Homeಮುಖಪುಟವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

ವಿಮಾನಗಳಲ್ಲಿ ಮಾಂಸಾಹಾರ ನಿಷೇಧಿಸುವಂತೆ ಒಕ್ಕೂಟ ಸರ್ಕಾರಕ್ಕೆ ಪತ್ರ

- Advertisement -
- Advertisement -

ಏರ್ ಇಂಡಿಯಾ ವಿಮಾನದಲ್ಲಿ ಸಸ್ಯಾಹಾರಿ ಜೈನ ಪ್ರಯಾಣಿಕರೊಬ್ಬರಿಗೆ ಮಾಂಸಾಹಾರಿ ಆಹಾರವನ್ನು ಬಡಿಸಿದ ಘಟನೆ ಬೆಳಕಿಗೆ ಬಂದ ನಂತರ, ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ಆಂತರಿಕ ವಿಮಾನಯಾನಗಳಲ್ಲಿ ಮಾಂಸಹಾರ ಊಟವನ್ನು ನಿಷೇಧಿಸುವಂತೆ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರಿಗೆ ಪತ್ರ ಬರೆದಿವೆ.

“ಸಸ್ಯಾಹಾರಿ ಪ್ರಯಾಣಿಕರ ಪರವಾಗಿ ಈ ವಿನಂತಿಯನ್ನು ಮಾಡಲಾಗುತ್ತಿದೆ… ಕಟ್ಟುನಿಟ್ಟಾಗಿ ಸಸ್ಯಾಹಾರವನ್ನು ಪಾಲಿಸುವ ಪ್ರಯಾಣಿಕರು ಸಸ್ಯಾಹಾರಿ ಆಹಾರದ ಬದಲಿಗೆ ಮಾಂಸಾಹಾರಿ ಆಹಾರವನ್ನು ಪಡೆದಾಗ ಹೆಚ್ಚು ತೊಂದರೆ ಮತ್ತು ಅಸಮಾಧಾನಕ್ಕೆ ಒಳಗಾಗುತ್ತಾರೆ” ಎಂದು ಮಂಡಳಿಯ ಸದಸ್ಯ ರಾಜೇಂದ್ರ ಶಾ ಪತ್ರದಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಯ ಸದಸ್ಯ ರಾಜೇಂದ್ರ ಶಾ, “ಕಟ್ಟುನಿಟ್ಟಾಗಿ ಸಸ್ಯಾಹಾರಿ ಪಾಲಿಸುವ ಜನರು, ಸಸ್ಯಾಹಾರಿ ಆಹಾರದ ಬದಲಿಗೆ ಇಂತಹ ಮಾಂಸಾಹಾರಿ ಆಹಾರವನ್ನು ಪಡೆದು ಮನನೊಂದಿದ್ದಾರೆ ಮತ್ತು ತೊಂದರೆ ಅನುಭವಿಸುತ್ತಾರೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಾಂಸಾಹಾರಿ ಸಮುದಾಯಗಳ ರಾಕ್ಶಸೀಕರಣ ನಿಲ್ಲಲಿ

ಟೋಕಿಯೊದಿಂದ ದೆಹಲಿಗೆ ತನ್ನ ಕುಟುಂಬ ಸದಸ್ಯರೊಂದಿಗೆ ಪ್ರಯಾಣಿಸುತ್ತಿದ್ದ ರಾಘವೇಂದ್ರ ಜೈನ್‌ಗೆ ಆಕಸ್ಮಿಕವಾಗಿ ಮಾಂಸಾಹಾರಿ ಊಟವನ್ನು ಬಡಿಸಿದ್ದರಿಂದ ಜೈನ ಸಮುದಾಯ ವಿಮಾನಗಳಲ್ಲಿ ಮಾಂಸಹಾರವನ್ನು ನಿಷೇಧ ಮಾಡುವಂತೆ ಒತ್ತಾಯಿಸಿದೆ.

ಮಾರ್ಚ್ 25 ರಂದು ಏರ್ ಇಂಡಿಯಾ ವಿಮಾನದಲ್ಲಿ ಈ ಘಟನೆ ನಡೆದಿದ್ದು, ವಿಮಾನ ಸಿಬ್ಬಂದಿಯ ಸಂಪೂರ್ಣ ನಿರ್ಲಕ್ಷ್ಯದಿಂದಾಗಿ ತನಗೆ ಮಾಂಸಾಹಾರಿ ನೀಡಿದ್ದಾರೆ ಎಂದು ರಾಘವೇಂದ್ರ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾನು ಸಸ್ಯಾಹಾರಿ ಆಹಾರವನ್ನು ಮೊದಲೇ ಬುಕ್ ಮಾಡಿದ್ದೆ ಮತ್ತು ಚೆಕ್-ಇನ್ ಕೌಂಟರ್‌ನಲ್ಲಿ ಅದನ್ನು ದೃಢಪಡಿಸಿದ್ದೆ ಎಂದು ಜೈನ್ ಹೇಳಿದ್ದಾರೆ. ಆದರೆ ಪುನರಾವರ್ತಿತ ದೃಢೀಕರಣದ ನಂತರವೂ ಸಿಬ್ಬಂದಿ ಅವರಿಗೆ ಮಾಂಸಾಹಾರಿ ಆಹಾರವನ್ನು ನೀಡಿದ್ದಾಗಿ ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಕೆಲವು ಜನರ ಅಹಂ ತಣಿಸಲು ಹೊರಗಡೆ ಮಾಂಸಾಹಾರ ಮಾರಾಟ ಮಾಡಬೇಡಿ ಎನ್ನುತ್ತೀರಿ’: ಚಾಟಿ ಬೀಸಿದ ಗುಜರಾತ್‌ ಹೈಕೋರ್ಟ್‌

