Homeಕರ್ನಾಟಕ1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ...

1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ ಪತ್ರ

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರು ಬೆಂಗಳೂರಿನ ಸೇಂಟ್ ಜಾನ್‌ ಮೆಡಿಕಲ್ ಕಾಲೇಜಿಗೆ ಶಿಫಾರಸ್ಸು ಪತ್ರ ಬರೆದಿದ್ದು, ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಯೊಬ್ಬರು ನೀಟ್‌ ಪರೀಕ್ಷೆಯಲ್ಲಿ ಅಖಿಲ ಭಾರತ 1,09,767ನೇ ರ್ಯಾಂಕ್ ಪಡೆದಿದ್ದು, ಅವರಿಗೆ ತಮ್ಮ ಕಾಲೇಜಿನಲ್ಲಿ ಪ್ರವೇಶ ನೀಡುವಂತೆ ಕೋರಲಾಗಿದೆ.

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ ಓಕಾರವರು ಈ ಅಭ್ಯರ್ಥಿಯು ಸೆಂಟ್ ಜಾನ್ ಮೆಡಿಕಲ್‌ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮುಂದುವರೆಸಲಿ ಎಂಬ ಸಂಗತಿಯ ಕುರಿತು ಉತ್ಸುಕರಾಗಿದ್ದಾರೆ, ಹಾಗಾಗಿ ಈ ಅಭ್ಯರ್ಥಿಗೆ ತಮ್ಮ ಕಾಲೇಜಿನಲ್ಲಿ ಎಂಡಿ ಜನರಲ್ ಮೆಡಿಸಿನ್, ಎಂಎಸ್ ಜನರಲ್ ಸೈನ್ಸ್, ಎಂಎಸ್ ಜನರಲ್ ಸರ್ಜರಿ, ಎಂಸಿ ಅನಸ್ತೇಷಿಯ, ಎಂಎಸ್ ಆಪ್ತಮಾಲಜಿ, ಎಂಎಸ್‌ಇಎನ್‌ಟಿ, ಎಂಡಿ ಪೆಥಾಲಜಿ ವಿಭಾಗಗಳಲ್ಲಿ ಯಾವುದಾದರೂ ಒಂದಕ್ಕೆ ಸೀಟು ನೀಡಬೇಕೆಂದು ಪತ್ರದಲ್ಲಿ ಕೋರಲಾಗಿದೆ.

ಈ ರೀತಿಯಾಗಿ ಮುಖ್ಯ ನ್ಯಾಯಾಧೀಶರ ಕಚೇರಿಯ ಮತ್ತು ಹೈಕೋರ್ಟ್‌ನ ಅಧಿಕಾರ ಬಳಸಿಕೊಂಡು ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಗೆ ಸೀಟು ಕೇಳುವುದು ಎಷ್ಟು ಸರಿ? ಎಂಬ ಪ್ರಶ್ನೆ ಉದಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರನ್ನು ಮಾತನಾಡಿಸಿದಾಗ, “ಹೌದು ಪತ್ರ ಕಳಿಸಿರುವುದು ನಿಜ, ಈ ರೀತಿ ಶಿಫಾರಸ್ಸು ಪತ್ರ ಕಳಿಸುವುದು ತಪ್ಪೇನಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆಯೂ ಹಲವಾರು ಜನರಿಗೆ ಶಿಫಾರಸ್ಸು ಪತ್ರ ನೀಡಿದ್ದೇವೆ. ಕಾಲೇಜಿನವರು ಸೀಟು ಇದ್ದರೆ ಕೊಡತ್ತಾರೆ ಇಲ್ಲದಿದ್ದರೆ ಇಲ್ಲ ಎಂದು ತಿಳಿಸುತ್ತಾರೆ” ಎಂದರು.

ಅಧಿಕೃತವಾಗಿ ಹೈಕೋರ್ಟ್‌ನ ಅಧಿಕಾರ ಮತ್ತು ಮುಖ್ಯನ್ಯಾಯಾಧೀಶರ ಕಚೇರಿಯಿಂದ ಈ ರೀತಿ ಪತ್ರ ಬರೆಯುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲೆಡೆ ಹೀಗೆ ಮಾಡಲಾಗುತ್ತದೆ. ನಾವು ಕೂಡ ಈ ಹಿಂದೆ ಸಾಕಷ್ಟುಬಾರಿ ಮಾಡಿದ್ದೇವೆ, ಇದರಲ್ಲಿ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಇಂದು ಶ್ರೀಕೃಷ್ಣ ಜೈಲಿನಲ್ಲಿ ಜನಿಸಿದ್ದ. ನೀವು ಜೈಲಿನಿಂದ ಹೊರಹೋಗಲು ಬಯಸುವಿರಾ?: ಈ ಡೈಲಾಗ್ ಹೇಳಿದವರ್ಯಾರು ಗೊತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The act of officials n alleged justification for this act of recommendation for M D seat is illegal and unethical.it is total misuse of official status, honour n power. I had great respect to Justice Oka on hearing him in our welcome function at Hubballi Bar Association. But now I have change my opinion. These powerfull people of our great Democratic India are misusing power shamefully under one or other justification. Kodos to democracy.

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...