Homeಮುಖಪುಟಮಗಳಿಗೆ ತಂದೆಯ ಓಲೆಗಳು : ಇಂದಿರಾಗೆ ಜವಹರಲಾಲ್ ನೆಹರು ಪತ್ರಗಳು

ಮಗಳಿಗೆ ತಂದೆಯ ಓಲೆಗಳು : ಇಂದಿರಾಗೆ ಜವಹರಲಾಲ್ ನೆಹರು ಪತ್ರಗಳು

- Advertisement -
- Advertisement -

ನೆಹರು ಮತ್ತು ಕಮಲಾರವರ ಮಗಳಾದ ಇಂದಿರಾ ಬಾಲ್ಯದಲ್ಲಿ ಏಕಾಂಗಿಯಾಗಿ ದಿನಗಳನ್ನು ಕಳೆದವರು. ಕಾಯಿಲೆಯಿಂದ ಹಾಸಿಗೆ ಹಿಡಿದಿದ್ದ ತಾಯಿಯ ಜೊತೆ ಅಲಹಾಬಾದಿನ ಆನಂದಭವನದಲ್ಲಿ ವಾಸ. ತಂದೆಯೋ ಸ್ವಾತಂತ್ರ್ಯ ಚಳವಳಿಯ ಮುಖ್ಯ ಭಾಗ. ರಾಜಕೀಯ, ಬಂಧನ ಮತ್ತು ಹೋರಾಟಗಳ ಕಾರಣಗಳಿಂದಾಗಿ ಮಗಳ ಜೊತೆಗೆ “ಕ್ವಾಲಿಟಿ ಟೈಂ” ಎಂದಿಗೂ ಕೊಡಲಾಗುತ್ತಿರಲಿಲ್ಲ. ಇಂದಿರಾಗೆ ಹುಟ್ಟಿದ ಒಬ್ಬ ತಮ್ಮನೋ ಬಲು ಬೇಗ ಕಣ್ಮುಚ್ಚಿದ. ರವೀಂದ್ರನಾಥ್ ಠಾಗೋರರ ಶಾಂತಿನಿಕೇತನವೂ ಸೇರಿದಂತೆ ಶಾಲೆಗೆಂದು ಹೋದರೂ ನಾನಾ ಕಾರಣಗಳಿಂದ ಶಾಲೆಗಳನ್ನು ಪದೇ ಪದೇ ಬದಲಾಯಿಸಬೇಕಾಗುತ್ತಿತ್ತು. ಕೊನೆಗೆ ಠಾಗೋರರ ಶಾಂತಿನಿಕೇತನ, ವಿಶ್ವಭಾರತಿ ವಿಶ್ವವಿದ್ಯಾಲಯವಾಗಿ ಯೂನಿವರ್ಸಿಟಿ ಆಫ್ ಆಕ್ಸ್‍ಫರ್ಡ್‍ಗೆ ಶೈಕ್ಷಣಿಕವಾಗಿ ಸೇರ್ಪಡೆಯಾದ್ದರಿಂದ ಇಂದಿರಾ ಪದವಿಯನ್ನು ಪಡೆದಿದ್ದು ಅಲ್ಲಿಂದಲೇ. ಇಷ್ಟೆಲ್ಲದರ ಜೊತೆಗೆ ಅವರ ಆರೋಗ್ಯವೂ ಕೆಡುತ್ತಿದ್ದರಿಂದ ಪದೇಪದೇ ಚಿಕಿತ್ಸೆಗಾಗಿ ಸ್ವಿಜರ್‍ಲೆಂಡ್‍ಗೆ ಹೋಗುತ್ತಿದ್ದರು.

