Homeಕರ್ನಾಟಕಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಅಗ್ರಹಾರ ಕೃಷ್ಣಮೂರ್ತಿ ಪರ ನ್ಯಾಯಕ್ಕಾಗಿ ಆಗ್ರಹಿಸಿ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಿಗೆ ಪತ್ರ

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಯಿತು.

- Advertisement -
- Advertisement -

ಅಗ್ರಹಾರ ಕೃಷ್ಣಮೂರ್ತಿಯವರಿಗೆ ಸಿಗಬೇಕಾದ ನಿವೃತ್ತಿಯ ನಂತರದ ಸೌಲಭ್ಯಗಳನ್ನು ನೀಡುವಂತೆ ಮತ್ತು ಅವರ ಮೇಲೆ ಹೊರಿಸಿರುವ ಆರೋಪಗಳನ್ನು ತಳ್ಳಿಹಾಕುವಂತೆ ಕರ್ನಾಟಕದಲ್ಲಿರುವ ಸಾಹಿತಿಗಳು, ಚಿಂತಕರು ಮತ್ತು ಹೋರಾಟಗಾರರು ಸೇರಿ ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಚಂದ್ರಶೇಖರ ಕಂಬಾರರಿಗೆ ಪತ್ರ ಬರೆದಿದ್ದಾರೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಅಗ್ರಹಾರ ಕೃಷ್ಣಮೂರ್ತಿಯವರು 8 ವರ್ಷಗಳ ಹಿಂದೆ ನಿವೃತ್ತಿಯಾಗಿದ್ದರು. ಆದರೆ ಅವರ ಮೇಲೆ ಕೆಲವು ಆರೋಪಗಳನ್ನು ಹೊರಿಸಿ, ನಿವೃತ್ತಿಯ ನಂತರ ಸಿಗಬೇಕಾದ ಸೌಲಭ್ಯಗಳನ್ನು ತಡೆಹಿಡಿಯಲಾಗಿತ್ತು.

ಕೃಷ್ಣಮೂರ್ತಿ ಅಕಾಡೆಮಿಯ ಆರೋಪಗಳನ್ನು ಪ್ರಶ್ನಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ನ್ಯಾಯಾಂಗ ಹೋರಾಟದಲ್ಲಿ ಉಚ್ಚ ನ್ಯಾಯಾಲಯವು ಕೃಷ್ಣಮೂರ್ತಿ ಮೇಲಿದ್ದ ಆರೋಪಗಳನ್ನು ತಳ್ಳಿಹಾಕಿತ್ತು. ಇದರಿಂದ ಅವರು ದೋಷಮುಕ್ತರಾಗಿದ್ದಾರೆ.

ಚಿಂತಕರು ಕೇಂದ್ರ ಸಾಹಿತ್ಯ ಅಕಾಡೆಮಿಗೆ ಬರೆದ ಪತ್ರದಲ್ಲಿ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲೆ ಹೊರಿಸಿದ್ದ ಆರೋಪಗಳ ವಿಚಾರವಾಗಿ ಅವರು ಏಳು ವರ್ಷಗಳ ಕಾಲ ಮಾನಸಿಕ ನೋವು ಅನುಭವಿಸಿದ್ದರು. ತತ್ಸಂಬಂಧ ಅವರ ಆರೋಗ್ಯ ಕೆಟ್ಟು ದೈಹಿಕವಾಗಿ ಜರ್ಜರಿತರಾಗಿದ್ದಾರೆ ಎಂದು ಹೇಳಿದೆ.

“ನಿವೃತ್ತಿಯ ನಂತರದ ಸೌಲಭ್ಯಗಳು ಬಾರದೆ ಇದ್ದುದರಿಂದ ಆರ್ಥಿಕವಾಗಿಯೂ ಸಂಕಷ್ಟಕ್ಕೆ ಸಿಲುಕಿದರು. ಸಾಹಿತ್ಯ ಅಕಾಡೆಮಿಯ ಉನ್ನತ ಹುದ್ದೆಯಲ್ಲಿದ್ದ ಅಗ್ರಹಾರ ಕೃಷ್ಣಮೂರ್ತಿ ಅವರ ಮೇಲಿದ್ದ ಆರೋಪಗಳ ಕಾರಣ ನಿವೃತ್ತಿಯ ನಂತರ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಸ್ವಾಯತ್ತ ಸಂಸ್ಥೆಗಳಲ್ಲಿ ತಮ್ಮ ಸೇವೆ ಮುಂದುವರೆಸಬಹುದಾದ ಬಹುದೊಡ್ಡ ಅವಕಾಶಗಳಿಂದಲೂ ವಂಚಿತರಾದರು” ಎಂದು ಪತ್ರದಲ್ಲಿ ಬರೆಯಲಾಗಿದೆ.

ಮಾನಸಿಕವಾಗಿ, ದೈಹಿಕವಾಗಿ, ಆರ್ಥಿಕವಾಗಿ ಇಷ್ಟೆಲ್ಲಾ ನೋವುಂಡ ಅಗ್ರಹಾರ ಅವರಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ನೀಡಿದ ತೀರ್ಪಿನಿಂದ ಒದಗಿದ ನ್ಯಾಯವೂ ಅವರ ಪಾಲಿಗೆ ಇಲ್ಲವಾಯಿತು ಎಂದು ಪತ್ರವು ಆರೋಪಿಸಿದೆ.

