Homeಮುಖಪುಟವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ 81 ವರ್ಷದ ಕವಿ ವರವರ ರಾವ್ ಅವರ ಆರೋಗ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ದೇಶದ 14 ಸಂಸದರು ಜೂನ್ 19 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಅರ್ಜಿಯಲ್ಲಿ ವರವರ ರಾವ್ ಮತ್ತು ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಕೇಳಿಕೊಳ್ಳಲಾಗಿದೆ.

ಸಿಪಿಐ(ಎಂ), ಕಾಂಗ್ರೆಸ್, ಡಿಎಂಕೆ, ವಿಸಿಕೆ, ಸಿಪಿಐ ಮತ್ತು ಆರ್‌ಜೆಡಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಹದಿನಾಲ್ಕು ಸಂಸದರು, ಜೈಲುಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಬ್ಬರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.

ವರವರ ರಾವ್ ಅವರನ್ನು ನವೀ ಮುಂಬಯಿಯ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಸಲಾಗಿದ್ದು, ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಹಾಗೂ ಪ್ರಧಾನಿ ಮೋದಿಯನ್ನು ಹತ್ಯೆ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಆಗಸ್ಟ್ 28, 2018 ರಂದು ಬಂಧಿಸಲಾಯಿತು.

ಸಂಸದರು ತಮ್ಮ ಪತ್ರದಲ್ಲಿ, 81 ವರ್ಷ ವಯಸ್ಸಿನ ವರವರ ರಾವ್ ಪ್ರತಿದಿನ ವಾಂತಿ ಮಾಡಿಕೊಳ್ಳುತ್ತಿದ್ದಾರೆ, ಅವರ ಆರೋಗ್ಯ ಸರಿಯಿಲ್ಲ. ರಾವ್ ಹೃದಯ ರೋಗಿಯಾಗಿದ್ದರಿಂದ ಅವರ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವ ಎಲೆಕ್ಟ್ರೋಲೈಟ್ ಅಡಚಣೆಯನ್ನು ಅವರ ಆರೋಗ್ಯ ವರದಿಗಳು ಉಲ್ಲೇಖಿಸಿವೆ ಎಂದು ಸಂಸದರು ಉಲ್ಲೇಖಿಸಿದ್ದಾರೆ. ಅವನ ಕರುಳಿನ ಹುಣ್ಣುಗಳಿಗೆ ತುರ್ತು ಪರೀಕ್ಷೆಯ ಅಗತ್ಯವಿದ್ದು, ಆರು ತಿಂಗಳುಗಳಾಗಿಯೂ ಅದನ್ನು ನಡೆಸಲಾಗಿಲ್ಲ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಅವರ ಆರೋಗ್ಯ ಇಂತಹ ದುಸ್ಥಿತಿಯಲ್ಲಿರುರುವುದರಿಂದ, ಅವರನ್ನು ಆಸ್ಪತ್ರೆಗೆ ವರ್ಗಾಯಿಸಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ಜೈಲಿನಲ್ಲಿ ಪ್ರಸ್ತುತ ಒದಗಿಸಲಾದ ಆರೈಕೆ ಸ್ವೀಕಾರಾರ್ಹವಲ್ಲ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ ಅಗತ್ಯ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಆರ್ ನಟರಾಜನ್ (ಸಿಪಿಐ (ಎಂ), ಕೆಕೆ ರಾಗೇಶ್ (ಸಿಪಿಐ (ಎಂ)), ಕೆ ಸುಬ್ಬರಾಯಣ್ (ಸಿಪಿಐ), ಉತ್ತಮ ಕುಮಾರ್ ರೆಡ್ಡಿ (ಕಾಂಗ್ರೆಸ್), ಕೋಮತಿ ರೆಡ್ಡಿ ವೆಂಕಟ್ ರೆಡ್ಡಿ (ಕಾಂಗ್ರೆಸ್), ಮನೋಜ್ ಜಾ (ಆರ್‌ಜೆಡಿ), ಡಿ ರವಿಕುಮಾರ್ (ವಿಸಿಕೆ), ಥೋಲ್ ತಿರುಮಾವಾಲವನ್ (ವಿಸಿಕೆ), ಎ ರೇವಂತ್ ರೆಡ್ಡಿ (ಕಾಂಗ್ರೆಸ್), ಸುಮತಿ ತಮಿಳತಿ ತಂಗಪಾಂಡಿಯನ್ (ಡಿಎಂಕೆ), ತಿರುಚಿ ಶಿವ (ಡಿಎಂಕೆ), ಕನಿಮೋಜಿ (ಡಿಎಂಕೆ) ಮತ್ತು ಎಸ್ ವೆಂಕಟೇಶನ್ (ಸಿಪಿಐ) ) ಮೊದಲಾದ ಸಂಸದರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