ಅವರು ಸಿಬ್ಬಂದಿಯೊಂದಿಗೆ ಮರುಪರಿಶೀಲಿಸುವಂತೆ ಹೇಳಿದರೂ, ಅವರು ಅದನ್ನು ಮಾಂಸಾಹಾರಿ ಆಹಾರವಲ್ಲ, ಸಸ್ಯಾಹಾರಿ ಆಹಾರ ಎಂದು ಅವರಿಗೆ ಭರವಸೆ ನೀಡಿ ಅವರಿಗೆ ನೀಡಿದ್ದಾಗಿ ದೂರಿದ್ದಾರೆ. “ತಮ್ಮ ತಪ್ಪಿಗಾಗಿ ಸಿಬ್ಬಂದಿ ಕ್ಷಮೆಯಾಚಿಸಲಿಲ್ಲ, ವಾಸ್ತವವಾಗಿ, ಪ್ರಯಾಣದುದ್ದಕ್ಕೂ ನನಗೆ ಕಿರುಕುಳ ನೀಡಿದರು” ಎಂದು ಅವರು ಹೇಳಿದ್ದಾರೆ.

ಈ ಘಟನೆಯ ನಂತರ ತನಿಖೆಯನ್ನು ಪ್ರಾರಂಭಿಸಲಾಗಿದ್ದು, ಏರ್ ಇಂಡಿಯಾದ ಟೋಕಿಯೊದಿಂದ ದೆಹಲಿ ವಿಮಾನದ ಸಿಬ್ಬಂದಿಗೆ ಹಾರಾಟವನ್ನು ನಿಷೇಧಿಸಲಾಗಿದೆ. ಆಹಾರವನ್ನು ಒತ್ತಾಯ ಮಾಡಿ ತಿನ್ನಿಸಿರುವ ವಿವಾದದ ನಡುವೆ ಜೈನ ಸಮುದಾಯ ಮತ್ತು ಗುಜರಾತ್ ಪ್ರಾಣಿ ಕಲ್ಯಾಣ ಮಂಡಳಿಗಳು ವಿಮಾನಗಳಲ್ಲಿ ಮಾಂಸದ ಊಟವನ್ನು ನಿಷೇಧಿಸುವಂತೆ ಸರ್ಕಾರಕ್ಕೆ ಪತ್ರವನ್ನು ಬರೆದಿದೆ.

ಹಿಂದಿನ ವಾರವಷ್ಟೆ, ದಕ್ಷಿಣ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (SDMC) ನವರಾತ್ರಿ ಹಬ್ಬದ 9 ದಿನಗಳ ಕಾಲ ಪುರಸಭೆಯ ವ್ಯಾಪ್ತಿಯಲ್ಲಿರುವ ಮಾಂಸದ ಅಂಗಡಿಗಳನ್ನು ಮುಚ್ಚುವಂತೆ ಆದೇಶಿಸಿದೆ. ಇದರ ಬೆನ್ನಲ್ಲೇ, ಪೂರ್ವ ದೆಹಲಿ ಮೇಯರ್ ಶ್ಯಾಮ್ ಸುಂದರ್ ಅಗರ್ವಾಲ್ ಮತ್ತು ಗಾಜಿಯಾಬಾದ್ ಮೇಯರ್ ಆಶಾ ಶರ್ಮಾ ಅವರು ನವರಾತ್ರಿಯಲ್ಲಿ ಮಾಂಸ ಮಾರಾಟ ಮಾಡದಂತೆ ಮತ್ತು ಅಂಗಡಿಗಳನ್ನು ಮುಚ್ಚುವಂತೆ ಮಾಂಸ ಮಾರಾಟಗಾರರಿಗೆ ಸೂಚಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಮಾಂಸಾಹಾರದ ಮೇಲಿನ ಕೀಳರಿಮೆ ತೊಲಗಬೇಕಿದೆ: ಚಿತ್ರಸಾಹಿತಿ ಕವಿರಾಜ್‌ ಬರಹಕ್ಕೆ ಮಿಡಿದ ಕನ್ನಡಿಗರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...