Homeಕರ್ನಾಟಕಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ರೈತ ವಿರೋಧಿ 3 ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ; ವಿದ್ಯುತ್ ಬಿಲ್ ಮಂಡಿಸದಿರಲಿ, ರಾಜ್ಯಗಳ ಸ್ವಾಯತ್ತತೆ ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಮೇಲಾಧಿಪತ್ಯ ನಿಲ್ಲಲಿ -ಐಕ್ಯಹೋರಾಟ ಸಮಿತಿ

- Advertisement -
- Advertisement -

ಕೇಂದ್ರ ಸರ್ಕಾರ ಕೃಷಿ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದಾಗಿನಿಂದಲೂ ದೇಶದ ಮತ್ತು ಕರ್ನಾಟಕದ ರೈತರು ಅದನ್ನು ವಿರೋಧಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕದ ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ ಮತ್ತು ಎಲ್ಲಾ ಪ್ರಗತಿಪರ, ಜನಪರ, ಕನ್ನಡಪರ ಸಂಘಟನೆಗಳು ರೈತರ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದು ಇಂದಿನ ಭಾರತ್ ಬಂದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಟ್ಟಿ ಮತ್ತು ಸಮವರ್ತಿಪಟ್ಟಿಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲವು ಕಾಯ್ದೆಗಳನ್ನು ತಂದಿರುವುದನ್ನು ನಾವು ಖಂಡಿಸುತ್ತೇವೆ. ಸದರಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು ಕೊರೊನಾ ಲಾಕ್‌ಡೌನ್ ಇದ್ದ ಸಂದರ್ಭದಲ್ಲೇ ಅವಸರದಲ್ಲಿ ಸುಗ್ರೀವಾಜ್ಞೆಯ ಮೂಲಕ ಅವುಗಳನ್ನು ಕೇಂದ್ರವು ಜಾರಿಗೆ ತಂದಿರುವುದರ ದುರುದ್ದೇಶ ನಮಗೆ ಅರ್ಥವಾಗಿದೆ. ಹೀಗಾಗಿ ದೇಶದ ಸಮಸ್ತ ರೈತರು, ರೈತ ಸಂಘಟನೆಗಳು ಮತ್ತು ಪ್ರಜ್ಞಾವಂತ ನಾಗರಿಕರು ಇದನ್ನು ವಿರೋಧಿಸುತ್ತಾ ಸ್ವಯಂಪ್ರೇರಿತ ಭಾರತ್ ಬಂದ್‌ನಲ್ಲಿ ಭಾಗಿಯಾಗುತ್ತೇವೆಂದು ಘೋಷಿಸಿದ್ದಾರೆ.

ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

ರೈತರ ಆಕ್ಷೇಪಗಳು, ಹೋರಾಟಕ್ಕೆ ಕಾರಣಗಳು

1. ಎಪಿಎಂಸಿ ಸೇರಿದಂತೆ ಈಗಿನ ವ್ಯವಸ್ಥೆಯಲ್ಲಿ ಲೋಪಗಳಿದ್ದವು. ರೈತರು ಕೇಳುತ್ತಿದ್ದದ್ದು ಈಗಿರುವ ವ್ಯವಸ್ಥೆಯ ಸಬಲೀಕರಣ. ನೀವು ಮಾಡಲು ಹೊರಟಿರುವುದು ಈಗಿರುವ ಅರೆಬರೆ ವ್ಯವಸ್ಥೆಯನ್ನೂ ಕಿತ್ತು ಹಾಕಿ ರೈತರನ್ನು ಬೀದಿಗೆ ತರುವುದು.
2. ಈ ಕಾಯ್ದೆಗಳ ಹೆಸರುಗಳು ದೊಡ್ಡ ಮೋಸ. ರೈತರನ್ನು ನಾಶ ಮಾಡಿ, ಕಾರ್ಪೋರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುವ ಅಂಶಗಳೇ ಕಾಯ್ದೆಯಲ್ಲಿವೆ. ಆದರೆ ಹೆಸರು ಮಾತ್ರ ರೈತರ ಪರ. ಇದು ವಂಚನೆ.
3. ರೈತರು, ರೈತ ಸಂಘಟನೆಗಳು ಯಾರೂ ಇಷ್ಟು ವರ್ಷಗಳಲ್ಲಿ ಕೇಳದೇ ಇದ್ದುದನ್ನು ನೀವು ತರಲು ಹೊರಟಿದ್ದೀರಿ. ಇದನ್ನು ಸುಗ್ರೀವಾಜ್ಞೆಯಾಗಿ ತಂದ ಸಂದರ್ಭದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ಆಗುತ್ತಲೇ ಇವೆ. ಆದರೂ ಏಕೆ ಮಸೂದೆ ತಂದು ಕಾಯ್ದೆ ಮಾಡಿದಿರಿ?
4. ದೇಶದ ಆರ್ಥಿಕತೆಯಲ್ಲಿ ಎಲ್ಲವೂ ಕುಸಿದಾಗಲೂ ಉಳಿದುಕೊಂಡಿದ್ದು ಕೃಷಿ. ಕೃಷಿ ಕ್ಷೇತ್ರಕ್ಕೆ ದೇಶದ ಶೇ.100ರಷ್ಟು ಜನರು ಗ್ರಾಹಕರು. ಹಾಗಾಗಿ ದೊಡ್ಡ ಉದ್ದಿಮೆಪತಿಗಳ ಕಣ್ಣು ಇದರ ಮೇಲೆ ಬಿದ್ದಿದೆ. ಈಗಿರುವ ಕಾಯ್ದೆಗಳು, ವ್ಯವಸ್ಥೆಯು ಅರ್ಧಂಬರ್ಧ ರಕ್ಷಣೆಯನ್ನು ರೈತರಿಗೆ ಒದಗಿಸುತ್ತಿದ್ದು, ಈ ದೊಡ್ಡ ಉದ್ದಿಮೆಪತಿಗಳು ಅದನ್ನೂ ಒಪ್ಪುತ್ತಿಲ್ಲ; ಹಾಗಾಗಿ ಇದನ್ನು ತರಲು ಹೊರಟಿದ್ದೀರಿ.
5. ಈಗಿರುವ ಕನಿಷ್ಠ ಬೆಂಬಲ ಬೆಲೆಯೇ ನ್ಯಾಯಯುತವಾಗಿಲ್ಲ; ನಮಗೆ ವೈಜ್ಞಾನಿಕ ಬೆಲೆ ಬೇಕು ಎಂದು ಕೇಳಿದ್ದೆವು. 2014ರ ಚುನಾವಣಾ ಪ್ರಣಾಳಿಕೆಯಲ್ಲೂ ಇದನ್ನು ನೀವೇ ಪ್ರಕಟಿಸಿದ್ದಿರಿ. ಆದರೆ ಈ 6 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯು ಇನ್ನೂ ಕನಿಷ್ಠವಾಗುತ್ತಾ ಹೋಯಿತು. ಇದೀಗ ಅದನ್ನೂ ಕಿತ್ತು ಹಾಕಲು ಹೊರಟಿದ್ದೀರಿ.
6. ಇದುವರೆಗೆ ಸಣ್ಣ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದೇ ನಮಗೆ ಕಷ್ಟವಾಗಿತ್ತು. ಆದರೂ ಈ ಸಣ್ಣ ವ್ಯಾಪಾರಿಗಳು ನಮಗೆ ಕೈಗೆ ಸಿಗುವವರು, ಅವರೊಂದಿಗೆ ಗುದ್ದಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದವು. ಆದರೆ ನೀವು ಅವರನ್ನೂ ಇಲ್ಲವಾಗಿಸಿ, ಕಣ್ಣಿಗೇ ಕಾಣದ ಭಾರೀ ದೊಡ್ಡ ಬಂಡವಾಳಶಾಹಿಗಳೊAದಿಗೆ ವ್ಯವಹಾರಕ್ಕೆ ನಮ್ಮನ್ನು ದೂಡುತ್ತಿದ್ದೀರಿ. ಉದ್ದೇಶ ಸ್ಪಷ್ಟ. ನೀವು ಅಂಬಾನಿ, ಅದಾನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದೀರಿ.
7. ನಿರಂತರ ಪ್ರತಿಭಟನೆ ನಡೆಸಿದವರ ದನಿಗೆ ಓಗೊಡದೇ, ಅವರು ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಂದಾಗ, ಹೆದ್ದಾರಿಗಳನ್ನು ಅಗೆದು ತಡೆಯೊಡ್ಡಿದ್ದೀರಿ. ಕೊರೆಯುವ ಛಳಿಯಲ್ಲಿ ಜಲಫಿರಂಗಿಗಳನ್ನು ಹಾರಿಸಿದ್ದೀರಿ; ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಅಪಪ್ರಚಾರ ಯಂತ್ರಾಂಗದ ಮೂಲಕ ರೈತ ಹೋರಾಟಗಾರರ ಮೇಲೆ ಅಪಪ್ರಚಾರ ನಡೆಸಿದ್ದೀರಿ. ಈಗಲೂ ಶಾಂತಿಯುತವಾಗಿರುವ ದೇಶದ ರೈತರು ಮತ್ತು ಪ್ರಜ್ಞಾವಂತ ನಾಗರಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ರೈತರ ಹಕ್ಕೊತ್ತಾಯಗಳೇನು?

