Homeಕರ್ನಾಟಕಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ರೈತ ವಿರೋಧಿ 3 ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ; ವಿದ್ಯುತ್ ಬಿಲ್ ಮಂಡಿಸದಿರಲಿ, ರಾಜ್ಯಗಳ ಸ್ವಾಯತ್ತತೆ ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಮೇಲಾಧಿಪತ್ಯ ನಿಲ್ಲಲಿ -ಐಕ್ಯಹೋರಾಟ ಸಮಿತಿ

- Advertisement -
- Advertisement -

ಕೇಂದ್ರ ಸರ್ಕಾರ ಕೃಷಿ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದಾಗಿನಿಂದಲೂ ದೇಶದ ಮತ್ತು ಕರ್ನಾಟಕದ ರೈತರು ಅದನ್ನು ವಿರೋಧಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕದ ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ ಮತ್ತು ಎಲ್ಲಾ ಪ್ರಗತಿಪರ, ಜನಪರ, ಕನ್ನಡಪರ ಸಂಘಟನೆಗಳು ರೈತರ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದು ಇಂದಿನ ಭಾರತ್ ಬಂದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಟ್ಟಿ ಮತ್ತು ಸಮವರ್ತಿಪಟ್ಟಿಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲವು ಕಾಯ್ದೆಗಳನ್ನು ತಂದಿರುವುದನ್ನು ನಾವು ಖಂಡಿಸುತ್ತೇವೆ. ಸದರಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು ಕೊರೊನಾ ಲಾಕ್‌ಡೌನ್ ಇದ್ದ ಸಂದರ್ಭದಲ್ಲೇ ಅವಸರದಲ್ಲಿ ಸುಗ್ರೀವಾಜ್ಞೆಯ ಮೂಲಕ ಅವುಗಳನ್ನು ಕೇಂದ್ರವು ಜಾರಿಗೆ ತಂದಿರುವುದರ ದುರುದ್ದೇಶ ನಮಗೆ ಅರ್ಥವಾಗಿದೆ. ಹೀಗಾಗಿ ದೇಶದ ಸಮಸ್ತ ರೈತರು, ರೈತ ಸಂಘಟನೆಗಳು ಮತ್ತು ಪ್ರಜ್ಞಾವಂತ ನಾಗರಿಕರು ಇದನ್ನು ವಿರೋಧಿಸುತ್ತಾ ಸ್ವಯಂಪ್ರೇರಿತ ಭಾರತ್ ಬಂದ್‌ನಲ್ಲಿ ಭಾಗಿಯಾಗುತ್ತೇವೆಂದು ಘೋಷಿಸಿದ್ದಾರೆ.

ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

ರೈತರ ಆಕ್ಷೇಪಗಳು, ಹೋರಾಟಕ್ಕೆ ಕಾರಣಗಳು

1. ಎಪಿಎಂಸಿ ಸೇರಿದಂತೆ ಈಗಿನ ವ್ಯವಸ್ಥೆಯಲ್ಲಿ ಲೋಪಗಳಿದ್ದವು. ರೈತರು ಕೇಳುತ್ತಿದ್ದದ್ದು ಈಗಿರುವ ವ್ಯವಸ್ಥೆಯ ಸಬಲೀಕರಣ. ನೀವು ಮಾಡಲು ಹೊರಟಿರುವುದು ಈಗಿರುವ ಅರೆಬರೆ ವ್ಯವಸ್ಥೆಯನ್ನೂ ಕಿತ್ತು ಹಾಕಿ ರೈತರನ್ನು ಬೀದಿಗೆ ತರುವುದು.
2. ಈ ಕಾಯ್ದೆಗಳ ಹೆಸರುಗಳು ದೊಡ್ಡ ಮೋಸ. ರೈತರನ್ನು ನಾಶ ಮಾಡಿ, ಕಾರ್ಪೋರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುವ ಅಂಶಗಳೇ ಕಾಯ್ದೆಯಲ್ಲಿವೆ. ಆದರೆ ಹೆಸರು ಮಾತ್ರ ರೈತರ ಪರ. ಇದು ವಂಚನೆ.
3. ರೈತರು, ರೈತ ಸಂಘಟನೆಗಳು ಯಾರೂ ಇಷ್ಟು ವರ್ಷಗಳಲ್ಲಿ ಕೇಳದೇ ಇದ್ದುದನ್ನು ನೀವು ತರಲು ಹೊರಟಿದ್ದೀರಿ. ಇದನ್ನು ಸುಗ್ರೀವಾಜ್ಞೆಯಾಗಿ ತಂದ ಸಂದರ್ಭದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ಆಗುತ್ತಲೇ ಇವೆ. ಆದರೂ ಏಕೆ ಮಸೂದೆ ತಂದು ಕಾಯ್ದೆ ಮಾಡಿದಿರಿ?
4. ದೇಶದ ಆರ್ಥಿಕತೆಯಲ್ಲಿ ಎಲ್ಲವೂ ಕುಸಿದಾಗಲೂ ಉಳಿದುಕೊಂಡಿದ್ದು ಕೃಷಿ. ಕೃಷಿ ಕ್ಷೇತ್ರಕ್ಕೆ ದೇಶದ ಶೇ.100ರಷ್ಟು ಜನರು ಗ್ರಾಹಕರು. ಹಾಗಾಗಿ ದೊಡ್ಡ ಉದ್ದಿಮೆಪತಿಗಳ ಕಣ್ಣು ಇದರ ಮೇಲೆ ಬಿದ್ದಿದೆ. ಈಗಿರುವ ಕಾಯ್ದೆಗಳು, ವ್ಯವಸ್ಥೆಯು ಅರ್ಧಂಬರ್ಧ ರಕ್ಷಣೆಯನ್ನು ರೈತರಿಗೆ ಒದಗಿಸುತ್ತಿದ್ದು, ಈ ದೊಡ್ಡ ಉದ್ದಿಮೆಪತಿಗಳು ಅದನ್ನೂ ಒಪ್ಪುತ್ತಿಲ್ಲ; ಹಾಗಾಗಿ ಇದನ್ನು ತರಲು ಹೊರಟಿದ್ದೀರಿ.
5. ಈಗಿರುವ ಕನಿಷ್ಠ ಬೆಂಬಲ ಬೆಲೆಯೇ ನ್ಯಾಯಯುತವಾಗಿಲ್ಲ; ನಮಗೆ ವೈಜ್ಞಾನಿಕ ಬೆಲೆ ಬೇಕು ಎಂದು ಕೇಳಿದ್ದೆವು. 2014ರ ಚುನಾವಣಾ ಪ್ರಣಾಳಿಕೆಯಲ್ಲೂ ಇದನ್ನು ನೀವೇ ಪ್ರಕಟಿಸಿದ್ದಿರಿ. ಆದರೆ ಈ 6 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯು ಇನ್ನೂ ಕನಿಷ್ಠವಾಗುತ್ತಾ ಹೋಯಿತು. ಇದೀಗ ಅದನ್ನೂ ಕಿತ್ತು ಹಾಕಲು ಹೊರಟಿದ್ದೀರಿ.
6. ಇದುವರೆಗೆ ಸಣ್ಣ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದೇ ನಮಗೆ ಕಷ್ಟವಾಗಿತ್ತು. ಆದರೂ ಈ ಸಣ್ಣ ವ್ಯಾಪಾರಿಗಳು ನಮಗೆ ಕೈಗೆ ಸಿಗುವವರು, ಅವರೊಂದಿಗೆ ಗುದ್ದಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದವು. ಆದರೆ ನೀವು ಅವರನ್ನೂ ಇಲ್ಲವಾಗಿಸಿ, ಕಣ್ಣಿಗೇ ಕಾಣದ ಭಾರೀ ದೊಡ್ಡ ಬಂಡವಾಳಶಾಹಿಗಳೊAದಿಗೆ ವ್ಯವಹಾರಕ್ಕೆ ನಮ್ಮನ್ನು ದೂಡುತ್ತಿದ್ದೀರಿ. ಉದ್ದೇಶ ಸ್ಪಷ್ಟ. ನೀವು ಅಂಬಾನಿ, ಅದಾನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದೀರಿ.
7. ನಿರಂತರ ಪ್ರತಿಭಟನೆ ನಡೆಸಿದವರ ದನಿಗೆ ಓಗೊಡದೇ, ಅವರು ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಂದಾಗ, ಹೆದ್ದಾರಿಗಳನ್ನು ಅಗೆದು ತಡೆಯೊಡ್ಡಿದ್ದೀರಿ. ಕೊರೆಯುವ ಛಳಿಯಲ್ಲಿ ಜಲಫಿರಂಗಿಗಳನ್ನು ಹಾರಿಸಿದ್ದೀರಿ; ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಅಪಪ್ರಚಾರ ಯಂತ್ರಾಂಗದ ಮೂಲಕ ರೈತ ಹೋರಾಟಗಾರರ ಮೇಲೆ ಅಪಪ್ರಚಾರ ನಡೆಸಿದ್ದೀರಿ. ಈಗಲೂ ಶಾಂತಿಯುತವಾಗಿರುವ ದೇಶದ ರೈತರು ಮತ್ತು ಪ್ರಜ್ಞಾವಂತ ನಾಗರಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ರೈತರ ಹಕ್ಕೊತ್ತಾಯಗಳೇನು?