90% ವಿಕಲಾಂಗತೆ ಹೊಂದಿರುವ ಡಾ. ಜಿ.ಎನ್. ಸಾಯಿಬಾಬ ಅವರ ಆರೋಗ್ಯ ಕೂಡಾ ದುರ್ಬಲವಾಗಿದ್ದು ಅವರಿಗೆ ಕೂಡಾ ಚಿಕಿತ್ಸೆಯನ್ನು ನೀಡುವಂತೆ ಕೇಳಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋಧಿಸಿದ್ದಾರೆಂದು ಬಂಧನಕ್ಕೊಳಗಾಗಿ ಜೈಲಿನಲ್ಲಿರುವ 11 ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಕವಿ ಮತ್ತು ಬರಹಗಾರ ವರವರ ರಾವ್ ಕೂಡಾ ಸೇರಿದ್ದಾರೆ. ಇದಲ್ಲದೆ ಸುಧಾ ಭರದ್ವಾಜ್, ಶೋಮಾ ಸೇನ್, ಆನಂದ್ ತೇಲ್ಟುಂಬ್ಡೆ, ಗೌತಮ್ ನವಲಖಾ, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಸುರೇಂದ್ರ ಗ್ಯಾಡ್ಲಿಂಗ್, ಮಹೇಶ್ ರೌತ್, ಸುಧೀರ್ ಧವಾಲೆ ಮತ್ತು ರೋನಾ ವಿಲ್ಸನ್ ಇತರರು ಕೂಡಾ ಈ ಪಟ್ಟಿಯಲ್ಲಿ ಸೇರಿದ್ದಾರೆ.

ಈ ಪತ್ರವಲ್ಲದೆ ಜೂನ್ 16 ರಂದು ಚಲನಚಿತ್ರ ನಟರಾದ ಸೌಮಿತ್ರ ಚಟರ್ಜಿ, ಅಡೂರ್‌ ಗೋಪಾಲಕೃಷ್ಣನ್, ನಸೀರುದ್ದೀನ್ ಷಾ ಮತ್ತು ಅಪರ್ಣ ಸೇನ್ ಸೇರಿದಂತೆ 500 ಗಣ್ಯರು ಬಂಧನನಕ್ಕೊಳಗಾದ ಸಾಮಾಜಿಕ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಪತ್ರ ಬರೆಯಲಾಗಿತ್ತು.

ಅಲ್ಲದೆ ಮೇ 28 ರಂದು ವರವರ ರಾವ್ ಅವರನ್ನು ಸರ್ಕಾರಿ ನಿಯಂತ್ರಿತ ಜೆಜೆ ಆಸ್ಪತ್ರೆಗೆ ದಾಖಲಿಸಿದ ನಂತರ ಅವರ ಪತ್ನಿ ಮೇ 30 ರಂದು ಅವರನ್ನು ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆಸ್ಪತ್ರೆಯ ಮೂಲಗಳ ಪ್ರಕಾರ ರಾವ್ ಅವರು ತನಗೆ ತಲೆತಿರುಗುತ್ತಿದೆ ಎಂದು ಹೇಳಿದ್ದರು ಹಾಗೂ ಸ್ವಲ್ಪ ಸಮಯದ ವರೆಗೆ ಅವರು ಮೂರ್ಚೆ ಹೋಗಿದ್ದರು ಎನ್ನಲಾಗಿತ್ತು. ಆದರೂ ಅವರನ್ನು ಕೇವಲ ಮೂರು ದಿನಗಳಷ್ಟೇ ಇಡಲಾಗಿತ್ತು.


ಓದಿ: ಸಫೂರಾ ಝರ್ಗರ್‌ ಸೇರಿದಂತೆ ಸಾಮಾಜಿಕ ಕಾರ್ಯಕರ್ತರ ಬಿಡುಗಡೆಗೆ 500 ಗಣ್ಯರ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...