Homeಕರ್ನಾಟಕಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

ಹಿಂದೂ, ಮುಸ್ಲಿಂ ಯುವ ಮಿತ್ರರಿಗೆ ಶಿಕ್ಷಣ ತಜ್ಞ ಎಂ.ಜಿ.ಹೆಗಡೆ ಪತ್ರ

- Advertisement -
- Advertisement -

ಹಿಂದೂ ಮುಸ್ಲಿಂ ಯುವ ಮಿತ್ರರೇ, ನಾನು ಇತ್ತೀಚೆಗೆ ಕೋಮು ಗಲಭೆಯಾದರೆ, ಯಾರದರೂ ಸತ್ತರೆ ತೀರಾ ಭಾವನಾತ್ಮಕವಾಗಿ ಸ್ಪಂದಿಸುವುದನ್ನು ಕಡಿಮೆ ಮಾಡಿದ್ದೇನೆ. ಯಾಕೆಂದರೆ ಇವತ್ತು ಕೆಲವರು ಹೇಳುವುದನ್ನು ನಾನು 30 ವರ್ಷಗಳ ಹಿಂದೆ ಎಕಾಂಗಿಯಾಗಿ ಬೊಬ್ಬೆ ಹೊಡೆದು ಹೇಳಿದ್ದೆ. ಆಗ ಯಾರೂ ಕೂಡಾ ಅದನ್ನ ಕೇಳಿಸಿಕೊಳ್ಳಲಿಲ್ಲ. ಈಗ ಹೆಚ್ಚು ಜನರಿಗೆ ಅರ್ಥವಾದಂತಿದೆ.

ಬಡವರ ಮನೆಯ ಮಕ್ಕಳಿಗೆ ಮಾತ್ರ ಹಿಂದೂ ಮುಸ್ಲಿಂ ಕ್ರೈಸ್ತ ಧರ್ಮದಲ್ಲಿ ಹೊಡೆದಾಡಿಕೊಳ್ಳುವ ಪರಿಸ್ಥಿತಿ ಯಾಕೆ? ಸಾಮಾಜಿಕವಾಗಿ ಆರ್ಥಿಕವಾಗಿ ಮೇಲೆ ಇರುವ ಯಾರಿಗೂ ಸಮಸ್ಯೆಗಳಾಗದ್ದು ಈ ಯುವಕರಿಗೇಕೆ ಸಮಸ್ಯೆ ಅಂತಾ ಕೇಳಿದ್ದೆ. ಹಿಂದೂ ಮುಸ್ಲಿಂನ ರಾಜಕೀಯ ನಾಯಕರ ಮನೆಯ ಮಕ್ಕಳು ಇಂತಹ ಸಂಘಟನೆಗಳಲ್ಲಿ ಕನಿಷ್ಠ ಸದಸ್ಯರಾಗಿಯೂ ಇರುವುದಿಲ್ಲ ಯಾಕೆ ಎಂದೂ ಕೇಳಿದ್ದೆ. ಈಗ ಅನೇಕರು ಈ ಪ್ರಶ್ನೆ ತಡವಾಗಿ ಕೇಳುತ್ತಿದ್ದಾರೆ. ಸಂತೋಷ.

ಹೀಗೆ ಹೇಳಿದ ತಕ್ಷಣ, “ಅರೇ ನಾವು ನಮ್ಮ ಧರ್ಮದ ಸಂಘಟನೆ ಮಾಡಿಕೊಳ್ಳುವುದು ತಪ್ಪಾ” ಅನ್ನುತ್ತೀರಿ. ಖಂಡಿತ ತಪ್ಪಲ್ಲ. ಅದು ನಿಮ್ಮ ನಿಮ್ಮ ಧರ್ಮದಲ್ಲಿನ ಉತ್ತಮ ವಿಷಯ ಪ್ರಚಾರಕ್ಕೆ, ಜೀವನ ಪದ್ಧತಿಯನ್ನು ಆದರ್ಶ ಮತ್ತು ಮೌಲ್ಯಗಳೊಂದಿಗೆ ಬದುಕಲು ಪ್ರೇರಣೆಯಾಗುವುದಕ್ಕೆ ಮತ್ತು ನಾವು ನಂಬುವ ದೇವರೊಂದಿಗೆ ಅನುಸಂಧಾನ ಮಾಡುವುದಕ್ಕೆ, ಮತೀಯ ಹೆಸರಲ್ಲಿ ಒಂದಿಷ್ಟು ಜನರ ಬದುಕು ಸರಿ ಮಾಡುವುದಕ್ಕೆ ಸಂಘಟನೆ ಮಾಡಿ. ಬೇಡ ಅನ್ನುವುದು ತಪ್ಪಾಗುತ್ತದೆ.

