Homeಕರ್ನಾಟಕಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ಬಹುರೂಪಿ ನಾಟಕೋತ್ಸವ ವಿವಾದದ ಕುರಿತು ಚರ್ಚಿಸಲು ಇಂದು ಸಂಜೆ (ಡಿ.4, 2021) 5 ಗಂಟೆಗೆ ಮೈಸೂರಿನ ಕಲಾಮಂದಿರದ ಕಿಂದರಜೋಗಿ ಬಳಿ ಸಭೆ ಏರ್ಪಡಿಸಲಾಗಿದೆ.

- Advertisement -
- Advertisement -

ಮೈಸೂರು ರಂಗಾಯಣದ ಪ್ರತಿಷ್ಟಿತ ಕಾರ್ಯಕ್ರಮವಾದ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ಕ್ಕೆ ಬಿಜೆಪಿ ಬೆಂಬಲಿತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಕರೆಸಬಾರದು ಎಂದು ‘ಪರ್ವ’ ನಾಟಕದ ಕಿರಿಯ ಕಲಾವಿದರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ಬಹುರೂಪಿ ಕಾರ್ಯಕ್ರಮವು ರಂಗಾಯಣಕ್ಕೆ ಗರಿಮೆಯದ್ದಾಗಿದೆ. ಈ ಕಾರ್ಯಕ್ರಮಕ್ಕೆ ಸಮಾಜದ ದೃಷ್ಟಿಯಲ್ಲಿ ಎಲ್ಲಾ ಸಿದ್ಧಾಂತಗಳಿಗೂ ಗೌರವಕೊಡುವ ಸಮಾನ ಮನಸ್ಕರನ್ನು ಕರೆಸಬೇಕು” ಎಂದು ಕಿರಿಯ ಕಲಾವಿದರು ಆಗ್ರಹಿಸಿದ್ದಾರೆ.

ವಿಶ್ವವಿಖ್ಯಾತಿಯನ್ನ ಬಹುರೂಪಿ ಪಡೆದಿದೆ. ಇಂತಹ ಕಾರ್ಯಕ್ರಮಕ್ಕೆ ಸಮಾನ ಮನಸ್ಕರನ್ನು ಕರೆಸಬೇಕು. ಅವರು ಯಾರೇ ಆಗಿದ್ದರೂ ಕರೆಸಬಹುದು. ಆದರೆ ಒಂದು ಪಕ್ಷದ ವಕ್ತಾರರಾಗಿರುವ ಹಾಗೂ ಸುಳ್ಳಿನ ಸರಮಾಲೆ ಹೆಣೆದು ಭಾಷಣ ಬಿಗಿದು ಕೋಮುಗಲಭೆ ಸೃಷ್ಟಿಸಿರುವ ‘ಚಕ್ರವರ್ತಿ ಸೂಲಿಬೆಲೆ’ಯನ್ನು ಕರೆಸುವುದು ಸೂಕ್ತವಲ್ಲ ಎಂದು ಕಿರಿಯ ಕಲಾವಿದರು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಮತ್ತೊಬ್ಬ ಕಲಾವಿದರಾದ ಮಾಳವಿಕ ಅವಿನಾಶ್ ಅವರು ಒಂದು ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಇವರನ್ನೂ ಕರೆಸುವುದು ಸೂಕ್ತವಾದ. ಅನೇಕ ಯಶಸ್ವಿ ಕಾರ್ಯಕ್ರಮಗಳನ್ನು ನೀಡಿದ ತಾವು ತುಸು ಗಂಭೀರವಾಗಿ ಆಲೋಚಿಸಿದರೆ ನಮಗೆ ಖುಷಿ ಮತ್ತು ಹಾಗೂ ಅವರಿಬ್ಬರನ್ನು ಕರೆಸುವುದನ್ನು ನಾವು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮ ಆಸೆ ಒಂದೇ. ನಿಮ್ಮ ಸಾರಥ್ಯದಲ್ಲಿ ಬಹುರೂಪಿಯು ಯಾವುದೇ ವಿವಾದ, ಅಡಚಣೆಗಳಿಗೆ ಕೇಂದ್ರ ಬಿಂದುವಾಗದೆ ಯಶಸ್ವಿಯಾಗಬೇಕಿದೆ” ಎಂದು ಕೋರಿರುವ ಪತ್ರದಲ್ಲಿ ಹಲವರು ಸಹಿ ಮಾಡಿದ್ದಾರೆ. “ನಿಮ್ಮ ಮಕ್ಕಳ ಸ್ಥಾನದಲ್ಲಿರುವ ಪರ್ವದ ಕಿರಿಯ ಕಲಾವಿದರು” ಎಂದು ಉಲ್ಲೇಖಿಸಿ ಅಡ್ಡಂಡ ಕಾರ್ಯಪ್ಪ ಅವರಿಗೆ ಪತ್ರ ತಲುಪಿಸಿದ್ದಾರೆ.

