Homeಮುಖಪುಟಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಗಾಲ್ವನ್‌ ಕುರಿತು ಉತ್ತರಿಸುವಂತೆ 140 ಕ್ಕೂ ಹೆಚ್ಚು ಮಾಜಿ ಯೋಧರಿಂದ ಪ್ರಧಾನಿಗೆ ಪತ್ರ

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

- Advertisement -
- Advertisement -

ಜೂನ್ 15 ರಂದು ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ 20 ಸೈನಿಕರ ವಿಷಯದಲ್ಲಿ ರಾಜಕೀಯ, ನಾಗರಿಕ ಹಾಗೂ ಸೈನ್ಯದ ವಿಫಲತೆ ಹಾಗೂ ಚೀನಾದ ಆಕ್ರಮಣದ ಕುರಿತು ಉತ್ತರ ಕೋರಿ 140 ಕ್ಕೂ ಹೆಚ್ಚು ಮಾಜಿ ವೀರ ಯೋಧರು ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ರಾಮ್‌ನಾಥ್ ಕೋವಿಂದ್ ಅವರಿಗೆ ಪತ್ರ ಬರೆದಿದ್ದಾರೆ.

ಚೀನಾ ಗಾಲ್ವಾನ್ ಕಣಿವೆಯ ಮೇಲಿನ ತನ್ನ ಹಕ್ಕನ್ನು ದೃಢವಾಗಿ ಹೇಳುತ್ತಿರುವಾಗ, ಭಾರತೀಯ ಭೂಪ್ರದೇಶದೊಳಗೆ ಯಾರೂ ಪ್ರವೇಶಿಸಿಲ್ಲ ಹಾಗೂ ಯಾವುದೇ ಭಾರತೀಯ ಪ್ರದೇಶವನ್ನು ಆಕ್ರಮಿಸಿಕೊಂಡಿಲ್ಲ ಎಂಬ ಪ್ರಧಾನಿ ಮೋದಿಯ ಜೂನ್ 19 ರ ಹೇಳಿಕೆಯನ್ನು ಪತ್ರವು ಪ್ರಶ್ನಿಸಿದೆ.

ಆ ವಿವಾದಾತ್ಮಕ ಹೇಳಿಕೆ ಕುರಿತು ಘರ್ಷಣೆಯ ನಂತರದ ಪರಿಸ್ಥಿತಿಯನ್ನು ಮೋದಿ ಉಲ್ಲೇಖಿಸಿದ್ದಾರೆ ಎಂದು ಪ್ರಧಾನ ಮಂತ್ರಿ ಕಚೇರಿ ಒಂದು ದಿನದ ನಂತರ ಸ್ಪಷ್ಟೀಕರಣವನ್ನು ನೀಡಿದ್ದರೂ, ನಿವೃತ್ತ ಸೈನಿಕ ಅಧಿಕಾರಿಗಳು ಅದನ್ನು ಪ್ರಶ್ನಿಸಿದ್ದಾರೆ. ಜೂನ್ 15 ರ ನಂತರವೂ ಚೀನಾದ ಅತಿಕ್ರಮಣವನ್ನು ಮುಂದುವರೆಸಿದೆ ಎಂದು ಉಪಗ್ರಹ ಚಿತ್ರಗಳು ಮತ್ತು ಸ್ಥಳೀಯ ವರದಿಗಳನ್ನು ಅವರು ಉಲ್ಲೇಖಿಸಿದ್ದಾರೆ.

ಪ್ರಧಾನಿ ಕಚೇರಿ ನೀಡಿದ ಸ್ಪಷ್ಟೀಕರಣ ಹೇಳಿಕೆಗಳ ವಿರೋಧಾಭಾಸಗಳಿಂದಾಗಿ ಚೀನಾ ಹೇಗೆ ಅನುಕೂಲ ಪಡೆಯಿತು” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಲಡಾಖ್ ಮತ್ತು ಅರುಣಾಚಲ ಪ್ರದೇಶದಲ್ಲಿ ಚೀನಾದ ಒಳನುಸುಳುವಿಕೆಗಳು, ಆಕ್ರಮಣಗಳು ಮತ್ತು ಅತಿಕ್ರಮಣಗಳ ಕುರಿತು ಸತ್ಯ ಶೋಧನಾ ಸಮಿತಿಯನ್ನು ರಚಿಸುವಂತೆ ಪತ್ರವು ಪ್ರಧಾನಿ ಹಾಗೂ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಆದ ರಾಷ್ಟ್ರಪತಿಯನ್ನು ಒತ್ತಾಯಿಸಿದೆ. ಅಲ್ಲದೆ ಈ ಸಮಿತಿಯ ವರದಿಯನ್ನು ಸಂಸತ್ತಿನಲ್ಲಿ ಮಂಡಿಸಬೇಕೆಂದು ಕೇಳಿದೆ.

