Homeಮುಖಪುಟಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

- Advertisement -
- Advertisement -

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಸೈನಿಕರ ವಿಷಯದಲ್ಲಿ ರಾಜಕೀಯ, ನಾಗರಿಕ ಹಾಗೂ ಸೈನ್ಯದ ವಿಫಲತೆ ಹಾಗೂ ಚೀನಾದ ಆಕ್ರಮಣದ ಕುರಿತು ಉತ್ತರ ಕೋರಿ 140 ಕ್ಕೂ ಹೆಚ್ಚು ಮಾಜಿ ವೀರ ಯೋಧರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಚೀನಾ ಗಾಲ್ವಾನ್ ಕಣಿವೆಯ ಮೇಲಿನ ತನ್ನ ಹಕ್ಕನ್ನು ದೃಢವಾಗಿ ಹೇಳುತ್ತಿರುವಾಗ, ಭಾರತೀಯ ಭೂಪ್ರದೇಶದೊಳಗೆ ಯಾರೂ ಪ್ರವೇಶಿಸಿಲ್ಲ ಹಾಗೂ ಯಾವುದೇ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯ ಜೂನ್ 19 ರ ಹೇಳಿಕೆಯನ್ನು ಪತ್ರವು ಪ್ರಶ್ನಿಸಿದೆ.

ಆ ವಿವಾದಾತ್ಮಕ ಹೇಳಿಕೆ ಕುರಿತು ಘರ್ಷಣೆಯ ನಂತರದ ಪರಿಸ್ಥಿತಿಯನ್ನು ಮೋದಿ ಉಲ್ಲೇಖಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಒಂದು ದಿನದ ನಂತರ ಸ್ಪಷ್ಟೀಕರಣವನ್ನು ನೀಡಿದ್ದರೂ, ನಿವೃತ್ತ ಸೈನಿಕ ಅಧಿಕಾರಿಗಳು ಅದನ್ನು ಪ್ರಶ್ನಿಸಿದ್ದಾರೆ. ಜೂನ್ 15 ರ ನಂತರವೂ ಚೀನಾದ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಉಪಗ್ರಹ ಚಿತ್ರಗಳು ಮತ್ತು ಸ್ಥಳೀಯ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಿ ಕಚೇರಿ ನೀಡಿದ ಸ್ಪಷ್ಟೀಕರಣ ಹೇಳಿಕೆಗಳ ವಿರೋಧಾಭಾಸಗಳಿಂದಾಗಿ ಚೀನಾ ಹೇಗೆ ಅನುಕೂಲ ಪಡೆಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಒಳನುಸುಳುವಿಕೆಗಳು, ಆಕ್ರಮಣಗಳು ಮತ್ತು ಅತಿಕ್ರಮಣಗಳ ಕುರಿತು ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಪತ್ರವು ಪ್ರಧಾನಿ ಹಾಗೂ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆದ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಅಲ್ಲದೆ ಈ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕೆಂದು ಕೇಳಿದೆ.

ಪತ್ರವನ್ನು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ಅವರು ಬರೆದಿದ್ದು, ಅದಕ್ಕೆ 143 ಮಾಜಿ ಯೋಧರು ಅನುಮೋದಿಸಿದ್ದಾರೆ. ಈ ಪತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರೂ ಸೇನಾ ಮುಖ್ಯಸ್ಥರಿಗೆ ಕೂಡಾ ಕಳಿಸಲಾಗಿದೆ.

ಗಡಿ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಹೆಚ್ಚಿನ ಸ್ಪಷ್ಟತೆ ನೀಡುವಂತೆ ಒತ್ತಾಯಿಸಿರುವ ಪತ್ರವು, ವಿರೋಧಿ ರಾಷ್ಟ್ರಗಳು ಲಾಭಪಡೆಯುವಂತಹ ವಿರೋಧಾಭಾಸ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದೆ.

ಅಲ್ಲದೆ ಭಾರತವನ್ನು ಜಾತ್ಯಾತೀತ ಆಧಾರದಲ್ಲಿ ಮಾತ್ರ ದೃಢವಾಗಿ ಕಟ್ಟಲು ಸಾಧ್ಯ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದ್ದು, ಧರ್ಮ ಹಾಗೂ ಜಾತಿಗಳ ಆಧಾರದಲ್ಲಿ ವಿಭಜಿಸುವ ನೀತಿಯನ್ನು ಬಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

“ನಾವು ಯಾವುದೇ ಗುಂಪು ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪ್ರತಿಯೊಬ್ಬರೂ ಈ ಹೇಳಿಕೆ ನೀಡುವಾಗ ದೇಶದ ಹಾಗೂ ನಮ್ಮ ಸಶಸ್ತ್ರ ಪಡೆಗಳ ಹಿತಾಸಕ್ತಿಯನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ನಮ್ಮ ಗೌರವಾನ್ವಿತ ಅಭಿಪ್ರಾಯ, ವಿನಂತಿಗಳು ಮತ್ತು ತುರ್ತುಗಳನ್ನು ಆ ವಿಚಾರದಲ್ಲಿ ಮಾತ್ರ ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ನೇತೃತ್ವದ 150 ಕ್ಕೂ ಹೆಚ್ಚು ಯೋಧರು ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.


ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...