Homeಮುಖಪುಟವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

ವರವರ ರಾವ್‌ರನ್ನು ಆಸ್ಪತ್ರೆಗೆ ಸೇರಿಸಿ: 14 ಸಂಸದರಿಂದ ಮಹಾರಾಷ್ಟ್ರ ಸಿಎಂಗೆ ಪತ್ರ

- Advertisement -
- Advertisement -

ಭೀಮಾ ಕೋರೆಗಾಂವ್ ಪ್ರಕರಣದಲ್ಲಿ ಬಂಧನಕ್ಕೊಳಗಾದ 81 ವರ್ಷದ ಕವಿ ವರವರ ರಾವ್ ಅವರ ಆರೋಗ್ಯದ ಬಗ್ಗೆ ಗಂಭೀರ ಕಳವಳ ವ್ಯಕ್ತಪಡಿಸಿ ದೇಶದ 14 ಸಂಸದರು ಜೂನ್ 19 ರಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಅರ್ಜಿಯಲ್ಲಿ ವರವರ ರಾವ್ ಮತ್ತು ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ಜಿ.ಎನ್. ಸಾಯಿಬಾಬ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲು ಕೇಳಿಕೊಳ್ಳಲಾಗಿದೆ.

ಸಿಪಿಐ(ಎಂ), ಕಾಂಗ್ರೆಸ್, ಡಿಎಂಕೆ, ವಿಸಿಕೆ, ಸಿಪಿಐ ಮತ್ತು ಆರ್‌ಜೆಡಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಹದಿನಾಲ್ಕು ಸಂಸದರು, ಜೈಲುಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇವರಿಬ್ಬರಿಗೆ ವೈದ್ಯಕೀಯ ಚಿಕಿತ್ಸೆ ನೀಡುವಂತೆ ಕೋರಿದ್ದಾರೆ.

ವರವರ ರಾವ್ ಅವರನ್ನು ನವೀ ಮುಂಬಯಿಯ ತಾಲೋಜ ಕೇಂದ್ರ ಕಾರಾಗೃಹದಲ್ಲಿ ಬಂಧಿಸಲಾಗಿದ್ದು, ಭೀಮಾ ಕೋರೆಗಾಂವ್ ಹಿಂಸಾಚಾರದಲ್ಲಿ ಭಾಗಿಯಾಗಿದ್ದಕ್ಕಾಗಿ ಹಾಗೂ ಪ್ರಧಾನಿ ಮೋದಿಯನ್ನು ಹತ್ಯೆ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಆರೋಪಿಸಿ ಅವರನ್ನು ಆಗಸ್ಟ್ 28, 2018 ರಂದು ಬಂಧಿಸಲಾಯಿತು.

ಸಂಸದರು ತಮ್ಮ ಪತ್ರದಲ್ಲಿ, 81 ವರ್ಷ ವಯಸ್ಸಿನ ವರವರ ರಾವ್ ಪ್ರತಿದಿನ ವಾಂತಿ ಮಾಡಿಕೊಳ್ಳುತ್ತಿದ್ದಾರೆ, ಅವರ ಆರೋಗ್ಯ ಸರಿಯಿಲ್ಲ. ರಾವ್ ಹೃದಯ ರೋಗಿಯಾಗಿದ್ದರಿಂದ ಅವರ ಆರೋಗ್ಯದ ಮೇಲೆ ಹಾನಿಕಾರಕ ಪರಿಣಾಮ ಬೀರುವ ಎಲೆಕ್ಟ್ರೋಲೈಟ್ ಅಡಚಣೆಯನ್ನು ಅವರ ಆರೋಗ್ಯ ವರದಿಗಳು ಉಲ್ಲೇಖಿಸಿವೆ ಎಂದು ಸಂಸದರು ಉಲ್ಲೇಖಿಸಿದ್ದಾರೆ. ಅವನ ಕರುಳಿನ ಹುಣ್ಣುಗಳಿಗೆ ತುರ್ತು ಪರೀಕ್ಷೆಯ ಅಗತ್ಯವಿದ್ದು, ಆರು ತಿಂಗಳುಗಳಾಗಿಯೂ ಅದನ್ನು ನಡೆಸಲಾಗಿಲ್ಲ ಎಂದು ಪತ್ರದಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