ನಮ್ಮ ಧರ್ಮದ ಅಳಿವು ಉಳಿವಿನ ಪ್ರಶ್ನೆ ಇದು. ಅದಕ್ಕಾಗಿ ಹೋರಾಟ ಮಾಡಲು, ಇದೊಂದು ಸೈನ್ಯ ಅಂತಿರಾ. ಸರಿ. ಧರ್ಮದ ಅಳಿವು ಉಳಿವಿನ ಪ್ರಶ್ನೆ ಅಂತಾದರೆ ಈ ಹೋರಾಟದಲ್ಲಿ ಶ್ರೀಮಂತರು, ಮೇಲ್ವರ್ಗದವರು, ಸನ್ಯಾಸಿಗಳು, ಪಾದ್ರಿಗಳು, ಮೌಲ್ವಿಗಳು ತಮ್ಮ ತಮ್ಮ ಧರ್ಮ ರಕ್ಷಣೆಗೆ ನಿಮ್ಮ ಜೊತೆ ಬೀದಿ ಹೋರಾಟಕ್ಕೆ ಯಾಕೆ ಬರುವುದಿಲ್ಲ? ನಿಮ್ಮ ಪರ ಕಿರಿಚಾಡುವ ಟಿವಿ ನಿರೂಪಕ ಯಾಕೆ ಬೀದಿಗಿಳಿಯಲಾರ. ಮತೀಯವಾಗಿ ಉದ್ರೇಕ ಹೇಳಿಕೆ ಕೊಡುವ ನಾಯಕನ ಕುಟುಂಬವನ್ನು ನೀವು ಹತ್ತಿರದಿಂದ ನೋಡಿದ್ದೀರಿ.

ಇದನ್ನೂ ಓದಿರಿ: ಶಿವಮೊಗ್ಗದಲ್ಲಿ ನಿಷೇಧಾಜ್ಞೆ ನಡುವೆ ಶವಯಾತ್ರೆ: ಈಶ್ವರಪ್ಪ, ರಾಘವೇಂದ್ರ ವಿರುದ್ಧ ದೂರು ದಾಖಲು

ನಿಮ್ಮ ಬಳಿಯೇ ಇರುವ ಜನಪ್ರತಿನಿಧಿ ಅಥವಾ ಮತೀಯ ಸಂಘಟನೆಗಳ ಉನ್ನತ ನಾಯಕರನ್ನು ನೋಡಿ. ಅವರುಗಳ ಮನೆ, ವೈಭೋಗ, ಮಕ್ಕಳ ಉನ್ನತ ಶಿಕ್ಷಣ, ವ್ಯಾಪಾರ ವಹಿವಾಟು- ಅದು ನಿಮಗಿಲ್ಲ. ನಿಮ್ಮ ಹೋರಾಟದಲ್ಲಿ ಅವರಿಲ್ಲ. ಯಾಕೆ ಅಂತಾ ಯೋಚನೆ ಮಾಡಿದ್ದೀರಾ? ಹಾಗಾದರೆ ನೀವು ಕೆರಳಿ ಹೊಡೆದಾಡುವ ಮತೀಯ ಸಮಸ್ಯೆ ಅವರಿಗ್ಯಾರಿಗೂ ಇಲ್ಲವೆ? ನಿಮ್ಮನ್ನು ನೀವೇ ಪ್ರಶ್ನಿಸಿಕೊಳ್ಳಿ.

