Homeಕರ್ನಾಟಕಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಯಿತು.

- Advertisement -
- Advertisement -

ಅಗ್ರಹಾರ ಕೃಷ್ಣಮೂರ್ತಿಯವರಿಗೆ ಸಿಗಬೇಕಾದ ನಿವೃತ್ತಿಯ ನಂತರದ ಸೌಲಭ್ಯಗಳನ್ನು ನೀಡುವಂತೆ ಮತ್ತು ಅವರ ಮೇಲೆ ಹೊರಿಸಿರುವ ಆರೋಪಗಳನ್ನು ತಳ್ಳಿಹಾಕುವಂತೆ ಕರ್ನಾಟಕದಲ್ಲಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರು ಸೇರಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಗಿತ್ತು.

ಕೃಷ್ಣಮೂರ್ತಿ ಅಕಾಡೆಮಿಯ ಆರೋಪಗಳನ್ನು ಪ್ರಶ್ನಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ನ್ಯಾಯಾಂಗ ಹೋರಾಟದಲ್ಲಿ ಉಚ್ಚ ನ್ಯಾಯಾಲಯವು ಕೃಷ್ಣಮೂರ್ತಿ ಮೇಲಿದ್ದ ಆರೋಪಗಳನ್ನು ತಳ್ಳಿಹಾಕಿತ್ತು. ಇದರಿಂದ ಅವರು ದೋಷಮುಕ್ತರಾಗಿದ್ದಾರೆ.

ಚಿಂತಕರು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಬರೆದ ಪತ್ರದಲ್ಲಿ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲೆ ಹೊರಿಸಿದ್ದ ಆರೋಪಗಳ ವಿಚಾರವಾಗಿ ಅವರು ಏಳು ವರ್ಷಗಳ ಕಾಲ ಮಾನಸಿಕ ನೋವು ಅನುಭವಿಸಿದ್ದರು. ತತ್ಸಂಬಂಧ ಅವರ ಆರೋಗ್ಯ ಕೆಟ್ಟು ದೈಹಿಕವಾಗಿ ಜರ್ಜರಿತರಾಗಿದ್ದಾರೆ ಎಂದು ಹೇಳಿದೆ.

“ನಿವೃತ್ತಿಯ ನಂತರದ ಸೌಲಭ್ಯಗಳು ಬಾರದೆ ಇದ್ದುದರಿಂದ ಆರ್ಥಿಕವಾಗಿಯೂ ಸಂಕಷ್ಟಕ್ಕೆ ಸಿಲುಕಿದರು. ಸಾಹಿತ್ಯ ಅಕಾಡೆಮಿಯ ಉನ್ನತ ಹುದ್ದೆಯಲ್ಲಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲಿದ್ದ ಆರೋಪಗಳ ಕಾರಣ ನಿವೃತ್ತಿಯ ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸ್ವಾಯತ್ತ ಸಂಸ್ಥೆಗಳಲ್ಲಿ ತಮ್ಮ ಸೇವೆ ಮುಂದುವರೆಸಬಹುದಾದ ಬಹುದೊಡ್ಡ ಅವಕಾಶಗಳಿಂದಲೂ ವಂಚಿತರಾದರು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ ಇಷ್ಟೆಲ್ಲಾ ನೋವುಂಡ ಅಗ್ರಹಾರ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನಿಂದ ಒದಗಿದ ನ್ಯಾಯವೂ ಅವರ ಪಾಲಿಗೆ ಇಲ್ಲವಾಯಿತು ಎಂದು ಪತ್ರವು ಆರೋಪಿಸಿದೆ.

ಉಚ್ಚ ನ್ಯಾಯಾಲಯದ ತೀರ್ಪಿನಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಅವರ ನಿವೃತ್ತಿ ಸೌಲಭ್ಯಗಳನ್ನು ನೀಡದೆ ಮತ್ತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಅದರಿಂದ ಘಾಸಿಗೊಂಡ ಕೃಷ್ಣಮೂರ್ತಿಯವರಿಗೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪತ್ರವು ಹೇಳಿದೆ.

