Homeಮುಖಪುಟಮಗಳಿಗೆ ತಂದೆಯ ಓಲೆಗಳು : ಇಂದಿರಾಗೆ ಜವಹರಲಾಲ್ ನೆಹರು ಪತ್ರಗಳು

ಮಗಳಿಗೆ ತಂದೆಯ ಓಲೆಗಳು : ಇಂದಿರಾಗೆ ಜವಹರಲಾಲ್ ನೆಹರು ಪತ್ರಗಳು

- Advertisement -
- Advertisement -

ನೆಹರು ಮತ್ತು ಕಮಲಾರವರ ಮಗಳಾದ ಇಂದಿರಾ ಬಾಲ್ಯದಲ್ಲಿ ಏಕಾಂಗಿಯಾಗಿ ದಿನಗಳನ್ನು ಕಳೆದವರು. ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ತಾಯಿಯ ಜೊತೆ ಅಲಹಾಬಾದಿನ ಆನಂದಭವನದಲ್ಲಿ ವಾಸ. ತಂದೆಯೋ ಸ್ವಾತಂತ್ರ್ಯ ಚಳವಳಿಯ ಮುಖ್ಯ ಭಾಗ. ರಾಜಕೀಯ, ಬಂಧನ ಮತ್ತು ಹೋರಾಟಗಳ ಕಾರಣಗಳಿಂದಾಗಿ ಮಗಳ ಜೊತೆಗೆ “ಕ್ವಾಲಿಟಿ ಟೈಂ” ಎಂದಿಗೂ ಕೊಡಲಾಗುತ್ತಿರಲಿಲ್ಲ. ಇಂದಿರಾಗೆ ಹುಟ್ಟಿದ ಒಬ್ಬ ತಮ್ಮನೋ ಬಲು ಬೇಗ ಕಣ್ಮುಚ್ಚಿದ. ರವೀಂದ್ರನಾಥ್ ಠಾಗೋರರ ಶಾಂತಿನಿಕೇತನವೂ ಸೇರಿದಂತೆ ಶಾಲೆಗೆಂದು ಹೋದರೂ ನಾನಾ ಕಾರಣಗಳಿಂದ ಶಾಲೆಗಳನ್ನು ಪದೇ ಪದೇ ಬದಲಾಯಿಸಬೇಕಾಗುತ್ತಿತ್ತು. ಕೊನೆಗೆ ಠಾಗೋರರ ಶಾಂತಿನಿಕೇತನ, ವಿಶ್ವಭಾರತಿ ವಿಶ್ವವಿದ್ಯಾಲಯವಾಗಿ ಯೂನಿವರ್ಸಿಟಿ ಆಫ್ ಆಕ್ಸ್‍ಫರ್ಡ್‍ಗೆ ಶೈಕ್ಷಣಿಕವಾಗಿ ಸೇರ್ಪಡೆಯಾದ್ದರಿಂದ ಇಂದಿರಾ ಪದವಿಯನ್ನು ಪಡೆದಿದ್ದು ಅಲ್ಲಿಂದಲೇ. ಇಷ್ಟೆಲ್ಲದರ ಜೊತೆಗೆ ಅವರ ಆರೋಗ್ಯವೂ ಕೆಡುತ್ತಿದ್ದರಿಂದ ಪದೇಪದೇ ಚಿಕಿತ್ಸೆಗಾಗಿ ಸ್ವಿಜರ್‍ಲೆಂಡ್‍ಗೆ ಹೋಗುತ್ತಿದ್ದರು.

