Homeಕರ್ನಾಟಕಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ಕರ್ನಾಟಕದ ಹೋರಾಟನಿರತ ರೈತರಿಂದ ಪ್ರಧಾನಿಗೆ ಪತ್ರ; ಅಷ್ಟಕ್ಕೂ ಅವರ ಹಕ್ಕೊತ್ತಾಯಗಳೇನು?

ರೈತ ವಿರೋಧಿ 3 ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಲಿ; ವಿದ್ಯುತ್ ಬಿಲ್ ಮಂಡಿಸದಿರಲಿ, ರಾಜ್ಯಗಳ ಸ್ವಾಯತ್ತತೆ ಕಿತ್ತುಕೊಳ್ಳುವ ಕೇಂದ್ರ ಸರ್ಕಾರದ ಮೇಲಾಧಿಪತ್ಯ ನಿಲ್ಲಲಿ -ಐಕ್ಯಹೋರಾಟ ಸಮಿತಿ

- Advertisement -
- Advertisement -

ಕೇಂದ್ರ ಸರ್ಕಾರ ಕೃಷಿ ಸುಗ್ರೀವಾಜ್ಞೆಗಳನ್ನು ಜಾರಿಗೊಳಿಸಿದಾಗಿನಿಂದಲೂ ದೇಶದ ಮತ್ತು ಕರ್ನಾಟಕದ ರೈತರು ಅದನ್ನು ವಿರೋಧಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕದ ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ, ಅಖಿಲ ಭಾರತ ರೈತ ಹೋರಾಟಗಳ ಸಮನ್ವಯ ಸಮಿತಿ ಮತ್ತು ಎಲ್ಲಾ ಪ್ರಗತಿಪರ, ಜನಪರ, ಕನ್ನಡಪರ ಸಂಘಟನೆಗಳು ರೈತರ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದು ಇಂದಿನ ಭಾರತ್ ಬಂದ್ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

ರಾಜ್ಯಪಟ್ಟಿ ಮತ್ತು ಸಮವರ್ತಿಪಟ್ಟಿಯಲ್ಲಿರುವ ವಿಷಯಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಏಕಪಕ್ಷೀಯವಾಗಿ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ಕೆಲವು ಕಾಯ್ದೆಗಳನ್ನು ತಂದಿರುವುದನ್ನು ನಾವು ಖಂಡಿಸುತ್ತೇವೆ. ಸದರಿ ಕಾಯ್ದೆಗಳು ರೈತ ವಿರೋಧಿಯಾಗಿದ್ದು ಕೊರೊನಾ ಲಾಕ್‌ಡೌನ್ ಇದ್ದ ಸಂದರ್ಭದಲ್ಲೇ ಅವಸರದಲ್ಲಿ ಸುಗ್ರೀವಾಜ್ಞೆಯ ಮೂಲಕ ಅವುಗಳನ್ನು ಕೇಂದ್ರವು ಜಾರಿಗೆ ತಂದಿರುವುದರ ದುರುದ್ದೇಶ ನಮಗೆ ಅರ್ಥವಾಗಿದೆ. ಹೀಗಾಗಿ ದೇಶದ ಸಮಸ್ತ ರೈತರು, ರೈತ ಸಂಘಟನೆಗಳು ಮತ್ತು ಪ್ರಜ್ಞಾವಂತ ನಾಗರಿಕರು ಇದನ್ನು ವಿರೋಧಿಸುತ್ತಾ ಸ್ವಯಂಪ್ರೇರಿತ ಭಾರತ್ ಬಂದ್‌ನಲ್ಲಿ ಭಾಗಿಯಾಗುತ್ತೇವೆಂದು ಘೋಷಿಸಿದ್ದಾರೆ.

