Homeಕರ್ನಾಟಕಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ಬಹುರೂಪಿಗೆ ಸೂಲಿಬೆಲೆ, ಮಾಳವಿಕಾಗೆ ಆಹ್ವಾನ ವಿರೋಧಿಸಿ ‘ಪರ್ವ’ ಕಿರಿಯ ಕಲಾವಿದರಿಂದ ರಂಗಾಯಣಕ್ಕೆ ಪತ್ರ

ಬಹುರೂಪಿ ನಾಟಕೋತ್ಸವ ವಿವಾದದ ಕುರಿತು ಚರ್ಚಿಸಲು ಇಂದು ಸಂಜೆ (ಡಿ.4, 2021) 5 ಗಂಟೆಗೆ ಮೈಸೂರಿನ ಕಲಾಮಂದಿರದ ಕಿಂದರಜೋಗಿ ಬಳಿ ಸಭೆ ಏರ್ಪಡಿಸಲಾಗಿದೆ.

- Advertisement -
- Advertisement -

ಮೈಸೂರು ರಂಗಾಯಣದ ಪ್ರತಿಷ್ಟಿತ ಕಾರ್ಯಕ್ರಮವಾದ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ಕ್ಕೆ ಬಿಜೆಪಿ ಬೆಂಬಲಿತ ವಾಗ್ಮಿಗಳಾದ ಚಕ್ರವರ್ತಿ ಸೂಲಿಬೆಲೆ ಹಾಗೂ ಮಾಳವಿಕ ಅವಿನಾಶ್ ಅವರನ್ನು ಕರೆಸಬಾರದು ಎಂದು ‘ಪರ್ವ’ ನಾಟಕದ ಕಿರಿಯ ಕಲಾವಿದರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ಬಹುರೂಪಿ ಕಾರ್ಯಕ್ರಮವು ರಂಗಾಯಣಕ್ಕೆ ಗರಿಮೆಯದ್ದಾಗಿದೆ. ಈ ಕಾರ್ಯಕ್ರಮಕ್ಕೆ ಸಮಾಜದ ದೃಷ್ಟಿಯಲ್ಲಿ ಎಲ್ಲಾ ಸಿದ್ಧಾಂತಗಳಿಗೂ ಗೌರವಕೊಡುವ ಸಮಾನ ಮನಸ್ಕರನ್ನು ಕರೆಸಬೇಕು” ಎಂದು ಕಿರಿಯ ಕಲಾವಿದರು ಆಗ್ರಹಿಸಿದ್ದಾರೆ.

ವಿಶ್ವವಿಖ್ಯಾತಿಯನ್ನ ಬಹುರೂಪಿ ಪಡೆದಿದೆ. ಇಂತಹ ಕಾರ್ಯಕ್ರಮಕ್ಕೆ ಸಮಾನ ಮನಸ್ಕರನ್ನು ಕರೆಸಬೇಕು. ಅವರು ಯಾರೇ ಆಗಿದ್ದರೂ ಕರೆಸಬಹುದು. ಆದರೆ ಒಂದು ಪಕ್ಷದ ವಕ್ತಾರರಾಗಿರುವ ಹಾಗೂ ಸುಳ್ಳಿನ ಸರಮಾಲೆ ಹೆಣೆದು ಭಾಷಣ ಬಿಗಿದು ಕೋಮುಗಲಭೆ ಸೃಷ್ಟಿಸಿರುವ ‘ಚಕ್ರವರ್ತಿ ಸೂಲಿಬೆಲೆ’ಯನ್ನು ಕರೆಸುವುದು ಸೂಕ್ತವಲ್ಲ ಎಂದು ಕಿರಿಯ ಕಲಾವಿದರು ಅಭಿಪ್ರಾಯಪಟ್ಟಿದ್ದಾರೆ.

ಮುಂದುವರಿದು, “ಮತ್ತೊಬ್ಬ ಕಲಾವಿದರಾದ ಮಾಳವಿಕ ಅವಿನಾಶ್ ಅವರು ಒಂದು ಪಕ್ಷದಲ್ಲಿ ಗುರುತಿಸಿಕೊಂಡಿದ್ದಾರೆ. ಇವರನ್ನೂ ಕರೆಸುವುದು ಸೂಕ್ತವಾದ. ಅನೇಕ ಯಶಸ್ವಿ ಕಾರ್ಯಕ್ರಮಗಳನ್ನು ನೀಡಿದ ತಾವು ತುಸು ಗಂಭೀರವಾಗಿ ಆಲೋಚಿಸಿದರೆ ನಮಗೆ ಖುಷಿ ಮತ್ತು ಹಾಗೂ ಅವರಿಬ್ಬರನ್ನು ಕರೆಸುವುದನ್ನು ನಾವು ವಿರೋಧಿಸುತ್ತೇವೆ” ಎಂದು ತಿಳಿಸಿದ್ದಾರೆ.

