Homeಕರ್ನಾಟಕಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಯಿತು.

- Advertisement -
- Advertisement -

ಅಗ್ರಹಾರ ಕೃಷ್ಣಮೂರ್ತಿಯವರಿಗೆ ಸಿಗಬೇಕಾದ ನಿವೃತ್ತಿಯ ನಂತರದ ಸೌಲಭ್ಯಗಳನ್ನು ನೀಡುವಂತೆ ಮತ್ತು ಅವರ ಮೇಲೆ ಹೊರಿಸಿರುವ ಆರೋಪಗಳನ್ನು ತಳ್ಳಿಹಾಕುವಂತೆ ಕರ್ನಾಟಕದಲ್ಲಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರು ಸೇರಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಗಿತ್ತು.

ಕೃಷ್ಣಮೂರ್ತಿ ಅಕಾಡೆಮಿಯ ಆರೋಪಗಳನ್ನು ಪ್ರಶ್ನಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ನ್ಯಾಯಾಂಗ ಹೋರಾಟದಲ್ಲಿ ಉಚ್ಚ ನ್ಯಾಯಾಲಯವು ಕೃಷ್ಣಮೂರ್ತಿ ಮೇಲಿದ್ದ ಆರೋಪಗಳನ್ನು ತಳ್ಳಿಹಾಕಿತ್ತು. ಇದರಿಂದ ಅವರು ದೋಷಮುಕ್ತರಾಗಿದ್ದಾರೆ.

ಚಿಂತಕರು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಬರೆದ ಪತ್ರದಲ್ಲಿ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲೆ ಹೊರಿಸಿದ್ದ ಆರೋಪಗಳ ವಿಚಾರವಾಗಿ ಅವರು ಏಳು ವರ್ಷಗಳ ಕಾಲ ಮಾನಸಿಕ ನೋವು ಅನುಭವಿಸಿದ್ದರು. ತತ್ಸಂಬಂಧ ಅವರ ಆರೋಗ್ಯ ಕೆಟ್ಟು ದೈಹಿಕವಾಗಿ ಜರ್ಜರಿತರಾಗಿದ್ದಾರೆ ಎಂದು ಹೇಳಿದೆ.

“ನಿವೃತ್ತಿಯ ನಂತರದ ಸೌಲಭ್ಯಗಳು ಬಾರದೆ ಇದ್ದುದರಿಂದ ಆರ್ಥಿಕವಾಗಿಯೂ ಸಂಕಷ್ಟಕ್ಕೆ ಸಿಲುಕಿದರು. ಸಾಹಿತ್ಯ ಅಕಾಡೆಮಿಯ ಉನ್ನತ ಹುದ್ದೆಯಲ್ಲಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲಿದ್ದ ಆರೋಪಗಳ ಕಾರಣ ನಿವೃತ್ತಿಯ ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸ್ವಾಯತ್ತ ಸಂಸ್ಥೆಗಳಲ್ಲಿ ತಮ್ಮ ಸೇವೆ ಮುಂದುವರೆಸಬಹುದಾದ ಬಹುದೊಡ್ಡ ಅವಕಾಶಗಳಿಂದಲೂ ವಂಚಿತರಾದರು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ ಇಷ್ಟೆಲ್ಲಾ ನೋವುಂಡ ಅಗ್ರಹಾರ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನಿಂದ ಒದಗಿದ ನ್ಯಾಯವೂ ಅವರ ಪಾಲಿಗೆ ಇಲ್ಲವಾಯಿತು ಎಂದು ಪತ್ರವು ಆರೋಪಿಸಿದೆ.

ಉಚ್ಚ ನ್ಯಾಯಾಲಯದ ತೀರ್ಪಿನಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಅವರ ನಿವೃತ್ತಿ ಸೌಲಭ್ಯಗಳನ್ನು ನೀಡದೆ ಮತ್ತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಅದರಿಂದ ಘಾಸಿಗೊಂಡ ಕೃಷ್ಣಮೂರ್ತಿಯವರಿಗೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪತ್ರವು ಹೇಳಿದೆ.

