Homeಕರ್ನಾಟಕ1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ...

1 ಲಕ್ಷಕ್ಕೂ ಹೆಚ್ಚು ರ್ಯಾಂಕ್ ಬಂದಿರುವವರಿಗೆ ಎಂಡಿ ಸೀಟು ಕೊಡಿ: ಹೈಕೋರ್ಟ್ ಸಿಜೆ ಕಚೇರಿಯಿಂದ ಅಧಿಕೃತ ಪತ್ರ

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

- Advertisement -
- Advertisement -

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರ ಕಚೇರಿಯಿಂದ ಮಾಜಿ ಮುಖ್ಯ ನ್ಯಾಯಾಧೀಶರಾದ ಜಸ್ಟೀಸ್ ಪಿ.ಡಿ ದಿನಕರನ್‌ರವರ ಸಂಬಂಧಿಯೊಬ್ಬರಿಗೆ ಎಂಡಿ ಸೀಟ್‌ಗೆ ದಾಖಲಾತಿ ನೀಡಬೇಕೆಂದು ಶಿಫಾರಸ್ಸು ಪತ್ರ ಬರೆದಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರು ಬೆಂಗಳೂರಿನ ಸೇಂಟ್ ಜಾನ್‌ ಮೆಡಿಕಲ್ ಕಾಲೇಜಿಗೆ ಶಿಫಾರಸ್ಸು ಪತ್ರ ಬರೆದಿದ್ದು, ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಯೊಬ್ಬರು ನೀಟ್‌ ಪರೀಕ್ಷೆಯಲ್ಲಿ ಅಖಿಲ ಭಾರತ 1,09,767ನೇ ರ್ಯಾಂಕ್ ಪಡೆದಿದ್ದು, ಅವರಿಗೆ ತಮ್ಮ ಕಾಲೇಜಿನಲ್ಲಿ ಪ್ರವೇಶ ನೀಡುವಂತೆ ಕೋರಲಾಗಿದೆ.

ಕರ್ನಾಟಕದ‌ ಮುಖ್ಯ ನ್ಯಾಯಾಧೀಶರಾದ ಅಭಯ್ ಶ್ರೀನಿವಾಸ ಓಕಾರವರು ಈ ಅಭ್ಯರ್ಥಿಯು ಸೆಂಟ್ ಜಾನ್ ಮೆಡಿಕಲ್‌ ಕಾಲೇಜಿನಲ್ಲೇ ವಿದ್ಯಾಭ್ಯಾಸ ಮುಂದುವರೆಸಲಿ ಎಂಬ ಸಂಗತಿಯ ಕುರಿತು ಉತ್ಸುಕರಾಗಿದ್ದಾರೆ, ಹಾಗಾಗಿ ಈ ಅಭ್ಯರ್ಥಿಗೆ ತಮ್ಮ ಕಾಲೇಜಿನಲ್ಲಿ ಎಂಡಿ ಜನರಲ್ ಮೆಡಿಸಿನ್, ಎಂಎಸ್ ಜನರಲ್ ಸೈನ್ಸ್, ಎಂಎಸ್ ಜನರಲ್ ಸರ್ಜರಿ, ಎಂಸಿ ಅನಸ್ತೇಷಿಯ, ಎಂಎಸ್ ಆಪ್ತಮಾಲಜಿ, ಎಂಎಸ್‌ಇಎನ್‌ಟಿ, ಎಂಡಿ ಪೆಥಾಲಜಿ ವಿಭಾಗಗಳಲ್ಲಿ ಯಾವುದಾದರೂ ಒಂದಕ್ಕೆ ಸೀಟು ನೀಡಬೇಕೆಂದು ಪತ್ರದಲ್ಲಿ ಕೋರಲಾಗಿದೆ.

ಈ ರೀತಿಯಾಗಿ ಮುಖ್ಯ ನ್ಯಾಯಾಧೀಶರ ಕಚೇರಿಯ ಮತ್ತು ಹೈಕೋರ್ಟ್‌ನ ಅಧಿಕಾರ ಬಳಸಿಕೊಂಡು ಮಾಜಿ ಮುಖ್ಯ ನ್ಯಾಯಾಧೀಶರ ಸಂಬಂಧಿಗೆ ಸೀಟು ಕೇಳುವುದು ಎಷ್ಟು ಸರಿ? ಎಂಬ ಪ್ರಶ್ನೆ ಉದಯವಾಗಿದೆ.

ಈ ಕುರಿತು ನಾನುಗೌರಿ.ಕಾಂ ಕರ್ನಾಟಕ ಹೈಕೋರ್ಟ್‌ನ ಜಂಟಿ ರಿಜಿಸ್ಟ್ರಾರ್‌ ಟಿ.ಎನ್ ಕನಕರಾಜುರವರನ್ನು ಮಾತನಾಡಿಸಿದಾಗ, “ಹೌದು ಪತ್ರ ಕಳಿಸಿರುವುದು ನಿಜ, ಈ ರೀತಿ ಶಿಫಾರಸ್ಸು ಪತ್ರ ಕಳಿಸುವುದು ತಪ್ಪೇನಿಲ್ಲ ಎಂದು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಹಿಂದೆಯೂ ಹಲವಾರು ಜನರಿಗೆ ಶಿಫಾರಸ್ಸು ಪತ್ರ ನೀಡಿದ್ದೇವೆ. ಕಾಲೇಜಿನವರು ಸೀಟು ಇದ್ದರೆ ಕೊಡತ್ತಾರೆ ಇಲ್ಲದಿದ್ದರೆ ಇಲ್ಲ ಎಂದು ತಿಳಿಸುತ್ತಾರೆ” ಎಂದರು.

ಅಧಿಕೃತವಾಗಿ ಹೈಕೋರ್ಟ್‌ನ ಅಧಿಕಾರ ಮತ್ತು ಮುಖ್ಯನ್ಯಾಯಾಧೀಶರ ಕಚೇರಿಯಿಂದ ಈ ರೀತಿ ಪತ್ರ ಬರೆಯುವುದು ಎಷ್ಟು ಸರಿ ಎಂಬ ಪ್ರಶ್ನೆಗೆ ಸುಪ್ರೀಂ ಕೋರ್ಟ್ ಸೇರಿದಂತೆ ಎಲ್ಲೆಡೆ ಹೀಗೆ ಮಾಡಲಾಗುತ್ತದೆ. ನಾವು ಕೂಡ ಈ ಹಿಂದೆ ಸಾಕಷ್ಟುಬಾರಿ ಮಾಡಿದ್ದೇವೆ, ಇದರಲ್ಲಿ ತಪ್ಪೇನಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಇಂದು ಶ್ರೀಕೃಷ್ಣ ಜೈಲಿನಲ್ಲಿ ಜನಿಸಿದ್ದ. ನೀವು ಜೈಲಿನಿಂದ ಹೊರಹೋಗಲು ಬಯಸುವಿರಾ?: ಈ ಡೈಲಾಗ್ ಹೇಳಿದವರ್ಯಾರು ಗೊತ್ತೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. The act of officials n alleged justification for this act of recommendation for M D seat is illegal and unethical.it is total misuse of official status, honour n power. I had great respect to Justice Oka on hearing him in our welcome function at Hubballi Bar Association. But now I have change my opinion. These powerfull people of our great Democratic India are misusing power shamefully under one or other justification. Kodos to democracy.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...