Homeಮುಖಪುಟಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

- Advertisement -
- Advertisement -

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಸೈನಿಕರ ವಿಷಯದಲ್ಲಿ ರಾಜಕೀಯ, ನಾಗರಿಕ ಹಾಗೂ ಸೈನ್ಯದ ವಿಫಲತೆ ಹಾಗೂ ಚೀನಾದ ಆಕ್ರಮಣದ ಕುರಿತು ಉತ್ತರ ಕೋರಿ 140 ಕ್ಕೂ ಹೆಚ್ಚು ಮಾಜಿ ವೀರ ಯೋಧರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಚೀನಾ ಗಾಲ್ವಾನ್ ಕಣಿವೆಯ ಮೇಲಿನ ತನ್ನ ಹಕ್ಕನ್ನು ದೃಢವಾಗಿ ಹೇಳುತ್ತಿರುವಾಗ, ಭಾರತೀಯ ಭೂಪ್ರದೇಶದೊಳಗೆ ಯಾರೂ ಪ್ರವೇಶಿಸಿಲ್ಲ ಹಾಗೂ ಯಾವುದೇ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯ ಜೂನ್ 19 ರ ಹೇಳಿಕೆಯನ್ನು ಪತ್ರವು ಪ್ರಶ್ನಿಸಿದೆ.

ಆ ವಿವಾದಾತ್ಮಕ ಹೇಳಿಕೆ ಕುರಿತು ಘರ್ಷಣೆಯ ನಂತರದ ಪರಿಸ್ಥಿತಿಯನ್ನು ಮೋದಿ ಉಲ್ಲೇಖಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಒಂದು ದಿನದ ನಂತರ ಸ್ಪಷ್ಟೀಕರಣವನ್ನು ನೀಡಿದ್ದರೂ, ನಿವೃತ್ತ ಸೈನಿಕ ಅಧಿಕಾರಿಗಳು ಅದನ್ನು ಪ್ರಶ್ನಿಸಿದ್ದಾರೆ. ಜೂನ್ 15 ರ ನಂತರವೂ ಚೀನಾದ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಉಪಗ್ರಹ ಚಿತ್ರಗಳು ಮತ್ತು ಸ್ಥಳೀಯ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಿ ಕಚೇರಿ ನೀಡಿದ ಸ್ಪಷ್ಟೀಕರಣ ಹೇಳಿಕೆಗಳ ವಿರೋಧಾಭಾಸಗಳಿಂದಾಗಿ ಚೀನಾ ಹೇಗೆ ಅನುಕೂಲ ಪಡೆಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಒಳನುಸುಳುವಿಕೆಗಳು, ಆಕ್ರಮಣಗಳು ಮತ್ತು ಅತಿಕ್ರಮಣಗಳ ಕುರಿತು ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಪತ್ರವು ಪ್ರಧಾನಿ ಹಾಗೂ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆದ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಅಲ್ಲದೆ ಈ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕೆಂದು ಕೇಳಿದೆ.

ಪತ್ರವನ್ನು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ಅವರು ಬರೆದಿದ್ದು, ಅದಕ್ಕೆ 143 ಮಾಜಿ ಯೋಧರು ಅನುಮೋದಿಸಿದ್ದಾರೆ. ಈ ಪತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರೂ ಸೇನಾ ಮುಖ್ಯಸ್ಥರಿಗೆ ಕೂಡಾ ಕಳಿಸಲಾಗಿದೆ.

ಗಡಿ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಹೆಚ್ಚಿನ ಸ್ಪಷ್ಟತೆ ನೀಡುವಂತೆ ಒತ್ತಾಯಿಸಿರುವ ಪತ್ರವು, ವಿರೋಧಿ ರಾಷ್ಟ್ರಗಳು ಲಾಭಪಡೆಯುವಂತಹ ವಿರೋಧಾಭಾಸ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದೆ.

ಅಲ್ಲದೆ ಭಾರತವನ್ನು ಜಾತ್ಯಾತೀತ ಆಧಾರದಲ್ಲಿ ಮಾತ್ರ ದೃಢವಾಗಿ ಕಟ್ಟಲು ಸಾಧ್ಯ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದ್ದು, ಧರ್ಮ ಹಾಗೂ ಜಾತಿಗಳ ಆಧಾರದಲ್ಲಿ ವಿಭಜಿಸುವ ನೀತಿಯನ್ನು ಬಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

“ನಾವು ಯಾವುದೇ ಗುಂಪು ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪ್ರತಿಯೊಬ್ಬರೂ ಈ ಹೇಳಿಕೆ ನೀಡುವಾಗ ದೇಶದ ಹಾಗೂ ನಮ್ಮ ಸಶಸ್ತ್ರ ಪಡೆಗಳ ಹಿತಾಸಕ್ತಿಯನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ನಮ್ಮ ಗೌರವಾನ್ವಿತ ಅಭಿಪ್ರಾಯ, ವಿನಂತಿಗಳು ಮತ್ತು ತುರ್ತುಗಳನ್ನು ಆ ವಿಚಾರದಲ್ಲಿ ಮಾತ್ರ ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ನೇತೃತ್ವದ 150 ಕ್ಕೂ ಹೆಚ್ಚು ಯೋಧರು ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.


ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...