Homeಮುಖಪುಟಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

- Advertisement -
- Advertisement -

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಸೈನಿಕರ ವಿಷಯದಲ್ಲಿ ರಾಜಕೀಯ, ನಾಗರಿಕ ಹಾಗೂ ಸೈನ್ಯದ ವಿಫಲತೆ ಹಾಗೂ ಚೀನಾದ ಆಕ್ರಮಣದ ಕುರಿತು ಉತ್ತರ ಕೋರಿ 140 ಕ್ಕೂ ಹೆಚ್ಚು ಮಾಜಿ ವೀರ ಯೋಧರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಚೀನಾ ಗಾಲ್ವಾನ್ ಕಣಿವೆಯ ಮೇಲಿನ ತನ್ನ ಹಕ್ಕನ್ನು ದೃಢವಾಗಿ ಹೇಳುತ್ತಿರುವಾಗ, ಭಾರತೀಯ ಭೂಪ್ರದೇಶದೊಳಗೆ ಯಾರೂ ಪ್ರವೇಶಿಸಿಲ್ಲ ಹಾಗೂ ಯಾವುದೇ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯ ಜೂನ್ 19 ರ ಹೇಳಿಕೆಯನ್ನು ಪತ್ರವು ಪ್ರಶ್ನಿಸಿದೆ.

ಆ ವಿವಾದಾತ್ಮಕ ಹೇಳಿಕೆ ಕುರಿತು ಘರ್ಷಣೆಯ ನಂತರದ ಪರಿಸ್ಥಿತಿಯನ್ನು ಮೋದಿ ಉಲ್ಲೇಖಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಒಂದು ದಿನದ ನಂತರ ಸ್ಪಷ್ಟೀಕರಣವನ್ನು ನೀಡಿದ್ದರೂ, ನಿವೃತ್ತ ಸೈನಿಕ ಅಧಿಕಾರಿಗಳು ಅದನ್ನು ಪ್ರಶ್ನಿಸಿದ್ದಾರೆ. ಜೂನ್ 15 ರ ನಂತರವೂ ಚೀನಾದ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಉಪಗ್ರಹ ಚಿತ್ರಗಳು ಮತ್ತು ಸ್ಥಳೀಯ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಿ ಕಚೇರಿ ನೀಡಿದ ಸ್ಪಷ್ಟೀಕರಣ ಹೇಳಿಕೆಗಳ ವಿರೋಧಾಭಾಸಗಳಿಂದಾಗಿ ಚೀನಾ ಹೇಗೆ ಅನುಕೂಲ ಪಡೆಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಒಳನುಸುಳುವಿಕೆಗಳು, ಆಕ್ರಮಣಗಳು ಮತ್ತು ಅತಿಕ್ರಮಣಗಳ ಕುರಿತು ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಪತ್ರವು ಪ್ರಧಾನಿ ಹಾಗೂ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆದ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಅಲ್ಲದೆ ಈ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕೆಂದು ಕೇಳಿದೆ.

ಪತ್ರವನ್ನು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ಅವರು ಬರೆದಿದ್ದು, ಅದಕ್ಕೆ 143 ಮಾಜಿ ಯೋಧರು ಅನುಮೋದಿಸಿದ್ದಾರೆ. ಈ ಪತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರೂ ಸೇನಾ ಮುಖ್ಯಸ್ಥರಿಗೆ ಕೂಡಾ ಕಳಿಸಲಾಗಿದೆ.

ಗಡಿ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಹೆಚ್ಚಿನ ಸ್ಪಷ್ಟತೆ ನೀಡುವಂತೆ ಒತ್ತಾಯಿಸಿರುವ ಪತ್ರವು, ವಿರೋಧಿ ರಾಷ್ಟ್ರಗಳು ಲಾಭಪಡೆಯುವಂತಹ ವಿರೋಧಾಭಾಸ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದೆ.

ಅಲ್ಲದೆ ಭಾರತವನ್ನು ಜಾತ್ಯಾತೀತ ಆಧಾರದಲ್ಲಿ ಮಾತ್ರ ದೃಢವಾಗಿ ಕಟ್ಟಲು ಸಾಧ್ಯ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದ್ದು, ಧರ್ಮ ಹಾಗೂ ಜಾತಿಗಳ ಆಧಾರದಲ್ಲಿ ವಿಭಜಿಸುವ ನೀತಿಯನ್ನು ಬಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

“ನಾವು ಯಾವುದೇ ಗುಂಪು ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪ್ರತಿಯೊಬ್ಬರೂ ಈ ಹೇಳಿಕೆ ನೀಡುವಾಗ ದೇಶದ ಹಾಗೂ ನಮ್ಮ ಸಶಸ್ತ್ರ ಪಡೆಗಳ ಹಿತಾಸಕ್ತಿಯನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ನಮ್ಮ ಗೌರವಾನ್ವಿತ ಅಭಿಪ್ರಾಯ, ವಿನಂತಿಗಳು ಮತ್ತು ತುರ್ತುಗಳನ್ನು ಆ ವಿಚಾರದಲ್ಲಿ ಮಾತ್ರ ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ನೇತೃತ್ವದ 150 ಕ್ಕೂ ಹೆಚ್ಚು ಯೋಧರು ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.


ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...