Homeಮುಖಪುಟವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

- Advertisement -
- Advertisement -

ಏರ್ ಇಂಡಿಯಾ ವಿಮಾನದಲ್ಲಿ ಸಸ್ಯಾಹಾರಿ ಜೈನ ಪ್ರಯಾಣಿಕರೊಬ್ಬರಿಗೆ ಮಾಂಸಾಹಾರಿ ಆಹಾರವನ್ನು ಬಡಿಸಿದ ಘಟನೆ ಬೆಳಕಿಗೆ ಬಂದ ನಂತರ, ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ಆಂತರಿಕ ವಿಮಾನಯಾನಗಳಲ್ಲಿ ಮಾಂಸಹಾರ ಊಟವನ್ನು ನಿಷೇಧಿಸುವಂತೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪತ್ರ ಬರೆದಿವೆ.

“ಸಸ್ಯಾಹಾರಿ ಪ್ರಯಾಣಿಕರ ಪರವಾಗಿ ಈ ವಿನಂತಿಯನ್ನು ಮಾಡಲಾಗುತ್ತಿದೆ… ಕಟ್ಟುನಿಟ್ಟಾಗಿ ಸಸ್ಯಾಹಾರವನ್ನು ಪಾಲಿಸುವ ಪ್ರಯಾಣಿಕರು ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರಿ ಆಹಾರವನ್ನು ಪಡೆದಾಗ ಹೆಚ್ಚು ತೊಂದರೆ ಮತ್ತು ಅಸಮಾಧಾನಕ್ಕೆ ಒಳಗಾಗುತ್ತಾರೆ” ಎಂದು ಮಂಡಳಿಯ ಸದಸ್ಯ ರಾಜೇಂದ್ರ ಶಾ ಪತ್ರದಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯ ರಾಜೇಂದ್ರ ಶಾ, “ಕಟ್ಟುನಿಟ್ಟಾಗಿ ಸಸ್ಯಾಹಾರಿ ಪಾಲಿಸುವ ಜನರು, ಸಸ್ಯಾಹಾರಿ ಆಹಾರದ ಬದಲಿಗೆ ಇಂತಹ ಮಾಂಸಾಹಾರಿ ಆಹಾರವನ್ನು ಪಡೆದು ಮನನೊಂದಿದ್ದಾರೆ ಮತ್ತು ತೊಂದರೆ ಅನುಭವಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

ಟೋಕಿಯೊದಿಂದ ದೆಹಲಿಗೆ ತನ್ನ ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸುತ್ತಿದ್ದ ರಾಘವೇಂದ್ರ ಜೈನ್‌ಗೆ ಆಕಸ್ಮಿಕವಾಗಿ ಮಾಂಸಾಹಾರಿ ಊಟವನ್ನು ಬಡಿಸಿದ್ದರಿಂದ ಜೈನ ಸಮುದಾಯ ವಿಮಾನಗಳಲ್ಲಿ ಮಾಂಸಹಾರವನ್ನು ನಿಷೇಧ ಮಾಡುವಂತೆ ಒತ್ತಾಯಿಸಿದೆ.

ಮಾರ್ಚ್ 25 ರಂದು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಸಿಬ್ಬಂದಿಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ತನಗೆ ಮಾಂಸಾಹಾರಿ ನೀಡಿದ್ದಾರೆ ಎಂದು ರಾಘವೇಂದ್ರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾನು ಸಸ್ಯಾಹಾರಿ ಆಹಾರವನ್ನು ಮೊದಲೇ ಬುಕ್ ಮಾಡಿದ್ದೆ ಮತ್ತು ಚೆಕ್-ಇನ್ ಕೌಂಟರ್‌ನಲ್ಲಿ ಅದನ್ನು ದೃಢಪಡಿಸಿದ್ದೆ ಎಂದು ಜೈನ್ ಹೇಳಿದ್ದಾರೆ. ಆದರೆ ಪುನರಾವರ್ತಿತ ದೃಢೀಕರಣದ ನಂತರವೂ ಸಿಬ್ಬಂದಿ ಅವರಿಗೆ ಮಾಂಸಾಹಾರಿ ಆಹಾರವನ್ನು ನೀಡಿದ್ದಾಗಿ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

ಅವರು ಸಿಬ್ಬಂದಿಯೊಂದಿಗೆ ಮರುಪರಿಶೀಲಿಸುವಂತೆ ಹೇಳಿದರೂ, ಅವರು ಅದನ್ನು ಮಾಂಸಾಹಾರಿ ಆಹಾರವಲ್ಲ, ಸಸ್ಯಾಹಾರಿ ಆಹಾರ ಎಂದು ಅವರಿಗೆ ಭರವಸೆ ನೀಡಿ ಅವರಿಗೆ ನೀಡಿದ್ದಾಗಿ ದೂರಿದ್ದಾರೆ. “ತಮ್ಮ ತಪ್ಪಿಗಾಗಿ ಸಿಬ್ಬಂದಿ ಕ್ಷಮೆಯಾಚಿಸಲಿಲ್ಲ, ವಾಸ್ತವವಾಗಿ, ಪ್ರಯಾಣದುದ್ದಕ್ಕೂ ನನಗೆ ಕಿರುಕುಳ ನೀಡಿದರು” ಎಂದು ಅವರು ಹೇಳಿದ್ದಾರೆ.

ಈ ಘಟನೆಯ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಏರ್ ಇಂಡಿಯಾದ ಟೋಕಿಯೊದಿಂದ ದೆಹಲಿ ವಿಮಾನದ ಸಿಬ್ಬಂದಿಗೆ ಹಾರಾಟವನ್ನು ನಿಷೇಧಿಸಲಾಗಿದೆ. ಆಹಾರವನ್ನು ಒತ್ತಾಯ ಮಾಡಿ ತಿನ್ನಿಸಿರುವ ವಿವಾದದ ನಡುವೆ ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ವಿಮಾನಗಳಲ್ಲಿ ಮಾಂಸದ ಊಟವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಪತ್ರವನ್ನು ಬರೆದಿದೆ.

ಹಿಂದಿನ ವಾರವಷ್ಟೆ, ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (SDMC) ನವರಾತ್ರಿ ಹಬ್ಬದ 9 ದಿನಗಳ ಕಾಲ ಪುರಸಭೆಯ ವ್ಯಾಪ್ತಿಯಲ್ಲಿರುವ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ, ಪೂರ್ವ ದೆಹಲಿ ಮೇಯರ್ ಶ್ಯಾಮ್ ಸುಂದರ್ ಅಗರ್ವಾಲ್ ಮತ್ತು ಗಾಜಿಯಾಬಾದ್ ಮೇಯರ್ ಆಶಾ ಶರ್ಮಾ ಅವರು ನವರಾತ್ರಿಯಲ್ಲಿ ಮಾಂಸ ಮಾರಾಟ ಮಾಡದಂತೆ ಮತ್ತು ಅಂಗಡಿಗಳನ್ನು ಮುಚ್ಚುವಂತೆ ಮಾಂಸ ಮಾರಾಟಗಾರರಿಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...