ದೆ. ಆಗ ಯಾರೂ ಕೂಡಾ ಅದನ್ನ ಕೇಳಿಸಿಕೊಳ್ಳಲಿಲ್ಲ. ಈಗ ಹೆಚ್ಚು ಜನರಿಗೆ ಅರ್ಥವಾದಂತಿದೆ.

ಬಡವರ ಮನೆಯ ಮಕ್ಕಳಿಗೆ ಮಾತ್ರ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದಲ್ಲಿ ಹೊಡೆದಾಡಿಕೊಳ್ಳುವ ಪರಿಸ್ಥಿತಿ ಯಾಕೆ? ಸಾಮಾಜಿಕವಾಗಿ ಆರ್ಥಿಕವಾಗಿ ಮೇಲೆ ಇರುವ ಯಾರಿಗೂ ಸಮಸ್ಯೆಗಳಾಗದ್ದು ಈ ಯುವಕರಿಗೇಕೆ ಸಮಸ್ಯೆ ಅಂತಾ ಕೇಳಿದ್ದೆ. ಹಿಂದೂ ಮುಸ್ಲಿಂನ ರಾಜಕೀಯ ನಾಯಕರ ಮನೆಯ ಮಕ್ಕಳು ಇಂತಹ ಸಂಘಟನೆಗಳಲ್ಲಿ ಕನಿಷ್ಠ ಸದಸ್ಯರಾಗಿಯೂ ಇರುವುದಿಲ್ಲ ಯಾಕೆ ಎಂದೂ ಕೇಳಿದ್ದೆ. ಈಗ ಅನೇಕರು ಈ ಪ್ರಶ್ನೆ ತಡವಾಗಿ ಕೇಳುತ್ತಿದ್ದಾರೆ. ಸಂತೋಷ.

ಹೀಗೆ ಹೇಳಿದ ತಕ್ಷಣ, “ಅರೇ ನಾವು ನಮ್ಮ ಧರ್ಮದ ಸಂಘಟನೆ ಮಾಡಿಕೊಳ್ಳುವುದು ತಪ್ಪಾ” ಅನ್ನುತ್ತೀರಿ. ಖಂಡಿತ ತಪ್ಪಲ್ಲ. ಅದು ನಿಮ್ಮ ನಿಮ್ಮ ಧರ್ಮದಲ್ಲಿನ ಉತ್ತಮ ವಿಷಯ ಪ್ರಚಾರಕ್ಕೆ, ಜೀವನ ಪದ್ಧತಿಯನ್ನು ಆದರ್ಶ ಮತ್ತು ಮೌಲ್ಯಗಳೊಂದಿಗೆ ಬದುಕಲು ಪ್ರೇರಣೆಯಾಗುವುದಕ್ಕೆ ಮತ್ತು ನಾವು ನಂಬುವ ದೇವರೊಂದಿಗೆ ಅನುಸಂಧಾನ ಮಾಡುವುದಕ್ಕೆ, ಮತೀಯ ಹೆಸರಲ್ಲಿ ಒಂದಿಷ್ಟು ಜನರ ಬದುಕು ಸರಿ ಮಾಡುವುದಕ್ಕೆ ಸಂಘಟನೆ ಮಾಡಿ. ಬೇಡ ಅನ್ನುವುದು ತಪ್ಪಾಗುತ್ತದೆ.

ನಮ್ಮ ಧರ್ಮದ ಅಳಿವು ಉಳಿವಿನ ಪ್ರಶ್ನೆ ಇದು. ಅದಕ್ಕಾಗಿ ಹೋರಾಟ ಮಾಡಲು, ಇದೊಂದು ಸೈನ್ಯ ಅಂತಿರಾ. ಸರಿ. ಧರ್ಮದ ಅಳಿವು ಉಳಿವಿನ ಪ್ರಶ್ನೆ ಅಂತಾದರೆ ಈ ಹೋರಾಟದಲ್ಲಿ ಶ್ರೀಮಂತರು, ಮೇಲ್ವರ್ಗದವರು, ಸನ್ಯಾಸಿಗಳು, ಪಾದ್ರಿಗಳು, ಮೌಲ್ವಿಗಳು ತಮ್ಮ ತಮ್ಮ ಧರ್ಮ ರಕ್ಷಣೆಗೆ ನಿಮ್ಮ ಜೊತೆ ಬೀದಿ ಹೋರಾಟಕ್ಕೆ ಯಾಕೆ ಬರುವುದಿಲ್ಲ? ನಿಮ್ಮ ಪರ ಕಿರಿಚಾಡುವ ಟಿವಿ ನಿರೂಪಕ ಯಾಕೆ ಬೀದಿಗಿಳಿಯಲಾರ. ಮತೀಯವಾಗಿ ಉದ್ರೇಕ ಹೇಳಿಕೆ ಕೊಡುವ ನಾಯಕನ ಕುಟುಂಬವನ್ನು ನೀವು ಹತ್ತಿರದಿಂದ ನೋಡಿದ್ದೀರಿ.

