Homeಕರ್ನಾಟಕಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಯಿತು.

- Advertisement -
- Advertisement -

ಅಗ್ರಹಾರ ಕೃಷ್ಣಮೂರ್ತಿಯವರಿಗೆ ಸಿಗಬೇಕಾದ ನಿವೃತ್ತಿಯ ನಂತರದ ಸೌಲಭ್ಯಗಳನ್ನು ನೀಡುವಂತೆ ಮತ್ತು ಅವರ ಮೇಲೆ ಹೊರಿಸಿರುವ ಆರೋಪಗಳನ್ನು ತಳ್ಳಿಹಾಕುವಂತೆ ಕರ್ನಾಟಕದಲ್ಲಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರು ಸೇರಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಗಿತ್ತು.

ಕೃಷ್ಣಮೂರ್ತಿ ಅಕಾಡೆಮಿಯ ಆರೋಪಗಳನ್ನು ಪ್ರಶ್ನಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ನ್ಯಾಯಾಂಗ ಹೋರಾಟದಲ್ಲಿ ಉಚ್ಚ ನ್ಯಾಯಾಲಯವು ಕೃಷ್ಣಮೂರ್ತಿ ಮೇಲಿದ್ದ ಆರೋಪಗಳನ್ನು ತಳ್ಳಿಹಾಕಿತ್ತು. ಇದರಿಂದ ಅವರು ದೋಷಮುಕ್ತರಾಗಿದ್ದಾರೆ.

ಚಿಂತಕರು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಬರೆದ ಪತ್ರದಲ್ಲಿ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲೆ ಹೊರಿಸಿದ್ದ ಆರೋಪಗಳ ವಿಚಾರವಾಗಿ ಅವರು ಏಳು ವರ್ಷಗಳ ಕಾಲ ಮಾನಸಿಕ ನೋವು ಅನುಭವಿಸಿದ್ದರು. ತತ್ಸಂಬಂಧ ಅವರ ಆರೋಗ್ಯ ಕೆಟ್ಟು ದೈಹಿಕವಾಗಿ ಜರ್ಜರಿತರಾಗಿದ್ದಾರೆ ಎಂದು ಹೇಳಿದೆ.

“ನಿವೃತ್ತಿಯ ನಂತರದ ಸೌಲಭ್ಯಗಳು ಬಾರದೆ ಇದ್ದುದರಿಂದ ಆರ್ಥಿಕವಾಗಿಯೂ ಸಂಕಷ್ಟಕ್ಕೆ ಸಿಲುಕಿದರು. ಸಾಹಿತ್ಯ ಅಕಾಡೆಮಿಯ ಉನ್ನತ ಹುದ್ದೆಯಲ್ಲಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲಿದ್ದ ಆರೋಪಗಳ ಕಾರಣ ನಿವೃತ್ತಿಯ ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸ್ವಾಯತ್ತ ಸಂಸ್ಥೆಗಳಲ್ಲಿ ತಮ್ಮ ಸೇವೆ ಮುಂದುವರೆಸಬಹುದಾದ ಬಹುದೊಡ್ಡ ಅವಕಾಶಗಳಿಂದಲೂ ವಂಚಿತರಾದರು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ ಇಷ್ಟೆಲ್ಲಾ ನೋವುಂಡ ಅಗ್ರಹಾರ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನಿಂದ ಒದಗಿದ ನ್ಯಾಯವೂ ಅವರ ಪಾಲಿಗೆ ಇಲ್ಲವಾಯಿತು ಎಂದು ಪತ್ರವು ಆರೋಪಿಸಿದೆ.

ಉಚ್ಚ ನ್ಯಾಯಾಲಯದ ತೀರ್ಪಿನಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಅವರ ನಿವೃತ್ತಿ ಸೌಲಭ್ಯಗಳನ್ನು ನೀಡದೆ ಮತ್ತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಅದರಿಂದ ಘಾಸಿಗೊಂಡ ಕೃಷ್ಣಮೂರ್ತಿಯವರಿಗೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪತ್ರವು ಹೇಳಿದೆ.