ಉಚ್ಚ ನ್ಯಾಯಾಲಯದ ತೀರ್ಪಿನಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯು ಅವರ ನಿವೃತ್ತಿ ಸೌಲಭ್ಯಗಳನ್ನು ನೀಡದೆ ಮತ್ತೆ ದ್ವಿಸದಸ್ಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತು. ಅದರಿಂದ ಘಾಸಿಗೊಂಡ ಕೃಷ್ಣಮೂರ್ತಿಯವರಿಗೆ ಆರೋಗ್ಯದಲ್ಲಿ ತೀವ್ರ ಏರುಪೇರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪತ್ರವು ಹೇಳಿದೆ.

ಕನ್ನಡ ಸಾರಸ್ವತ ಲೋಕದ ಚಿಂತಕರಲ್ಲಿ ಒಬ್ಬರಾದ ಕೃಷ್ಣಮೂರ್ತಿ ಅವರ ವಿಶ್ರಾಂತ ಬದುಕಿನಲ್ಲಿ ಇಂತಹ ನೋವುಣ್ಣುವ ಪರಿಸ್ಥಿತಿ ಅವರ ಪಾಲಿಗೆ ಬಂದಿರುವುದಕ್ಕೆ ಪತ್ರವು ಅತ್ಯಂತ ಖೇದ ಹಾಗೂ ದುಃಖ ವ್ಯಕ್ತಪಡಿಸಿದೆ.

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ನಾಡಿನ ಹಿರಿಯರೂ ಕನ್ನಡಿಗರೂ ಆದ ಡಾ.ಚಂದ್ರಶೇಖರ ಕಂಬಾರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿರುವ ಈ ಸಂದರ್ಭದಲ್ಲಿ ಕನ್ನಡಿಗರೇ ಆದ ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಿಕ್ಕ ನ್ಯಾಯವನ್ನು ಅಕಾಡೆಮಿ ಮರು ಪ್ರಶ್ನಿಸುವ ಸನ್ನಿವೇಶ ಬರಬಾರದಿತ್ತು ಎಂದಿರುವ ಪತ್ರವು ಮೇಲ್ಮನವಿ ಸಲ್ಲಿಸಿರುವ ವಿಷಯದ ಬಗ್ಗೆ ಮಾನವೀಯತೆಯ ಹಿನ್ನೆಲೆಯಲ್ಲಿ, ಸತ್ಯ ಸಂಗತಿಗಳ ಮುನ್ನೆಲೆಯಲ್ಲಿ ಮೇಲ್ಮನವಿಯನ್ನು ಹಿಂಪಡೆದು ಅಗ್ರಹಾರ ಕೃಷ್ಣಮೂರ್ತಿ ಅವರಿಗೆ ಸಲ್ಲಬೇಕಾದ ಎಲ್ಲಾ ಸೌಲಭ್ಯಗಳನ್ನು ಕೊಡಬೇಕೆಂದು ಪತ್ರವು ಆಗ್ರಹಿಸಿದೆ.

ಪತ್ರಕ್ಕೆ ಬರಗೂರು ರಾಮಚಂದ್ರಪ್ಪ, ಕೆ. ಮರುಳಸಿದ್ದಪ್ಪ, ಡಾ.ಎಲ್. ಹನುಮಂತಯ್ಯ, ಡಾ. ವಿಜಯಮ್ಮ, ಹೆಚ್.ಎಸ್. ಶಿವಪ್ರಕಾಶ್, ಕಾಳೇಗೌಡ ನಾಗಾವರ, ಡಾ. ರಾಜೇಂದ್ರ ಚನ್ನಿ, ಸಿ.ಎಸ್. ದ್ವಾರಕನಾಥ್, ಬಿ.ಟಿ.ವೆಂಕಟೇಶ್ ಕೇಶವರೆಡ್ಡಿ ಹಂದ್ರಾಳ ಹೆಚ್.ಆರ್. ಸ್ವಾಮಿ, ಕುಂ. ವೀರಭದ್ರಪ್ಪ, ಶ್ರೀನಿವಾಸ್ ಜಿ ಕಪ್ಪಣ್ಣ, ಪುರುಷೋತ್ತಮ್ ಬಿಳಿಮಲೆ,  ಆಶಾದೇವಿ ಎಂ.ಎಸ್., ಸಿ. ಬಸವಲಿಂಗಯ್ಯ, ಕವಿತಾ ಲಂಕೇಶ್ಕೆ. ನೀಲಾ, ಎಲ್.ಎನ್ ಮುಕುಂದರಾಜ್, ಷರೀಫಾ, ದಿನೇಶ್ ಅಮೀನ್‌ಮಟ್ಟು, ಡಿ.ಉಮಾಪತಿ, ಎಸ್.ಹೆಚ್.ರೆಡ್ಡಿ, ಬಸವರಾಜು ಮುಂತಾದವರು ಸೇರಿದಂತೆ ಕರ್ನಾಟಕದ 50 ಕ್ಕೂ ಹೆಚ್ಚು ಲೇಖಕರು, ಚಿಂತಕರು, ಹೋರಾಟಗಾರರು ಹಾಗೂ ಕವಿಗಳು ಸಹಿ ಮಾಡಿದ್ದಾರೆ.


ಇದನ್ನೂ ಓದಿ: ನಮ್ಮ ಸಹಕಾರಕ್ಕೆ ಯಾವುದೆ ಷರತ್ತುಗಳಿಲ್ಲ: ಮಾರಿಷಸ್‌ಗೆ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...