Homeಮುಖಪುಟತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’...

ತಮ್ಮ ವಿರುದ್ಧದ ಕೊಲೆ ಬೆದರಿಕೆ ಪತ್ರಕ್ಕೆ ಪ್ರಕಾಶ್‌ ರಾಜ್‌ ಕೊಟ್ಟ ಉತ್ತರ ’ಚಲೋ ಹಮ್‌ ದೇಖೇಂಗೆ’…

- Advertisement -
- Advertisement -

ದಾವಣಗೆರೆಯಿಂದ ನಿಜಗುಣಾನಂದ ಸ್ವಾಮಿಗಳು ಬಂದಿದ್ದ ಕೊಲೆ ಬೆದರಿಕೆ ಪತ್ರದಲ್ಲಿ ನಟ ಪ್ರಕಾಶ್‌ ರಾಜ್‌ ಹೆಸರು ಸಹ ಇರುವುದರ ಕುರಿತು ಪ್ರತಿಕ್ರಿಯಿಸಿರುವ ಅವರು ’ಚಲೋ ಹಮ್‌ ದೇಖೇಂಗೆ’… ಎಂದು ಟ್ವೀಟ್‌ ಮಾಡಿದ್ದಾರೆ.

ನಿಜಗುಣಾನಂದ ಸ್ವಾಮಿ ಅವರನ್ನು ತೊಡೆದುಹಾಕುತ್ತೇವೆ ಎಂದು ಹೇಡಿಗಳ ಗುಂಪು ಬೆದರಿಕೆ ಹಾಕಿದೆ. ಪತ್ರದ ಪಟ್ಟಿಯಲ್ಲಿ ನನ್ನ ಹೆಸರೂ ಸಹ ಇದೆ. ಚಲೋ ಹಮ್‌ ದೇಖೇಂಗೆ.., ಇಂಡಿಯಾ ಎಗೆನೆಸ್ಟ್‌ ಸಿಎಎ, ಎನ್‌ಆರ್‌ಸಿ, ಜಸ್ಟ್‌ ಆಸ್ಕಿಂಗ್‌ ಎಂದು ಟ್ವೀಟ್‌ ಮಾಡಿದ್ದಾರೆ. ಅಂದರೆ ನಡೀರಿ ನೋಡೋ ಬೀಡೋಣ ಅದೇನೆಂತ.. ಎಂಬರ್ಥ ಬರುತ್ತದೆ.

ಏನಿದು ಹಮ್‌ ದೇಖೇಂಗೆ?

ಹಮ್ ದೇಖೇಂಗೇ ಕವಿತೆಯನ್ನು ಫೈಜ್ ಅಹಮದ್ ಫೈಜ್ ಬರೆದಿದ್ದು 1979ರಲ್ಲಿ. ಪಾಕಿಸ್ತಾನದ ಪ್ರಧಾನಿ ಜುಲ್ಫಿಕರ್ ಬುಟ್ಟೋ ಅವರನ್ನು ಪದಚ್ಯುತಗೊಳಿಸಿ ಅಧಿಕಾರಕ್ಕೆ ಬಂದ ಮಿಲಿಟರಿ ಜನರಲ್ ಜಿಯಾ ಉಲ್ ಹಕ್ ಕಟ್ಟರ್ ಪಂಥೀಯನಾಗಿದ್ದು ಇಡೀ ಪಾಕಿಸ್ತಾನವನ್ನು ಮತಾಂಧತೆಯೆಡೆಗೆ ದೂಡುತ್ತಿದ್ದ ಸನ್ನಿವೇಶದಲ್ಲಿ ಅವನ ದುರಾಡಳಿತದ ಅಂತ್ಯವನ್ನು ಬಯಸಿ ಫೈಜ್ ಬರೆದಿದ್ದ ಕವಿತೆಯೇ ‘ಹಮ್ ದೇಖೇಂಗೆ’.

1984ರಲ್ಲಿ ಫೈಜ್ ನಿಧನದ ಮರುವರ್ಷ ಅಂದರೆ 1985ರಲ್ಲಿ ಪಾಕಿಸ್ತಾನದ ಮಹಿಳೆಯರು ಸೀರೆ ಉಡುವಂತಿಲ್ಲ ಎಂಬ ಉಘಲಕ್ ಶಾಸನವನ್ನು ಜಿಯಾ ಉಲ್ ಹಕ್ ಘೋಷಿಸಿದ್ದ. ಈ ಶಾಸನವನ್ನು ಖಂಡಿಸಿ ಪಾಕಿಸ್ತಾನದ ಪ್ರಸಿದ್ಧ ಗಾಯಕಿ ಇಕ್ಬಾಲ್ ಬಾನೋ ಲಾಹೋರಿನ ಗಡಾಫಿ ಕ್ರೀಡಾಂಗಣದಲ್ಲಿ ಕಪ್ಪು ಸೀರೆಯುಟ್ಟುಕೊಂಡು ಬಂದು ಫೈಜ್ ಅವರ “ಹಮ್ ದೇಖೇಂಗೇ” ಕವಿತೆಯನ್ನು ಸುಶ್ರಾವ್ಯವಾಗಿ ಹಾಡಿದ್ದರು. ಫೈಜ್ ಬರೆದ ಈ ಹಾಡಿನ ಗಾಯನವನ್ನು ಕೇಳಲೆಂದೇ ಅಂದು ಸುಮಾರು 50,000 ಜನರು ನೆರೆದಿದ್ದರು ಎಂದು ಹೇಳಲಾಗುತ್ತದೆ.

