Homeಕರ್ನಾಟಕಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

- Advertisement -
- Advertisement -

“ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು, ಕೇಂದ್ರವು ತನ್ನ ನಿಲುವು ಬದಲಿಸಿಕೊಳ್ಳಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಒತ್ತಾಯಿಸಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಎಷ್ಟು ಮಂದಿ ಸಂಸದರು ಲಿಂಗ, ಲಿಂಗತ್ವ ಸಂಬಂಧಿತ ವಿಚಾರಗಳನ್ನು ಮಾತನಾಡುವಷ್ಟು ಎಜುಕೇಟ್ ಆಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಸಲಿಂಗ ದಂಪತಿಗಳು ತಮ್ಮ ವಿವಾಹದ ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಇತಿಹಾಸದುದ್ದಕ್ಕೂ ಭಿನ್ನಲಿಂಗೀಯ ವಿವಾಹಗಳು ನಡೆದುಬಂದಿವೆ. ಅದು ಪ್ರಭುತ್ವದ ಅಸ್ತಿತ್ವ ಮುಂದುವರಿಕೆಗೆ ಅಡಿಪಾಯವಾಗಿದೆ. ಹಾಗಾಗಿ ಭಿನ್ನಲಿಂಗೀಯ ವಿವಾಹಕ್ಕೆ ನಾವು ಆಸಕ್ತಿ ಹೊಂದಿದ್ದೇವೆಯೇ ಹೊರತು ಸಲಿಂಗ ವಿವಾಹಕ್ಕಲ್ಲ ಎಂದು ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ವಿವಾಹದ ಹಕ್ಕಿಗಾಗಿ ಒತ್ತಾಯಿಸಿ ಪತ್ರ

ಸಮಾನ ವಿವಾಹ ಹಕ್ಕಿಗಾಗಿ ಒತ್ತಾಯಿಸಿ ಸೆಕ್ಸ್ ವರ್ಕರ್ಸ್ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಒಕ್ಕೂಟ (ಸಿಎಸ್‌ಎಂಆರ್) ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮನವಿ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಪತ್ರವನ್ನು ಬರೆಯಲಾಗಿದೆ.

ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ, ಜೀವ ಸಂಸ್ಥೆಯ ಉಮಾ ಉಮೇಶ್‌, ನಮ್ಮ ಪ್ರೈಡ್‌ನ ಅಯಾನ್ ಸೈಯದ್, ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರರಾದ ಕ್ರಿಸ್ಟಿ ರಾಜ್, ರಿಯಾನಾ, ರಕ್ಷಿತಾ ಮತ್ತು ಪಿಯುಸಿಎಲ್ ಕರ್ನಾಟಕ ಅಧ್ಯಕ್ಷ ಅರವಿಂದ್ ನಾರಾಯಣ್ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

“ಸಮಾನತೆಯ ಹಕ್ಕು, ಘನತೆಯ ಹಕ್ಕು ಮತ್ತು ಅಭಿವ್ಯಕ್ತಿಯ ಹಕ್ಕುಗಳು ಸಂವಿಧಾನದಲ್ಲಿ ಅಡಕವಾಗಿವೆ. ಎಲ್‌ಜಿಬಿಟಿಕ್ಯೂ ಸಮುದಾಯದವರು ತಮ್ಮ ಇಷ್ಟದ ವ್ಯಕ್ತಿಯನ್ನು ಮದುವೆಯಾಗುವುದನ್ನು ಈ ಹಕ್ಕುಗಳನ್ನು ಅನುಮೋದಿಸುತ್ತವೆ” ಎಂದು ತಿಳಿಸಲಾಗಿದೆ.

ಸಲಿಂಗ ವಿವಾಹವನ್ನು ವಿರೋಧಿಸಿರುವ ಕೇಂದ್ರದ ಅಫಿಡವಿಟ್‌ನಲ್ಲಿನ ಹಲವಾರು ನ್ಯೂನತೆಗಳನ್ನು ಈ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. “ತನ್ನ LGBTQI ನಾಗರಿಕರಿಗೆ ನೀಡಬೇಕಾದ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ಒಕ್ಕೂಟ ಸರ್ಕಾರ ತೋರುತ್ತಿಲ್ಲ. ತಾರತಮ್ಯದ ವಿವಾಹ ಕಾನೂನುಗಳನ್ನು ಶಾಶ್ವತಗೊಳಿಸಲು ಮುಂದಾಗಿದೆ” ಎಂದು ಆರೋಪಿಸಲಾಗಿದೆ.

“ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಮದುವೆಯಾಗುವ ಎಲ್ಲಾ ವ್ಯಕ್ತಿಗಳ ಹಕ್ಕನ್ನು ಗುರುತಿಸುವ ಈ ಬೇಡಿಕೆಯು ನ್ಯಾಯಯುತವಾಗಿದೆ ಎಂದು ನಾವು ಭಾವಿಸುತ್ತೇವೆ. ಭಾರತೀಯ ಸಂವಿಧಾನದ ಆಶಯವೂ ಇದಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

ಎಲ್ಲಾ ವ್ಯಕ್ತಿಗಳು ಮದುವೆಯಾಗುವ ಹಕ್ಕನ್ನು ಹೊಂದಿದ್ದಾರೆ. ಈ  ಬೇಡಿಕೆಯು ಸುಪ್ರೀಂ ಕೋರ್ಟ್ ವ್ಯಾಖ್ಯಾನಿಸಿದಂತೆ ಭಾರತೀಯ ಸಂವಿಧಾನಿಕ ತತ್ವಗಳನ್ನು ಒಳಗೊಂಡಿದೆ ಎಂದಿರುವ ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರರು ಮಹತ್ವದ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ದುರದೃಷ್ಟವಶಾತ್ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಒಕ್ಕೂಟವು ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಂವಿಧಾನಿಕ ಹಕ್ಕುಗಳು ಇಲ್ಲವಾಗಿವೆ. ಭಾರತ ಒಕ್ಕೂಟವು ತನ್ನ LGBTQI ನಾಗರಿಕರಿಗೆ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...