Homeಮುಖಪುಟಮಗಳಿಗೆ ತಂದೆಯ ಓಲೆಗಳು : ಇಂದಿರಾಗೆ ಜವಹರಲಾಲ್ ನೆಹರು ಪತ್ರಗಳು

ಮಗಳಿಗೆ ತಂದೆಯ ಓಲೆಗಳು : ಇಂದಿರಾಗೆ ಜವಹರಲಾಲ್ ನೆಹರು ಪತ್ರಗಳು

- Advertisement -
- Advertisement -

ನೆಹರು ಮತ್ತು ಕಮಲಾರವರ ಮಗಳಾದ ಇಂದಿರಾ ಬಾಲ್ಯದಲ್ಲಿ ಏಕಾಂಗಿಯಾಗಿ ದಿನಗಳನ್ನು ಕಳೆದವರು. ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ತಾಯಿಯ ಜೊತೆ ಅಲಹಾಬಾದಿನ ಆನಂದಭವನದಲ್ಲಿ ವಾಸ. ತಂದೆಯೋ ಸ್ವಾತಂತ್ರ್ಯ ಚಳವಳಿಯ ಮುಖ್ಯ ಭಾಗ. ರಾಜಕೀಯ, ಬಂಧನ ಮತ್ತು ಹೋರಾಟಗಳ ಕಾರಣಗಳಿಂದಾಗಿ ಮಗಳ ಜೊತೆಗೆ “ಕ್ವಾಲಿಟಿ ಟೈಂ” ಎಂದಿಗೂ ಕೊಡಲಾಗುತ್ತಿರಲಿಲ್ಲ. ಇಂದಿರಾಗೆ ಹುಟ್ಟಿದ ಒಬ್ಬ ತಮ್ಮನೋ ಬಲು ಬೇಗ ಕಣ್ಮುಚ್ಚಿದ. ರವೀಂದ್ರನಾಥ್ ಠಾಗೋರರ ಶಾಂತಿನಿಕೇತನವೂ ಸೇರಿದಂತೆ ಶಾಲೆಗೆಂದು ಹೋದರೂ ನಾನಾ ಕಾರಣಗಳಿಂದ ಶಾಲೆಗಳನ್ನು ಪದೇ ಪದೇ ಬದಲಾಯಿಸಬೇಕಾಗುತ್ತಿತ್ತು. ಕೊನೆಗೆ ಠಾಗೋರರ ಶಾಂತಿನಿಕೇತನ, ವಿಶ್ವಭಾರತಿ ವಿಶ್ವವಿದ್ಯಾಲಯವಾಗಿ ಯೂನಿವರ್ಸಿಟಿ ಆಫ್ ಆಕ್ಸ್‍ಫರ್ಡ್‍ಗೆ ಶೈಕ್ಷಣಿಕವಾಗಿ ಸೇರ್ಪಡೆಯಾದ್ದರಿಂದ ಇಂದಿರಾ ಪದವಿಯನ್ನು ಪಡೆದಿದ್ದು ಅಲ್ಲಿಂದಲೇ. ಇಷ್ಟೆಲ್ಲದರ ಜೊತೆಗೆ ಅವರ ಆರೋಗ್ಯವೂ ಕೆಡುತ್ತಿದ್ದರಿಂದ ಪದೇಪದೇ ಚಿಕಿತ್ಸೆಗಾಗಿ ಸ್ವಿಜರ್‍ಲೆಂಡ್‍ಗೆ ಹೋಗುತ್ತಿದ್ದರು.

