Homeಕರ್ನಾಟಕ1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ...

1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ ಪತ್ರ

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರು ಬೆಂಗಳೂರಿನ ಸೇಂಟ್ ಜಾನ್‌ ಮೆಡಿಕಲ್ ಕಾಲೇಜಿಗೆ ಶಿಫಾರಸ್ಸು ಪತ್ರ ಬರೆದಿದ್ದು, ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಯೊಬ್ಬರು ನೀಟ್‌ ಪರೀಕ್ಷೆಯಲ್ಲಿ ಅಖಿಲ ಭಾರತ 1,09,767ನೇ ರ್ಯಾಂಕ್ ಪಡೆದಿದ್ದು, ಅವರಿಗೆ ತಮ್ಮ ಕಾಲೇಜಿನಲ್ಲಿ ಪ್ರವೇಶ ನೀಡುವಂತೆ ಕೋರಲಾಗಿದೆ.

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ ಓಕಾರವರು ಈ ಅಭ್ಯರ್ಥಿಯು ಸೆಂಟ್ ಜಾನ್ ಮೆಡಿಕಲ್‌ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮುಂದುವರೆಸಲಿ ಎಂಬ ಸಂಗತಿಯ ಕುರಿತು ಉತ್ಸುಕರಾಗಿದ್ದಾರೆ, ಹಾಗಾಗಿ ಈ ಅಭ್ಯರ್ಥಿಗೆ ತಮ್ಮ ಕಾಲೇಜಿನಲ್ಲಿ ಎಂಡಿ ಜನರಲ್ ಮೆಡಿಸಿನ್, ಎಂಎಸ್ ಜನರಲ್ ಸೈನ್ಸ್, ಎಂಎಸ್ ಜನರಲ್ ಸರ್ಜರಿ, ಎಂಸಿ ಅನಸ್ತೇಷಿಯ, ಎಂಎಸ್ ಆಪ್ತಮಾಲಜಿ, ಎಂಎಸ್‌ಇಎನ್‌ಟಿ, ಎಂಡಿ ಪೆಥಾಲಜಿ ವಿಭಾಗಗಳಲ್ಲಿ ಯಾವುದಾದರೂ ಒಂದಕ್ಕೆ ಸೀಟು ನೀಡಬೇಕೆಂದು ಪತ್ರದಲ್ಲಿ ಕೋರಲಾಗಿದೆ.

ಈ ರೀತಿಯಾಗಿ ಮುಖ್ಯ ನ್ಯಾಯಾಧೀಶರ ಕಚೇರಿಯ ಮತ್ತು ಹೈಕೋರ್ಟ್‌ನ ಅಧಿಕಾರ ಬಳಸಿಕೊಂಡು ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಗೆ ಸೀಟು ಕೇಳುವುದು ಎಷ್ಟು ಸರಿ? ಎಂಬ ಪ್ರಶ್ನೆ ಉದಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರನ್ನು ಮಾತನಾಡಿಸಿದಾಗ, “ಹೌದು ಪತ್ರ ಕಳಿಸಿರುವುದು ನಿಜ, ಈ ರೀತಿ ಶಿಫಾರಸ್ಸು ಪತ್ರ ಕಳಿಸುವುದು ತಪ್ಪೇನಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆಯೂ ಹಲವಾರು ಜನರಿಗೆ ಶಿಫಾರಸ್ಸು ಪತ್ರ ನೀಡಿದ್ದೇವೆ. ಕಾಲೇಜಿನವರು ಸೀಟು ಇದ್ದರೆ ಕೊಡತ್ತಾರೆ ಇಲ್ಲದಿದ್ದರೆ ಇಲ್ಲ ಎಂದು ತಿಳಿಸುತ್ತಾರೆ” ಎಂದರು.

ಅಧಿಕೃತವಾಗಿ ಹೈಕೋರ್ಟ್‌ನ ಅಧಿಕಾರ ಮತ್ತು ಮುಖ್ಯನ್ಯಾಯಾಧೀಶರ ಕಚೇರಿಯಿಂದ ಈ ರೀತಿ ಪತ್ರ ಬರೆಯುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲೆಡೆ ಹೀಗೆ ಮಾಡಲಾಗುತ್ತದೆ. ನಾವು ಕೂಡ ಈ ಹಿಂದೆ ಸಾಕಷ್ಟುಬಾರಿ ಮಾಡಿದ್ದೇವೆ, ಇದರಲ್ಲಿ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಇಂದು ಶ್ರೀಕೃಷ್ಣ ಜೈಲಿನಲ್ಲಿ ಜನಿಸಿದ್ದ. ನೀವು ಜೈಲಿನಿಂದ ಹೊರಹೋಗಲು ಬಯಸುವಿರಾ?: ಈ ಡೈಲಾಗ್ ಹೇಳಿದವರ್ಯಾರು ಗೊತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The act of officials n alleged justification for this act of recommendation for M D seat is illegal and unethical.it is total misuse of official status, honour n power. I had great respect to Justice Oka on hearing him in our welcome function at Hubballi Bar Association. But now I have change my opinion. These powerfull people of our great Democratic India are misusing power shamefully under one or other justification. Kodos to democracy.

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...