ಇವು ಔಪಚಾರಿಕ ಶಿಕ್ಷಣವನ್ನು ಪಡೆಯಲು ಇಂದಿರಾ ಎದುರಿಸುತ್ತಿದ್ದ ಅಡ್ಡಿ ಆತಂಕಗಳು. ಅಕಾಡೆಮಿಕ್ ಆಗಿ ಇಂದಿರಾ ಉತ್ತಮವಾದ ಮೇಲ್ಗೈಯನ್ನು ಸಾಧಿಸಿದ್ದು ಅಷ್ಟಕಷ್ಟೇ ಆಗಿದ್ದರೂ ಬಹು ಸುಶಿಕ್ಷಿತ ವ್ಯಕ್ತಿಯಾಗಿ ರೂಪುಗೊಂಡಿದ್ದು ತಂದೆ ನೀಡಿದ ಅನೌಪಚಾರಿಕ ಶಿಕ್ಷಣದಿಂದ.
ಸ್ವಾತಂತ್ರ್ಯ ಹೋರಾಟದಲ್ಲಿ, ರಾಜಕೀಯವಾಗಿ ಸಕ್ರಿಯವಾಗಿದ್ದ ನೆಹರು ನೇರವಾಗಿ ಮಗಳ ಜೊತೆಗೆ ಇರಲಾಗದಿದ್ದರೂ ಮಗಳನ್ನು ಸುಶಿಕ್ಷಿತೆಯನ್ನಾಗಿ ಮಾಡುವ ಜವಾಬ್ದಾರಿಯನ್ನು ಹೊಂದಿದ್ದರು. ಅದರ ಸಾಕ್ಷಿಯೇ “ಮಗಳಿಗೆ ತಂದೆಯ ಓಲೆಗಳು.”

10-11 ವರ್ಷದ ಹುಡುಗಿಗೆ ನೈನಿತಾಲ್ ಜೈಲಿನಿಂದ ಬರೆದಿರುವ ಈ ಪತ್ರಗಳು ಜಗತ್ತಿನ ಚರಿತ್ರೆಯನ್ನು, ಮಾನವನ ಸಾಂಸ್ಕೃತಿಕ ಮತ್ತು ಸಾಮಾಜಿಕ ಜೀವನದ ವಿಕಾಸವನ್ನು ತೆರೆದಿಡುತ್ತಾ ಹೋಗುತ್ತದೆ. ಇದು ಆ ಕಾಲಘಟ್ಟದ ಒಂದು ಸಂಕ್ಷಿಪ್ತ ವಿಶ್ವಕೋಶ. ಬರೆದಿರುವುದೋ ಮಗಳನ್ನು ದೃಷ್ಟಿಯಲ್ಲಿ ಇಟ್ಟುಕೊಂಡಿರುವುದಾದರೂ ತಮ್ಮ ಈ ಪತ್ರಗಳು ಸಂಗ್ರಹ ಯೋಗ್ಯವಾಗಿ ಮುಂದೊಂದು ದಿನ ಅತ್ಯುತ್ತಮ ಪುಸ್ತಕಗಳ ಸಾಲಿಗೆ ಸೇರಲಿದೆ ಎಂಬ ದೂರದೃಷ್ಟಿಯೂ ಅವರಿಗಿತ್ತು. ಹಾಗಾಗಿ ಒಂದೇ ಪ್ರಯತ್ನದಲ್ಲಿ ಮಗಳನ್ನು ಸುಶಿಕ್ಷಿತಳನ್ನಾಗಿಸುವುದು ಮತ್ತು ಗ್ರಂಥರಚನೆ ಎರಡಕ್ಕೂ ಆಕರಗಳನ್ನು ಸೃಷ್ಟಿಸಿದರು.