ಇದನ್ನೂ ಓದಿರಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಿಮ್ಮ ಬಳಿಯೇ ಇರುವ ಜನಪ್ರತಿನಿಧಿ ಅಥವಾ ಮತೀಯ ಸಂಘಟನೆಗಳ ಉನ್ನತ ನಾಯಕರನ್ನು ನೋಡಿ. ಅವರುಗಳ ಮನೆ, ವೈಭೋಗ, ಮಕ್ಕಳ ಉನ್ನತ ಶಿಕ್ಷಣ, ವ್ಯಾಪಾರ ವಹಿವಾಟು- ಅದು ನಿಮಗಿಲ್ಲ. ನಿಮ್ಮ ಹೋರಾಟದಲ್ಲಿ ಅವರಿಲ್ಲ. ಯಾಕೆ ಅಂತಾ ಯೋಚನೆ ಮಾಡಿದ್ದೀರಾ? ಹಾಗಾದರೆ ನೀವು ಕೆರಳಿ ಹೊಡೆದಾಡುವ ಮತೀಯ ಸಮಸ್ಯೆ ಅವರಿಗ್ಯಾರಿಗೂ ಇಲ್ಲವೆ? ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳಿ.

ಸಾಮಾಜಿಕ ಜಾಲತಾಣದಲ್ಲಿ ನಿಮ್ಮನ್ನು ಹುರಿದುಂಬಿಸುವವರ ವಾಲ್ ಗಳನ್ನು ನೋಡಿ ಬನ್ನಿ. ಅಸಲಿಗೆ ಗಲಾಟೆಯಾದಾಗ ಅವರು ಮನೆ ಬಾಗಿಲು ಹಾಕಿ ಒಳಗಿರುವ ಜನರೇ ಜಾಸ್ತಿ. ಅವರ ವಾಲ್ ಪೋಟೋ ನೋಡಿ. ಆಧುನಿಕತೆ ಪಾಶ್ಚಿಮಾತ್ಯ ಎಲ್ಲ ಸುಖ ಅನುಭವಿಸುತ್ತ, ವಿದೇಶದಲ್ಲಿ ಮಕ್ಕಳನ್ನು ಸುಖವಾಗಿಡುವ ಜನ (ಹೀಗೆ ಮಾಡುವವರ ಬಗ್ಗೆ ನನ್ನ ಆಕ್ಷೇಪವಿಲ್ಲ. ಆದರೆ ತಾವು ಹಾಗಿದ್ದುಕೊಂಡು ಬೇರೆಯವರ ಮಕ್ಕಳನ್ನು ದಾರಿಗೆ ತಳ್ಳುವವರ ವಿರೋಧಿ ನಾನು). ಇಂಥವರು ನಿಮ್ಮ ಜೊತೆ ಬೀದಿ ಹೋರಾಟಕ್ಕೆ ಬಂದದ್ದು ಉಂಟಾ?

