Homeಕರ್ನಾಟಕಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

- Advertisement -
- Advertisement -

“ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು, ಕೇಂದ್ರವು ತನ್ನ ನಿಲುವು ಬದಲಿಸಿಕೊಳ್ಳಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಒತ್ತಾಯಿಸಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಎಷ್ಟು ಮಂದಿ ಸಂಸದರು ಲಿಂಗ, ಲಿಂಗತ್ವ ಸಂಬಂಧಿತ ವಿಚಾರಗಳನ್ನು ಮಾತನಾಡುವಷ್ಟು ಎಜುಕೇಟ್ ಆಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಸಲಿಂಗ ದಂಪತಿಗಳು ತಮ್ಮ ವಿವಾಹದ ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಇತಿಹಾಸದುದ್ದಕ್ಕೂ ಭಿನ್ನಲಿಂಗೀಯ ವಿವಾಹಗಳು ನಡೆದುಬಂದಿವೆ. ಅದು ಪ್ರಭುತ್ವದ ಅಸ್ತಿತ್ವ ಮುಂದುವರಿಕೆಗೆ ಅಡಿಪಾಯವಾಗಿದೆ. ಹಾಗಾಗಿ ಭಿನ್ನಲಿಂಗೀಯ ವಿವಾಹಕ್ಕೆ ನಾವು ಆಸಕ್ತಿ ಹೊಂದಿದ್ದೇವೆಯೇ ಹೊರತು ಸಲಿಂಗ ವಿವಾಹಕ್ಕಲ್ಲ ಎಂದು ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ವಿವಾಹದ ಹಕ್ಕಿಗಾಗಿ ಒತ್ತಾಯಿಸಿ ಪತ್ರ

ಸಮಾನ ವಿವಾಹ ಹಕ್ಕಿಗಾಗಿ ಒತ್ತಾಯಿಸಿ ಸೆಕ್ಸ್ ವರ್ಕರ್ಸ್ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಒಕ್ಕೂಟ (ಸಿಎಸ್‌ಎಂಆರ್) ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮನವಿ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಪತ್ರವನ್ನು ಬರೆಯಲಾಗಿದೆ.

ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ, ಜೀವ ಸಂಸ್ಥೆಯ ಉಮಾ ಉಮೇಶ್‌, ನಮ್ಮ ಪ್ರೈಡ್‌ನ ಅಯಾನ್ ಸೈಯದ್, ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರರಾದ ಕ್ರಿಸ್ಟಿ ರಾಜ್, ರಿಯಾನಾ, ರಕ್ಷಿತಾ ಮತ್ತು ಪಿಯುಸಿಎಲ್ ಕರ್ನಾಟಕ ಅಧ್ಯಕ್ಷ ಅರವಿಂದ್ ನಾರಾಯಣ್ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

“ಸಮಾನತೆಯ ಹಕ್ಕು, ಘನತೆಯ ಹಕ್ಕು ಮತ್ತು ಅಭಿವ್ಯಕ್ತಿಯ ಹಕ್ಕುಗಳು ಸಂವಿಧಾನದಲ್ಲಿ ಅಡಕವಾಗಿವೆ. ಎಲ್‌ಜಿಬಿಟಿಕ್ಯೂ ಸಮುದಾಯದವರು ತಮ್ಮ ಇಷ್ಟದ ವ್ಯಕ್ತಿಯನ್ನು ಮದುವೆಯಾಗುವುದನ್ನು ಈ ಹಕ್ಕುಗಳನ್ನು ಅನುಮೋದಿಸುತ್ತವೆ” ಎಂದು ತಿಳಿಸಲಾಗಿದೆ.

ಸಲಿಂಗ ವಿವಾಹವನ್ನು ವಿರೋಧಿಸಿರುವ ಕೇಂದ್ರದ ಅಫಿಡವಿಟ್‌ನಲ್ಲಿನ ಹಲವಾರು ನ್ಯೂನತೆಗಳನ್ನು ಈ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. “ತನ್ನ LGBTQI ನಾಗರಿಕರಿಗೆ ನೀಡಬೇಕಾದ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ಒಕ್ಕೂಟ ಸರ್ಕಾರ ತೋರುತ್ತಿಲ್ಲ. ತಾರತಮ್ಯದ ವಿವಾಹ ಕಾನೂನುಗಳನ್ನು ಶಾಶ್ವತಗೊಳಿಸಲು ಮುಂದಾಗಿದೆ” ಎಂದು ಆರೋಪಿಸಲಾಗಿದೆ.

“ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಮದುವೆಯಾಗುವ ಎಲ್ಲಾ ವ್ಯಕ್ತಿಗಳ ಹಕ್ಕನ್ನು ಗುರುತಿಸುವ ಈ ಬೇಡಿಕೆಯು ನ್ಯಾಯಯುತವಾಗಿದೆ ಎಂದು ನಾವು ಭಾವಿಸುತ್ತೇವೆ. ಭಾರತೀಯ ಸಂವಿಧಾನದ ಆಶಯವೂ ಇದಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

ಎಲ್ಲಾ ವ್ಯಕ್ತಿಗಳು ಮದುವೆಯಾಗುವ ಹಕ್ಕನ್ನು ಹೊಂದಿದ್ದಾರೆ. ಈ  ಬೇಡಿಕೆಯು ಸುಪ್ರೀಂ ಕೋರ್ಟ್ ವ್ಯಾಖ್ಯಾನಿಸಿದಂತೆ ಭಾರತೀಯ ಸಂವಿಧಾನಿಕ ತತ್ವಗಳನ್ನು ಒಳಗೊಂಡಿದೆ ಎಂದಿರುವ ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರರು ಮಹತ್ವದ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ದುರದೃಷ್ಟವಶಾತ್ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಒಕ್ಕೂಟವು ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಂವಿಧಾನಿಕ ಹಕ್ಕುಗಳು ಇಲ್ಲವಾಗಿವೆ. ಭಾರತ ಒಕ್ಕೂಟವು ತನ್ನ LGBTQI ನಾಗರಿಕರಿಗೆ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...