ಇವು ಔಪಚಾರಿಕ ಶಿಕ್ಷಣವನ್ನು ಪಡೆಯಲು ಇಂದಿರಾ ಎದುರಿಸುತ್ತಿದ್ದ ಅಡ್ಡಿ ಆತಂಕಗಳು. ಅಕಾಡೆಮಿಕ್ ಆಗಿ ಇಂದಿರಾ ಉತ್ತಮವಾದ ಮೇಲ್ಗೈಯನ್ನು ಸಾಧಿಸಿದ್ದು ಅಷ್ಟಕಷ್ಟೇ ಆಗಿದ್ದರೂ ಬಹು ಸುಶಿಕ್ಷಿತ ವ್ಯಕ್ತಿಯಾಗಿ ರೂಪುಗೊಂಡಿದ್ದು ತಂದೆ ನೀಡಿದ ಅನೌಪಚಾರಿಕ ಶಿಕ್ಷಣದಿಂದ.
ಸ್ವಾತಂತ್ರ್ಯ ಹೋರಾಟದಲ್ಲಿ, ರಾಜಕೀಯವಾಗಿ ಸಕ್ರಿಯವಾಗಿದ್ದ ನೆಹರು ನೇರವಾಗಿ ಮಗಳ ಜೊತೆಗೆ ಇರಲಾಗದಿದ್ದರೂ ಮಗಳನ್ನು ಸುಶಿಕ್ಷಿತೆಯನ್ನಾಗಿ ಮಾಡುವ ಜವಾಬ್ದಾರಿಯನ್ನು ಹೊಂದಿದ್ದರು. ಅದರ ಸಾಕ್ಷಿಯೇ “ಮಗಳಿಗೆ ತಂದೆಯ ಓಲೆಗಳು.”

10-11 ವರ್ಷದ ಹುಡುಗಿಗೆ ನೈನಿತಾಲ್ ಜೈಲಿನಿಂದ ಬರೆದಿರುವ ಈ ಪತ್ರಗಳು ಜಗತ್ತಿನ ಚರಿತ್ರೆಯನ್ನು, ಮಾನವನ ಸಾಂಸ್ಕೃತಿಕ ಮತ್ತು ಸಾಮಾಜಿಕ ಜೀವನದ ವಿಕಾಸವನ್ನು ತೆರೆದಿಡುತ್ತಾ ಹೋಗುತ್ತದೆ. ಇದು ಆ ಕಾಲಘಟ್ಟದ ಒಂದು ಸಂಕ್ಷಿಪ್ತ ವಿಶ್ವಕೋಶ. ಬರೆದಿರುವುದೋ ಮಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡಿರುವುದಾದರೂ ತಮ್ಮ ಈ ಪತ್ರಗಳು ಸಂಗ್ರಹ ಯೋಗ್ಯವಾಗಿ ಮುಂದೊಂದು ದಿನ ಅತ್ಯುತ್ತಮ ಪುಸ್ತಕಗಳ ಸಾಲಿಗೆ ಸೇರಲಿದೆ ಎಂಬ ದೂರದೃಷ್ಟಿಯೂ ಅವರಿಗಿತ್ತು. ಹಾಗಾಗಿ ಒಂದೇ ಪ್ರಯತ್ನದಲ್ಲಿ ಮಗಳನ್ನು ಸುಶಿಕ್ಷಿತಳನ್ನಾಗಿಸುವುದು ಮತ್ತು ಗ್ರಂಥರಚನೆ ಎರಡಕ್ಕೂ ಆಕರಗಳನ್ನು ಸೃಷ್ಟಿಸಿದರು.