ಇವು ಔಪಚಾರಿಕ ಶಿಕ್ಷಣವನ್ನು ಪಡೆಯಲು ಇಂದಿರಾ ಎದುರಿಸುತ್ತಿದ್ದ ಅಡ್ಡಿ ಆತಂಕಗಳು. ಅಕಾಡೆಮಿಕ್ ಆಗಿ ಇಂದಿರಾ ಉತ್ತಮವಾದ ಮೇಲ್ಗೈಯನ್ನು ಸಾಧಿಸಿದ್ದು ಅಷ್ಟಕಷ್ಟೇ ಆಗಿದ್ದರೂ ಬಹು ಸುಶಿಕ್ಷಿತ ವ್ಯಕ್ತಿಯಾಗಿ ರೂಪುಗೊಂಡಿದ್ದು ತಂದೆ ನೀಡಿದ ಅನೌಪಚಾರಿಕ ಶಿಕ್ಷಣದಿಂದ.
ಸ್ವಾತಂತ್ರ್ಯ ಹೋರಾಟದಲ್ಲಿ, ರಾಜಕೀಯವಾಗಿ ಸಕ್ರಿಯವಾಗಿದ್ದ ನೆಹರು ನೇರವಾಗಿ ಮಗಳ ಜೊತೆಗೆ ಇರಲಾಗದಿದ್ದರೂ ಮಗಳನ್ನು ಸುಶಿಕ್ಷಿತೆಯನ್ನಾಗಿ ಮಾಡುವ ಜವಾಬ್ದಾರಿಯನ್ನು ಹೊಂದಿದ್ದರು. ಅದರ ಸಾಕ್ಷಿಯೇ “ಮಗಳಿಗೆ ತಂದೆಯ ಓಲೆಗಳು.”

10-11 ವರ್ಷದ ಹುಡುಗಿಗೆ ನೈನಿತಾಲ್ ಜೈಲಿನಿಂದ ಬರೆದಿರುವ ಈ ಪತ್ರಗಳು ಜಗತ್ತಿನ ಚರಿತ್ರೆಯನ್ನು, ಮಾನವನ ಸಾಂಸ್ಕೃತಿಕ ಮತ್ತು ಸಾಮಾಜಿಕ ಜೀವನದ ವಿಕಾಸವನ್ನು ತೆರೆದಿಡುತ್ತಾ ಹೋಗುತ್ತದೆ. ಇದು ಆ ಕಾಲಘಟ್ಟದ ಒಂದು ಸಂಕ್ಷಿಪ್ತ ವಿಶ್ವಕೋಶ. ಬರೆದಿರುವುದೋ ಮಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡಿರುವುದಾದರೂ ತಮ್ಮ ಈ ಪತ್ರಗಳು ಸಂಗ್ರಹ ಯೋಗ್ಯವಾಗಿ ಮುಂದೊಂದು ದಿನ ಅತ್ಯುತ್ತಮ ಪುಸ್ತಕಗಳ ಸಾಲಿಗೆ ಸೇರಲಿದೆ ಎಂಬ ದೂರದೃಷ್ಟಿಯೂ ಅವರಿಗಿತ್ತು. ಹಾಗಾಗಿ ಒಂದೇ ಪ್ರಯತ್ನದಲ್ಲಿ ಮಗಳನ್ನು ಸುಶಿಕ್ಷಿತಳನ್ನಾಗಿಸುವುದು ಮತ್ತು ಗ್ರಂಥರಚನೆ ಎರಡಕ್ಕೂ ಆಕರಗಳನ್ನು ಸೃಷ್ಟಿಸಿದರು.

ಭೂಮಿಯ ಉಗಮ, ಸಸ್ಯ, ಪ್ರಾಣಿಗಳ ಸೃಷ್ಟಿ, ಜನಾಂಗಗಳು ಹೇಗೆ ಹುಟ್ಟಿದವು, ನಾಗರಿಕತೆ, ಧರ್ಮಗಳ ಉದಯ ಹೇಗಾಯಿತು, ಪ್ರಾಚೀನಕಾಲದಲ್ಲಿ ಇತಿಹಾಸ ಹೇಗೆ ಬರೆಯಲ್ಪಟ್ಟಿತು, ಒಕ್ಕಲುತನ ಹೇಗೆ ಪ್ರಾರಂಭವಾಯಿತು ಹೀಗೆ ಸಂಕೀರ್ಣವಾದ ವಿಷಯಗಳನ್ನು ಸರಳಶೈಲಿಯ ಪತ್ರಗಳಲ್ಲಿ ಇತಿಹಾಸ, ಮಾನವಶಾಸ್ತ್ರೀಯ ಅಧ್ಯಯನ, ಸಂಸ್ಕೃತಿಗಳ ಪರಿಚಯ, ಭಾಷೆಗಳ ಬಗ್ಗೆ, ಜನಾಂಗಗಳ ಸಂಘರ್ಷ ಮತ್ತು ಬೆರಗುಗಳು ಎಲ್ಲವನ್ನೂ ಹೇಳಿಕೊಡುತ್ತಾರೆ. ಸ್ವಾರಸ್ಯವೆಂದರೆ ತೀರಾ ವಿವರಣೆಗಳಿಂದಲೂ ಕೂಡಿರದೆ, ಹಾಗೆಂದು ಪರಿವಿಡಿಯಂತೆ ಬರಿಯ ಪಟ್ಟಿಯಾಗಿರದೇ ತಿಳಿಯಲೇಬೇಕಾದ ವಿಷಯವನ್ನು ಸಂಕ್ಷಿಪ್ತಗೊಳಿಸಿ ಸಾಂದ್ರಗೊಳಿಸುವಂತಹ ಚಾತುರ್ಯ ಈ ಬರವಣಿಗೆಯಲ್ಲಿದೆ.