ಫೈಜ್‌ ಅಹಮದ್‌ ಫೈಜ್‌ರವರ ಹಮ್‌ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಪಲ್ಲವಿ ಮತ್ತು ಬಿಂದು ಕನ್ನಡದಲ್ಲಿ ಹಾಡಿದಾಗ..

ಫೈಜ್ ಅಹಮದ್ ಫೈಜ್ ರವರ ಹಮ್ ದೇಖೆಂಗೆ ಹಾಡನ್ನು ಕನ್ನಡದಲ್ಲಿ ಅದ್ಭುತವಾಗಿ ಹಾಡಿದ ಪಲ್ಲವಿ ಮತ್ತು ಬಿಂದುರವರು.. ಕೇಳಿಬಿಡಿ

Posted by Naanu Gauri on Thursday, January 9, 2020

ಹಾಡಿನುದ್ದಕ್ಕೂ ಕರತಾಡನ ಮಾಡುತ್ತಿದ್ದ ಜನರು ಹಾಡಿನ ಕೊನೆಯಲ್ಲಿ ಇಂಕ್ವಿಲಾಬ್ ಜಿಂದಾಬಾದ್ ಘೋಷಣೆ ಕೂಗಿದ್ದರು. ಅಂದು ಇಕ್ಬಾಲ್ ಹಾಡಿದ್ದ ಈ ಗಾಯನದ ಧ್ವನಿಮುದ್ರಿಕೆಯನ್ನು ಹೇಗೋ ರಕ್ಷಿಸಿಕೊಂಡು ಬರಲಾಗಿದ್ದು ಇಂದಿಗೂ ಯೂಟ್ಯೂಬಿನಲ್ಲಿ ಕೇಳಲು ಲಭ್ಯವಿದೆ. ತದನಂತರದಲ್ಲಿ ಈ ಹಮ್ ದೇಖೇಂಗೇ ಕವಿತೆ ಒಂದು ಕ್ರಾಂತಿಗೀತೆಯಂತೆ ದಬ್ಬಾಳಿಕೆ ನಡೆಸುವ ಸರ್ಕಾರಗಳ ವಿರುದ್ಧದ ಹೋರಾಟಗಳಲ್ಲಿ ರಾಷ್ಟ್ರಗೀತೆಯಂತೆ ಹಾಡಲಾಗುತ್ತಿದೆ.

ಬೆದರಿಕೆ ಪತ್ರದ ಕುರಿತು

ನಿಜಗುಣಾನಂದ ಸ್ವಾಮಿಗಳೆ, ನಿಮ್ಮನ್ನು ಮತ್ತು ನಿಮ್ಮ ಜೊತೆ ಇರುವ ಧರ್ಮದ್ರೋಹಿಗಳನ್ನು, ದೇಶದ್ರೋಹಿಗಳನ್ನು 2020ರ, ಜನವರಿ 29 ಸಂಹಾರ ಮಾಡುತ್ತೇವೆ ಎಂಬ 15ಜನರ ಹೆಸರುಗಳ ಪಟ್ಟಿ ಇರುವ ಬೆದರಿಕೆ ಪತ್ರವೊಂದನ್ನು ನಿಜಗುಣಾನಂದ ಸ್ವಾಮಿಗಳಿಗೆ ಕಳಿಸಲಾಗಿದೆ.

ದಾವಣಗೆರೆಯಿಂದ ಈ ಅನಾಮಧೇಯ ಪೋಸ್ಟ್‌ ಬಂದಿದ್ದು, ನಿಜಗುಣಾನಂದ ಸ್ವಾಮಿಗಳು ಕೂಡಲೇ ಜೇವರ್ಗಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪತ್ರದಲ್ಲಿ ಭಜರಂಗದಳದ ಮಾಜಿ ನಾಯಕರಾದ ಮಹೇಂದ್ರ ಕುಮಾರ್‌, ನಿಜಗುಣಾನಂದ ಸ್ವಾಮಿಗಳು, ನಿಡುಮಾಮಿಡಿ ವೀರಭದ್ರ ಚನ್ನಮಲ್ಲ ಸ್ವಾಮಿ, ಚಿತ್ರನಟ ಪ್ರಕಾಶ್‌ ರಾಜ್‌, ಜ್ಞಾನಪ್ರಕಾಶ್‌ ಸ್ವಾಮಿ, ನಟ ಚೇತನ್‌, ಹಿರಿಯ ಲೇಖಕಿ ಬಿ.ಟಿ ಲಲಿತಾನಾಯಕ್‌, ಪ್ರೊ.ಮಹೇಶ್‌ ಚಂದ್ರ ಗುರು, ಪ್ರೊ ಕೆ.ಎಸ್‌ ಭಗವಾನ್‌, ಹಿರಿಯ ಪತ್ರಕರ್ತರಾದ ದಿನೇಶ್‌ ಅಮೀನ್‌ ಮಟ್ಟು, ಹಿರಿಯ ಸಾಹಿತಿ ಚಂಪಾ, ಲೇಖಕರಾದ ಯೋಗೇಶ್‌ ಮಾಸ್ಟರ್‌(ಢುಂಡಿ ಗಣೇಶ್‌), ಅಗ್ನಿ ಶ್ರೀಧರ್‌, ಸಿಪಿಎಂ ನಾಯಕಿ ಬೃಂದಾ ಕಾರಟ್‌ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಹೆಸರನ್ನು ಸೂಚಿಸಿ ಇಷ್ಟು ಜನರನ್ನು ಸಂಹಾರ ಮಾಡುತ್ತೀವಿ ಎಂದು ಬರೆಯಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...