ಭೂಮಿಯ ಉಗಮ, ಸಸ್ಯ, ಪ್ರಾಣಿಗಳ ಸೃಷ್ಟಿ, ಜನಾಂಗಗಳು ಹೇಗೆ ಹುಟ್ಟಿದವು, ನಾಗರಿಕತೆ, ಧರ್ಮಗಳ ಉದಯ ಹೇಗಾಯಿತು, ಪ್ರಾಚೀನಕಾಲದಲ್ಲಿ ಇತಿಹಾಸ ಹೇಗೆ ಬರೆಯಲ್ಪಟ್ಟಿತು, ಒಕ್ಕಲುತನ ಹೇಗೆ ಪ್ರಾರಂಭವಾಯಿತು ಹೀಗೆ ಸಂಕೀರ್ಣವಾದ ವಿಷಯಗಳನ್ನು ಸರಳಶೈಲಿಯ ಪತ್ರಗಳಲ್ಲಿ ಇತಿಹಾಸ, ಮಾನವಶಾಸ್ತ್ರೀಯ ಅಧ್ಯಯನ, ಸಂಸ್ಕೃತಿಗಳ ಪರಿಚಯ, ಭಾಷೆಗಳ ಬಗ್ಗೆ, ಜನಾಂಗಗಳ ಸಂಘರ್ಷ ಮತ್ತು ಬೆರಗುಗಳು ಎಲ್ಲವನ್ನೂ ಹೇಳಿಕೊಡುತ್ತಾರೆ. ಸ್ವಾರಸ್ಯವೆಂದರೆ ತೀರಾ ವಿವರಣೆಗಳಿಂದಲೂ ಕೂಡಿರದೆ, ಹಾಗೆಂದು ಪರಿವಿಡಿಯಂತೆ ಬರಿಯ ಪಟ್ಟಿಯಾಗಿರದೇ ತಿಳಿಯಲೇಬೇಕಾದ ವಿಷಯವನ್ನು ಸಂಕ್ಷಿಪ್ತಗೊಳಿಸಿ ಸಾಂದ್ರಗೊಳಿಸುವಂತಹ ಚಾತುರ್ಯ ಈ ಬರವಣಿಗೆಯಲ್ಲಿದೆ.

ಒಂದು ಹುಡುಗಿ ತನ್ನ ತಂದೆ ತೋರುತ್ತಿರುವ ತನ್ನೆಲ್ಲಾ ಪ್ರೀತಿಯ ಜೊತೆಗೆ ನೀಡುವ ಆದ್ಯತೆಯನ್ನು ಗ್ರಹಿಸಲು ಸಾಧ್ಯವಾಗುತ್ತದೆ. ಜ್ಞಾನ ಮತ್ತು ಸಂವೇದನೆ ಎರಡಕ್ಕೂ ಒತ್ತು ನೀಡಿರುವ ನೆಹರು ಓದುಗನು ಯಾವುದನ್ನು ಸ್ವೀಕರಿಸಬೇಕು, ಹೇಗೆ ಗ್ರಹಿಸಬೇಕು, ಕೆಲವೊಂದರ ಬಗ್ಗೆ ತಿಳಿವಳಿಕೆ ಇದ್ದು ಅವನ್ನು ಹೇಗೆ ನಿರಾಕರಿಸಬೇಕು ಎಂದೂ ಸೂಕ್ಷ್ಮವಾಗಿ ನಿರ್ದೇಶನಗಳನ್ನು ನೀಡಿದ್ದಾರೆ. ತಮ್ಮ ಧೋರಣೆಯನ್ನು ಹೇರದೇ ಅರಿವಿನ ಗ್ರಹಿಕೆಗೆ ಬೇಕಾದ ಸೂಚನೆಗಳಿವು ಎಂಬ ಕಾಳಜಿ ಗುಪ್ತವಾಗಿ ಬರವಣಿಗೆಯ ತಂತ್ರದಲ್ಲಿದೆ ಮತ್ತು ಪದಗಳ ಬಳಕೆಯಲ್ಲಿದೆ. ವಾಕ್ಯಗಳ ರಚನೆಯಲ್ಲಿ ವಿಚಾರವನ್ನೂ, ಬೆರಗನ್ನೂ ಮತ್ತು ನವಿರಾಗಿ ಭಾವುಕತೆಯನ್ನೂ ಬೆಸೆಯುತ್ತಾ ಹೋಗುತ್ತಾರೆ.