“ಅವರ ಆರೋಗ್ಯ ಇಂತಹ ದುಸ್ಥಿತಿಯಲ್ಲಿರುರುವುದರಿಂದ, ಅವರನ್ನು ಆಸ್ಪತ್ರೆಗೆ ವರ್ಗಾಯಿಸಲು ನಾವು ನಿಮ್ಮನ್ನು ಒತ್ತಾಯಿಸುತ್ತೇವೆ. ಜೈಲಿನಲ್ಲಿ ಪ್ರಸ್ತುತ ಒದಗಿಸಲಾದ ಆರೈಕೆ ಸ್ವೀಕಾರಾರ್ಹವಲ್ಲ. ಅವರನ್ನು ಆಸ್ಪತ್ರೆಗೆ ಸ್ಥಳಾಂತರಿಸುವ ಮೂಲಕ ಅಗತ್ಯ ಮತ್ತು ತುರ್ತು ವೈದ್ಯಕೀಯ ಚಿಕಿತ್ಸೆ ನೀಡುವಂತೆ ನಾವು ನಿಮ್ಮನ್ನು ವಿನಂತಿಸುತ್ತೇವೆ ”ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

ಪಿಆರ್ ನಟರಾಜನ್ (ಸಿಪಿಐ (ಎಂ), ಕೆಕೆ ರಾಗೇಶ್ (ಸಿಪಿಐ (ಎಂ)), ಕೆ ಸುಬ್ಬರಾಯಣ್ (ಸಿಪಿಐ), ಉತ್ತಮ ಕುಮಾರ್ ರೆಡ್ಡಿ (ಕಾಂಗ್ರೆಸ್), ಕೋಮತಿ ರೆಡ್ಡಿ ವೆಂಕಟ್ ರೆಡ್ಡಿ (ಕಾಂಗ್ರೆಸ್), ಮನೋಜ್ ಜಾ (ಆರ್‌ಜೆಡಿ), ಡಿ ರವಿಕುಮಾರ್ (ವಿಸಿಕೆ), ಥೋಲ್ ತಿರುಮಾವಾಲವನ್ (ವಿಸಿಕೆ), ಎ ರೇವಂತ್ ರೆಡ್ಡಿ (ಕಾಂಗ್ರೆಸ್), ಸುಮತಿ ತಮಿಳತಿ ತಂಗಪಾಂಡಿಯನ್ (ಡಿಎಂಕೆ), ತಿರುಚಿ ಶಿವ (ಡಿಎಂಕೆ), ಕನಿಮೋಜಿ (ಡಿಎಂಕೆ) ಮತ್ತು ಎಸ್ ವೆಂಕಟೇಶನ್ (ಸಿಪಿಐ) ) ಮೊದಲಾದ ಸಂಸದರು ಮಹಾರಾಷ್ಟ್ರ ಮುಖ್ಯಮಂತ್ರಿಗೆ ಪತ್ರ ಬರೆದಿದ್ದಾರೆ.