ಸಾಮಾಜಿಕ ಜಾಲತಾಣದಲ್ಲಿ ನಿಮ್ಮನ್ನು ಹುರಿದುಂಬಿಸುವವರ ವಾಲ್ ಗಳನ್ನು ನೋಡಿ ಬನ್ನಿ. ಅಸಲಿಗೆ ಗಲಾಟೆಯಾದಾಗ ಅವರು ಮನೆ ಬಾಗಿಲು ಹಾಕಿ ಒಳಗಿರುವ ಜನರೇ ಜಾಸ್ತಿ. ಅವರ ವಾಲ್ ಪೋಟೋ ನೋಡಿ. ಆಧುನಿಕತೆ ಪಾಶ್ಚಿಮಾತ್ಯ ಎಲ್ಲ ಸುಖ ಅನುಭವಿಸುತ್ತ, ವಿದೇಶದಲ್ಲಿ ಮಕ್ಕಳನ್ನು ಸುಖವಾಗಿಡುವ ಜನ (ಹೀಗೆ ಮಾಡುವವರ ಬಗ್ಗೆ ನನ್ನ ಆಕ್ಷೇಪವಿಲ್ಲ. ಆದರೆ ತಾವು ಹಾಗಿದ್ದುಕೊಂಡು ಬೇರೆಯವರ ಮಕ್ಕಳನ್ನು ದಾರಿಗೆ ತಳ್ಳುವವರ ವಿರೋಧಿ ನಾನು). ಇಂಥವರು ನಿಮ್ಮ ಜೊತೆ ಬೀದಿ ಹೋರಾಟಕ್ಕೆ ಬಂದದ್ದು ಉಂಟಾ?

ಒಂದಿಷ್ಟು ಸಮಸ್ಯೆ ಇದೆ. ಮುಸ್ಲಿಮರು ಹಿಂದೂಗಳನ್ನು ಆಕ್ರಮಿಸಿ ಇದನ್ನು ಮುಸ್ಲಿಂ ರಾಷ್ಟ್ರ ಮಾಡುತ್ತಾರೆ ಅನ್ನುವುದು ಕೆಲವರ ಭಯ. ಹಿಂದೂಗಳು ಮುಸ್ಲಿಂ, ಕ್ರೈಸ್ತರನ್ನು ಎರಡನೇ ದರ್ಜೆ ನಾಗರಿಕರನ್ನಾಗಿ ಮಾಡುತ್ತಾರೆ ಅನ್ನುವ ಭಯ. ಈ ಭಯಕ್ಕೆ ಮೂಲ ಯಾವುದು? ಕಾರಣಗಳೇನು? ಅದು ನಿಜವೇ ಆಗಿದ್ದರೆ ಅದಕ್ಕೆ ಪರಿಹಾರವೇನು ಅನ್ನುವ ಪ್ರಶ್ನೆಗೆ ಇಡೀ ಹಿಂದೂ ಜನಾಂಗ, ಮುಸ್ಲಿಂ ಜನಾಂಗ, ಕ್ರೈಸ್ತ ಸಮಾಜ ಸಾಮೂಹಿಕವಾಗಿ ಉತ್ತರದಾಯಿತ್ವವಾಗಬೇಕಲ್ಲವೇ? ನೀವು ಮಾತ್ರ ಬಲಿಯಾಗುವುದು ಯಾಕೆ?