ಕನ್ನಡ ಸಾರಸ್ವತ ಲೋಕದ ಚಿಂತಕರಲ್ಲಿ ಒಬ್ಬರಾದ ಕೃಷ್ಣಮೂರ್ತಿ ಅವರ ವಿಶ್ರಾಂತ ಬದುಕಿನಲ್ಲಿ ಇಂತಹ ನೋವುಣ್ಣುವ ಪರಿಸ್ಥಿತಿ ಅವರ ಪಾಲಿಗೆ ಬಂದಿರುವುದಕ್ಕೆ ಪತ್ರವು ಅತ್ಯಂತ ಖೇದ ಹಾಗೂ ದುಃಖ ವ್ಯಕ್ತಪಡಿಸಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಾಡಿನ ಹಿರಿಯರೂ ಕನ್ನಡಿಗರೂ ಆದ ಡಾ.ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಈ ಸಂದರ್ಭದಲ್ಲಿ ಕನ್ನಡಿಗರೇ ಆದ ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಿಕ್ಕ ನ್ಯಾಯವನ್ನು ಅಕಾಡೆಮಿ ಮರು ಪ್ರಶ್ನಿಸುವ ಸನ್ನಿವೇಶ ಬರಬಾರದಿತ್ತು ಎಂದಿರುವ ಪತ್ರವು ಮೇಲ್ಮನವಿ ಸಲ್ಲಿಸಿರುವ ವಿಷಯದ ಬಗ್ಗೆ ಮಾನವೀಯತೆಯ ಹಿನ್ನೆಲೆಯಲ್ಲಿ, ಸತ್ಯ ಸಂಗತಿಗಳ ಮುನ್ನೆಲೆಯಲ್ಲಿ ಮೇಲ್ಮನವಿಯನ್ನು ಹಿಂಪಡೆದು ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡಬೇಕೆಂದು ಪತ್ರವು ಆಗ್ರಹಿಸಿದೆ.

ಪತ್ರಕ್ಕೆ ಬರಗೂರು ರಾಮಚಂದ್ರಪ್ಪ, ಕೆ. ಮರುಳಸಿದ್ದಪ್ಪ, ಡಾ.ಎಲ್. ಹನುಮಂತಯ್ಯ, ಡಾ. ವಿಜಯಮ್ಮ, ಹೆಚ್.ಎಸ್. ಶಿವಪ್ರಕಾಶ್, ಕಾಳೇಗೌಡ ನಾಗಾವರ, ಡಾ. ರಾಜೇಂದ್ರ ಚನ್ನಿ, ಸಿ.ಎಸ್. ದ್ವಾರಕನಾಥ್, ಬಿ.ಟಿ.ವೆಂಕಟೇಶ್ ಕೇಶವರೆಡ್ಡಿ ಹಂದ್ರಾಳ ಹೆಚ್.ಆರ್. ಸ್ವಾಮಿ, ಕುಂ. ವೀರಭದ್ರಪ್ಪ, ಶ್ರೀನಿವಾಸ್ ಜಿ ಕಪ್ಪಣ್ಣ, ಪುರುಷೋತ್ತಮ್ ಬಿಳಿಮಲೆ,  ಆಶಾದೇವಿ ಎಂ.ಎಸ್., ಸಿ. ಬಸವಲಿಂಗಯ್ಯ, ಕವಿತಾ ಲಂಕೇಶ್ಕೆ. ನೀಲಾ, ಎಲ್.ಎನ್ ಮುಕುಂದರಾಜ್, ಷರೀಫಾ, ದಿನೇಶ್ ಅಮೀನ್‌ಮಟ್ಟು, ಡಿ.ಉಮಾಪತಿ, ಎಸ್.ಹೆಚ್.ರೆಡ್ಡಿ, ಬಸವರಾಜು ಮುಂತಾದವರು ಸೇರಿದಂತೆ ಕರ್ನಾಟಕದ 50 ಕ್ಕೂ ಹೆಚ್ಚು ಲೇಖಕರು, ಚಿಂತಕರು, ಹೋರಾಟಗಾರರು ಹಾಗೂ ಕವಿಗಳು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...