Homeಕರ್ನಾಟಕಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಯಿತು.

- Advertisement -
- Advertisement -

ಅಗ್ರಹಾರ ಕೃಷ್ಣಮೂರ್ತಿಯವರಿಗೆ ಸಿಗಬೇಕಾದ ನಿವೃತ್ತಿಯ ನಂತರದ ಸೌಲಭ್ಯಗಳನ್ನು ನೀಡುವಂತೆ ಮತ್ತು ಅವರ ಮೇಲೆ ಹೊರಿಸಿರುವ ಆರೋಪಗಳನ್ನು ತಳ್ಳಿಹಾಕುವಂತೆ ಕರ್ನಾಟಕದಲ್ಲಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರು ಸೇರಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಗಿತ್ತು.

ಕೃಷ್ಣಮೂರ್ತಿ ಅಕಾಡೆಮಿಯ ಆರೋಪಗಳನ್ನು ಪ್ರಶ್ನಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ನ್ಯಾಯಾಂಗ ಹೋರಾಟದಲ್ಲಿ ಉಚ್ಚ ನ್ಯಾಯಾಲಯವು ಕೃಷ್ಣಮೂರ್ತಿ ಮೇಲಿದ್ದ ಆರೋಪಗಳನ್ನು ತಳ್ಳಿಹಾಕಿತ್ತು. ಇದರಿಂದ ಅವರು ದೋಷಮುಕ್ತರಾಗಿದ್ದಾರೆ.

ಚಿಂತಕರು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಬರೆದ ಪತ್ರದಲ್ಲಿ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲೆ ಹೊರಿಸಿದ್ದ ಆರೋಪಗಳ ವಿಚಾರವಾಗಿ ಅವರು ಏಳು ವರ್ಷಗಳ ಕಾಲ ಮಾನಸಿಕ ನೋವು ಅನುಭವಿಸಿದ್ದರು. ತತ್ಸಂಬಂಧ ಅವರ ಆರೋಗ್ಯ ಕೆಟ್ಟು ದೈಹಿಕವಾಗಿ ಜರ್ಜರಿತರಾಗಿದ್ದಾರೆ ಎಂದು ಹೇಳಿದೆ.

“ನಿವೃತ್ತಿಯ ನಂತರದ ಸೌಲಭ್ಯಗಳು ಬಾರದೆ ಇದ್ದುದರಿಂದ ಆರ್ಥಿಕವಾಗಿಯೂ ಸಂಕಷ್ಟಕ್ಕೆ ಸಿಲುಕಿದರು. ಸಾಹಿತ್ಯ ಅಕಾಡೆಮಿಯ ಉನ್ನತ ಹುದ್ದೆಯಲ್ಲಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲಿದ್ದ ಆರೋಪಗಳ ಕಾರಣ ನಿವೃತ್ತಿಯ ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸ್ವಾಯತ್ತ ಸಂಸ್ಥೆಗಳಲ್ಲಿ ತಮ್ಮ ಸೇವೆ ಮುಂದುವರೆಸಬಹುದಾದ ಬಹುದೊಡ್ಡ ಅವಕಾಶಗಳಿಂದಲೂ ವಂಚಿತರಾದರು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ ಇಷ್ಟೆಲ್ಲಾ ನೋವುಂಡ ಅಗ್ರಹಾರ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನಿಂದ ಒದಗಿದ ನ್ಯಾಯವೂ ಅವರ ಪಾಲಿಗೆ ಇಲ್ಲವಾಯಿತು ಎಂದು ಪತ್ರವು ಆರೋಪಿಸಿದೆ.

ಉಚ್ಚ ನ್ಯಾಯಾಲಯದ ತೀರ್ಪಿನಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಅವರ ನಿವೃತ್ತಿ ಸೌಲಭ್ಯಗಳನ್ನು ನೀಡದೆ ಮತ್ತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಅದರಿಂದ ಘಾಸಿಗೊಂಡ ಕೃಷ್ಣಮೂರ್ತಿಯವರಿಗೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪತ್ರವು ಹೇಳಿದೆ.