ನಿಮ್ಮಲ್ಲೊಂದು ಹೆಣ ಸುಟ್ಟು ಭಸ್ಮವಾಗುವ ಮುನ್ನವೇ, ಅಲ್ಲೆಲ್ಲೋ ವೇದಿಕೆಯಲ್ಲಿ ಎಲ್ಲಾ ಧರ್ಮದ ಗುರುಗಳೂ ಒಟ್ಟಾಗಿ ಕೂತು ಖುುಷಿಯಾಗಿ ಮಾತನಾಡುವುದನ್ನು ನೋಡಿದೆ. ಇನ್ನೆಲ್ಲೋ ಕಾರ್ಯಕ್ರಮದಲ್ಲಿ ವಿವಿಧ ಧರ್ಮದ ರಾಜಕೀಯ ನಾಯಕರು ಊಟ ಮಾಡುವುದನ್ನೂ ನೋಡಿದೆ.

ಇದನ್ನೂ ಓದಿರಿ: ಶಿವಮೊಗ್ಗ: ಹರ್ಷ ಕೊಲೆ ಪ್ರಕರಣದಲ್ಲಿ ಮತ್ತೆ 12 ಮಂದಿ ಪೊಲೀಸ್ ವಶಕ್ಕೆ- ಆರಗ ಜ್ಞಾನೇಂದ್ರ

ನೀವು ಹೇಳುವ ಸಮಸ್ಯೆಯ ಹೋರಾಟಕ್ಕೆ ಸ್ವಾಮಿಗಳು, ಫಾದರ್‌ಗಳು, ಮೌಲ್ವಿಗಳು, ಬರುವುದಿಲ್ಲ. ಅವರು ಪರಸ್ಪರ ಅನ್ಯೋನ್ಯವಾಗಿರುವುದನ್ನೂ ನೋಡಿದೆ. ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಕೋಟಿಗಟ್ಟಲೇ ಪರಸ್ಪರ ವ್ಯವಹಾರ ಮಾಡುವವರು ಮಾಡುತ್ತಲೇ ಇರುವುದನ್ನು, ರಾತ್ರಿ ಡೀಲ್ ಗಳನ್ನೂ ನೋಡಿದೆ. ಹೀಗೆ ನೋಡಿ ಅರ್ಥವಾದಾಗ ನಿಮ್ಮಂತೆ ಯೋಚಿಸುತ್ತಿದ್ದ ನಾನು 30 ವರ್ಷಗಳ ಹಿಂದೆ ಎಲ್ಲವನ್ನೂ ಬಿಟ್ಟೆ.

ಸಮಾಜದಲ್ಲಿ ಯಾರಿಗೂ ಇಲ್ಲದ ಸಮಸ್ಯೆ ನಿಮ್ಮ ತಲೆಗೆ ಕಟ್ಟುವವರು ಯಾರು? ಹಾಗೇ ಸಮಸ್ಯೆ ಹೊತ್ತುಕೊಂಡು ಹೊಡೆದಾಡಿ ಸಾಯುವ ನೀವು ಯಾರು?- ಪ್ರಶ್ನಿಸಿಕೊಳ್ಳಿ. ಧರ್ಮಕ್ಕೆ ಸಮಸ್ಯೆ ಬಂದರೆ ಅದನ್ನು ಸರಿಮಾಡಬೇಕಾದುದು ಮಠ, ಚರ್ಚ್, ಮಸೀದಿಗಳು, ಸರ್ಕಾರಗಳು. ಪೂರ್ಣ ಸಮಾಜದ ಹೊಣೆಗಾರಿಕೆ ಅದು.
ಅವರು ಇರೋದು ಯಾಕೆ? ಅವರು ಜವಾಬ್ದಾರಿ ತೆಗೆದುಕೊಳ್ಳಬೇಕಲ್ಲವೇ?