ಮೌರ್ಯ ಸರ್ಕಲ್ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ

ರೈತರ ಆಕ್ಷೇಪಗಳು, ಹೋರಾಟಕ್ಕೆ ಕಾರಣಗಳು

1. ಎಪಿಎಂಸಿ ಸೇರಿದಂತೆ ಈಗಿನ ವ್ಯವಸ್ಥೆಯಲ್ಲಿ ಲೋಪಗಳಿದ್ದವು. ರೈತರು ಕೇಳುತ್ತಿದ್ದದ್ದು ಈಗಿರುವ ವ್ಯವಸ್ಥೆಯ ಸಬಲೀಕರಣ. ನೀವು ಮಾಡಲು ಹೊರಟಿರುವುದು ಈಗಿರುವ ಅರೆಬರೆ ವ್ಯವಸ್ಥೆಯನ್ನೂ ಕಿತ್ತು ಹಾಕಿ ರೈತರನ್ನು ಬೀದಿಗೆ ತರುವುದು.
2. ಈ ಕಾಯ್ದೆಗಳ ಹೆಸರುಗಳು ದೊಡ್ಡ ಮೋಸ. ರೈತರನ್ನು ನಾಶ ಮಾಡಿ, ಕಾರ್ಪೋರೇಟ್ ಕಂಪೆನಿಗಳಿಗೆ ಅನುಕೂಲ ಮಾಡಿಕೊಡುವ ಅಂಶಗಳೇ ಕಾಯ್ದೆಯಲ್ಲಿವೆ. ಆದರೆ ಹೆಸರು ಮಾತ್ರ ರೈತರ ಪರ. ಇದು ವಂಚನೆ.
3. ರೈತರು, ರೈತ ಸಂಘಟನೆಗಳು ಯಾರೂ ಇಷ್ಟು ವರ್ಷಗಳಲ್ಲಿ ಕೇಳದೇ ಇದ್ದುದನ್ನು ನೀವು ತರಲು ಹೊರಟಿದ್ದೀರಿ. ಇದನ್ನು ಸುಗ್ರೀವಾಜ್ಞೆಯಾಗಿ ತಂದ ಸಂದರ್ಭದಿಂದ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ಆಗುತ್ತಲೇ ಇವೆ. ಆದರೂ ಏಕೆ ಮಸೂದೆ ತಂದು ಕಾಯ್ದೆ ಮಾಡಿದಿರಿ?
4. ದೇಶದ ಆರ್ಥಿಕತೆಯಲ್ಲಿ ಎಲ್ಲವೂ ಕುಸಿದಾಗಲೂ ಉಳಿದುಕೊಂಡಿದ್ದು ಕೃಷಿ. ಕೃಷಿ ಕ್ಷೇತ್ರಕ್ಕೆ ದೇಶದ ಶೇ.100ರಷ್ಟು ಜನರು ಗ್ರಾಹಕರು. ಹಾಗಾಗಿ ದೊಡ್ಡ ಉದ್ದಿಮೆಪತಿಗಳ ಕಣ್ಣು ಇದರ ಮೇಲೆ ಬಿದ್ದಿದೆ. ಈಗಿರುವ ಕಾಯ್ದೆಗಳು, ವ್ಯವಸ್ಥೆಯು ಅರ್ಧಂಬರ್ಧ ರಕ್ಷಣೆಯನ್ನು ರೈತರಿಗೆ ಒದಗಿಸುತ್ತಿದ್ದು, ಈ ದೊಡ್ಡ ಉದ್ದಿಮೆಪತಿಗಳು ಅದನ್ನೂ ಒಪ್ಪುತ್ತಿಲ್ಲ; ಹಾಗಾಗಿ ಇದನ್ನು ತರಲು ಹೊರಟಿದ್ದೀರಿ.
