Homeಕರ್ನಾಟಕಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ರೈತ ವಿರೋಧಿ 3 ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ; ವಿದ್ಯುತ್ ಬಿಲ್ ಮಂಡಿಸದಿರಲಿ, ರಾಜ್ಯಗಳ ಸ್ವಾಯತ್ತತೆ ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಮೇಲಾಧಿಪತ್ಯ ನಿಲ್ಲಲಿ -ಐಕ್ಯಹೋರಾಟ ಸಮಿತಿ

- Advertisement -
- Advertisement -

ಕೇಂದ್ರ ಸರ್ಕಾರ ಕೃಷಿ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದಾಗಿನಿಂದಲೂ ದೇಶದ ಮತ್ತು ಕರ್ನಾಟಕದ ರೈತರು ಅದನ್ನು ವಿರೋಧಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕದ ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ ಮತ್ತು ಎಲ್ಲಾ ಪ್ರಗತಿಪರ, ಜನಪರ, ಕನ್ನಡಪರ ಸಂಘಟನೆಗಳು ರೈತರ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದು ಇಂದಿನ ಭಾರತ್ ಬಂದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಟ್ಟಿ ಮತ್ತು ಸಮವರ್ತಿಪಟ್ಟಿಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲವು ಕಾಯ್ದೆಗಳನ್ನು ತಂದಿರುವುದನ್ನು ನಾವು ಖಂಡಿಸುತ್ತೇವೆ. ಸದರಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು ಕೊರೊನಾ ಲಾಕ್‌ಡೌನ್ ಇದ್ದ ಸಂದರ್ಭದಲ್ಲೇ ಅವಸರದಲ್ಲಿ ಸುಗ್ರೀವಾಜ್ಞೆಯ ಮೂಲಕ ಅವುಗಳನ್ನು ಕೇಂದ್ರವು ಜಾರಿಗೆ ತಂದಿರುವುದರ ದುರುದ್ದೇಶ ನಮಗೆ ಅರ್ಥವಾಗಿದೆ. ಹೀಗಾಗಿ ದೇಶದ ಸಮಸ್ತ ರೈತರು, ರೈತ ಸಂಘಟನೆಗಳು ಮತ್ತು ಪ್ರಜ್ಞಾವಂತ ನಾಗರಿಕರು ಇದನ್ನು ವಿರೋಧಿಸುತ್ತಾ ಸ್ವಯಂಪ್ರೇರಿತ ಭಾರತ್ ಬಂದ್‌ನಲ್ಲಿ ಭಾಗಿಯಾಗುತ್ತೇವೆಂದು ಘೋಷಿಸಿದ್ದಾರೆ.

ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

ರೈತರ ಆಕ್ಷೇಪಗಳು, ಹೋರಾಟಕ್ಕೆ ಕಾರಣಗಳು

1. ಎಪಿಎಂಸಿ ಸೇರಿದಂತೆ ಈಗಿನ ವ್ಯವಸ್ಥೆಯಲ್ಲಿ ಲೋಪಗಳಿದ್ದವು. ರೈತರು ಕೇಳುತ್ತಿದ್ದದ್ದು ಈಗಿರುವ ವ್ಯವಸ್ಥೆಯ ಸಬಲೀಕರಣ. ನೀವು ಮಾಡಲು ಹೊರಟಿರುವುದು ಈಗಿರುವ ಅರೆಬರೆ ವ್ಯವಸ್ಥೆಯನ್ನೂ ಕಿತ್ತು ಹಾಕಿ ರೈತರನ್ನು ಬೀದಿಗೆ ತರುವುದು.
2. ಈ ಕಾಯ್ದೆಗಳ ಹೆಸರುಗಳು ದೊಡ್ಡ ಮೋಸ. ರೈತರನ್ನು ನಾಶ ಮಾಡಿ, ಕಾರ್ಪೋರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುವ ಅಂಶಗಳೇ ಕಾಯ್ದೆಯಲ್ಲಿವೆ. ಆದರೆ ಹೆಸರು ಮಾತ್ರ ರೈತರ ಪರ. ಇದು ವಂಚನೆ.
3. ರೈತರು, ರೈತ ಸಂಘಟನೆಗಳು ಯಾರೂ ಇಷ್ಟು ವರ್ಷಗಳಲ್ಲಿ ಕೇಳದೇ ಇದ್ದುದನ್ನು ನೀವು ತರಲು ಹೊರಟಿದ್ದೀರಿ. ಇದನ್ನು ಸುಗ್ರೀವಾಜ್ಞೆಯಾಗಿ ತಂದ ಸಂದರ್ಭದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ಆಗುತ್ತಲೇ ಇವೆ. ಆದರೂ ಏಕೆ ಮಸೂದೆ ತಂದು ಕಾಯ್ದೆ ಮಾಡಿದಿರಿ?
4. ದೇಶದ ಆರ್ಥಿಕತೆಯಲ್ಲಿ ಎಲ್ಲವೂ ಕುಸಿದಾಗಲೂ ಉಳಿದುಕೊಂಡಿದ್ದು ಕೃಷಿ. ಕೃಷಿ ಕ್ಷೇತ್ರಕ್ಕೆ ದೇಶದ ಶೇ.100ರಷ್ಟು ಜನರು ಗ್ರಾಹಕರು. ಹಾಗಾಗಿ ದೊಡ್ಡ ಉದ್ದಿಮೆಪತಿಗಳ ಕಣ್ಣು ಇದರ ಮೇಲೆ ಬಿದ್ದಿದೆ. ಈಗಿರುವ ಕಾಯ್ದೆಗಳು, ವ್ಯವಸ್ಥೆಯು ಅರ್ಧಂಬರ್ಧ ರಕ್ಷಣೆಯನ್ನು ರೈತರಿಗೆ ಒದಗಿಸುತ್ತಿದ್ದು, ಈ ದೊಡ್ಡ ಉದ್ದಿಮೆಪತಿಗಳು ಅದನ್ನೂ ಒಪ್ಪುತ್ತಿಲ್ಲ; ಹಾಗಾಗಿ ಇದನ್ನು ತರಲು ಹೊರಟಿದ್ದೀರಿ.
5. ಈಗಿರುವ ಕನಿಷ್ಠ ಬೆಂಬಲ ಬೆಲೆಯೇ ನ್ಯಾಯಯುತವಾಗಿಲ್ಲ; ನಮಗೆ ವೈಜ್ಞಾನಿಕ ಬೆಲೆ ಬೇಕು ಎಂದು ಕೇಳಿದ್ದೆವು. 2014ರ ಚುನಾವಣಾ ಪ್ರಣಾಳಿಕೆಯಲ್ಲೂ ಇದನ್ನು ನೀವೇ ಪ್ರಕಟಿಸಿದ್ದಿರಿ. ಆದರೆ ಈ 6 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯು ಇನ್ನೂ ಕನಿಷ್ಠವಾಗುತ್ತಾ ಹೋಯಿತು. ಇದೀಗ ಅದನ್ನೂ ಕಿತ್ತು ಹಾಕಲು ಹೊರಟಿದ್ದೀರಿ.
6. ಇದುವರೆಗೆ ಸಣ್ಣ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದೇ ನಮಗೆ ಕಷ್ಟವಾಗಿತ್ತು. ಆದರೂ ಈ ಸಣ್ಣ ವ್ಯಾಪಾರಿಗಳು ನಮಗೆ ಕೈಗೆ ಸಿಗುವವರು, ಅವರೊಂದಿಗೆ ಗುದ್ದಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದವು. ಆದರೆ ನೀವು ಅವರನ್ನೂ ಇಲ್ಲವಾಗಿಸಿ, ಕಣ್ಣಿಗೇ ಕಾಣದ ಭಾರೀ ದೊಡ್ಡ ಬಂಡವಾಳಶಾಹಿಗಳೊAದಿಗೆ ವ್ಯವಹಾರಕ್ಕೆ ನಮ್ಮನ್ನು ದೂಡುತ್ತಿದ್ದೀರಿ. ಉದ್ದೇಶ ಸ್ಪಷ್ಟ. ನೀವು ಅಂಬಾನಿ, ಅದಾನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದೀರಿ.
7. ನಿರಂತರ ಪ್ರತಿಭಟನೆ ನಡೆಸಿದವರ ದನಿಗೆ ಓಗೊಡದೇ, ಅವರು ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಂದಾಗ, ಹೆದ್ದಾರಿಗಳನ್ನು ಅಗೆದು ತಡೆಯೊಡ್ಡಿದ್ದೀರಿ. ಕೊರೆಯುವ ಛಳಿಯಲ್ಲಿ ಜಲಫಿರಂಗಿಗಳನ್ನು ಹಾರಿಸಿದ್ದೀರಿ; ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಅಪಪ್ರಚಾರ ಯಂತ್ರಾಂಗದ ಮೂಲಕ ರೈತ ಹೋರಾಟಗಾರರ ಮೇಲೆ ಅಪಪ್ರಚಾರ ನಡೆಸಿದ್ದೀರಿ. ಈಗಲೂ ಶಾಂತಿಯುತವಾಗಿರುವ ದೇಶದ ರೈತರು ಮತ್ತು ಪ್ರಜ್ಞಾವಂತ ನಾಗರಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ರೈತರ ಹಕ್ಕೊತ್ತಾಯಗಳೇನು?