“ನಮ್ಮ ಆಸೆ ಒಂದೇ. ನಿಮ್ಮ ಸಾರಥ್ಯದಲ್ಲಿ ಬಹುರೂಪಿಯು ಯಾವುದೇ ವಿವಾದ, ಅಡಚಣೆಗಳಿಗೆ ಕೇಂದ್ರ ಬಿಂದುವಾಗದೆ ಯಶಸ್ವಿಯಾಗಬೇಕಿದೆ” ಎಂದು ಕೋರಿರುವ ಪತ್ರದಲ್ಲಿ ಹಲವರು ಸಹಿ ಮಾಡಿದ್ದಾರೆ. “ನಿಮ್ಮ ಮಕ್ಕಳ ಸ್ಥಾನದಲ್ಲಿರುವ ಪರ್ವದ ಕಿರಿಯ ಕಲಾವಿದರು” ಎಂದು ಉಲ್ಲೇಖಿಸಿ ಅಡ್ಡಂಡ ಕಾರ್ಯಪ್ಪ ಅವರಿಗೆ ಪತ್ರ ತಲುಪಿಸಿದ್ದಾರೆ.

ಸಾಹಿತಿ ಎಸ್‌.ಎಸ್.ಭೈರಪ್ಪ ಅವರ ಕಾದಂಬರಿ ‘ಪರ್ವ’ ರಂಗಪ್ರಯೋಗದಲ್ಲಿ ಭಾಗಿಯಾಗಿದ್ದ ಕಿರಿಯ ಕಲಾವಿದರು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಹಲವು ವಿವಾದಗಳನ್ನು ಮೈಮೇಲೆ ಎಳೆದುಕೊಂಡು ಸದಾ ಚರ್ಚೆಯ ಮುಖ್ಯಬಿಂದುವಾಗುತ್ತಿರುವ ಅಡ್ಡಂಡ ಸಿ.ಕಾರ್ಯಪ್ಪ ಅವರು ಕಲಾವಿದರ ಮನವಿಯನ್ನು ಸ್ವೀಕರಿಸುತ್ತಾರೋ, ತಿರಸ್ಕರಿಸುತ್ತಾರೋ ನೋಡಬೇಕು. ಡಿ.10ರಿಂದ ಡಿ.19ರವರೆಗೆ ‘ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ’ ನಡೆಯಲಿದೆ. ಡಿ. 13ರಂದು ಬಹುರೂಪಿ ರಾಷ್ಟ್ರೀಯ ವಿಚಾರಸಂಕಿರಣ ಹಾಗೂ ಭಾಷಣ ಸ್ಪರ್ಧೆಯ ಸಮಾರೋಪ ಸಮಾರಂಭಕ್ಕೆ ಚಕ್ರವರ್ತಿ ಸೂಲಿಬೆಲೆಯವರು ಆಗಮಿಸಲಿದ್ದು, ಡಿ.11ರಂದು ನಡೆಯುವ ಬಹುರೂಪಿ ಉದ್ಘಾಟನೆಯಲ್ಲಿ ಮಾಳವಿಕಾ ಅವನಾಶ್ ಆಶಯ ಭಾಷಣ ಮಾಡಲಿದ್ದಾರೆ.

ಸೂಲಿಬೆಲೆಯವರು ಸುಳ್ಳು ಹೇಳುವ ವ್ಯಕ್ತಿಯಲ್ಲ ಎಂದು ನಾನುಗೌರಿ.ಕಾಂ ಜೊತೆ ಮಾತನಾಡಿದ್ದ ಅಡ್ಡಂಡ ಸಿ.ಕಾರ್ಯಪ್ಪ ಅವರು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು. “ನಿಮಗೆ ಅವರು ಸುಳ್ಳು ಹೇಳಿದ್ದಾರೆಂದು ಅನಿಸಬಹುದು. ಆದರೆ ನಮಗೆ ಅವರು ಸತ್ಯಗಳನ್ನು ಹೇಳುತ್ತಿದ್ದಾರೆ ಅನಿಸುತ್ತದೆ. ಅವರನ್ನು ಕಂಡರೆ ನಿಮಗೆ ಆಗಲ್ಲ, ನಮಗೆ ಅವರನ್ನು ಕಂಡರೆ ಆಗುತ್ತದೆ” ಎಂದಿದ್ದರು.

