Homeಮುಖಪುಟವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ 81 ವರ್ಷದ ಕವಿ ವರವರ ರಾವ್ ಅವರ ಆರೋಗ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ದೇಶದ 14 ಸಂಸದರು ಜೂನ್ 19 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಅರ್ಜಿಯಲ್ಲಿ ವರವರ ರಾವ್ ಮತ್ತು ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಕೇಳಿಕೊಳ್ಳಲಾಗಿದೆ.

ಸಿಪಿಐ(ಎಂ), ಕಾಂಗ್ರೆಸ್, ಡಿಎಂಕೆ, ವಿಸಿಕೆ, ಸಿಪಿಐ ಮತ್ತು ಆರ್‌ಜೆಡಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಹದಿನಾಲ್ಕು ಸಂಸದರು, ಜೈಲುಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಬ್ಬರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.

ವರವರ ರಾವ್ ಅವರನ್ನು ನವೀ ಮುಂಬಯಿಯ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಸಲಾಗಿದ್ದು, ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಹಾಗೂ ಪ್ರಧಾನಿ ಮೋದಿಯನ್ನು ಹತ್ಯೆ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಆಗಸ್ಟ್ 28, 2018 ರಂದು ಬಂಧಿಸಲಾಯಿತು.

ಸಂಸದರು ತಮ್ಮ ಪತ್ರದಲ್ಲಿ, 81 ವರ್ಷ ವಯಸ್ಸಿನ ವರವರ ರಾವ್ ಪ್ರತಿದಿನ ವಾಂತಿ ಮಾಡಿಕೊಳ್ಳುತ್ತಿದ್ದಾರೆ, ಅವರ ಆರೋಗ್ಯ ಸರಿಯಿಲ್ಲ. ರಾವ್ ಹೃದಯ ರೋಗಿಯಾಗಿದ್ದರಿಂದ ಅವರ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವ ಎಲೆಕ್ಟ್ರೋಲೈಟ್ ಅಡಚಣೆಯನ್ನು ಅವರ ಆರೋಗ್ಯ ವರದಿಗಳು ಉಲ್ಲೇಖಿಸಿವೆ ಎಂದು ಸಂಸದರು ಉಲ್ಲೇಖಿಸಿದ್ದಾರೆ. ಅವನ ಕರುಳಿನ ಹುಣ್ಣುಗಳಿಗೆ ತುರ್ತು ಪರೀಕ್ಷೆಯ ಅಗತ್ಯವಿದ್ದು, ಆರು ತಿಂಗಳುಗಳಾಗಿಯೂ ಅದನ್ನು ನಡೆಸಲಾಗಿಲ್ಲ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಅವರ ಆರೋಗ್ಯ ಇಂತಹ ದುಸ್ಥಿತಿಯಲ್ಲಿರುರುವುದರಿಂದ, ಅವರನ್ನು ಆಸ್ಪತ್ರೆಗೆ ವರ್ಗಾಯಿಸಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ಜೈಲಿನಲ್ಲಿ ಪ್ರಸ್ತುತ ಒದಗಿಸಲಾದ ಆರೈಕೆ ಸ್ವೀಕಾರಾರ್ಹವಲ್ಲ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ ಅಗತ್ಯ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಆರ್ ನಟರಾಜನ್ (ಸಿಪಿಐ (ಎಂ), ಕೆಕೆ ರಾಗೇಶ್ (ಸಿಪಿಐ (ಎಂ)), ಕೆ ಸುಬ್ಬರಾಯಣ್ (ಸಿಪಿಐ), ಉತ್ತಮ ಕುಮಾರ್ ರೆಡ್ಡಿ (ಕಾಂಗ್ರೆಸ್), ಕೋಮತಿ ರೆಡ್ಡಿ ವೆಂಕಟ್ ರೆಡ್ಡಿ (ಕಾಂಗ್ರೆಸ್), ಮನೋಜ್ ಜಾ (ಆರ್‌ಜೆಡಿ), ಡಿ ರವಿಕುಮಾರ್ (ವಿಸಿಕೆ), ಥೋಲ್ ತಿರುಮಾವಾಲವನ್ (ವಿಸಿಕೆ), ಎ ರೇವಂತ್ ರೆಡ್ಡಿ (ಕಾಂಗ್ರೆಸ್), ಸುಮತಿ ತಮಿಳತಿ ತಂಗಪಾಂಡಿಯನ್ (ಡಿಎಂಕೆ), ತಿರುಚಿ ಶಿವ (ಡಿಎಂಕೆ), ಕನಿಮೋಜಿ (ಡಿಎಂಕೆ) ಮತ್ತು ಎಸ್ ವೆಂಕಟೇಶನ್ (ಸಿಪಿಐ) ) ಮೊದಲಾದ ಸಂಸದರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