1. ಕಳೆದ ವಿಧಾನ ಸಭೆಯಲ್ಲಿ ಅನುಮೋದನೆ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನರ ಮೇಲೆ ಹೇರಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ಕೈಬಿಡಬೇಕು.
2. ಕೇಂದ್ರ ಸರ್ಕಾರವು ಸರ್ವಾಧಿಕಾರಿ ರೀತಿಯಲ್ಲಿ ಜಾರಿಗೆ ತಂದಿರುವ, ಎಪಿಎಂಸಿಯನ್ನು ನಗಣ್ಯಗೊಳಿಸುವ ತಿದ್ದುಪಡಿ ಕಾಯ್ದೆ, ಕಾರ್ಪೊರೇಟ್ ಪರವಾದ ಕಾಂಟ್ರಾಕ್ಟ್ ಕೃಷಿ ಕಾಯ್ದೆ ಹಾಗೂ ಕೃಷಿ ಕಂಪನಿಗಳಿಗೆ ಆಹಾರ ಧಾನ್ಯಗಳ ಕಳ್ಳ ದಾಸ್ತಾನಿಗೆ ಅನುವು ಮಾಡಿಕೊಡುವ ಅಗತ್ಯ ಸರಕುಗಳ ಕಾಯ್ದೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಬೇಕು.
3. ದಶಕಗಳಿಂದ ಫಾರಂ ನಂ. 50-53 ಹಾಗೂ 94ಸಿ/94ಸಿಸಿ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಬಡಜನರ ಭೂಮಿ ಮತ್ತು ಮನೆ/ನಿವೇಶನಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ಮತ್ತು ಗಂಡ-ಹೆಂಡತಿ ಇಬ್ಬರ ಹೆಸರಿಗೆ ಜಂಟಿ ಖಾತೆ ನೀಡಬೇಕು.
4. ಎಪಿಎಂಸಿಯನ್ನು ಭ್ರಷ್ಟಮುಕ್ತಗೊಳಿಸಿ ಬಲಪಡಿಸಬೇಕು; ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದು ರೈತರ ಬೆಳೆಗೆ ಸ್ಥಿರ ಮತ್ತು ನ್ಯಾಯಯುತ ಬೆಲೆ ಒದಗಿಸಬೇಕು
5. ಕಾರ್ಮಿಕ ಕಾಯ್ದೆಗಳನ್ನು ಕಾರ್ಮಿಕರ ಪರವಾಗಿ ಬಲಪಡಿಸಬೇಕು
6. ದಲಿತ–ದಮನಿತರ ಅಭಿವೃದ್ಧಿಗೆ ಮೀಸಲಾಗಿರುವ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳನ್ನು ದುರ್ಬಲಗೊಳಿಸದೆ ಮುಂದುವರಿಸಬೇಕು.
7. ಕನ್ನಡ ಭಾಷೆ ಹಾಗೂ ಕರ್ನಾಟಕದ ನೆಲ-ಜಲ-ಶ್ರಮ-ಸಂಪನ್ಮೂಲಗಳ ನೈಜ ಅಭಿವೃದ್ಧಿಗೆ, ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.


ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...