Homeಕರ್ನಾಟಕಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ರೈತ ವಿರೋಧಿ 3 ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ; ವಿದ್ಯುತ್ ಬಿಲ್ ಮಂಡಿಸದಿರಲಿ, ರಾಜ್ಯಗಳ ಸ್ವಾಯತ್ತತೆ ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಮೇಲಾಧಿಪತ್ಯ ನಿಲ್ಲಲಿ -ಐಕ್ಯಹೋರಾಟ ಸಮಿತಿ

- Advertisement -
- Advertisement -

ಕೇಂದ್ರ ಸರ್ಕಾರ ಕೃಷಿ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದಾಗಿನಿಂದಲೂ ದೇಶದ ಮತ್ತು ಕರ್ನಾಟಕದ ರೈತರು ಅದನ್ನು ವಿರೋಧಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕದ ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ ಮತ್ತು ಎಲ್ಲಾ ಪ್ರಗತಿಪರ, ಜನಪರ, ಕನ್ನಡಪರ ಸಂಘಟನೆಗಳು ರೈತರ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದು ಇಂದಿನ ಭಾರತ್ ಬಂದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಟ್ಟಿ ಮತ್ತು ಸಮವರ್ತಿಪಟ್ಟಿಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲವು ಕಾಯ್ದೆಗಳನ್ನು ತಂದಿರುವುದನ್ನು ನಾವು ಖಂಡಿಸುತ್ತೇವೆ. ಸದರಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು ಕೊರೊನಾ ಲಾಕ್‌ಡೌನ್ ಇದ್ದ ಸಂದರ್ಭದಲ್ಲೇ ಅವಸರದಲ್ಲಿ ಸುಗ್ರೀವಾಜ್ಞೆಯ ಮೂಲಕ ಅವುಗಳನ್ನು ಕೇಂದ್ರವು ಜಾರಿಗೆ ತಂದಿರುವುದರ ದುರುದ್ದೇಶ ನಮಗೆ ಅರ್ಥವಾಗಿದೆ. ಹೀಗಾಗಿ ದೇಶದ ಸಮಸ್ತ ರೈತರು, ರೈತ ಸಂಘಟನೆಗಳು ಮತ್ತು ಪ್ರಜ್ಞಾವಂತ ನಾಗರಿಕರು ಇದನ್ನು ವಿರೋಧಿಸುತ್ತಾ ಸ್ವಯಂಪ್ರೇರಿತ ಭಾರತ್ ಬಂದ್‌ನಲ್ಲಿ ಭಾಗಿಯಾಗುತ್ತೇವೆಂದು ಘೋಷಿಸಿದ್ದಾರೆ.

ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

ರೈತರ ಆಕ್ಷೇಪಗಳು, ಹೋರಾಟಕ್ಕೆ ಕಾರಣಗಳು

1. ಎಪಿಎಂಸಿ ಸೇರಿದಂತೆ ಈಗಿನ ವ್ಯವಸ್ಥೆಯಲ್ಲಿ ಲೋಪಗಳಿದ್ದವು. ರೈತರು ಕೇಳುತ್ತಿದ್ದದ್ದು ಈಗಿರುವ ವ್ಯವಸ್ಥೆಯ ಸಬಲೀಕರಣ. ನೀವು ಮಾಡಲು ಹೊರಟಿರುವುದು ಈಗಿರುವ ಅರೆಬರೆ ವ್ಯವಸ್ಥೆಯನ್ನೂ ಕಿತ್ತು ಹಾಕಿ ರೈತರನ್ನು ಬೀದಿಗೆ ತರುವುದು.
2. ಈ ಕಾಯ್ದೆಗಳ ಹೆಸರುಗಳು ದೊಡ್ಡ ಮೋಸ. ರೈತರನ್ನು ನಾಶ ಮಾಡಿ, ಕಾರ್ಪೋರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುವ ಅಂಶಗಳೇ ಕಾಯ್ದೆಯಲ್ಲಿವೆ. ಆದರೆ ಹೆಸರು ಮಾತ್ರ ರೈತರ ಪರ. ಇದು ವಂಚನೆ.
3. ರೈತರು, ರೈತ ಸಂಘಟನೆಗಳು ಯಾರೂ ಇಷ್ಟು ವರ್ಷಗಳಲ್ಲಿ ಕೇಳದೇ ಇದ್ದುದನ್ನು ನೀವು ತರಲು ಹೊರಟಿದ್ದೀರಿ. ಇದನ್ನು ಸುಗ್ರೀವಾಜ್ಞೆಯಾಗಿ ತಂದ ಸಂದರ್ಭದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ಆಗುತ್ತಲೇ ಇವೆ. ಆದರೂ ಏಕೆ ಮಸೂದೆ ತಂದು ಕಾಯ್ದೆ ಮಾಡಿದಿರಿ?
4. ದೇಶದ ಆರ್ಥಿಕತೆಯಲ್ಲಿ ಎಲ್ಲವೂ ಕುಸಿದಾಗಲೂ ಉಳಿದುಕೊಂಡಿದ್ದು ಕೃಷಿ. ಕೃಷಿ ಕ್ಷೇತ್ರಕ್ಕೆ ದೇಶದ ಶೇ.100ರಷ್ಟು ಜನರು ಗ್ರಾಹಕರು. ಹಾಗಾಗಿ ದೊಡ್ಡ ಉದ್ದಿಮೆಪತಿಗಳ ಕಣ್ಣು ಇದರ ಮೇಲೆ ಬಿದ್ದಿದೆ. ಈಗಿರುವ ಕಾಯ್ದೆಗಳು, ವ್ಯವಸ್ಥೆಯು ಅರ್ಧಂಬರ್ಧ ರಕ್ಷಣೆಯನ್ನು ರೈತರಿಗೆ ಒದಗಿಸುತ್ತಿದ್ದು, ಈ ದೊಡ್ಡ ಉದ್ದಿಮೆಪತಿಗಳು ಅದನ್ನೂ ಒಪ್ಪುತ್ತಿಲ್ಲ; ಹಾಗಾಗಿ ಇದನ್ನು ತರಲು ಹೊರಟಿದ್ದೀರಿ.
5. ಈಗಿರುವ ಕನಿಷ್ಠ ಬೆಂಬಲ ಬೆಲೆಯೇ ನ್ಯಾಯಯುತವಾಗಿಲ್ಲ; ನಮಗೆ ವೈಜ್ಞಾನಿಕ ಬೆಲೆ ಬೇಕು ಎಂದು ಕೇಳಿದ್ದೆವು. 2014ರ ಚುನಾವಣಾ ಪ್ರಣಾಳಿಕೆಯಲ್ಲೂ ಇದನ್ನು ನೀವೇ ಪ್ರಕಟಿಸಿದ್ದಿರಿ. ಆದರೆ ಈ 6 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯು ಇನ್ನೂ ಕನಿಷ್ಠವಾಗುತ್ತಾ ಹೋಯಿತು. ಇದೀಗ ಅದನ್ನೂ ಕಿತ್ತು ಹಾಕಲು ಹೊರಟಿದ್ದೀರಿ.
6. ಇದುವರೆಗೆ ಸಣ್ಣ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದೇ ನಮಗೆ ಕಷ್ಟವಾಗಿತ್ತು. ಆದರೂ ಈ ಸಣ್ಣ ವ್ಯಾಪಾರಿಗಳು ನಮಗೆ ಕೈಗೆ ಸಿಗುವವರು, ಅವರೊಂದಿಗೆ ಗುದ್ದಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದವು. ಆದರೆ ನೀವು ಅವರನ್ನೂ ಇಲ್ಲವಾಗಿಸಿ, ಕಣ್ಣಿಗೇ ಕಾಣದ ಭಾರೀ ದೊಡ್ಡ ಬಂಡವಾಳಶಾಹಿಗಳೊAದಿಗೆ ವ್ಯವಹಾರಕ್ಕೆ ನಮ್ಮನ್ನು ದೂಡುತ್ತಿದ್ದೀರಿ. ಉದ್ದೇಶ ಸ್ಪಷ್ಟ. ನೀವು ಅಂಬಾನಿ, ಅದಾನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದೀರಿ.
7. ನಿರಂತರ ಪ್ರತಿಭಟನೆ ನಡೆಸಿದವರ ದನಿಗೆ ಓಗೊಡದೇ, ಅವರು ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಂದಾಗ, ಹೆದ್ದಾರಿಗಳನ್ನು ಅಗೆದು ತಡೆಯೊಡ್ಡಿದ್ದೀರಿ. ಕೊರೆಯುವ ಛಳಿಯಲ್ಲಿ ಜಲಫಿರಂಗಿಗಳನ್ನು ಹಾರಿಸಿದ್ದೀರಿ; ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಅಪಪ್ರಚಾರ ಯಂತ್ರಾಂಗದ ಮೂಲಕ ರೈತ ಹೋರಾಟಗಾರರ ಮೇಲೆ ಅಪಪ್ರಚಾರ ನಡೆಸಿದ್ದೀರಿ. ಈಗಲೂ ಶಾಂತಿಯುತವಾಗಿರುವ ದೇಶದ ರೈತರು ಮತ್ತು ಪ್ರಜ್ಞಾವಂತ ನಾಗರಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ರೈತರ ಹಕ್ಕೊತ್ತಾಯಗಳೇನು?