ಒಂದು ಹುಡುಗಿ ತನ್ನ ತಂದೆ ತೋರುತ್ತಿರುವ ತನ್ನೆಲ್ಲಾ ಪ್ರೀತಿಯ ಜೊತೆಗೆ ನೀಡುವ ಆದ್ಯತೆಯನ್ನು ಗ್ರಹಿಸಲು ಸಾಧ್ಯವಾಗುತ್ತದೆ. ಜ್ಞಾನ ಮತ್ತು ಸಂವೇದನೆ ಎರಡಕ್ಕೂ ಒತ್ತು ನೀಡಿರುವ ನೆಹರು ಓದುಗನು ಯಾವುದನ್ನು ಸ್ವೀಕರಿಸಬೇಕು, ಹೇಗೆ ಗ್ರಹಿಸಬೇಕು, ಕೆಲವೊಂದರ ಬಗ್ಗೆ ತಿಳಿವಳಿಕೆ ಇದ್ದು ಅವನ್ನು ಹೇಗೆ ನಿರಾಕರಿಸಬೇಕು ಎಂದೂ ಸೂಕ್ಷ್ಮವಾಗಿ ನಿರ್ದೇಶನಗಳನ್ನು ನೀಡಿದ್ದಾರೆ. ತಮ್ಮ ಧೋರಣೆಯನ್ನು ಹೇರದೇ ಅರಿವಿನ ಗ್ರಹಿಕೆಗೆ ಬೇಕಾದ ಸೂಚನೆಗಳಿವು ಎಂಬ ಕಾಳಜಿ ಗುಪ್ತವಾಗಿ ಬರವಣಿಗೆಯ ತಂತ್ರದಲ್ಲಿದೆ ಮತ್ತು ಪದಗಳ ಬಳಕೆಯಲ್ಲಿದೆ. ವಾಕ್ಯಗಳ ರಚನೆಯಲ್ಲಿ ವಿಚಾರವನ್ನೂ, ಬೆರಗನ್ನೂ ಮತ್ತು ನವಿರಾಗಿ ಭಾವುಕತೆಯನ್ನೂ ಬೆಸೆಯುತ್ತಾ ಹೋಗುತ್ತಾರೆ.

ಓದಿನ ಬಗ್ಗೆ, ಜಗತ್ತಿನ ಬಗ್ಗೆ, ಜನರ ಬಗ್ಗೆ, ವಿಸ್ಮಯವನ್ನೂ ಮತ್ತು ಪ್ರೀತಿಯನ್ನೂ ಹುಟ್ಟಿಸುವಂತಹ ಕೃತಿಯಾಗಿ ಇದು ಕಾಣುತ್ತದೆ. ವಿಶೇಷವೆಂದರೆ, ಜಗತ್ತಿನ ಎಲ್ಲ ಜನರಿಗೂ ಮತ್ತು ಓದುತ್ತಿರುವ ನನಗೂ ಸಂಬಂಧವಿದೆ ಎಂಬಂತಹ ಭಾವವಿದೆ. ಈ ಅನೌಪಚಾರಿಕ ಶಿಕ್ಷಣ ಬರಿಯ ಇಂದಿರಾಗೆ ಮಾತ್ರವಲ್ಲ ಯಾವುದೇ ಓದುವ ಪ್ರೀತಿಯುಳ್ಳವನಿಗೆ ಸಂವೇದನೆಯನ್ನು ಉಂಟುಮಾಡಬಲ್ಲದು. ಓದುಗ ಮತ್ತು ಬರಹಗಾರನ ನಡುವೆ ಆತ್ಮೀಯತೆಯನ್ನು ಮೊಳೆಸಬಲ್ಲದು. ಆಪ್ತತೆಯನ್ನು ಬೆಸೆಯಬಲ್ಲದು. ಏನೇ ಆದರೂ ತಂದೆ ಮಗಳಿಗೆ ಬರೆದದ್ದು ಅಲ್ಲವೇ!