ಸಾಹಿತಿ ಎಸ್‌.ಎಸ್.ಭೈರಪ್ಪ ಅವರ ಕಾದಂಬರಿ ‘ಪರ್ವ’ ರಂಗಪ್ರಯೋಗದಲ್ಲಿ ಭಾಗಿಯಾಗಿದ್ದ ಕಿರಿಯ ಕಲಾವಿದರು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಸದಾ ಚರ್ಚೆಯ ಮುಖ್ಯಬಿಂದುವಾಗುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರು ಕಲಾವಿದರ ಮನವಿಯನ್ನು ಸ್ವೀಕರಿಸುತ್ತಾರೋ, ತಿರಸ್ಕರಿಸುತ್ತಾರೋ ನೋಡಬೇಕು. ಡಿ.10ರಿಂದ ಡಿ.19ರವರೆಗೆ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ ನಡೆಯಲಿದೆ. ಡಿ. 13ರಂದು ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆಯ ಸಮಾರೋಪ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆಯವರು ಆಗಮಿಸಲಿದ್ದು, ಡಿ.11ರಂದು ನಡೆಯುವ ಬಹುರೂಪಿ ಉದ್ಘಾಟನೆಯಲ್ಲಿ ಮಾಳವಿಕಾ ಅವನಾಶ್ ಆಶಯ ಭಾಷಣ ಮಾಡಲಿದ್ದಾರೆ.

ಸೂಲಿಬೆಲೆಯವರು ಸುಳ್ಳು ಹೇಳುವ ವ್ಯಕ್ತಿಯಲ್ಲ ಎಂದು ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಅಡ್ಡಂಡ ಸಿ.ಕಾರ್ಯಪ್ಪ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು. “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದಿದ್ದರು.

‘ಬಹುತ್ವದ ಕುರಿತು ಕಾಳಜಿ ಇರುವ ವ್ಯಕ್ತಿಯನ್ನು ಕರೆಸಬಹುದಲ್ಲ’ ಎಂದು ಕೇಳಿದ್ದಕ್ಕೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವವನ್ನೇ ನಿರಾಕರಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಪ್ರಶ್ನಿಸಿದ್ದಾಗ, “ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದರು.

ಬಹುರೂಪಿಯ ವಿವಾದ: ಇಂದು ಚರ್ಚೆ

ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಈ ಬಹುರೂಪಿ ಕಾರ್ಯಕ್ರಮಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. “ಬಹುರೂಪಿ ನಾಟಕೋತ್ಸವದ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಗೊಂದಲ ಮತ್ತು ಅಪಾಯಗಳನ್ನು ಕುರಿತು ಚರ್ಚಿಸಲು ಮತ್ತು ಮುಂದಿನ ನಡೆಯನ್ನು ನಿರ್ಧರಿಸಲು ಇಂದು ಸಂಜೆ (ಡಿ.4, 2021) 5 ಗಂಟೆಗೆ ಮೈಸೂರಿನ ಕಲಾಮಂದಿರದ ಕಿಂದರಜೋಗಿ ಬಳಿ ಸಭೆ ಏರ್ಪಡಿಸಲಾಗಿದೆ. ಸಮಾನ ಮನಸ್ಕ ಚಿಂತಕರ, ಸಾಂಸ್ಕೃತಿಕ ಮನಸುಗಳ ಸಭೆ ಇದಾಗಿದ್ದು, ದಯವಿಟ್ಟು ಬಂದು ಭಾಗವಹಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕು” ಎಂದು ಚಿಂತಕ ನಾ.ದಿವಾಕರ ಅವರು ಮನವಿ ಮಾಡಿದ್ದಾರೆ.