90% ವಿಕಲಾಂಗತೆ ಹೊಂದಿರುವ ಡಾ. ಜಿ.ಎನ್. ಸಾಯಿಬಾಬ ಅವರ ಆರೋಗ್ಯ ಕೂಡಾ ದುರ್ಬಲವಾಗಿದ್ದು ಅವರಿಗೆ ಕೂಡಾ ಚಿಕಿತ್ಸೆಯನ್ನು ನೀಡುವಂತೆ ಕೇಳಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುತ್ತಿದ್ದೇವೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಭೀಮಾ ಕೋರೆಗಾಂವ್ ಹಿಂಸಾಚಾರಕ್ಕೆ ಪ್ರಚೋಧಿಸಿದ್ದಾರೆಂದು ಬಂಧನಕ್ಕೊಳಗಾಗಿ ಜೈಲಿನಲ್ಲಿರುವ 11 ಮಾನವ ಹಕ್ಕುಗಳ ಕಾರ್ಯಕರ್ತರಲ್ಲಿ ಕವಿ ಮತ್ತು ಬರಹಗಾರ ವರವರ ರಾವ್ ಕೂಡಾ ಸೇರಿದ್ದಾರೆ. ಇದಲ್ಲದೆ ಸುಧಾ ಭರದ್ವಾಜ್, ಶೋಮಾ ಸೇನ್, ಆನಂದ್ ತೇಲ್ಟುಂಬ್ಡೆ, ಗೌತಮ್ ನವಲಖಾ, ಅರುಣ್ ಫೆರೀರಾ, ವೆರ್ನಾನ್ ಗೊನ್ಸಾಲ್ವೆಸ್, ಸುರೇಂದ್ರ ಗ್ಯಾಡ್ಲಿಂಗ್, ಮಹೇಶ್ ರೌತ್, ಸುಧೀರ್ ಧವಾಲೆ ಮತ್ತು ರೋನಾ ವಿಲ್ಸನ್ ಇತರರು ಕೂಡಾ ಈ ಪಟ್ಟಿಯಲ್ಲಿ ಸೇರಿದ್ದಾರೆ.

ಈ ಪತ್ರವಲ್ಲದೆ ಜೂನ್ 16 ರಂದು ಚಲನಚಿತ್ರ ನಟರಾದ ಸೌಮಿತ್ರ ಚಟರ್ಜಿ, ಅಡೂರ್‌ ಗೋಪಾಲಕೃಷ್ಣನ್, ನಸೀರುದ್ದೀನ್ ಷಾ ಮತ್ತು ಅಪರ್ಣ ಸೇನ್ ಸೇರಿದಂತೆ 500 ಗಣ್ಯರು ಬಂಧನನಕ್ಕೊಳಗಾದ ಸಾಮಾಜಿಕ ಕಾರ್ಯಕರ್ತರನ್ನು ಬಿಡುಗಡೆ ಮಾಡಬೇಕು ಎಂದು ಪತ್ರ ಬರೆಯಲಾಗಿತ್ತು.

ಅಲ್ಲದೆ ಮೇ 28 ರಂದು ವರವರ ರಾವ್ ಅವರನ್ನು ಸರ್ಕಾರಿ ನಿಯಂತ್ರಿತ ಜೆಜೆ ಆಸ್ಪತ್ರೆಗೆ ದಾಖಲಿಸಿದ ನಂತರ ಅವರ ಪತ್ನಿ ಮೇ 30 ರಂದು ಅವರನ್ನು ಜಾಮೀನಿನ ಮೇಲೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದರು. ಆಸ್ಪತ್ರೆಯ ಮೂಲಗಳ ಪ್ರಕಾರ ರಾವ್ ಅವರು ತನಗೆ ತಲೆತಿರುಗುತ್ತಿದೆ ಎಂದು ಹೇಳಿದ್ದರು ಹಾಗೂ ಸ್ವಲ್ಪ ಸಮಯದ ವರೆಗೆ ಅವರು ಮೂರ್ಚೆ ಹೋಗಿದ್ದರು ಎನ್ನಲಾಗಿತ್ತು. ಆದರೂ ಅವರನ್ನು ಕೇವಲ ಮೂರು ದಿನಗಳಷ್ಟೇ ಇಡಲಾಗಿತ್ತು.


ಓದಿ: ಸಫೂರಾ ಝರ್ಗರ್‌ ಸೇರಿದಂತೆ ಸಾಮಾಜಿಕ ಕಾರ್ಯಕರ್ತರ ಬಿಡುಗಡೆಗೆ 500 ಗಣ್ಯರ ಪತ್ರ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...