1. ಕಳೆದ ವಿಧಾನ ಸಭೆಯಲ್ಲಿ ಅನುಮೋದನೆ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನರ ಮೇಲೆ ಹೇರಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ಕೈಬಿಡಬೇಕು.
2. ಕೇಂದ್ರ ಸರ್ಕಾರವು ಸರ್ವಾಧಿಕಾರಿ ರೀತಿಯಲ್ಲಿ ಜಾರಿಗೆ ತಂದಿರುವ, ಎಪಿಎಂಸಿಯನ್ನು ನಗಣ್ಯಗೊಳಿಸುವ ತಿದ್ದುಪಡಿ ಕಾಯ್ದೆ, ಕಾರ್ಪೊರೇಟ್ ಪರವಾದ ಕಾಂಟ್ರಾಕ್ಟ್ ಕೃಷಿ ಕಾಯ್ದೆ ಹಾಗೂ ಕೃಷಿ ಕಂಪನಿಗಳಿಗೆ ಆಹಾರ ಧಾನ್ಯಗಳ ಕಳ್ಳ ದಾಸ್ತಾನಿಗೆ ಅನುವು ಮಾಡಿಕೊಡುವ ಅಗತ್ಯ ಸರಕುಗಳ ಕಾಯ್ದೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಬೇಕು.
3. ದಶಕಗಳಿಂದ ಫಾರಂ ನಂ. 50-53 ಹಾಗೂ 94ಸಿ/94ಸಿಸಿ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಬಡಜನರ ಭೂಮಿ ಮತ್ತು ಮನೆ/ನಿವೇಶನಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ಮತ್ತು ಗಂಡ-ಹೆಂಡತಿ ಇಬ್ಬರ ಹೆಸರಿಗೆ ಜಂಟಿ ಖಾತೆ ನೀಡಬೇಕು.
4. ಎಪಿಎಂಸಿಯನ್ನು ಭ್ರಷ್ಟಮುಕ್ತಗೊಳಿಸಿ ಬಲಪಡಿಸಬೇಕು; ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದು ರೈತರ ಬೆಳೆಗೆ ಸ್ಥಿರ ಮತ್ತು ನ್ಯಾಯಯುತ ಬೆಲೆ ಒದಗಿಸಬೇಕು
5. ಕಾರ್ಮಿಕ ಕಾಯ್ದೆಗಳನ್ನು ಕಾರ್ಮಿಕರ ಪರವಾಗಿ ಬಲಪಡಿಸಬೇಕು
6. ದಲಿತ–ದಮನಿತರ ಅಭಿವೃದ್ಧಿಗೆ ಮೀಸಲಾಗಿರುವ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳನ್ನು ದುರ್ಬಲಗೊಳಿಸದೆ ಮುಂದುವರಿಸಬೇಕು.
7. ಕನ್ನಡ ಭಾಷೆ ಹಾಗೂ ಕರ್ನಾಟಕದ ನೆಲ-ಜಲ-ಶ್ರಮ-ಸಂಪನ್ಮೂಲಗಳ ನೈಜ ಅಭಿವೃದ್ಧಿಗೆ, ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.


ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...