‘ಬಹುತ್ವದ ಕುರಿತು ಕಾಳಜಿ ಇರುವ ವ್ಯಕ್ತಿಯನ್ನು ಕರೆಸಬಹುದಲ್ಲ’ ಎಂದು ಕೇಳಿದ್ದಕ್ಕೆ, “ಈ ಸಿದ್ಧಾಂತವನ್ನೆಲ್ಲ ನಿಮಗೆ ಇಟ್ಟುಕೊಳ್ಳಿ. ನಮಗಲ್ಲ. ಇನ್ನೊಬ್ಬರನ್ನು ಓಲೈಸಲು ಆಗಲ್ಲ. ಸೂಲಿಬೆಲೆ ನಿಮಗೆ ಸುಳ್ಳುಗಾರರಾಗಿರಬಹುದು. ನಮಗೆ ಸುಳ್ಳುಗಾರನಲ್ಲ. ಒಂದು ವರ್ಷ ಅಧಿಕಾರದಲ್ಲಿರುತ್ತೇನೆ, ಏನು ಬರೆದುಕೊಳ್ಳುತ್ತೀರೋ ಬರೆದುಕೊಳ್ಳಿ. ಯಾವುದಕ್ಕೂ ಧೃತಿಗೆಡುವುದಿಲ್ಲ” ಎಂದ ಅವರು ಬಹುತ್ವವನ್ನೇ ನಿರಾಕರಿಸಿದ್ದರು.

ಪತ್ರಿಕಾಗೋಷ್ಠಿಯಲ್ಲಿ ಪತ್ರಕರ್ತರು ಪ್ರಶ್ನಿಸಿದ್ದಾಗ, “ಚಕ್ರವರ್ತಿ ಸೂಲಿಬೆಲೆಯವರು ಸಮಾರೋಪ ಭಾಷಣಕ್ಕೆ ಸೂಕ್ತವ್ಯಕ್ತಿ ಎನಿಸಿದ್ದರಿಂದ ನಾವು ಕರೆದಿದ್ದೇವೆ. ಚಕ್ರವರ್ತಿ ಸೂಲಿಬೆಲೆಯವರ ವಿಚಾರವನ್ನು ಬಿಟ್ಟುಬಿಡಿ. ಅವರನ್ನು ಕರೆದಿದ್ದೇವೆ. ಬರ್ತಾರೆ, ಸಮಾರೋಪ ಭಾಷಣ ಮಾಡ್ತಾರೆ. ಆ ಭಾಷಣದಲ್ಲಿ ದೋಷಗಳನ್ನು ಕಂಡು ಹಿಡಿದು ಅದನ್ನು ಪ್ರಕಟಿಸಿ, ಅದು ನಿಮ್ಮ ಸ್ವಾತಂತ್ರ್ಯ” ಎಂದು ಪತ್ರತರ್ಕರಿಗೆ ಬೋಧನೆ ಮಾಡಿದ್ದರು.