ಬಹುರೂಪಿಗೆ ಹೋಗದಿರಲಿ ಕೆ.ಪಿ.ಸುರೇಶ್ ಮನವಿ

ಚಕ್ರವರ್ತಿ ಸೂಲಿಬೆಲೆಯಂಥವರನ್ನು ಬಹುರೂಪಿಗೆ ಆಹ್ವಾನಿಸಿರುವುದನ್ನು ಖಂಡಿಸಿರುವ ಚಿಂತಕ ಕೆ.ಪಿ.ಸುರೇಶ್ ಅವರು, ಕಾರ್ಯಕ್ರಮಕ್ಕೆ ಪ್ರಜ್ಞಾವಂತರು ಹೋಗದಿರಲು ಮನವಿ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕಿರು ಟಿಪ್ಪಣಿಯನ್ನು ಬರೆದಿರುವ ಅವರು, ” ಇಂಗ್ಲಿಶಲ್ಲಿ ಒಂದು ಮಾತಿದೆ. ಕೋಟ್‌ ಯುವರ್‌ ಪ್ರೈಸ್!‌ ಅಂತ ಅಂದರೆ ಕೊಳ್ಳಲಾಗದವ ಅಂತ ಇಲ್ಲ! ಬೆಲೆ ಎಷ್ಟು ಅಂತ! ನಾವೇನು ಮಾಡಬಹುದು? ನಮ್ಮ ನಾಟಿವೈದ್ಯದಲ್ಲಿ ಕಾಯಿಲೆ ಬಂದರೆ ಪಥ್ಯ ಮಾಡುವ ರೂಢಿ ಇದೆ. ಅಂದರೆ ಏನನ್ನೂ ತಿನ್ನದಿರುವುದು! ಇಲ್ಲೂ ಅಷ್ಟೇ. ಈ ಉತ್ಸವಕ್ಕೆ ರಂಗಾಯಣದ ಗೇಟೊಳಗೆ ಪಾದ ಇಡುವುದಿಲ್ಲ ಎನ್ನುವ ನಿರ್ಧಾರ ಮಾಡಿದರಾಯಿತು. ಈ ನಾಟಕಗಳನ್ನು ನೋಡದಿದ್ದರೆ ಪ್ರಪಂಚ ಮುಳುಗುವುದಿಲ್ಲ. ನಮ್ಮ ಜ್ಞಾನ ಭಂಡಾರ, ಅನುಭವ ಲೋಕ ಕಡಿಮೆಯಾಗಲಾರದು!! ನಿರ್ಲಿಪ್ತವಾಗಿ ಮಾಡುವ ಬದಲು ಸಂಘಟಿತವಾಗಿ ಇದನ್ನು ಮಾಡಬಹುದು. ನಾನು ಬಹುತೇಕ ಇಂಥಾ ಗೌಜಿಗಳಿಗೆ ಹೋಗುವುದಿಲ್ಲ. ದೇಶದ ರೈತರ ದುರಂತ ನಾಟಕ, ಚೌಕಿದಾರನ ಟ್ರಾಜಿಕಾಮಿಡಿ ನೋಡಿದ ಮೇಲೆ ಈ ರಂಗ ಪ್ರಯೋಗಗಳ ಬಗ್ಗೆ ಹೆಚ್ಚು ಆಸಕ್ತಿಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...