Homeಮುಖಪುಟಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

- Advertisement -
- Advertisement -

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಸೈನಿಕರ ವಿಷಯದಲ್ಲಿ ರಾಜಕೀಯ, ನಾಗರಿಕ ಹಾಗೂ ಸೈನ್ಯದ ವಿಫಲತೆ ಹಾಗೂ ಚೀನಾದ ಆಕ್ರಮಣದ ಕುರಿತು ಉತ್ತರ ಕೋರಿ 140 ಕ್ಕೂ ಹೆಚ್ಚು ಮಾಜಿ ವೀರ ಯೋಧರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಚೀನಾ ಗಾಲ್ವಾನ್ ಕಣಿವೆಯ ಮೇಲಿನ ತನ್ನ ಹಕ್ಕನ್ನು ದೃಢವಾಗಿ ಹೇಳುತ್ತಿರುವಾಗ, ಭಾರತೀಯ ಭೂಪ್ರದೇಶದೊಳಗೆ ಯಾರೂ ಪ್ರವೇಶಿಸಿಲ್ಲ ಹಾಗೂ ಯಾವುದೇ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯ ಜೂನ್ 19 ರ ಹೇಳಿಕೆಯನ್ನು ಪತ್ರವು ಪ್ರಶ್ನಿಸಿದೆ.

ಆ ವಿವಾದಾತ್ಮಕ ಹೇಳಿಕೆ ಕುರಿತು ಘರ್ಷಣೆಯ ನಂತರದ ಪರಿಸ್ಥಿತಿಯನ್ನು ಮೋದಿ ಉಲ್ಲೇಖಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಒಂದು ದಿನದ ನಂತರ ಸ್ಪಷ್ಟೀಕರಣವನ್ನು ನೀಡಿದ್ದರೂ, ನಿವೃತ್ತ ಸೈನಿಕ ಅಧಿಕಾರಿಗಳು ಅದನ್ನು ಪ್ರಶ್ನಿಸಿದ್ದಾರೆ. ಜೂನ್ 15 ರ ನಂತರವೂ ಚೀನಾದ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಉಪಗ್ರಹ ಚಿತ್ರಗಳು ಮತ್ತು ಸ್ಥಳೀಯ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಿ ಕಚೇರಿ ನೀಡಿದ ಸ್ಪಷ್ಟೀಕರಣ ಹೇಳಿಕೆಗಳ ವಿರೋಧಾಭಾಸಗಳಿಂದಾಗಿ ಚೀನಾ ಹೇಗೆ ಅನುಕೂಲ ಪಡೆಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಒಳನುಸುಳುವಿಕೆಗಳು, ಆಕ್ರಮಣಗಳು ಮತ್ತು ಅತಿಕ್ರಮಣಗಳ ಕುರಿತು ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಪತ್ರವು ಪ್ರಧಾನಿ ಹಾಗೂ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆದ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಅಲ್ಲದೆ ಈ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕೆಂದು ಕೇಳಿದೆ.

ಪತ್ರವನ್ನು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ಅವರು ಬರೆದಿದ್ದು, ಅದಕ್ಕೆ 143 ಮಾಜಿ ಯೋಧರು ಅನುಮೋದಿಸಿದ್ದಾರೆ. ಈ ಪತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರೂ ಸೇನಾ ಮುಖ್ಯಸ್ಥರಿಗೆ ಕೂಡಾ ಕಳಿಸಲಾಗಿದೆ.

ಗಡಿ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಹೆಚ್ಚಿನ ಸ್ಪಷ್ಟತೆ ನೀಡುವಂತೆ ಒತ್ತಾಯಿಸಿರುವ ಪತ್ರವು, ವಿರೋಧಿ ರಾಷ್ಟ್ರಗಳು ಲಾಭಪಡೆಯುವಂತಹ ವಿರೋಧಾಭಾಸ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದೆ.

ಅಲ್ಲದೆ ಭಾರತವನ್ನು ಜಾತ್ಯಾತೀತ ಆಧಾರದಲ್ಲಿ ಮಾತ್ರ ದೃಢವಾಗಿ ಕಟ್ಟಲು ಸಾಧ್ಯ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದ್ದು, ಧರ್ಮ ಹಾಗೂ ಜಾತಿಗಳ ಆಧಾರದಲ್ಲಿ ವಿಭಜಿಸುವ ನೀತಿಯನ್ನು ಬಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

“ನಾವು ಯಾವುದೇ ಗುಂಪು ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪ್ರತಿಯೊಬ್ಬರೂ ಈ ಹೇಳಿಕೆ ನೀಡುವಾಗ ದೇಶದ ಹಾಗೂ ನಮ್ಮ ಸಶಸ್ತ್ರ ಪಡೆಗಳ ಹಿತಾಸಕ್ತಿಯನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ನಮ್ಮ ಗೌರವಾನ್ವಿತ ಅಭಿಪ್ರಾಯ, ವಿನಂತಿಗಳು ಮತ್ತು ತುರ್ತುಗಳನ್ನು ಆ ವಿಚಾರದಲ್ಲಿ ಮಾತ್ರ ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ನೇತೃತ್ವದ 150 ಕ್ಕೂ ಹೆಚ್ಚು ಯೋಧರು ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.


ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...