ಕನ್ನಡ ಸಾರಸ್ವತ ಲೋಕದ ಚಿಂತಕರಲ್ಲಿ ಒಬ್ಬರಾದ ಕೃಷ್ಣಮೂರ್ತಿ ಅವರ ವಿಶ್ರಾಂತ ಬದುಕಿನಲ್ಲಿ ಇಂತಹ ನೋವುಣ್ಣುವ ಪರಿಸ್ಥಿತಿ ಅವರ ಪಾಲಿಗೆ ಬಂದಿರುವುದಕ್ಕೆ ಪತ್ರವು ಅತ್ಯಂತ ಖೇದ ಹಾಗೂ ದುಃಖ ವ್ಯಕ್ತಪಡಿಸಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಾಡಿನ ಹಿರಿಯರೂ ಕನ್ನಡಿಗರೂ ಆದ ಡಾ.ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಈ ಸಂದರ್ಭದಲ್ಲಿ ಕನ್ನಡಿಗರೇ ಆದ ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಿಕ್ಕ ನ್ಯಾಯವನ್ನು ಅಕಾಡೆಮಿ ಮರು ಪ್ರಶ್ನಿಸುವ ಸನ್ನಿವೇಶ ಬರಬಾರದಿತ್ತು ಎಂದಿರುವ ಪತ್ರವು ಮೇಲ್ಮನವಿ ಸಲ್ಲಿಸಿರುವ ವಿಷಯದ ಬಗ್ಗೆ ಮಾನವೀಯತೆಯ ಹಿನ್ನೆಲೆಯಲ್ಲಿ, ಸತ್ಯ ಸಂಗತಿಗಳ ಮುನ್ನೆಲೆಯಲ್ಲಿ ಮೇಲ್ಮನವಿಯನ್ನು ಹಿಂಪಡೆದು ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡಬೇಕೆಂದು ಪತ್ರವು ಆಗ್ರಹಿಸಿದೆ.

ಪತ್ರಕ್ಕೆ ಬರಗೂರು ರಾಮಚಂದ್ರಪ್ಪ, ಕೆ. ಮರುಳಸಿದ್ದಪ್ಪ, ಡಾ.ಎಲ್. ಹನುಮಂತಯ್ಯ, ಡಾ. ವಿಜಯಮ್ಮ, ಹೆಚ್.ಎಸ್. ಶಿವಪ್ರಕಾಶ್, ಕಾಳೇಗೌಡ ನಾಗಾವರ, ಡಾ. ರಾಜೇಂದ್ರ ಚನ್ನಿ, ಸಿ.ಎಸ್. ದ್ವಾರಕನಾಥ್, ಬಿ.ಟಿ.ವೆಂಕಟೇಶ್ ಕೇಶವರೆಡ್ಡಿ ಹಂದ್ರಾಳ ಹೆಚ್.ಆರ್. ಸ್ವಾಮಿ, ಕುಂ. ವೀರಭದ್ರಪ್ಪ, ಶ್ರೀನಿವಾಸ್ ಜಿ ಕಪ್ಪಣ್ಣ, ಪುರುಷೋತ್ತಮ್ ಬಿಳಿಮಲೆ,  ಆಶಾದೇವಿ ಎಂ.ಎಸ್., ಸಿ. ಬಸವಲಿಂಗಯ್ಯ, ಕವಿತಾ ಲಂಕೇಶ್ಕೆ. ನೀಲಾ, ಎಲ್.ಎನ್ ಮುಕುಂದರಾಜ್, ಷರೀಫಾ, ದಿನೇಶ್ ಅಮೀನ್‌ಮಟ್ಟು, ಡಿ.ಉಮಾಪತಿ, ಎಸ್.ಹೆಚ್.ರೆಡ್ಡಿ, ಬಸವರಾಜು ಮುಂತಾದವರು ಸೇರಿದಂತೆ ಕರ್ನಾಟಕದ 50 ಕ್ಕೂ ಹೆಚ್ಚು ಲೇಖಕರು, ಚಿಂತಕರು, ಹೋರಾಟಗಾರರು ಹಾಗೂ ಕವಿಗಳು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...