Homeಮುಖಪುಟತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’...

ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…

- Advertisement -
- Advertisement -

ದಾವಣಗೆರೆಯಿಂದ ನಿಜಗುಣಾನಂದ ಸ್ವಾಮಿಗಳು ಬಂದಿದ್ದ ಕೊಲೆ ಬೆದರಿಕೆ ಪತ್ರದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಸಹ ಇರುವುದರ ಕುರಿತು ಪ್ರತಿಕ್ರಿಯಿಸಿರುವ ಅವರು ’ಚಲೋ ಹಮ್‌ ದೇಖೇಂಗೆ’… ಎಂದು ಟ್ವೀಟ್‌ ಮಾಡಿದ್ದಾರೆ.

ನಿಜಗುಣಾನಂದ ಸ್ವಾಮಿ ಅವರನ್ನು ತೊಡೆದುಹಾಕುತ್ತೇವೆ ಎಂದು ಹೇಡಿಗಳ ಗುಂಪು ಬೆದರಿಕೆ ಹಾಕಿದೆ. ಪತ್ರದ ಪಟ್ಟಿಯಲ್ಲಿ ನನ್ನ ಹೆಸರೂ ಸಹ ಇದೆ. ಚಲೋ ಹಮ್‌ ದೇಖೇಂಗೆ.., ಇಂಡಿಯಾ ಎಗೆನೆಸ್ಟ್‌ ಸಿಎಎ, ಎನ್‌ಆರ್‌ಸಿ, ಜಸ್ಟ್‌ ಆಸ್ಕಿಂಗ್‌ ಎಂದು ಟ್ವೀಟ್‌ ಮಾಡಿದ್ದಾರೆ. ಅಂದರೆ ನಡೀರಿ ನೋಡೋ ಬೀಡೋಣ ಅದೇನೆಂತ.. ಎಂಬರ್ಥ ಬರುತ್ತದೆ.

ಏನಿದು ಹಮ್‌ ದೇಖೇಂಗೆ?

ಹಮ್ ದೇಖೇಂಗೇ ಕವಿತೆಯನ್ನು ಫೈಜ್ ಅಹಮದ್ ಫೈಜ್ ಬರೆದಿದ್ದು 1979ರಲ್ಲಿ. ಪಾಕಿಸ್ತಾನದ ಪ್ರಧಾನಿ ಜುಲ್ಫಿಕರ್ ಬುಟ್ಟೋ ಅವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಮಿಲಿಟರಿ ಜನರಲ್ ಜಿಯಾ ಉಲ್ ಹಕ್ ಕಟ್ಟರ್ ಪಂಥೀಯನಾಗಿದ್ದು ಇಡೀ ಪಾಕಿಸ್ತಾನವನ್ನು ಮತಾಂಧತೆಯೆಡೆಗೆ ದೂಡುತ್ತಿದ್ದ ಸನ್ನಿವೇಶದಲ್ಲಿ ಅವನ ದುರಾಡಳಿತದ ಅಂತ್ಯವನ್ನು ಬಯಸಿ ಫೈಜ್ ಬರೆದಿದ್ದ ಕವಿತೆಯೇ ‘ಹಮ್ ದೇಖೇಂಗೆ’.

1984ರಲ್ಲಿ ಫೈಜ್ ನಿಧನದ ಮರುವರ್ಷ ಅಂದರೆ 1985ರಲ್ಲಿ ಪಾಕಿಸ್ತಾನದ ಮಹಿಳೆಯರು ಸೀರೆ ಉಡುವಂತಿಲ್ಲ ಎಂಬ ಉಘಲಕ್ ಶಾಸನವನ್ನು ಜಿಯಾ ಉಲ್ ಹಕ್ ಘೋಷಿಸಿದ್ದ. ಈ ಶಾಸನವನ್ನು ಖಂಡಿಸಿ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ಇಕ್ಬಾಲ್ ಬಾನೋ ಲಾಹೋರಿನ ಗಡಾಫಿ ಕ್ರೀಡಾಂಗಣದಲ್ಲಿ ಕಪ್ಪು ಸೀರೆಯುಟ್ಟುಕೊಂಡು ಬಂದು ಫೈಜ್ ಅವರ “ಹಮ್ ದೇಖೇಂಗೇ” ಕವಿತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು. ಫೈಜ್ ಬರೆದ ಈ ಹಾಡಿನ ಗಾಯನವನ್ನು ಕೇಳಲೆಂದೇ ಅಂದು ಸುಮಾರು 50,000 ಜನರು ನೆರೆದಿದ್ದರು ಎಂದು ಹೇಳಲಾಗುತ್ತದೆ.

ಫೈಜ್‌ ಅಹಮದ್‌ ಫೈಜ್‌ರವರ ಹಮ್‌ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಪಲ್ಲವಿ ಮತ್ತು ಬಿಂದು ಕನ್ನಡದಲ್ಲಿ ಹಾಡಿದಾಗ..

ಫೈಜ್ ಅಹಮದ್ ಫೈಜ್ ರವರ ಹಮ್ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಅದ್ಭುತವಾಗಿ ಹಾಡಿದ ಪಲ್ಲವಿ ಮತ್ತು ಬಿಂದುರವರು.. ಕೇಳಿಬಿಡಿ

Posted by Naanu Gauri on Thursday, January 9, 2020

ಹಾಡಿನುದ್ದಕ್ಕೂ ಕರತಾಡನ ಮಾಡುತ್ತಿದ್ದ ಜನರು ಹಾಡಿನ ಕೊನೆಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂದು ಇಕ್ಬಾಲ್ ಹಾಡಿದ್ದ ಈ ಗಾಯನದ ಧ್ವನಿಮುದ್ರಿಕೆಯನ್ನು ಹೇಗೋ ರಕ್ಷಿಸಿಕೊಂಡು ಬರಲಾಗಿದ್ದು ಇಂದಿಗೂ ಯೂಟ್ಯೂಬಿನಲ್ಲಿ ಕೇಳಲು ಲಭ್ಯವಿದೆ. ತದನಂತರದಲ್ಲಿ ಈ ಹಮ್ ದೇಖೇಂಗೇ ಕವಿತೆ ಒಂದು ಕ್ರಾಂತಿಗೀತೆಯಂತೆ ದಬ್ಬಾಳಿಕೆ ನಡೆಸುವ ಸರ್ಕಾರಗಳ ವಿರುದ್ಧದ ಹೋರಾಟಗಳಲ್ಲಿ ರಾಷ್ಟ್ರಗೀತೆಯಂತೆ ಹಾಡಲಾಗುತ್ತಿದೆ.

ಬೆದರಿಕೆ ಪತ್ರದ ಕುರಿತು

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...