1. ಕಳೆದ ವಿಧಾನ ಸಭೆಯಲ್ಲಿ ಅನುಮೋದನೆ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನರ ಮೇಲೆ ಹೇರಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ಕೈಬಿಡಬೇಕು.
2. ಕೇಂದ್ರ ಸರ್ಕಾರವು ಸರ್ವಾಧಿಕಾರಿ ರೀತಿಯಲ್ಲಿ ಜಾರಿಗೆ ತಂದಿರುವ, ಎಪಿಎಂಸಿಯನ್ನು ನಗಣ್ಯಗೊಳಿಸುವ ತಿದ್ದುಪಡಿ ಕಾಯ್ದೆ, ಕಾರ್ಪೊರೇಟ್ ಪರವಾದ ಕಾಂಟ್ರಾಕ್ಟ್ ಕೃಷಿ ಕಾಯ್ದೆ ಹಾಗೂ ಕೃಷಿ ಕಂಪನಿಗಳಿಗೆ ಆಹಾರ ಧಾನ್ಯಗಳ ಕಳ್ಳ ದಾಸ್ತಾನಿಗೆ ಅನುವು ಮಾಡಿಕೊಡುವ ಅಗತ್ಯ ಸರಕುಗಳ ಕಾಯ್ದೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಬೇಕು.
3. ದಶಕಗಳಿಂದ ಫಾರಂ ನಂ. 50-53 ಹಾಗೂ 94ಸಿ/94ಸಿಸಿ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಬಡಜನರ ಭೂಮಿ ಮತ್ತು ಮನೆ/ನಿವೇಶನಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ಮತ್ತು ಗಂಡ-ಹೆಂಡತಿ ಇಬ್ಬರ ಹೆಸರಿಗೆ ಜಂಟಿ ಖಾತೆ ನೀಡಬೇಕು.
4. ಎಪಿಎಂಸಿಯನ್ನು ಭ್ರಷ್ಟಮುಕ್ತಗೊಳಿಸಿ ಬಲಪಡಿಸಬೇಕು; ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದು ರೈತರ ಬೆಳೆಗೆ ಸ್ಥಿರ ಮತ್ತು ನ್ಯಾಯಯುತ ಬೆಲೆ ಒದಗಿಸಬೇಕು
5. ಕಾರ್ಮಿಕ ಕಾಯ್ದೆಗಳನ್ನು ಕಾರ್ಮಿಕರ ಪರವಾಗಿ ಬಲಪಡಿಸಬೇಕು
6. ದಲಿತ–ದಮನಿತರ ಅಭಿವೃದ್ಧಿಗೆ ಮೀಸಲಾಗಿರುವ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳನ್ನು ದುರ್ಬಲಗೊಳಿಸದೆ ಮುಂದುವರಿಸಬೇಕು.
7. ಕನ್ನಡ ಭಾಷೆ ಹಾಗೂ ಕರ್ನಾಟಕದ ನೆಲ-ಜಲ-ಶ್ರಮ-ಸಂಪನ್ಮೂಲಗಳ ನೈಜ ಅಭಿವೃದ್ಧಿಗೆ, ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.


ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...