ಪತ್ರವನ್ನು ಮಾಜಿ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಎಲ್. ರಾಮದಾಸ್ ಅವರು ಬರೆದಿದ್ದು, ಅದಕ್ಕೆ 143 ಮಾಜಿ ಯೋಧರು ಅನುಮೋದಿಸಿದ್ದಾರೆ. ಈ ಪತ್ರವನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಮೂರೂ ಸೇನಾ ಮುಖ್ಯಸ್ಥರಿಗೆ ಕೂಡಾ ಕಳಿಸಲಾಗಿದೆ.

ಗಡಿ ಪರಿಸ್ಥಿತಿ ಬಗ್ಗೆ ಅಧಿಕಾರಿಗಳಿಂದ ಹೆಚ್ಚಿನ ಸ್ಪಷ್ಟತೆ ನೀಡುವಂತೆ ಒತ್ತಾಯಿಸಿರುವ ಪತ್ರವು, ವಿರೋಧಿ ರಾಷ್ಟ್ರಗಳು ಲಾಭಪಡೆಯುವಂತಹ ವಿರೋಧಾಭಾಸ ಹೇಳಿಕೆಗಳನ್ನು ನೀಡದಂತೆ ಒತ್ತಾಯಿಸಿದೆ.

ಅಲ್ಲದೆ ಭಾರತವನ್ನು ಜಾತ್ಯಾತೀತ ಆಧಾರದಲ್ಲಿ ಮಾತ್ರ ದೃಢವಾಗಿ ಕಟ್ಟಲು ಸಾಧ್ಯ ಎಂದು ಪತ್ರದಲ್ಲಿ ಒತ್ತಿ ಹೇಳಲಾಗಿದ್ದು, ಧರ್ಮ ಹಾಗೂ ಜಾತಿಗಳ ಆಧಾರದಲ್ಲಿ ವಿಭಜಿಸುವ ನೀತಿಯನ್ನು ಬಿಡಬೇಕೆಂದು ಸರ್ಕಾರವನ್ನು ಒತ್ತಾಯಿಸಿದೆ.

ಸಹಿ ಮಾಡಿದ ಎಲ್ಲಾ ಮಾಜಿ ವೀರ ಯೋಧರು ದೇಶದಲ್ಲಿ ಯುದ್ದ ಹಾಗೂ ಶಾಂತಿ ಸಮಯದಲ್ಲಿ ಸೇವೆ ಸಲ್ಲಿಸಿದ ಸಶಸ್ತ್ರ ಪಡೆಗಳ ಪರಿಣಿತರಾಗಿದ್ದಾರೆ.

“ನಾವು ಯಾವುದೇ ಗುಂಪು ಅಥವಾ ರಾಜಕೀಯ ಪಕ್ಷವನ್ನು ಪ್ರತಿನಿಧಿಸುವುದಿಲ್ಲ. ನಾವು ಪ್ರತಿಯೊಬ್ಬರೂ ಈ ಹೇಳಿಕೆ ನೀಡುವಾಗ ದೇಶದ ಹಾಗೂ ನಮ್ಮ ಸಶಸ್ತ್ರ ಪಡೆಗಳ ಹಿತಾಸಕ್ತಿಯನ್ನು ಮಾತ್ರ ಹೊಂದಿದ್ದೇವೆ. ಆದ್ದರಿಂದ, ನಮ್ಮ ಗೌರವಾನ್ವಿತ ಅಭಿಪ್ರಾಯ, ವಿನಂತಿಗಳು ಮತ್ತು ತುರ್ತುಗಳನ್ನು ಆ ವಿಚಾರದಲ್ಲಿ ಮಾತ್ರ ತೆಗೆದುಕೊಳ್ಳಬೇಕೆಂದು ನಾವು ವಿನಂತಿಸುತ್ತೇವೆ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಅಡ್ಮಿರಲ್ ರಾಮದಾಸ್ ನೇತೃತ್ವದ 150 ಕ್ಕೂ ಹೆಚ್ಚು ಯೋಧರು ಕಳೆದ ವರ್ಷದ ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಜಕೀಯ ಉದ್ದೇಶಗಳಿಗಾಗಿ ಸಶಸ್ತ್ರ ಪಡೆಗಳನ್ನು ಬಳಸುವುದನ್ನು ವಿರೋಧಿಸಿ ರಾಷ್ಟ್ರಪತಿಗೆ ಪತ್ರ ಬರೆದಿದ್ದರು.


ಓದಿ: ಯುಪಿ ಸರ್ಕಾರ ಕುಸಿಯದಂತೆ ತಡೆಯಲು ವಿಕಾಸ್ ದುಬೆ ಹತ್ಯೆ: ವಿರೋಧ ಪಕ್ಷಗಳ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....