1. ಕಳೆದ ವಿಧಾನ ಸಭೆಯಲ್ಲಿ ಅನುಮೋದನೆ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನರ ಮೇಲೆ ಹೇರಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ಕೈಬಿಡಬೇಕು.
2. ಕೇಂದ್ರ ಸರ್ಕಾರವು ಸರ್ವಾಧಿಕಾರಿ ರೀತಿಯಲ್ಲಿ ಜಾರಿಗೆ ತಂದಿರುವ, ಎಪಿಎಂಸಿಯನ್ನು ನಗಣ್ಯಗೊಳಿಸುವ ತಿದ್ದುಪಡಿ ಕಾಯ್ದೆ, ಕಾರ್ಪೊರೇಟ್ ಪರವಾದ ಕಾಂಟ್ರಾಕ್ಟ್ ಕೃಷಿ ಕಾಯ್ದೆ ಹಾಗೂ ಕೃಷಿ ಕಂಪನಿಗಳಿಗೆ ಆಹಾರ ಧಾನ್ಯಗಳ ಕಳ್ಳ ದಾಸ್ತಾನಿಗೆ ಅನುವು ಮಾಡಿಕೊಡುವ ಅಗತ್ಯ ಸರಕುಗಳ ಕಾಯ್ದೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಬೇಕು.
3. ದಶಕಗಳಿಂದ ಫಾರಂ ನಂ. 50-53 ಹಾಗೂ 94ಸಿ/94ಸಿಸಿ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಬಡಜನರ ಭೂಮಿ ಮತ್ತು ಮನೆ/ನಿವೇಶನಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ಮತ್ತು ಗಂಡ-ಹೆಂಡತಿ ಇಬ್ಬರ ಹೆಸರಿಗೆ ಜಂಟಿ ಖಾತೆ ನೀಡಬೇಕು.
4. ಎಪಿಎಂಸಿಯನ್ನು ಭ್ರಷ್ಟಮುಕ್ತಗೊಳಿಸಿ ಬಲಪಡಿಸಬೇಕು; ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದು ರೈತರ ಬೆಳೆಗೆ ಸ್ಥಿರ ಮತ್ತು ನ್ಯಾಯಯುತ ಬೆಲೆ ಒದಗಿಸಬೇಕು
5. ಕಾರ್ಮಿಕ ಕಾಯ್ದೆಗಳನ್ನು ಕಾರ್ಮಿಕರ ಪರವಾಗಿ ಬಲಪಡಿಸಬೇಕು
6. ದಲಿತ–ದಮನಿತರ ಅಭಿವೃದ್ಧಿಗೆ ಮೀಸಲಾಗಿರುವ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳನ್ನು ದುರ್ಬಲಗೊಳಿಸದೆ ಮುಂದುವರಿಸಬೇಕು.
7. ಕನ್ನಡ ಭಾಷೆ ಹಾಗೂ ಕರ್ನಾಟಕದ ನೆಲ-ಜಲ-ಶ್ರಮ-ಸಂಪನ್ಮೂಲಗಳ ನೈಜ ಅಭಿವೃದ್ಧಿಗೆ, ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.


ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...