Homeಕರ್ನಾಟಕಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ರೈತ ವಿರೋಧಿ 3 ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ; ವಿದ್ಯುತ್ ಬಿಲ್ ಮಂಡಿಸದಿರಲಿ, ರಾಜ್ಯಗಳ ಸ್ವಾಯತ್ತತೆ ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಮೇಲಾಧಿಪತ್ಯ ನಿಲ್ಲಲಿ -ಐಕ್ಯಹೋರಾಟ ಸಮಿತಿ

- Advertisement -
- Advertisement -

ಕೇಂದ್ರ ಸರ್ಕಾರ ಕೃಷಿ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದಾಗಿನಿಂದಲೂ ದೇಶದ ಮತ್ತು ಕರ್ನಾಟಕದ ರೈತರು ಅದನ್ನು ವಿರೋಧಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕದ ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ ಮತ್ತು ಎಲ್ಲಾ ಪ್ರಗತಿಪರ, ಜನಪರ, ಕನ್ನಡಪರ ಸಂಘಟನೆಗಳು ರೈತರ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದು ಇಂದಿನ ಭಾರತ್ ಬಂದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಟ್ಟಿ ಮತ್ತು ಸಮವರ್ತಿಪಟ್ಟಿಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲವು ಕಾಯ್ದೆಗಳನ್ನು ತಂದಿರುವುದನ್ನು ನಾವು ಖಂಡಿಸುತ್ತೇವೆ. ಸದರಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು ಕೊರೊನಾ ಲಾಕ್‌ಡೌನ್ ಇದ್ದ ಸಂದರ್ಭದಲ್ಲೇ ಅವಸರದಲ್ಲಿ ಸುಗ್ರೀವಾಜ್ಞೆಯ ಮೂಲಕ ಅವುಗಳನ್ನು ಕೇಂದ್ರವು ಜಾರಿಗೆ ತಂದಿರುವುದರ ದುರುದ್ದೇಶ ನಮಗೆ ಅರ್ಥವಾಗಿದೆ. ಹೀಗಾಗಿ ದೇಶದ ಸಮಸ್ತ ರೈತರು, ರೈತ ಸಂಘಟನೆಗಳು ಮತ್ತು ಪ್ರಜ್ಞಾವಂತ ನಾಗರಿಕರು ಇದನ್ನು ವಿರೋಧಿಸುತ್ತಾ ಸ್ವಯಂಪ್ರೇರಿತ ಭಾರತ್ ಬಂದ್‌ನಲ್ಲಿ ಭಾಗಿಯಾಗುತ್ತೇವೆಂದು ಘೋಷಿಸಿದ್ದಾರೆ.

ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

ರೈತರ ಆಕ್ಷೇಪಗಳು, ಹೋರಾಟಕ್ಕೆ ಕಾರಣಗಳು

1. ಎಪಿಎಂಸಿ ಸೇರಿದಂತೆ ಈಗಿನ ವ್ಯವಸ್ಥೆಯಲ್ಲಿ ಲೋಪಗಳಿದ್ದವು. ರೈತರು ಕೇಳುತ್ತಿದ್ದದ್ದು ಈಗಿರುವ ವ್ಯವಸ್ಥೆಯ ಸಬಲೀಕರಣ. ನೀವು ಮಾಡಲು ಹೊರಟಿರುವುದು ಈಗಿರುವ ಅರೆಬರೆ ವ್ಯವಸ್ಥೆಯನ್ನೂ ಕಿತ್ತು ಹಾಕಿ ರೈತರನ್ನು ಬೀದಿಗೆ ತರುವುದು.
2. ಈ ಕಾಯ್ದೆಗಳ ಹೆಸರುಗಳು ದೊಡ್ಡ ಮೋಸ. ರೈತರನ್ನು ನಾಶ ಮಾಡಿ, ಕಾರ್ಪೋರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುವ ಅಂಶಗಳೇ ಕಾಯ್ದೆಯಲ್ಲಿವೆ. ಆದರೆ ಹೆಸರು ಮಾತ್ರ ರೈತರ ಪರ. ಇದು ವಂಚನೆ.
3. ರೈತರು, ರೈತ ಸಂಘಟನೆಗಳು ಯಾರೂ ಇಷ್ಟು ವರ್ಷಗಳಲ್ಲಿ ಕೇಳದೇ ಇದ್ದುದನ್ನು ನೀವು ತರಲು ಹೊರಟಿದ್ದೀರಿ. ಇದನ್ನು ಸುಗ್ರೀವಾಜ್ಞೆಯಾಗಿ ತಂದ ಸಂದರ್ಭದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ಆಗುತ್ತಲೇ ಇವೆ. ಆದರೂ ಏಕೆ ಮಸೂದೆ ತಂದು ಕಾಯ್ದೆ ಮಾಡಿದಿರಿ?
4. ದೇಶದ ಆರ್ಥಿಕತೆಯಲ್ಲಿ ಎಲ್ಲವೂ ಕುಸಿದಾಗಲೂ ಉಳಿದುಕೊಂಡಿದ್ದು ಕೃಷಿ. ಕೃಷಿ ಕ್ಷೇತ್ರಕ್ಕೆ ದೇಶದ ಶೇ.100ರಷ್ಟು ಜನರು ಗ್ರಾಹಕರು. ಹಾಗಾಗಿ ದೊಡ್ಡ ಉದ್ದಿಮೆಪತಿಗಳ ಕಣ್ಣು ಇದರ ಮೇಲೆ ಬಿದ್ದಿದೆ. ಈಗಿರುವ ಕಾಯ್ದೆಗಳು, ವ್ಯವಸ್ಥೆಯು ಅರ್ಧಂಬರ್ಧ ರಕ್ಷಣೆಯನ್ನು ರೈತರಿಗೆ ಒದಗಿಸುತ್ತಿದ್ದು, ಈ ದೊಡ್ಡ ಉದ್ದಿಮೆಪತಿಗಳು ಅದನ್ನೂ ಒಪ್ಪುತ್ತಿಲ್ಲ; ಹಾಗಾಗಿ ಇದನ್ನು ತರಲು ಹೊರಟಿದ್ದೀರಿ.
5. ಈಗಿರುವ ಕನಿಷ್ಠ ಬೆಂಬಲ ಬೆಲೆಯೇ ನ್ಯಾಯಯುತವಾಗಿಲ್ಲ; ನಮಗೆ ವೈಜ್ಞಾನಿಕ ಬೆಲೆ ಬೇಕು ಎಂದು ಕೇಳಿದ್ದೆವು. 2014ರ ಚುನಾವಣಾ ಪ್ರಣಾಳಿಕೆಯಲ್ಲೂ ಇದನ್ನು ನೀವೇ ಪ್ರಕಟಿಸಿದ್ದಿರಿ. ಆದರೆ ಈ 6 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯು ಇನ್ನೂ ಕನಿಷ್ಠವಾಗುತ್ತಾ ಹೋಯಿತು. ಇದೀಗ ಅದನ್ನೂ ಕಿತ್ತು ಹಾಕಲು ಹೊರಟಿದ್ದೀರಿ.
6. ಇದುವರೆಗೆ ಸಣ್ಣ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದೇ ನಮಗೆ ಕಷ್ಟವಾಗಿತ್ತು. ಆದರೂ ಈ ಸಣ್ಣ ವ್ಯಾಪಾರಿಗಳು ನಮಗೆ ಕೈಗೆ ಸಿಗುವವರು, ಅವರೊಂದಿಗೆ ಗುದ್ದಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದವು. ಆದರೆ ನೀವು ಅವರನ್ನೂ ಇಲ್ಲವಾಗಿಸಿ, ಕಣ್ಣಿಗೇ ಕಾಣದ ಭಾರೀ ದೊಡ್ಡ ಬಂಡವಾಳಶಾಹಿಗಳೊAದಿಗೆ ವ್ಯವಹಾರಕ್ಕೆ ನಮ್ಮನ್ನು ದೂಡುತ್ತಿದ್ದೀರಿ. ಉದ್ದೇಶ ಸ್ಪಷ್ಟ. ನೀವು ಅಂಬಾನಿ, ಅದಾನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದೀರಿ.
7. ನಿರಂತರ ಪ್ರತಿಭಟನೆ ನಡೆಸಿದವರ ದನಿಗೆ ಓಗೊಡದೇ, ಅವರು ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಂದಾಗ, ಹೆದ್ದಾರಿಗಳನ್ನು ಅಗೆದು ತಡೆಯೊಡ್ಡಿದ್ದೀರಿ. ಕೊರೆಯುವ ಛಳಿಯಲ್ಲಿ ಜಲಫಿರಂಗಿಗಳನ್ನು ಹಾರಿಸಿದ್ದೀರಿ; ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಅಪಪ್ರಚಾರ ಯಂತ್ರಾಂಗದ ಮೂಲಕ ರೈತ ಹೋರಾಟಗಾರರ ಮೇಲೆ ಅಪಪ್ರಚಾರ ನಡೆಸಿದ್ದೀರಿ. ಈಗಲೂ ಶಾಂತಿಯುತವಾಗಿರುವ ದೇಶದ ರೈತರು ಮತ್ತು ಪ್ರಜ್ಞಾವಂತ ನಾಗರಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ರೈತರ ಹಕ್ಕೊತ್ತಾಯಗಳೇನು?