ಓದಿನ ಬಗ್ಗೆ, ಜಗತ್ತಿನ ಬಗ್ಗೆ, ಜನರ ಬಗ್ಗೆ, ವಿಸ್ಮಯವನ್ನೂ ಮತ್ತು ಪ್ರೀತಿಯನ್ನೂ ಹುಟ್ಟಿಸುವಂತಹ ಕೃತಿಯಾಗಿ ಇದು ಕಾಣುತ್ತದೆ. ವಿಶೇಷವೆಂದರೆ, ಜಗತ್ತಿನ ಎಲ್ಲ ಜನರಿಗೂ ಮತ್ತು ಓದುತ್ತಿರುವ ನನಗೂ ಸಂಬಂಧವಿದೆ ಎಂಬಂತಹ ಭಾವವಿದೆ. ಈ ಅನೌಪಚಾರಿಕ ಶಿಕ್ಷಣ ಬರಿಯ ಇಂದಿರಾಗೆ ಮಾತ್ರವಲ್ಲ ಯಾವುದೇ ಓದುವ ಪ್ರೀತಿಯುಳ್ಳವನಿಗೆ ಸಂವೇದನೆಯನ್ನು ಉಂಟುಮಾಡಬಲ್ಲದು. ಓದುಗ ಮತ್ತು ಬರಹಗಾರನ ನಡುವೆ ಆತ್ಮೀಯತೆಯನ್ನು ಮೊಳೆಸಬಲ್ಲದು. ಆಪ್ತತೆಯನ್ನು ಬೆಸೆಯಬಲ್ಲದು. ಏನೇ ಆದರೂ ತಂದೆ ಮಗಳಿಗೆ ಬರೆದದ್ದು ಅಲ್ಲವೇ!

ಜಗತ್ತೆಂದರೆ ಹಲವು ರಾಷ್ಟ್ರಗಳ ಒಂದು ದೊಡ್ಡ ಕುಟುಂಬ ಎಂದು ಅರಿವಾಗಲೆಂಬ ನೆಹರೂರವರ ಆಶಯವನ್ನು ಈ ಪತ್ರಗಳ ಸಂಗ್ರಹ ಧ್ವನಿಸುವುದಂತೂ ಸತ್ಯ.

ಪ್ರೀತಿಯ ಇಂದಿರಾ ಎಂದು ಸಂಬೋಧಿಸುತ್ತಾ ಯಾವುದೇ ಕತೆ ಕಾದಂಬರಿಗಿಂತ ರೋಚಕವಾಗಿರುವ ಜಗತ್ತಿನ ಕತೆಯನ್ನು ತೆರೆದಿಡುವ ನೆಹರೂ ಓರ್ವ ತಂದೆಯಾಗಿ ಮಕ್ಕಳ ಶಿಕ್ಷಣದ ವಿಷಯದಲ್ಲಿ ಯಾವ ಪಾತ್ರ ವಹಿಸಬೇಕು ಎಂದು ಮಾದರಿಯಾಗಿ ನಿಲ್ಲುತ್ತಾರೆ.

ನೆಹರು ಮಗಳಿಗೆ ಇಂಗ್ಲಿಷಲ್ಲಿಯೇ ಪತ್ರಗಳನ್ನು ಬರೆದಿದ್ದು. ನಂತರ ಹಿಂದಿಯೇ ಮೊದಲಾದ ಭಾಷೆಗಳಿಗೆ ಅನುವಾದವಾಯ್ತು. ಶ್ರೀ ಕಪಟರಾಳ ಕೃಷ್ಣರಾಯರು ನೆಹರೂ ಜೊತೆಗೆ ಅನೇಕ ಪತ್ರ ವ್ಯವಹಾರಗಳನ್ನು ಮಾಡಿ, ತಪ್ಪುಒಪ್ಪುಗಳನ್ನೆಲ್ಲಾ ಗಮನಿಸಿಕೊಂಡು 1946ರಲ್ಲಿಯೇ ಕನ್ನಡಕ್ಕೆ ತಂದವರು. ಪ್ರಕಾಶಕರು ಹುಬ್ಬಳ್ಳಿಯ ಸಾಹಿತ್ಯ ಭಂಡಾರದ ಮಂಗಳೂರು ಗೋವಿಂದರಾಯರು.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...