90% ವಿಕಲಾಂಗತೆ ಹೊಂದಿರುವ ಡಾ. ಜಿ.ಎನ್. ಸಾಯಿಬಾಬ ಅವರ ಆರೋಗ್ಯ ಕೂಡಾ ದುರ್ಬಲವಾಗಿದ್ದು ಅವರಿಗೆ ಕೂಡಾ ಚಿಕಿತ್ಸೆಯನ್ನು ನೀಡುವಂತೆ ಕೇಳಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋಧಿಸಿದ್ದಾರೆಂದು ಬಂಧನಕ್ಕೊಳಗಾಗಿ ಜೈಲಿನಲ್ಲಿರುವ 11 ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಕವಿ ಮತ್ತು ಬರಹಗಾರ ವರವರ ರಾವ್ ಕೂಡಾ ಸೇರಿದ್ದಾರೆ. ಇದಲ್ಲದೆ ಸುಧಾ ಭರದ್ವಾಜ್, ಶೋಮಾ ಸೇನ್, ಆನಂದ್ ತೇಲ್ಟುಂಬ್ಡೆ, ಗೌತಮ್ ನವಲಖಾ, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಸುರೇಂದ್ರ ಗ್ಯಾಡ್ಲಿಂಗ್, ಮಹೇಶ್ ರೌತ್, ಸುಧೀರ್ ಧವಾಲೆ ಮತ್ತು ರೋನಾ ವಿಲ್ಸನ್ ಇತರರು ಕೂಡಾ ಈ ಪಟ್ಟಿಯಲ್ಲಿ ಸೇರಿದ್ದಾರೆ.

ಈ ಪತ್ರವಲ್ಲದೆ ಜೂನ್ 16 ರಂದು ಚಲನಚಿತ್ರ ನಟರಾದ ಸೌಮಿತ್ರ ಚಟರ್ಜಿ, ಅಡೂರ್‌ ಗೋಪಾಲಕೃಷ್ಣನ್, ನಸೀರುದ್ದೀನ್ ಷಾ ಮತ್ತು ಅಪರ್ಣ ಸೇನ್ ಸೇರಿದಂತೆ 500 ಗಣ್ಯರು ಬಂಧನನಕ್ಕೊಳಗಾದ ಸಾಮಾಜಿಕ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಪತ್ರ ಬರೆಯಲಾಗಿತ್ತು.

ಅಲ್ಲದೆ ಮೇ 28 ರಂದು ವರವರ ರಾವ್ ಅವರನ್ನು ಸರ್ಕಾರಿ ನಿಯಂತ್ರಿತ ಜೆಜೆ ಆಸ್ಪತ್ರೆಗೆ ದಾಖಲಿಸಿದ ನಂತರ ಅವರ ಪತ್ನಿ ಮೇ 30 ರಂದು ಅವರನ್ನು ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆಸ್ಪತ್ರೆಯ ಮೂಲಗಳ ಪ್ರಕಾರ ರಾವ್ ಅವರು ತನಗೆ ತಲೆತಿರುಗುತ್ತಿದೆ ಎಂದು ಹೇಳಿದ್ದರು ಹಾಗೂ ಸ್ವಲ್ಪ ಸಮಯದ ವರೆಗೆ ಅವರು ಮೂರ್ಚೆ ಹೋಗಿದ್ದರು ಎನ್ನಲಾಗಿತ್ತು. ಆದರೂ ಅವರನ್ನು ಕೇವಲ ಮೂರು ದಿನಗಳಷ್ಟೇ ಇಡಲಾಗಿತ್ತು.


ಓದಿ: ಸಫೂರಾ ಝರ್ಗರ್‌ ಸೇರಿದಂತೆ ಸಾಮಾಜಿಕ ಕಾರ್ಯಕರ್ತರ ಬಿಡುಗಡೆಗೆ 500 ಗಣ್ಯರ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....