ಕನ್ನಡ ಸಾರಸ್ವತ ಲೋಕದ ಚಿಂತಕರಲ್ಲಿ ಒಬ್ಬರಾದ ಕೃಷ್ಣಮೂರ್ತಿ ಅವರ ವಿಶ್ರಾಂತ ಬದುಕಿನಲ್ಲಿ ಇಂತಹ ನೋವುಣ್ಣುವ ಪರಿಸ್ಥಿತಿ ಅವರ ಪಾಲಿಗೆ ಬಂದಿರುವುದಕ್ಕೆ ಪತ್ರವು ಅತ್ಯಂತ ಖೇದ ಹಾಗೂ ದುಃಖ ವ್ಯಕ್ತಪಡಿಸಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಾಡಿನ ಹಿರಿಯರೂ ಕನ್ನಡಿಗರೂ ಆದ ಡಾ.ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಈ ಸಂದರ್ಭದಲ್ಲಿ ಕನ್ನಡಿಗರೇ ಆದ ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಿಕ್ಕ ನ್ಯಾಯವನ್ನು ಅಕಾಡೆಮಿ ಮರು ಪ್ರಶ್ನಿಸುವ ಸನ್ನಿವೇಶ ಬರಬಾರದಿತ್ತು ಎಂದಿರುವ ಪತ್ರವು ಮೇಲ್ಮನವಿ ಸಲ್ಲಿಸಿರುವ ವಿಷಯದ ಬಗ್ಗೆ ಮಾನವೀಯತೆಯ ಹಿನ್ನೆಲೆಯಲ್ಲಿ, ಸತ್ಯ ಸಂಗತಿಗಳ ಮುನ್ನೆಲೆಯಲ್ಲಿ ಮೇಲ್ಮನವಿಯನ್ನು ಹಿಂಪಡೆದು ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡಬೇಕೆಂದು ಪತ್ರವು ಆಗ್ರಹಿಸಿದೆ.

ಪತ್ರಕ್ಕೆ ಬರಗೂರು ರಾಮಚಂದ್ರಪ್ಪ, ಕೆ. ಮರುಳಸಿದ್ದಪ್ಪ, ಡಾ.ಎಲ್. ಹನುಮಂತಯ್ಯ, ಡಾ. ವಿಜಯಮ್ಮ, ಹೆಚ್.ಎಸ್. ಶಿವಪ್ರಕಾಶ್, ಕಾಳೇಗೌಡ ನಾಗಾವರ, ಡಾ. ರಾಜೇಂದ್ರ ಚನ್ನಿ, ಸಿ.ಎಸ್. ದ್ವಾರಕನಾಥ್, ಬಿ.ಟಿ.ವೆಂಕಟೇಶ್ ಕೇಶವರೆಡ್ಡಿ ಹಂದ್ರಾಳ ಹೆಚ್.ಆರ್. ಸ್ವಾಮಿ, ಕುಂ. ವೀರಭದ್ರಪ್ಪ, ಶ್ರೀನಿವಾಸ್ ಜಿ ಕಪ್ಪಣ್ಣ, ಪುರುಷೋತ್ತಮ್ ಬಿಳಿಮಲೆ,  ಆಶಾದೇವಿ ಎಂ.ಎಸ್., ಸಿ. ಬಸವಲಿಂಗಯ್ಯ, ಕವಿತಾ ಲಂಕೇಶ್ಕೆ. ನೀಲಾ, ಎಲ್.ಎನ್ ಮುಕುಂದರಾಜ್, ಷರೀಫಾ, ದಿನೇಶ್ ಅಮೀನ್‌ಮಟ್ಟು, ಡಿ.ಉಮಾಪತಿ, ಎಸ್.ಹೆಚ್.ರೆಡ್ಡಿ, ಬಸವರಾಜು ಮುಂತಾದವರು ಸೇರಿದಂತೆ ಕರ್ನಾಟಕದ 50 ಕ್ಕೂ ಹೆಚ್ಚು ಲೇಖಕರು, ಚಿಂತಕರು, ಹೋರಾಟಗಾರರು ಹಾಗೂ ಕವಿಗಳು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...