ಒಂದಿಷ್ಟು ಸಮಸ್ಯೆ ಇದೆ. ಮುಸ್ಲಿಮರು ಹಿಂದೂಗಳನ್ನು ಆಕ್ರಮಿಸಿ ಇದನ್ನು ಮುಸ್ಲಿಂ ರಾಷ್ಟ್ರ ಮಾಡುತ್ತಾರೆ ಅನ್ನುವುದು ಕೆಲವರ ಭಯ. ಹಿಂದೂಗಳು ಮುಸ್ಲಿಂ, ಕ್ರೈಸ್ತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುತ್ತಾರೆ ಅನ್ನುವ ಭಯ. ಈ ಭಯಕ್ಕೆ ಮೂಲ ಯಾವುದು? ಕಾರಣಗಳೇನು? ಅದು ನಿಜವೇ ಆಗಿದ್ದರೆ ಅದಕ್ಕೆ ಪರಿಹಾರವೇನು ಅನ್ನುವ ಪ್ರಶ್ನೆಗೆ ಇಡೀ ಹಿಂದೂ ಜನಾಂಗ, ಮುಸ್ಲಿಂ ಜನಾಂಗ, ಕ್ರೈಸ್ತ ಸಮಾಜ ಸಾಮೂಹಿಕವಾಗಿ ಉತ್ತರದಾಯಿತ್ವವಾಗಬೇಕಲ್ಲವೇ? ನೀವು ಮಾತ್ರ ಬಲಿಯಾಗುವುದು ಯಾಕೆ?

ನಿಮ್ಮಲ್ಲೊಂದು ಹೆಣ ಸುಟ್ಟು ಭಸ್ಮವಾಗುವ ಮುನ್ನವೇ, ಅಲ್ಲೆಲ್ಲೋ ವೇದಿಕೆಯಲ್ಲಿ ಎಲ್ಲಾ ಧರ್ಮದ ಗುರುಗಳೂ ಒಟ್ಟಾಗಿ ಕೂತು ಖುುಷಿಯಾಗಿ ಮಾತನಾಡುವುದನ್ನು ನೋಡಿದೆ. ಇನ್ನೆಲ್ಲೋ ಕಾರ್ಯಕ್ರಮದಲ್ಲಿ ವಿವಿಧ ಧರ್ಮದ ರಾಜಕೀಯ ನಾಯಕರು ಊಟ ಮಾಡುವುದನ್ನೂ ನೋಡಿದೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ನೀವು ಹೇಳುವ ಸಮಸ್ಯೆಯ ಹೋರಾಟಕ್ಕೆ ಸ್ವಾಮಿಗಳು, ಫಾದರ್‌ಗಳು, ಮೌಲ್ವಿಗಳು, ಬರುವುದಿಲ್ಲ. ಅವರು ಪರಸ್ಪರ ಅನ್ಯೋನ್ಯವಾಗಿರುವುದನ್ನೂ ನೋಡಿದೆ. ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಕೋಟಿಗಟ್ಟಲೇ ಪರಸ್ಪರ ವ್ಯವಹಾರ ಮಾಡುವವರು ಮಾಡುತ್ತಲೇ ಇರುವುದನ್ನು, ರಾತ್ರಿ ಡೀಲ್ ಗಳನ್ನೂ ನೋಡಿದೆ. ಹೀಗೆ ನೋಡಿ ಅರ್ಥವಾದಾಗ ನಿಮ್ಮಂತೆ ಯೋಚಿಸುತ್ತಿದ್ದ ನಾನು 30 ವರ್ಷಗಳ ಹಿಂದೆ ಎಲ್ಲವನ್ನೂ ಬಿಟ್ಟೆ.

ಸಮಾಜದಲ್ಲಿ ಯಾರಿಗೂ ಇಲ್ಲದ ಸಮಸ್ಯೆ ನಿಮ್ಮ ತಲೆಗೆ ಕಟ್ಟುವವರು ಯಾರು? ಹಾಗೇ ಸಮಸ್ಯೆ ಹೊತ್ತುಕೊಂಡು ಹೊಡೆದಾಡಿ ಸಾಯುವ ನೀವು ಯಾರು?- ಪ್ರಶ್ನಿಸಿಕೊಳ್ಳಿ. ಧರ್ಮಕ್ಕೆ ಸಮಸ್ಯೆ ಬಂದರೆ ಅದನ್ನು ಸರಿಮಾಡಬೇಕಾದುದು ಮಠ, ಚರ್ಚ್, ಮಸೀದಿಗಳು, ಸರ್ಕಾರಗಳು. ಪೂರ್ಣ ಸಮಾಜದ ಹೊಣೆಗಾರಿಕೆ ಅದು.
ಅವರು ಇರೋದು ಯಾಕೆ? ಅವರು ಜವಾಬ್ದಾರಿ ತೆಗೆದುಕೊಳ್ಳಬೇಕಲ್ಲವೇ?