5. ಈಗಿರುವ ಕನಿಷ್ಠ ಬೆಂಬಲ ಬೆಲೆಯೇ ನ್ಯಾಯಯುತವಾಗಿಲ್ಲ; ನಮಗೆ ವೈಜ್ಞಾನಿಕ ಬೆಲೆ ಬೇಕು ಎಂದು ಕೇಳಿದ್ದೆವು. 2014ರ ಚುನಾವಣಾ ಪ್ರಣಾಳಿಕೆಯಲ್ಲೂ ಇದನ್ನು ನೀವೇ ಪ್ರಕಟಿಸಿದ್ದಿರಿ. ಆದರೆ ಈ 6 ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯು ಇನ್ನೂ ಕನಿಷ್ಠವಾಗುತ್ತಾ ಹೋಯಿತು. ಇದೀಗ ಅದನ್ನೂ ಕಿತ್ತು ಹಾಕಲು ಹೊರಟಿದ್ದೀರಿ.
6. ಇದುವರೆಗೆ ಸಣ್ಣ ವ್ಯಾಪಾರಿಗಳೊಂದಿಗೆ ವ್ಯವಹಾರ ಮಾಡುವುದೇ ನಮಗೆ ಕಷ್ಟವಾಗಿತ್ತು. ಆದರೂ ಈ ಸಣ್ಣ ವ್ಯಾಪಾರಿಗಳು ನಮಗೆ ಕೈಗೆ ಸಿಗುವವರು, ಅವರೊಂದಿಗೆ ಗುದ್ದಾಟ ಮಾಡಿಕೊಂಡು ಜೀವನ ನಡೆಸುತ್ತಿದ್ದವು. ಆದರೆ ನೀವು ಅವರನ್ನೂ ಇಲ್ಲವಾಗಿಸಿ, ಕಣ್ಣಿಗೇ ಕಾಣದ ಭಾರೀ ದೊಡ್ಡ ಬಂಡವಾಳಶಾಹಿಗಳೊAದಿಗೆ ವ್ಯವಹಾರಕ್ಕೆ ನಮ್ಮನ್ನು ದೂಡುತ್ತಿದ್ದೀರಿ. ಉದ್ದೇಶ ಸ್ಪಷ್ಟ. ನೀವು ಅಂಬಾನಿ, ಅದಾನಿಗಳಿಗೆ ಅನುಕೂಲ ಮಾಡಿಕೊಡಲು ಹೊರಟಿದ್ದೀರಿ.
7. ನಿರಂತರ ಪ್ರತಿಭಟನೆ ನಡೆಸಿದವರ ದನಿಗೆ ಓಗೊಡದೇ, ಅವರು ಶಾಂತಿಯುತವಾಗಿ ಪ್ರತಿಭಟನೆ ಮಾಡಲು ಬಂದಾಗ, ಹೆದ್ದಾರಿಗಳನ್ನು ಅಗೆದು ತಡೆಯೊಡ್ಡಿದ್ದೀರಿ. ಕೊರೆಯುವ ಛಳಿಯಲ್ಲಿ ಜಲಫಿರಂಗಿಗಳನ್ನು ಹಾರಿಸಿದ್ದೀರಿ; ಎಲ್ಲಕ್ಕಿಂತ ಮುಖ್ಯವಾಗಿ ನಿಮ್ಮ ಅಪಪ್ರಚಾರ ಯಂತ್ರಾಂಗದ ಮೂಲಕ ರೈತ ಹೋರಾಟಗಾರರ ಮೇಲೆ ಅಪಪ್ರಚಾರ ನಡೆಸಿದ್ದೀರಿ. ಈಗಲೂ ಶಾಂತಿಯುತವಾಗಿರುವ ದೇಶದ ರೈತರು ಮತ್ತು ಪ್ರಜ್ಞಾವಂತ ನಾಗರಿಕರ ತಾಳ್ಮೆ ಪರೀಕ್ಷಿಸುತ್ತಿದ್ದೀರಿ.

