Homeಮುಖಪುಟಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

- Advertisement -
- Advertisement -

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಸೈನಿಕರ ವಿಷಯದಲ್ಲಿ ರಾಜಕೀಯ, ನಾಗರಿಕ ಹಾಗೂ ಸೈನ್ಯದ ವಿಫಲತೆ ಹಾಗೂ ಚೀನಾದ ಆಕ್ರಮಣದ ಕುರಿತು ಉತ್ತರ ಕೋರಿ 140 ಕ್ಕೂ ಹೆಚ್ಚು ಮಾಜಿ ವೀರ ಯೋಧರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಚೀನಾ ಗಾಲ್ವಾನ್ ಕಣಿವೆಯ ಮೇಲಿನ ತನ್ನ ಹಕ್ಕನ್ನು ದೃಢವಾಗಿ ಹೇಳುತ್ತಿರುವಾಗ, ಭಾರತೀಯ ಭೂಪ್ರದೇಶದೊಳಗೆ ಯಾರೂ ಪ್ರವೇಶಿಸಿಲ್ಲ ಹಾಗೂ ಯಾವುದೇ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯ ಜೂನ್ 19 ರ ಹೇಳಿಕೆಯನ್ನು ಪತ್ರವು ಪ್ರಶ್ನಿಸಿದೆ.

ಆ ವಿವಾದಾತ್ಮಕ ಹೇಳಿಕೆ ಕುರಿತು ಘರ್ಷಣೆಯ ನಂತರದ ಪರಿಸ್ಥಿತಿಯನ್ನು ಮೋದಿ ಉಲ್ಲೇಖಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಒಂದು ದಿನದ ನಂತರ ಸ್ಪಷ್ಟೀಕರಣವನ್ನು ನೀಡಿದ್ದರೂ, ನಿವೃತ್ತ ಸೈನಿಕ ಅಧಿಕಾರಿಗಳು ಅದನ್ನು ಪ್ರಶ್ನಿಸಿದ್ದಾರೆ. ಜೂನ್ 15 ರ ನಂತರವೂ ಚೀನಾದ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಉಪಗ್ರಹ ಚಿತ್ರಗಳು ಮತ್ತು ಸ್ಥಳೀಯ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಿ ಕಚೇರಿ ನೀಡಿದ ಸ್ಪಷ್ಟೀಕರಣ ಹೇಳಿಕೆಗಳ ವಿರೋಧಾಭಾಸಗಳಿಂದಾಗಿ ಚೀನಾ ಹೇಗೆ ಅನುಕೂಲ ಪಡೆಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಒಳನುಸುಳುವಿಕೆಗಳು, ಆಕ್ರಮಣಗಳು ಮತ್ತು ಅತಿಕ್ರಮಣಗಳ ಕುರಿತು ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಪತ್ರವು ಪ್ರಧಾನಿ ಹಾಗೂ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆದ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಅಲ್ಲದೆ ಈ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕೆಂದು ಕೇಳಿದೆ.

ಪತ್ರವನ್ನು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ಅವರು ಬರೆದಿದ್ದು, ಅದಕ್ಕೆ 143 ಮಾಜಿ ಯೋಧರು ಅನುಮೋದಿಸಿದ್ದಾರೆ. ಈ ಪತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರೂ ಸೇನಾ ಮುಖ್ಯಸ್ಥರಿಗೆ ಕೂಡಾ ಕಳಿಸಲಾಗಿದೆ.

ಗಡಿ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಹೆಚ್ಚಿನ ಸ್ಪಷ್ಟತೆ ನೀಡುವಂತೆ ಒತ್ತಾಯಿಸಿರುವ ಪತ್ರವು, ವಿರೋಧಿ ರಾಷ್ಟ್ರಗಳು ಲಾಭಪಡೆಯುವಂತಹ ವಿರೋಧಾಭಾಸ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದೆ.

ಅಲ್ಲದೆ ಭಾರತವನ್ನು ಜಾತ್ಯಾತೀತ ಆಧಾರದಲ್ಲಿ ಮಾತ್ರ ದೃಢವಾಗಿ ಕಟ್ಟಲು ಸಾಧ್ಯ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದ್ದು, ಧರ್ಮ ಹಾಗೂ ಜಾತಿಗಳ ಆಧಾರದಲ್ಲಿ ವಿಭಜಿಸುವ ನೀತಿಯನ್ನು ಬಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

“ನಾವು ಯಾವುದೇ ಗುಂಪು ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪ್ರತಿಯೊಬ್ಬರೂ ಈ ಹೇಳಿಕೆ ನೀಡುವಾಗ ದೇಶದ ಹಾಗೂ ನಮ್ಮ ಸಶಸ್ತ್ರ ಪಡೆಗಳ ಹಿತಾಸಕ್ತಿಯನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ನಮ್ಮ ಗೌರವಾನ್ವಿತ ಅಭಿಪ್ರಾಯ, ವಿನಂತಿಗಳು ಮತ್ತು ತುರ್ತುಗಳನ್ನು ಆ ವಿಚಾರದಲ್ಲಿ ಮಾತ್ರ ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ನೇತೃತ್ವದ 150 ಕ್ಕೂ ಹೆಚ್ಚು ಯೋಧರು ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.


ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...