ಬಹುರೂಪಿಯ ವಿವಾದ: ಇಂದು ಚರ್ಚೆ

ವಿವಾದಗಳಿಂದಲೇ ಸುದ್ದಿಯಾಗುತ್ತಿರುವ ಈ ಬಹುರೂಪಿ ಕಾರ್ಯಕ್ರಮಕ್ಕೆ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. “ಬಹುರೂಪಿ ನಾಟಕೋತ್ಸವದ ಸಂದರ್ಭದಲ್ಲಿ ಸೃಷ್ಟಿಯಾಗಿರುವ ಗೊಂದಲ ಮತ್ತು ಅಪಾಯಗಳನ್ನು ಕುರಿತು ಚರ್ಚಿಸಲು ಮತ್ತು ಮುಂದಿನ ನಡೆಯನ್ನು ನಿರ್ಧರಿಸಲು ಇಂದು ಸಂಜೆ (ಡಿ.4, 2021) 5 ಗಂಟೆಗೆ ಮೈಸೂರಿನ ಕಲಾಮಂದಿರದ ಕಿಂದರಜೋಗಿ ಬಳಿ ಸಭೆ ಏರ್ಪಡಿಸಲಾಗಿದೆ. ಸಮಾನ ಮನಸ್ಕ ಚಿಂತಕರ, ಸಾಂಸ್ಕೃತಿಕ ಮನಸುಗಳ ಸಭೆ ಇದಾಗಿದ್ದು, ದಯವಿಟ್ಟು ಬಂದು ಭಾಗವಹಿಸಿ ತಮ್ಮ ಅಮೂಲ್ಯ ಸಲಹೆಗಳನ್ನು ನೀಡಬೇಕು” ಎಂದು ಚಿಂತಕ ನಾ.ದಿವಾಕರ ಅವರು ಮನವಿ ಮಾಡಿದ್ದಾರೆ.

ಬಹುರೂಪಿಗೆ ಹೋಗದಿರಲಿ ಕೆ.ಪಿ.ಸುರೇಶ್ ಮನವಿ

ಚಕ್ರವರ್ತಿ ಸೂಲಿಬೆಲೆಯಂಥವರನ್ನು ಬಹುರೂಪಿಗೆ ಆಹ್ವಾನಿಸಿರುವುದನ್ನು ಖಂಡಿಸಿರುವ ಚಿಂತಕ ಕೆ.ಪಿ.ಸುರೇಶ್ ಅವರು, ಕಾರ್ಯಕ್ರಮಕ್ಕೆ ಪ್ರಜ್ಞಾವಂತರು ಹೋಗದಿರಲು ಮನವಿ ಮಾಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಕಿರು ಟಿಪ್ಪಣಿಯನ್ನು ಬರೆದಿರುವ ಅವರು, ” ಇಂಗ್ಲಿಶಲ್ಲಿ ಒಂದು ಮಾತಿದೆ. ಕೋಟ್‌ ಯುವರ್‌ ಪ್ರೈಸ್!‌ ಅಂತ ಅಂದರೆ ಕೊಳ್ಳಲಾಗದವ ಅಂತ ಇಲ್ಲ! ಬೆಲೆ ಎಷ್ಟು ಅಂತ! ನಾವೇನು ಮಾಡಬಹುದು? ನಮ್ಮ ನಾಟಿವೈದ್ಯದಲ್ಲಿ ಕಾಯಿಲೆ ಬಂದರೆ ಪಥ್ಯ ಮಾಡುವ ರೂಢಿ ಇದೆ. ಅಂದರೆ ಏನನ್ನೂ ತಿನ್ನದಿರುವುದು! ಇಲ್ಲೂ ಅಷ್ಟೇ. ಈ ಉತ್ಸವಕ್ಕೆ ರಂಗಾಯಣದ ಗೇಟೊಳಗೆ ಪಾದ ಇಡುವುದಿಲ್ಲ ಎನ್ನುವ ನಿರ್ಧಾರ ಮಾಡಿದರಾಯಿತು. ಈ ನಾಟಕಗಳನ್ನು ನೋಡದಿದ್ದರೆ ಪ್ರಪಂಚ ಮುಳುಗುವುದಿಲ್ಲ. ನಮ್ಮ ಜ್ಞಾನ ಭಂಡಾರ, ಅನುಭವ ಲೋಕ ಕಡಿಮೆಯಾಗಲಾರದು!! ನಿರ್ಲಿಪ್ತವಾಗಿ ಮಾಡುವ ಬದಲು ಸಂಘಟಿತವಾಗಿ ಇದನ್ನು ಮಾಡಬಹುದು. ನಾನು ಬಹುತೇಕ ಇಂಥಾ ಗೌಜಿಗಳಿಗೆ ಹೋಗುವುದಿಲ್ಲ. ದೇಶದ ರೈತರ ದುರಂತ ನಾಟಕ, ಚೌಕಿದಾರನ ಟ್ರಾಜಿಕಾಮಿಡಿ ನೋಡಿದ ಮೇಲೆ ಈ ರಂಗ ಪ್ರಯೋಗಗಳ ಬಗ್ಗೆ ಹೆಚ್ಚು ಆಸಕ್ತಿಇಲ್ಲ” ಎಂದು ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...