ಒಮ್ಮೆ ಪರೀಕ್ಷಿಸುವುದಕ್ಕಾಗಿ ಇದನ್ನು ಮಾಡಿ ನೋಡಿ. ನೀವು ಬೀದಿಗಿಳಿದು ಹೋರಾಟಕ್ಕೆ ಹೋಗುವ ಸಂಗತಿಗಳನ್ನು ತಿಳಿಸಿ, ನಿಮ್ಮ ನಾಯಕರ ಮನೆಯ ಸದಸ್ಯರನ್ನು, ರಾಜಕೀಯ ಮುಖಂಡರ ಮನೆಯ ಸದಸ್ಯರನ್ನು , ಫೇಸ್‌ಬುಕ್‌ ನಲ್ಲಿ ಕುಟ್ಟುವ ಅಂಕಲ್, ಆಂಟಿ, ಬ್ರೋ, ಸಿಸ್‌ಗಳನ್ನು, ಟಿವಿ ಲಿ ಅರಚುವವರ ಮನೆಯ ಮಕ್ಕಳನ್ನು ಒಮ್ಮೆ ಕರೆದು ನೋಡಿ. ಎಲ್ಲರೂ ಬಂದರೆ ಸೂಪರ್. ಹೋರಾಡಿ.

ಒಂದು ಮಾತು. ನೀವು ನಿಮ್ಮ ಊರಿನಲ್ಲಿ ಇಂತಹ ಬೀದಿ ಹೋರಾಟಕ್ಕೆ ಹೋಗುವಾಗ, ನಿಮ್ಮ ಊರಿನ ಜನಸಂಖ್ಯೆ ಲೆಕ್ಕ ಹಾಕಿ. ನೀವು ಎಷ್ಟು ಜನ ಅಂತಾ ನೋಡಿ. 25 ಲಕ್ಷ ಜನಸಂಖ್ಯೆಯ ಜಿಲ್ಲೆಯಲ್ಲಿ ಇಂತಹ ಹೋರಾಟಕ್ಕೆ ಬರುವವರು ಕೇವಲ ನೂರು, ಸಾವಿರ. ಅಂದರೆ ಇಡೀ ಸಮಾಜಕ್ಕೆ ಇಲ್ಲದ ಮಂಡೆ ಬಿಸಿ ನಿಮಗೆ ಮಾತ್ರ. ದೇಶದ ಸೈನ್ಯದಲ್ಲಿ ಯೋಧರಾಗಿ ಸಾಯುವುದು ಶ್ರೇಷ್ಠ. ಆದರೆ ಇಂತಹ ಹೊಡೆದಾಟದಲ್ಲಿ ಸೈನಿಕನಾಗಿ ಸಾಯುವುದಲ್ಲ. ಬೇರೆಯವರ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಯಾಗುವುದು.

ನಾನು ನನ್ನ ಮಕ್ಕಳನ್ನು ಕಳಿಸುವುದಿಲ್ಲ. ಅವರು ಒಳ್ಳೆಯ ಉದ್ಯೋಗ ಮಾಡಿ, ಸಮಾಜಕ್ಕೆ ಎನಾದರೂ ನೀಡಲಿ ಎಂದು ಬಯಸುವೆ. ಅದಕ್ಕೆ ನೀವೂ ಹಾಗೇ ಆಗಬೇಕೆಂಬ ಹಾರೈಕೆ. ನಿಮ್ಮ ನಿಮ್ಮ ಧರ್ಮದ ಪುನರುತ್ಥಾನ , ಪ್ರಚಾರ, ಅಭಿವೃದ್ಧಿಗೆ ಸಾವಿರ ಸಭ್ಯ ದಾರಿಗಳಿದೆ. ನಿಮ್ಮ ಮರಣದಿಂದ ಏನೂ ಆಗುವುದಿಲ್ಲ.

  • ಎಂ.ಜಿ.ಹೆಗಡೆ, ಶಿಕ್ಷಣ ತಜ್ಞರು
    ಹಾಗೂ ಕರಾವಳಿ ಭಾಗದ ಹಿರಿಯ ಸಾಮಾಜಿಕ ಹೋರಾಟಗಾರರು

ಇದನ್ನೂ ಓದಿರಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...