ಜಗತ್ತೆಂದರೆ ಹಲವು ರಾಷ್ಟ್ರಗಳ ಒಂದು ದೊಡ್ಡ ಕುಟುಂಬ ಎಂದು ಅರಿವಾಗಲೆಂಬ ನೆಹರೂರವರ ಆಶಯವನ್ನು ಈ ಪತ್ರಗಳ ಸಂಗ್ರಹ ಧ್ವನಿಸುವುದಂತೂ ಸತ್ಯ.

ಪ್ರೀತಿಯ ಇಂದಿರಾ ಎಂದು ಸಂಬೋಧಿಸುತ್ತಾ ಯಾವುದೇ ಕತೆ ಕಾದಂಬರಿಗಿಂತ ರೋಚಕವಾಗಿರುವ ಜಗತ್ತಿನ ಕತೆಯನ್ನು ತೆರೆದಿಡುವ ನೆಹರೂ ಓರ್ವ ತಂದೆಯಾಗಿ ಮಕ್ಕಳ ಶಿಕ್ಷಣದ ವಿಷಯದಲ್ಲಿ ಯಾವ ಪಾತ್ರ ವಹಿಸಬೇಕು ಎಂದು ಮಾದರಿಯಾಗಿ ನಿಲ್ಲುತ್ತಾರೆ.

ನೆಹರು ಮಗಳಿಗೆ ಇಂಗ್ಲಿಷಲ್ಲಿಯೇ ಪತ್ರಗಳನ್ನು ಬರೆದಿದ್ದು. ನಂತರ ಹಿಂದಿಯೇ ಮೊದಲಾದ ಭಾಷೆಗಳಿಗೆ ಅನುವಾದವಾಯ್ತು. ಶ್ರೀ ಕಪಟರಾಳ ಕೃಷ್ಣರಾಯರು ನೆಹರೂ ಜೊತೆಗೆ ಅನೇಕ ಪತ್ರ ವ್ಯವಹಾರಗಳನ್ನು ಮಾಡಿ, ತಪ್ಪುಒಪ್ಪುಗಳನ್ನೆಲ್ಲಾ ಗಮನಿಸಿಕೊಂಡು 1946ರಲ್ಲಿಯೇ ಕನ್ನಡಕ್ಕೆ ತಂದವರು. ಪ್ರಕಾಶಕರು ಹುಬ್ಬಳ್ಳಿಯ ಸಾಹಿತ್ಯ ಭಂಡಾರದ ಮಂಗಳೂರು ಗೋವಿಂದರಾಯರು.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....

‘ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆ..’; ಕೇಂದ್ರದ ಯುಜಿಸಿ ನಿಯಮಗಳನ್ನು ಪ್ರಶಂಸಿದ ಸಿಎಂ ಸ್ಟಾಲಿನ್

ಯುಜಿಸಿ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಈಕ್ವಿಟಿ ಪ್ರಚಾರ) ನಿಯಮಗಳು, 2026 "ಆಳವಾಗಿ ಬೇರೂರಿರುವ ತಾರತಮ್ಯ ಮತ್ತು ಸಾಂಸ್ಥಿಕ ನಿರಾಸಕ್ತಿಯಿಂದ ಬಳಲುತ್ತಿರುವ ಉನ್ನತ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುವಲ್ಲಿ ವಿಳಂಬವಾದರೂ ಸ್ವಾಗತಾರ್ಹ ಹೆಜ್ಜೆಯಾಗಿದೆ" ಎಂದು ತಮಿಳುನಾಡು...