Homeಕರ್ನಾಟಕ1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ...

1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ ಪತ್ರ

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರು ಬೆಂಗಳೂರಿನ ಸೇಂಟ್ ಜಾನ್‌ ಮೆಡಿಕಲ್ ಕಾಲೇಜಿಗೆ ಶಿಫಾರಸ್ಸು ಪತ್ರ ಬರೆದಿದ್ದು, ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಯೊಬ್ಬರು ನೀಟ್‌ ಪರೀಕ್ಷೆಯಲ್ಲಿ ಅಖಿಲ ಭಾರತ 1,09,767ನೇ ರ್ಯಾಂಕ್ ಪಡೆದಿದ್ದು, ಅವರಿಗೆ ತಮ್ಮ ಕಾಲೇಜಿನಲ್ಲಿ ಪ್ರವೇಶ ನೀಡುವಂತೆ ಕೋರಲಾಗಿದೆ.

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ ಓಕಾರವರು ಈ ಅಭ್ಯರ್ಥಿಯು ಸೆಂಟ್ ಜಾನ್ ಮೆಡಿಕಲ್‌ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮುಂದುವರೆಸಲಿ ಎಂಬ ಸಂಗತಿಯ ಕುರಿತು ಉತ್ಸುಕರಾಗಿದ್ದಾರೆ, ಹಾಗಾಗಿ ಈ ಅಭ್ಯರ್ಥಿಗೆ ತಮ್ಮ ಕಾಲೇಜಿನಲ್ಲಿ ಎಂಡಿ ಜನರಲ್ ಮೆಡಿಸಿನ್, ಎಂಎಸ್ ಜನರಲ್ ಸೈನ್ಸ್, ಎಂಎಸ್ ಜನರಲ್ ಸರ್ಜರಿ, ಎಂಸಿ ಅನಸ್ತೇಷಿಯ, ಎಂಎಸ್ ಆಪ್ತಮಾಲಜಿ, ಎಂಎಸ್‌ಇಎನ್‌ಟಿ, ಎಂಡಿ ಪೆಥಾಲಜಿ ವಿಭಾಗಗಳಲ್ಲಿ ಯಾವುದಾದರೂ ಒಂದಕ್ಕೆ ಸೀಟು ನೀಡಬೇಕೆಂದು ಪತ್ರದಲ್ಲಿ ಕೋರಲಾಗಿದೆ.

ಈ ರೀತಿಯಾಗಿ ಮುಖ್ಯ ನ್ಯಾಯಾಧೀಶರ ಕಚೇರಿಯ ಮತ್ತು ಹೈಕೋರ್ಟ್‌ನ ಅಧಿಕಾರ ಬಳಸಿಕೊಂಡು ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಗೆ ಸೀಟು ಕೇಳುವುದು ಎಷ್ಟು ಸರಿ? ಎಂಬ ಪ್ರಶ್ನೆ ಉದಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರನ್ನು ಮಾತನಾಡಿಸಿದಾಗ, “ಹೌದು ಪತ್ರ ಕಳಿಸಿರುವುದು ನಿಜ, ಈ ರೀತಿ ಶಿಫಾರಸ್ಸು ಪತ್ರ ಕಳಿಸುವುದು ತಪ್ಪೇನಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆಯೂ ಹಲವಾರು ಜನರಿಗೆ ಶಿಫಾರಸ್ಸು ಪತ್ರ ನೀಡಿದ್ದೇವೆ. ಕಾಲೇಜಿನವರು ಸೀಟು ಇದ್ದರೆ ಕೊಡತ್ತಾರೆ ಇಲ್ಲದಿದ್ದರೆ ಇಲ್ಲ ಎಂದು ತಿಳಿಸುತ್ತಾರೆ” ಎಂದರು.

ಅಧಿಕೃತವಾಗಿ ಹೈಕೋರ್ಟ್‌ನ ಅಧಿಕಾರ ಮತ್ತು ಮುಖ್ಯನ್ಯಾಯಾಧೀಶರ ಕಚೇರಿಯಿಂದ ಈ ರೀತಿ ಪತ್ರ ಬರೆಯುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲೆಡೆ ಹೀಗೆ ಮಾಡಲಾಗುತ್ತದೆ. ನಾವು ಕೂಡ ಈ ಹಿಂದೆ ಸಾಕಷ್ಟುಬಾರಿ ಮಾಡಿದ್ದೇವೆ, ಇದರಲ್ಲಿ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಇಂದು ಶ್ರೀಕೃಷ್ಣ ಜೈಲಿನಲ್ಲಿ ಜನಿಸಿದ್ದ. ನೀವು ಜೈಲಿನಿಂದ ಹೊರಹೋಗಲು ಬಯಸುವಿರಾ?: ಈ ಡೈಲಾಗ್ ಹೇಳಿದವರ್ಯಾರು ಗೊತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The act of officials n alleged justification for this act of recommendation for M D seat is illegal and unethical.it is total misuse of official status, honour n power. I had great respect to Justice Oka on hearing him in our welcome function at Hubballi Bar Association. But now I have change my opinion. These powerfull people of our great Democratic India are misusing power shamefully under one or other justification. Kodos to democracy.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...