ಕನ್ನಡ ಸಾರಸ್ವತ ಲೋಕದ ಚಿಂತಕರಲ್ಲಿ ಒಬ್ಬರಾದ ಕೃಷ್ಣಮೂರ್ತಿ ಅವರ ವಿಶ್ರಾಂತ ಬದುಕಿನಲ್ಲಿ ಇಂತಹ ನೋವುಣ್ಣುವ ಪರಿಸ್ಥಿತಿ ಅವರ ಪಾಲಿಗೆ ಬಂದಿರುವುದಕ್ಕೆ ಪತ್ರವು ಅತ್ಯಂತ ಖೇದ ಹಾಗೂ ದುಃಖ ವ್ಯಕ್ತಪಡಿಸಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಾಡಿನ ಹಿರಿಯರೂ ಕನ್ನಡಿಗರೂ ಆದ ಡಾ.ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಈ ಸಂದರ್ಭದಲ್ಲಿ ಕನ್ನಡಿಗರೇ ಆದ ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಿಕ್ಕ ನ್ಯಾಯವನ್ನು ಅಕಾಡೆಮಿ ಮರು ಪ್ರಶ್ನಿಸುವ ಸನ್ನಿವೇಶ ಬರಬಾರದಿತ್ತು ಎಂದಿರುವ ಪತ್ರವು ಮೇಲ್ಮನವಿ ಸಲ್ಲಿಸಿರುವ ವಿಷಯದ ಬಗ್ಗೆ ಮಾನವೀಯತೆಯ ಹಿನ್ನೆಲೆಯಲ್ಲಿ, ಸತ್ಯ ಸಂಗತಿಗಳ ಮುನ್ನೆಲೆಯಲ್ಲಿ ಮೇಲ್ಮನವಿಯನ್ನು ಹಿಂಪಡೆದು ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡಬೇಕೆಂದು ಪತ್ರವು ಆಗ್ರಹಿಸಿದೆ.

ಪತ್ರಕ್ಕೆ ಬರಗೂರು ರಾಮಚಂದ್ರಪ್ಪ, ಕೆ. ಮರುಳಸಿದ್ದಪ್ಪ, ಡಾ.ಎಲ್. ಹನುಮಂತಯ್ಯ, ಡಾ. ವಿಜಯಮ್ಮ, ಹೆಚ್.ಎಸ್. ಶಿವಪ್ರಕಾಶ್, ಕಾಳೇಗೌಡ ನಾಗಾವರ, ಡಾ. ರಾಜೇಂದ್ರ ಚನ್ನಿ, ಸಿ.ಎಸ್. ದ್ವಾರಕನಾಥ್, ಬಿ.ಟಿ.ವೆಂಕಟೇಶ್ ಕೇಶವರೆಡ್ಡಿ ಹಂದ್ರಾಳ ಹೆಚ್.ಆರ್. ಸ್ವಾಮಿ, ಕುಂ. ವೀರಭದ್ರಪ್ಪ, ಶ್ರೀನಿವಾಸ್ ಜಿ ಕಪ್ಪಣ್ಣ, ಪುರುಷೋತ್ತಮ್ ಬಿಳಿಮಲೆ,  ಆಶಾದೇವಿ ಎಂ.ಎಸ್., ಸಿ. ಬಸವಲಿಂಗಯ್ಯ, ಕವಿತಾ ಲಂಕೇಶ್ಕೆ. ನೀಲಾ, ಎಲ್.ಎನ್ ಮುಕುಂದರಾಜ್, ಷರೀಫಾ, ದಿನೇಶ್ ಅಮೀನ್‌ಮಟ್ಟು, ಡಿ.ಉಮಾಪತಿ, ಎಸ್.ಹೆಚ್.ರೆಡ್ಡಿ, ಬಸವರಾಜು ಮುಂತಾದವರು ಸೇರಿದಂತೆ ಕರ್ನಾಟಕದ 50 ಕ್ಕೂ ಹೆಚ್ಚು ಲೇಖಕರು, ಚಿಂತಕರು, ಹೋರಾಟಗಾರರು ಹಾಗೂ ಕವಿಗಳು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...