ಒಮ್ಮೆ ಪರೀಕ್ಷಿಸುವುದಕ್ಕಾಗಿ ಇದನ್ನು ಮಾಡಿ ನೋಡಿ. ನೀವು ಬೀದಿಗಿಳಿದು ಹೋರಾಟಕ್ಕೆ ಹೋಗುವ ಸಂಗತಿಗಳನ್ನು ತಿಳಿಸಿ, ನಿಮ್ಮ ನಾಯಕರ ಮನೆಯ ಸದಸ್ಯರನ್ನು, ರಾಜಕೀಯ ಮುಖಂಡರ ಮನೆಯ ಸದಸ್ಯರನ್ನು , ಫೇಸ್‌ಬುಕ್‌ ನಲ್ಲಿ ಕುಟ್ಟುವ ಅಂಕಲ್, ಆಂಟಿ, ಬ್ರೋ, ಸಿಸ್‌ಗಳನ್ನು, ಟಿವಿ ಲಿ ಅರಚುವವರ ಮನೆಯ ಮಕ್ಕಳನ್ನು ಒಮ್ಮೆ ಕರೆದು ನೋಡಿ. ಎಲ್ಲರೂ ಬಂದರೆ ಸೂಪರ್. ಹೋರಾಡಿ.

ಒಂದು ಮಾತು. ನೀವು ನಿಮ್ಮ ಊರಿನಲ್ಲಿ ಇಂತಹ ಬೀದಿ ಹೋರಾಟಕ್ಕೆ ಹೋಗುವಾಗ, ನಿಮ್ಮ ಊರಿನ ಜನಸಂಖ್ಯೆ ಲೆಕ್ಕ ಹಾಕಿ. ನೀವು ಎಷ್ಟು ಜನ ಅಂತಾ ನೋಡಿ. 25 ಲಕ್ಷ ಜನಸಂಖ್ಯೆಯ ಜಿಲ್ಲೆಯಲ್ಲಿ ಇಂತಹ ಹೋರಾಟಕ್ಕೆ ಬರುವವರು ಕೇವಲ ನೂರು, ಸಾವಿರ. ಅಂದರೆ ಇಡೀ ಸಮಾಜಕ್ಕೆ ಇಲ್ಲದ ಮಂಡೆ ಬಿಸಿ ನಿಮಗೆ ಮಾತ್ರ. ದೇಶದ ಸೈನ್ಯದಲ್ಲಿ ಯೋಧರಾಗಿ ಸಾಯುವುದು ಶ್ರೇಷ್ಠ. ಆದರೆ ಇಂತಹ ಹೊಡೆದಾಟದಲ್ಲಿ ಸೈನಿಕನಾಗಿ ಸಾಯುವುದಲ್ಲ. ಬೇರೆಯವರ ಬೇಳೆ ಬೇಯಿಸಿಕೊಳ್ಳಲು ನೀವು ಬಲಿಯಾಗುವುದು.

ನಾನು ನನ್ನ ಮಕ್ಕಳನ್ನು ಕಳಿಸುವುದಿಲ್ಲ. ಅವರು ಒಳ್ಳೆಯ ಉದ್ಯೋಗ ಮಾಡಿ, ಸಮಾಜಕ್ಕೆ ಎನಾದರೂ ನೀಡಲಿ ಎಂದು ಬಯಸುವೆ. ಅದಕ್ಕೆ ನೀವೂ ಹಾಗೇ ಆಗಬೇಕೆಂಬ ಹಾರೈಕೆ. ನಿಮ್ಮ ನಿಮ್ಮ ಧರ್ಮದ ಪುನರುತ್ಥಾನ , ಪ್ರಚಾರ, ಅಭಿವೃದ್ಧಿಗೆ ಸಾವಿರ ಸಭ್ಯ ದಾರಿಗಳಿದೆ. ನಿಮ್ಮ ಮರಣದಿಂದ ಏನೂ ಆಗುವುದಿಲ್ಲ.

  • ಎಂ.ಜಿ.ಹೆಗಡೆ, ಶಿಕ್ಷಣ ತಜ್ಞರು
    ಹಾಗೂ ಕರಾವಳಿ ಭಾಗದ ಹಿರಿಯ ಸಾಮಾಜಿಕ ಹೋರಾಟಗಾರರು

ಇದನ್ನೂ ಓದಿರಿ: ಹರ್ಷ ಕೊಲೆ ಪ್ರಕರಣ: ಸರ್ಕಾರ ಎಸಗುತ್ತಿರುವ ಲೋಪಗಳತ್ತ ಜನಾಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...