Homeಕರ್ನಾಟಕಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

ಸಲಿಂಗ ವಿವಾಹ ಮಾನ್ಯತೆಗಾಗಿ ಸುಪ್ರೀಂಕೋರ್ಟ್‌ಗೆ ಪತ್ರ; ಕೇಂದ್ರದ ನಿಲುವಿಗೆ ವಿರೋಧ

- Advertisement -
- Advertisement -

“ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡುವುದನ್ನು ವಿರೋಧಿಸಿ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ್ದು, ಕೇಂದ್ರವು ತನ್ನ ನಿಲುವು ಬದಲಿಸಿಕೊಳ್ಳಬೇಕು” ಎಂದು ಲಿಂಗತ್ವ ಅಲ್ಪಸಂಖ್ಯಾತರ ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ ಒತ್ತಾಯಿಸಿದ್ದಾರೆ.

ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, “ಎಷ್ಟು ಮಂದಿ ಸಂಸದರು ಲಿಂಗ, ಲಿಂಗತ್ವ ಸಂಬಂಧಿತ ವಿಚಾರಗಳನ್ನು ಮಾತನಾಡುವಷ್ಟು ಎಜುಕೇಟ್ ಆಗಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

ನಾಲ್ವರು ಸಲಿಂಗ ದಂಪತಿಗಳು ತಮ್ಮ ವಿವಾಹದ ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್, ನ್ಯಾಯಮೂರ್ತಿ ಪಿಎಸ್ ನರಸಿಂಹ ಮತ್ತು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರನ್ನೊಳಗೊಂಡ ಪೀಠವು ವಿಚಾರಣೆ ನಡೆಸುತ್ತಿದೆ.

ಇತಿಹಾಸದುದ್ದಕ್ಕೂ ಭಿನ್ನಲಿಂಗೀಯ ವಿವಾಹಗಳು ನಡೆದುಬಂದಿವೆ. ಅದು ಪ್ರಭುತ್ವದ ಅಸ್ತಿತ್ವ ಮುಂದುವರಿಕೆಗೆ ಅಡಿಪಾಯವಾಗಿದೆ. ಹಾಗಾಗಿ ಭಿನ್ನಲಿಂಗೀಯ ವಿವಾಹಕ್ಕೆ ನಾವು ಆಸಕ್ತಿ ಹೊಂದಿದ್ದೇವೆಯೇ ಹೊರತು ಸಲಿಂಗ ವಿವಾಹಕ್ಕಲ್ಲ ಎಂದು ಅಫಿಡವಿಟ್‌ನಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.

ವಿವಾಹದ ಹಕ್ಕಿಗಾಗಿ ಒತ್ತಾಯಿಸಿ ಪತ್ರ

ಸಮಾನ ವಿವಾಹ ಹಕ್ಕಿಗಾಗಿ ಒತ್ತಾಯಿಸಿ ಸೆಕ್ಸ್ ವರ್ಕರ್ಸ್ ಮತ್ತು ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಒಕ್ಕೂಟ (ಸಿಎಸ್‌ಎಂಆರ್) ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮನವಿ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಸುಪ್ರೀಂ ಕೋರ್ಟ್‌ಗೆ ಪತ್ರವನ್ನು ಬರೆಯಲಾಗಿದೆ.

ಹೋರಾಟಗಾರ್ತಿ ಅಕ್ಕಯ್ ಪದ್ಮಶಾಲಿ, ಜೀವ ಸಂಸ್ಥೆಯ ಉಮಾ ಉಮೇಶ್‌, ನಮ್ಮ ಪ್ರೈಡ್‌ನ ಅಯಾನ್ ಸೈಯದ್, ಟ್ರಾನ್ಸ್‌ಜೆಂಡರ್ ಹಕ್ಕುಗಳ ಹೋರಾಟಗಾರರಾದ ಕ್ರಿಸ್ಟಿ ರಾಜ್, ರಿಯಾನಾ, ರಕ್ಷಿತಾ ಮತ್ತು ಪಿಯುಸಿಎಲ್ ಕರ್ನಾಟಕ ಅಧ್ಯಕ್ಷ ಅರವಿಂದ್ ನಾರಾಯಣ್ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.