ಬೆಂಗಳೂರಿನ ಟೌನ್ ಹಾಲ್ ಮುಂದೆ ಪ್ರತಿಭಟನೆ

ರೈತರ ಹಕ್ಕೊತ್ತಾಯಗಳೇನು?

1. ಕಳೆದ ವಿಧಾನ ಸಭೆಯಲ್ಲಿ ಅನುಮೋದನೆ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ರಾಜ್ಯ ಸರ್ಕಾರ ರಾಜ್ಯದ ಜನರ ಮೇಲೆ ಹೇರಿರುವ ಭೂಸುಧಾರಣಾ ಕಾಯ್ದೆ ತಿದ್ದುಪಡಿ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದುಪಡಿ ಮತ್ತು ವಿದ್ಯುತ್ ಖಾಸಗೀಕರಣ ಕಾಯ್ದೆಗಳನ್ನು ಕೈಬಿಡಬೇಕು.
2. ಕೇಂದ್ರ ಸರ್ಕಾರವು ಸರ್ವಾಧಿಕಾರಿ ರೀತಿಯಲ್ಲಿ ಜಾರಿಗೆ ತಂದಿರುವ, ಎಪಿಎಂಸಿಯನ್ನು ನಗಣ್ಯಗೊಳಿಸುವ ತಿದ್ದುಪಡಿ ಕಾಯ್ದೆ, ಕಾರ್ಪೊರೇಟ್ ಪರವಾದ ಕಾಂಟ್ರಾಕ್ಟ್ ಕೃಷಿ ಕಾಯ್ದೆ ಹಾಗೂ ಕೃಷಿ ಕಂಪನಿಗಳಿಗೆ ಆಹಾರ ಧಾನ್ಯಗಳ ಕಳ್ಳ ದಾಸ್ತಾನಿಗೆ ಅನುವು ಮಾಡಿಕೊಡುವ ಅಗತ್ಯ ಸರಕುಗಳ ಕಾಯ್ದೆಗಳನ್ನು ರಾಜ್ಯ ಸರ್ಕಾರ ಧಿಕ್ಕರಿಸಬೇಕು.
3. ದಶಕಗಳಿಂದ ಫಾರಂ ನಂ. 50-53 ಹಾಗೂ 94ಸಿ/94ಸಿಸಿ ಅರ್ಜಿ ಹಾಕಿಕೊಂಡು ಕಾಯುತ್ತಿರುವ ಬಡಜನರ ಭೂಮಿ ಮತ್ತು ಮನೆ/ನಿವೇಶನಗಳಿಗೆ ಕೂಡಲೇ ಹಕ್ಕುಪತ್ರ ನೀಡಬೇಕು. ಮತ್ತು ಗಂಡ-ಹೆಂಡತಿ ಇಬ್ಬರ ಹೆಸರಿಗೆ ಜಂಟಿ ಖಾತೆ ನೀಡಬೇಕು.
4. ಎಪಿಎಂಸಿಯನ್ನು ಭ್ರಷ್ಟಮುಕ್ತಗೊಳಿಸಿ ಬಲಪಡಿಸಬೇಕು; ಸ್ವಾಮಿನಾಥನ್ ವರದಿಯನ್ನು ಜಾರಿಗೆ ತಂದು ರೈತರ ಬೆಳೆಗೆ ಸ್ಥಿರ ಮತ್ತು ನ್ಯಾಯಯುತ ಬೆಲೆ ಒದಗಿಸಬೇಕು
5. ಕಾರ್ಮಿಕ ಕಾಯ್ದೆಗಳನ್ನು ಕಾರ್ಮಿಕರ ಪರವಾಗಿ ಬಲಪಡಿಸಬೇಕು
6. ದಲಿತ–ದಮನಿತರ ಅಭಿವೃದ್ಧಿಗೆ ಮೀಸಲಾಗಿರುವ ಎಲ್ಲಾ ಸಮಾಜ ಕಲ್ಯಾಣ ಯೋಜನೆಗಳನ್ನು ದುರ್ಬಲಗೊಳಿಸದೆ ಮುಂದುವರಿಸಬೇಕು.
7. ಕನ್ನಡ ಭಾಷೆ ಹಾಗೂ ಕರ್ನಾಟಕದ ನೆಲ-ಜಲ-ಶ್ರಮ-ಸಂಪನ್ಮೂಲಗಳ ನೈಜ ಅಭಿವೃದ್ಧಿಗೆ, ಉದ್ಯೋಗಾವಕಾಶಗಳ ಹೆಚ್ಚಳಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು.


ಇದನ್ನೂ ಓದಿ: ಸ್ವಯಂಪ್ರೇರಿತರಾಗಿ ಭಾರತ್ ಬಂದ್‌ ಬೆಂಬಲಿಸಿದ ಜನ; ಬೆಂಗಳೂರು ಮೈಸೂರು ರಸ್ತೆ ಖಾಲಿ ಖಾಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...