Homeಮುಖಪುಟತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’...

ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…

- Advertisement -
- Advertisement -

ದಾವಣಗೆರೆಯಿಂದ ನಿಜಗುಣಾನಂದ ಸ್ವಾಮಿಗಳು ಬಂದಿದ್ದ ಕೊಲೆ ಬೆದರಿಕೆ ಪತ್ರದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಸಹ ಇರುವುದರ ಕುರಿತು ಪ್ರತಿಕ್ರಿಯಿಸಿರುವ ಅವರು ’ಚಲೋ ಹಮ್‌ ದೇಖೇಂಗೆ’… ಎಂದು ಟ್ವೀಟ್‌ ಮಾಡಿದ್ದಾರೆ.

ನಿಜಗುಣಾನಂದ ಸ್ವಾಮಿ ಅವರನ್ನು ತೊಡೆದುಹಾಕುತ್ತೇವೆ ಎಂದು ಹೇಡಿಗಳ ಗುಂಪು ಬೆದರಿಕೆ ಹಾಕಿದೆ. ಪತ್ರದ ಪಟ್ಟಿಯಲ್ಲಿ ನನ್ನ ಹೆಸರೂ ಸಹ ಇದೆ. ಚಲೋ ಹಮ್‌ ದೇಖೇಂಗೆ.., ಇಂಡಿಯಾ ಎಗೆನೆಸ್ಟ್‌ ಸಿಎಎ, ಎನ್‌ಆರ್‌ಸಿ, ಜಸ್ಟ್‌ ಆಸ್ಕಿಂಗ್‌ ಎಂದು ಟ್ವೀಟ್‌ ಮಾಡಿದ್ದಾರೆ. ಅಂದರೆ ನಡೀರಿ ನೋಡೋ ಬೀಡೋಣ ಅದೇನೆಂತ.. ಎಂಬರ್ಥ ಬರುತ್ತದೆ.

ಏನಿದು ಹಮ್‌ ದೇಖೇಂಗೆ?

ಹಮ್ ದೇಖೇಂಗೇ ಕವಿತೆಯನ್ನು ಫೈಜ್ ಅಹಮದ್ ಫೈಜ್ ಬರೆದಿದ್ದು 1979ರಲ್ಲಿ. ಪಾಕಿಸ್ತಾನದ ಪ್ರಧಾನಿ ಜುಲ್ಫಿಕರ್ ಬುಟ್ಟೋ ಅವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಮಿಲಿಟರಿ ಜನರಲ್ ಜಿಯಾ ಉಲ್ ಹಕ್ ಕಟ್ಟರ್ ಪಂಥೀಯನಾಗಿದ್ದು ಇಡೀ ಪಾಕಿಸ್ತಾನವನ್ನು ಮತಾಂಧತೆಯೆಡೆಗೆ ದೂಡುತ್ತಿದ್ದ ಸನ್ನಿವೇಶದಲ್ಲಿ ಅವನ ದುರಾಡಳಿತದ ಅಂತ್ಯವನ್ನು ಬಯಸಿ ಫೈಜ್ ಬರೆದಿದ್ದ ಕವಿತೆಯೇ ‘ಹಮ್ ದೇಖೇಂಗೆ’.

1984ರಲ್ಲಿ ಫೈಜ್ ನಿಧನದ ಮರುವರ್ಷ ಅಂದರೆ 1985ರಲ್ಲಿ ಪಾಕಿಸ್ತಾನದ ಮಹಿಳೆಯರು ಸೀರೆ ಉಡುವಂತಿಲ್ಲ ಎಂಬ ಉಘಲಕ್ ಶಾಸನವನ್ನು ಜಿಯಾ ಉಲ್ ಹಕ್ ಘೋಷಿಸಿದ್ದ. ಈ ಶಾಸನವನ್ನು ಖಂಡಿಸಿ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ಇಕ್ಬಾಲ್ ಬಾನೋ ಲಾಹೋರಿನ ಗಡಾಫಿ ಕ್ರೀಡಾಂಗಣದಲ್ಲಿ ಕಪ್ಪು ಸೀರೆಯುಟ್ಟುಕೊಂಡು ಬಂದು ಫೈಜ್ ಅವರ “ಹಮ್ ದೇಖೇಂಗೇ” ಕವಿತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು. ಫೈಜ್ ಬರೆದ ಈ ಹಾಡಿನ ಗಾಯನವನ್ನು ಕೇಳಲೆಂದೇ ಅಂದು ಸುಮಾರು 50,000 ಜನರು ನೆರೆದಿದ್ದರು ಎಂದು ಹೇಳಲಾಗುತ್ತದೆ.

ಫೈಜ್‌ ಅಹಮದ್‌ ಫೈಜ್‌ರವರ ಹಮ್‌ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಪಲ್ಲವಿ ಮತ್ತು ಬಿಂದು ಕನ್ನಡದಲ್ಲಿ ಹಾಡಿದಾಗ..

ಫೈಜ್ ಅಹಮದ್ ಫೈಜ್ ರವರ ಹಮ್ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಅದ್ಭುತವಾಗಿ ಹಾಡಿದ ಪಲ್ಲವಿ ಮತ್ತು ಬಿಂದುರವರು.. ಕೇಳಿಬಿಡಿ

Posted by Naanu Gauri on Thursday, January 9, 2020

ಹಾಡಿನುದ್ದಕ್ಕೂ ಕರತಾಡನ ಮಾಡುತ್ತಿದ್ದ ಜನರು ಹಾಡಿನ ಕೊನೆಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂದು ಇಕ್ಬಾಲ್ ಹಾಡಿದ್ದ ಈ ಗಾಯನದ ಧ್ವನಿಮುದ್ರಿಕೆಯನ್ನು ಹೇಗೋ ರಕ್ಷಿಸಿಕೊಂಡು ಬರಲಾಗಿದ್ದು ಇಂದಿಗೂ ಯೂಟ್ಯೂಬಿನಲ್ಲಿ ಕೇಳಲು ಲಭ್ಯವಿದೆ. ತದನಂತರದಲ್ಲಿ ಈ ಹಮ್ ದೇಖೇಂಗೇ ಕವಿತೆ ಒಂದು ಕ್ರಾಂತಿಗೀತೆಯಂತೆ ದಬ್ಬಾಳಿಕೆ ನಡೆಸುವ ಸರ್ಕಾರಗಳ ವಿರುದ್ಧದ ಹೋರಾಟಗಳಲ್ಲಿ ರಾಷ್ಟ್ರಗೀತೆಯಂತೆ ಹಾಡಲಾಗುತ್ತಿದೆ.

ಬೆದರಿಕೆ ಪತ್ರದ ಕುರಿತು

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...