“ಸಮಾನತೆಯ ಹಕ್ಕು, ಘನತೆಯ ಹಕ್ಕು ಮತ್ತು ಅಭಿವ್ಯಕ್ತಿಯ ಹಕ್ಕುಗಳು ಸಂವಿಧಾನದಲ್ಲಿ ಅಡಕವಾಗಿವೆ. ಎಲ್‌ಜಿಬಿಟಿಕ್ಯೂ ಸಮುದಾಯದವರು ತಮ್ಮ ಇಷ್ಟದ ವ್ಯಕ್ತಿಯನ್ನು ಮದುವೆಯಾಗುವುದನ್ನು ಈ ಹಕ್ಕುಗಳನ್ನು ಅನುಮೋದಿಸುತ್ತವೆ” ಎಂದು ತಿಳಿಸಲಾಗಿದೆ.

ಸಲಿಂಗ ವಿವಾಹವನ್ನು ವಿರೋಧಿಸಿರುವ ಕೇಂದ್ರದ ಅಫಿಡವಿಟ್‌ನಲ್ಲಿನ ಹಲವಾರು ನ್ಯೂನತೆಗಳನ್ನು ಈ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. “ತನ್ನ LGBTQI ನಾಗರಿಕರಿಗೆ ನೀಡಬೇಕಾದ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ಒಕ್ಕೂಟ ಸರ್ಕಾರ ತೋರುತ್ತಿಲ್ಲ. ತಾರತಮ್ಯದ ವಿವಾಹ ಕಾನೂನುಗಳನ್ನು ಶಾಶ್ವತಗೊಳಿಸಲು ಮುಂದಾಗಿದೆ” ಎಂದು ಆರೋಪಿಸಲಾಗಿದೆ.

“ಕಾನೂನಿನ ಚೌಕಟ್ಟಿನ ಅಡಿಯಲ್ಲಿ ಮದುವೆಯಾಗುವ ಎಲ್ಲಾ ವ್ಯಕ್ತಿಗಳ ಹಕ್ಕನ್ನು ಗುರುತಿಸುವ ಈ ಬೇಡಿಕೆಯು ನ್ಯಾಯಯುತವಾಗಿದೆ ಎಂದು ನಾವು ಭಾವಿಸುತ್ತೇವೆ. ಭಾರತೀಯ ಸಂವಿಧಾನದ ಆಶಯವೂ ಇದಾಗಿದೆ” ಎಂದು ಸ್ಪಷ್ಟಪಡಿಸಲಾಗಿದೆ.

ಎಲ್ಲಾ ವ್ಯಕ್ತಿಗಳು ಮದುವೆಯಾಗುವ ಹಕ್ಕನ್ನು ಹೊಂದಿದ್ದಾರೆ. ಈ  ಬೇಡಿಕೆಯು ಸುಪ್ರೀಂ ಕೋರ್ಟ್ ವ್ಯಾಖ್ಯಾನಿಸಿದಂತೆ ಭಾರತೀಯ ಸಂವಿಧಾನಿಕ ತತ್ವಗಳನ್ನು ಒಳಗೊಂಡಿದೆ ಎಂದಿರುವ ಲಿಂಗತ್ವ ಅಲ್ಪಸಂಖ್ಯಾತ ಹೋರಾಟಗಾರರು ಮಹತ್ವದ ಪ್ರಕರಣಗಳನ್ನು ಉಲ್ಲೇಖಿಸಿದ್ದಾರೆ.

ದುರದೃಷ್ಟವಶಾತ್ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಒಕ್ಕೂಟವು ಸಲ್ಲಿಸಿದ ಅಫಿಡವಿಟ್‌ನಲ್ಲಿ ಸಂವಿಧಾನಿಕ ಹಕ್ಕುಗಳು ಇಲ್ಲವಾಗಿವೆ. ಭಾರತ ಒಕ್ಕೂಟವು ತನ್ನ LGBTQI ನಾಗರಿಕರಿಗೆ ಸಮಾನತೆಯ ಹಕ್ಕನ್ನು ಭದ್ರಪಡಿಸುವ ತನ್ನ ಸಾಂವಿಧಾನಿಕ ಬದ್ಧತೆಯನ್ನು ನಿರ್ಲಕ್ಷಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...