Homeಕರ್ನಾಟಕ1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ...

1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ ಪತ್ರ

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರು ಬೆಂಗಳೂರಿನ ಸೇಂಟ್ ಜಾನ್‌ ಮೆಡಿಕಲ್ ಕಾಲೇಜಿಗೆ ಶಿಫಾರಸ್ಸು ಪತ್ರ ಬರೆದಿದ್ದು, ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಯೊಬ್ಬರು ನೀಟ್‌ ಪರೀಕ್ಷೆಯಲ್ಲಿ ಅಖಿಲ ಭಾರತ 1,09,767ನೇ ರ್ಯಾಂಕ್ ಪಡೆದಿದ್ದು, ಅವರಿಗೆ ತಮ್ಮ ಕಾಲೇಜಿನಲ್ಲಿ ಪ್ರವೇಶ ನೀಡುವಂತೆ ಕೋರಲಾಗಿದೆ.

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ ಓಕಾರವರು ಈ ಅಭ್ಯರ್ಥಿಯು ಸೆಂಟ್ ಜಾನ್ ಮೆಡಿಕಲ್‌ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮುಂದುವರೆಸಲಿ ಎಂಬ ಸಂಗತಿಯ ಕುರಿತು ಉತ್ಸುಕರಾಗಿದ್ದಾರೆ, ಹಾಗಾಗಿ ಈ ಅಭ್ಯರ್ಥಿಗೆ ತಮ್ಮ ಕಾಲೇಜಿನಲ್ಲಿ ಎಂಡಿ ಜನರಲ್ ಮೆಡಿಸಿನ್, ಎಂಎಸ್ ಜನರಲ್ ಸೈನ್ಸ್, ಎಂಎಸ್ ಜನರಲ್ ಸರ್ಜರಿ, ಎಂಸಿ ಅನಸ್ತೇಷಿಯ, ಎಂಎಸ್ ಆಪ್ತಮಾಲಜಿ, ಎಂಎಸ್‌ಇಎನ್‌ಟಿ, ಎಂಡಿ ಪೆಥಾಲಜಿ ವಿಭಾಗಗಳಲ್ಲಿ ಯಾವುದಾದರೂ ಒಂದಕ್ಕೆ ಸೀಟು ನೀಡಬೇಕೆಂದು ಪತ್ರದಲ್ಲಿ ಕೋರಲಾಗಿದೆ.

ಈ ರೀತಿಯಾಗಿ ಮುಖ್ಯ ನ್ಯಾಯಾಧೀಶರ ಕಚೇರಿಯ ಮತ್ತು ಹೈಕೋರ್ಟ್‌ನ ಅಧಿಕಾರ ಬಳಸಿಕೊಂಡು ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಗೆ ಸೀಟು ಕೇಳುವುದು ಎಷ್ಟು ಸರಿ? ಎಂಬ ಪ್ರಶ್ನೆ ಉದಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರನ್ನು ಮಾತನಾಡಿಸಿದಾಗ, “ಹೌದು ಪತ್ರ ಕಳಿಸಿರುವುದು ನಿಜ, ಈ ರೀತಿ ಶಿಫಾರಸ್ಸು ಪತ್ರ ಕಳಿಸುವುದು ತಪ್ಪೇನಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆಯೂ ಹಲವಾರು ಜನರಿಗೆ ಶಿಫಾರಸ್ಸು ಪತ್ರ ನೀಡಿದ್ದೇವೆ. ಕಾಲೇಜಿನವರು ಸೀಟು ಇದ್ದರೆ ಕೊಡತ್ತಾರೆ ಇಲ್ಲದಿದ್ದರೆ ಇಲ್ಲ ಎಂದು ತಿಳಿಸುತ್ತಾರೆ” ಎಂದರು.

ಅಧಿಕೃತವಾಗಿ ಹೈಕೋರ್ಟ್‌ನ ಅಧಿಕಾರ ಮತ್ತು ಮುಖ್ಯನ್ಯಾಯಾಧೀಶರ ಕಚೇರಿಯಿಂದ ಈ ರೀತಿ ಪತ್ರ ಬರೆಯುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲೆಡೆ ಹೀಗೆ ಮಾಡಲಾಗುತ್ತದೆ. ನಾವು ಕೂಡ ಈ ಹಿಂದೆ ಸಾಕಷ್ಟುಬಾರಿ ಮಾಡಿದ್ದೇವೆ, ಇದರಲ್ಲಿ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಇಂದು ಶ್ರೀಕೃಷ್ಣ ಜೈಲಿನಲ್ಲಿ ಜನಿಸಿದ್ದ. ನೀವು ಜೈಲಿನಿಂದ ಹೊರಹೋಗಲು ಬಯಸುವಿರಾ?: ಈ ಡೈಲಾಗ್ ಹೇಳಿದವರ್ಯಾರು ಗೊತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The act of officials n alleged justification for this act of recommendation for M D seat is illegal and unethical.it is total misuse of official status, honour n power. I had great respect to Justice Oka on hearing him in our welcome function at Hubballi Bar Association. But now I have change my opinion. These powerfull people of our great Democratic India are misusing power shamefully under one or other justification. Kodos to democracy.

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...