1. ಕಳೆದ ವಿಧಾನ ಸಭೆಯಲ್ಲಿ ಅನುಮೋದನೆ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನರ ಮೇಲೆ ಹೇರಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ಕೈಬಿಡಬೇಕು.
2. ಕೇಂದ್ರ ಸರ್ಕಾರವು ಸರ್ವಾಧಿಕಾರಿ ರೀತಿಯಲ್ಲಿ ಜಾರಿಗೆ ತಂದಿರುವ, ಎಪಿಎಂಸಿಯನ್ನು ನಗಣ್ಯಗೊಳಿಸುವ ತಿದ್ದುಪಡಿ ಕಾಯ್ದೆ, ಕಾರ್ಪೊರೇಟ್ ಪರವಾದ ಕಾಂಟ್ರಾಕ್ಟ್ ಕೃಷಿ ಕಾಯ್ದೆ ಹಾಗೂ ಕೃಷಿ ಕಂಪನಿಗಳಿಗೆ ಆಹಾರ ಧಾನ್ಯಗಳ ಕಳ್ಳ ದಾಸ್ತಾನಿಗೆ ಅನುವು ಮಾಡಿಕೊಡುವ ಅಗತ್ಯ ಸರಕುಗಳ ಕಾಯ್ದೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಬೇಕು.
3. ದಶಕಗಳಿಂದ ಫಾರಂ ನಂ. 50-53 ಹಾಗೂ 94ಸಿ/94ಸಿಸಿ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಬಡಜನರ ಭೂಮಿ ಮತ್ತು ಮನೆ/ನಿವೇಶನಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ಮತ್ತು ಗಂಡ-ಹೆಂಡತಿ ಇಬ್ಬರ ಹೆಸರಿಗೆ ಜಂಟಿ ಖಾತೆ ನೀಡಬೇಕು.
4. ಎಪಿಎಂಸಿಯನ್ನು ಭ್ರಷ್ಟಮುಕ್ತಗೊಳಿಸಿ ಬಲಪಡಿಸಬೇಕು; ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದು ರೈತರ ಬೆಳೆಗೆ ಸ್ಥಿರ ಮತ್ತು ನ್ಯಾಯಯುತ ಬೆಲೆ ಒದಗಿಸಬೇಕು
5. ಕಾರ್ಮಿಕ ಕಾಯ್ದೆಗಳನ್ನು ಕಾರ್ಮಿಕರ ಪರವಾಗಿ ಬಲಪಡಿಸಬೇಕು
6. ದಲಿತ–ದಮನಿತರ ಅಭಿವೃದ್ಧಿಗೆ ಮೀಸಲಾಗಿರುವ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳನ್ನು ದುರ್ಬಲಗೊಳಿಸದೆ ಮುಂದುವರಿಸಬೇಕು.
7. ಕನ್ನಡ ಭಾಷೆ ಹಾಗೂ ಕರ್ನಾಟಕದ ನೆಲ-ಜಲ-ಶ್ರಮ-ಸಂಪನ್ಮೂಲಗಳ ನೈಜ ಅಭಿವೃದ್ಧಿಗೆ, ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.


ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....