Homeಮುಖಪುಟತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’...

ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…

- Advertisement -
- Advertisement -

ದಾವಣಗೆರೆಯಿಂದ ನಿಜಗುಣಾನಂದ ಸ್ವಾಮಿಗಳು ಬಂದಿದ್ದ ಕೊಲೆ ಬೆದರಿಕೆ ಪತ್ರದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಸಹ ಇರುವುದರ ಕುರಿತು ಪ್ರತಿಕ್ರಿಯಿಸಿರುವ ಅವರು ’ಚಲೋ ಹಮ್‌ ದೇಖೇಂಗೆ’… ಎಂದು ಟ್ವೀಟ್‌ ಮಾಡಿದ್ದಾರೆ.

ನಿಜಗುಣಾನಂದ ಸ್ವಾಮಿ ಅವರನ್ನು ತೊಡೆದುಹಾಕುತ್ತೇವೆ ಎಂದು ಹೇಡಿಗಳ ಗುಂಪು ಬೆದರಿಕೆ ಹಾಕಿದೆ. ಪತ್ರದ ಪಟ್ಟಿಯಲ್ಲಿ ನನ್ನ ಹೆಸರೂ ಸಹ ಇದೆ. ಚಲೋ ಹಮ್‌ ದೇಖೇಂಗೆ.., ಇಂಡಿಯಾ ಎಗೆನೆಸ್ಟ್‌ ಸಿಎಎ, ಎನ್‌ಆರ್‌ಸಿ, ಜಸ್ಟ್‌ ಆಸ್ಕಿಂಗ್‌ ಎಂದು ಟ್ವೀಟ್‌ ಮಾಡಿದ್ದಾರೆ. ಅಂದರೆ ನಡೀರಿ ನೋಡೋ ಬೀಡೋಣ ಅದೇನೆಂತ.. ಎಂಬರ್ಥ ಬರುತ್ತದೆ.

ಏನಿದು ಹಮ್‌ ದೇಖೇಂಗೆ?

ಹಮ್ ದೇಖೇಂಗೇ ಕವಿತೆಯನ್ನು ಫೈಜ್ ಅಹಮದ್ ಫೈಜ್ ಬರೆದಿದ್ದು 1979ರಲ್ಲಿ. ಪಾಕಿಸ್ತಾನದ ಪ್ರಧಾನಿ ಜುಲ್ಫಿಕರ್ ಬುಟ್ಟೋ ಅವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಮಿಲಿಟರಿ ಜನರಲ್ ಜಿಯಾ ಉಲ್ ಹಕ್ ಕಟ್ಟರ್ ಪಂಥೀಯನಾಗಿದ್ದು ಇಡೀ ಪಾಕಿಸ್ತಾನವನ್ನು ಮತಾಂಧತೆಯೆಡೆಗೆ ದೂಡುತ್ತಿದ್ದ ಸನ್ನಿವೇಶದಲ್ಲಿ ಅವನ ದುರಾಡಳಿತದ ಅಂತ್ಯವನ್ನು ಬಯಸಿ ಫೈಜ್ ಬರೆದಿದ್ದ ಕವಿತೆಯೇ ‘ಹಮ್ ದೇಖೇಂಗೆ’.

1984ರಲ್ಲಿ ಫೈಜ್ ನಿಧನದ ಮರುವರ್ಷ ಅಂದರೆ 1985ರಲ್ಲಿ ಪಾಕಿಸ್ತಾನದ ಮಹಿಳೆಯರು ಸೀರೆ ಉಡುವಂತಿಲ್ಲ ಎಂಬ ಉಘಲಕ್ ಶಾಸನವನ್ನು ಜಿಯಾ ಉಲ್ ಹಕ್ ಘೋಷಿಸಿದ್ದ. ಈ ಶಾಸನವನ್ನು ಖಂಡಿಸಿ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ಇಕ್ಬಾಲ್ ಬಾನೋ ಲಾಹೋರಿನ ಗಡಾಫಿ ಕ್ರೀಡಾಂಗಣದಲ್ಲಿ ಕಪ್ಪು ಸೀರೆಯುಟ್ಟುಕೊಂಡು ಬಂದು ಫೈಜ್ ಅವರ “ಹಮ್ ದೇಖೇಂಗೇ” ಕವಿತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು. ಫೈಜ್ ಬರೆದ ಈ ಹಾಡಿನ ಗಾಯನವನ್ನು ಕೇಳಲೆಂದೇ ಅಂದು ಸುಮಾರು 50,000 ಜನರು ನೆರೆದಿದ್ದರು ಎಂದು ಹೇಳಲಾಗುತ್ತದೆ.

ಫೈಜ್‌ ಅಹಮದ್‌ ಫೈಜ್‌ರವರ ಹಮ್‌ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಪಲ್ಲವಿ ಮತ್ತು ಬಿಂದು ಕನ್ನಡದಲ್ಲಿ ಹಾಡಿದಾಗ..

ಫೈಜ್ ಅಹಮದ್ ಫೈಜ್ ರವರ ಹಮ್ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಅದ್ಭುತವಾಗಿ ಹಾಡಿದ ಪಲ್ಲವಿ ಮತ್ತು ಬಿಂದುರವರು.. ಕೇಳಿಬಿಡಿ

Posted by Naanu Gauri on Thursday, January 9, 2020

ಹಾಡಿನುದ್ದಕ್ಕೂ ಕರತಾಡನ ಮಾಡುತ್ತಿದ್ದ ಜನರು ಹಾಡಿನ ಕೊನೆಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂದು ಇಕ್ಬಾಲ್ ಹಾಡಿದ್ದ ಈ ಗಾಯನದ ಧ್ವನಿಮುದ್ರಿಕೆಯನ್ನು ಹೇಗೋ ರಕ್ಷಿಸಿಕೊಂಡು ಬರಲಾಗಿದ್ದು ಇಂದಿಗೂ ಯೂಟ್ಯೂಬಿನಲ್ಲಿ ಕೇಳಲು ಲಭ್ಯವಿದೆ. ತದನಂತರದಲ್ಲಿ ಈ ಹಮ್ ದೇಖೇಂಗೇ ಕವಿತೆ ಒಂದು ಕ್ರಾಂತಿಗೀತೆಯಂತೆ ದಬ್ಬಾಳಿಕೆ ನಡೆಸುವ ಸರ್ಕಾರಗಳ ವಿರುದ್ಧದ ಹೋರಾಟಗಳಲ್ಲಿ ರಾಷ್ಟ್ರಗೀತೆಯಂತೆ ಹಾಡಲಾಗುತ್ತಿದೆ.

ಬೆದರಿಕೆ ಪತ್ರದ ಕುರಿತು

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...