ಭೂಮಿಯ ಉಗಮ, ಸಸ್ಯ, ಪ್ರಾಣಿಗಳ ಸೃಷ್ಟಿ, ಜನಾಂಗಗಳು ಹೇಗೆ ಹುಟ್ಟಿದವು, ನಾಗರಿಕತೆ, ಧರ್ಮಗಳ ಉದಯ ಹೇಗಾಯಿತು, ಪ್ರಾಚೀನಕಾಲದಲ್ಲಿ ಇತಿಹಾಸ ಹೇಗೆ ಬರೆಯಲ್ಪಟ್ಟಿತು, ಒಕ್ಕಲುತನ ಹೇಗೆ ಪ್ರಾರಂಭವಾಯಿತು ಹೀಗೆ ಸಂಕೀರ್ಣವಾದ ವಿಷಯಗಳನ್ನು ಸರಳಶೈಲಿಯ ಪತ್ರಗಳಲ್ಲಿ ಇತಿಹಾಸ, ಮಾನವಶಾಸ್ತ್ರೀಯ ಅಧ್ಯಯನ, ಸಂಸ್ಕೃತಿಗಳ ಪರಿಚಯ, ಭಾಷೆಗಳ ಬಗ್ಗೆ, ಜನಾಂಗಗಳ ಸಂಘರ್ಷ ಮತ್ತು ಬೆರಗುಗಳು ಎಲ್ಲವನ್ನೂ ಹೇಳಿಕೊಡುತ್ತಾರೆ. ಸ್ವಾರಸ್ಯವೆಂದರೆ ತೀರಾ ವಿವರಣೆಗಳಿಂದಲೂ ಕೂಡಿರದೆ, ಹಾಗೆಂದು ಪರಿವಿಡಿಯಂತೆ ಬರಿಯ ಪಟ್ಟಿಯಾಗಿರದೇ ತಿಳಿಯಲೇಬೇಕಾದ ವಿಷಯವನ್ನು ಸಂಕ್ಷಿಪ್ತಗೊಳಿಸಿ ಸಾಂದ್ರಗೊಳಿಸುವಂತಹ ಚಾತುರ್ಯ ಈ ಬರವಣಿಗೆಯಲ್ಲಿದೆ.

ಒಂದು ಹುಡುಗಿ ತನ್ನ ತಂದೆ ತೋರುತ್ತಿರುವ ತನ್ನೆಲ್ಲಾ ಪ್ರೀತಿಯ ಜೊತೆಗೆ ನೀಡುವ ಆದ್ಯತೆಯನ್ನು ಗ್ರಹಿಸಲು ಸಾಧ್ಯವಾಗುತ್ತದೆ. ಜ್ಞಾನ ಮತ್ತು ಸಂವೇದನೆ ಎರಡಕ್ಕೂ ಒತ್ತು ನೀಡಿರುವ ನೆಹರು ಓದುಗನು ಯಾವುದನ್ನು ಸ್ವೀಕರಿಸಬೇಕು, ಹೇಗೆ ಗ್ರಹಿಸಬೇಕು, ಕೆಲವೊಂದರ ಬಗ್ಗೆ ತಿಳಿವಳಿಕೆ ಇದ್ದು ಅವನ್ನು ಹೇಗೆ ನಿರಾಕರಿಸಬೇಕು ಎಂದೂ ಸೂಕ್ಷ್ಮವಾಗಿ ನಿರ್ದೇಶನಗಳನ್ನು ನೀಡಿದ್ದಾರೆ. ತಮ್ಮ ಧೋರಣೆಯನ್ನು ಹೇರದೇ ಅರಿವಿನ ಗ್ರಹಿಕೆಗೆ ಬೇಕಾದ ಸೂಚನೆಗಳಿವು ಎಂಬ ಕಾಳಜಿ ಗುಪ್ತವಾಗಿ ಬರವಣಿಗೆಯ ತಂತ್ರದಲ್ಲಿದೆ ಮತ್ತು ಪದಗಳ ಬಳಕೆಯಲ್ಲಿದೆ. ವಾಕ್ಯಗಳ ರಚನೆಯಲ್ಲಿ ವಿಚಾರವನ್ನೂ, ಬೆರಗನ್ನೂ ಮತ್ತು ನವಿರಾಗಿ ಭಾವುಕತೆಯನ್ನೂ ಬೆಸೆಯುತ್ತಾ ಹೋಗುತ್ತಾರೆ.

ಓದಿನ ಬಗ್ಗೆ, ಜಗತ್ತಿನ ಬಗ್ಗೆ, ಜನರ ಬಗ್ಗೆ, ವಿಸ್ಮಯವನ್ನೂ ಮತ್ತು ಪ್ರೀತಿಯನ್ನೂ ಹುಟ್ಟಿಸುವಂತಹ ಕೃತಿಯಾಗಿ ಇದು ಕಾಣುತ್ತದೆ. ವಿಶೇಷವೆಂದರೆ, ಜಗತ್ತಿನ ಎಲ್ಲ ಜನರಿಗೂ ಮತ್ತು ಓದುತ್ತಿರುವ ನನಗೂ ಸಂಬಂಧವಿದೆ ಎಂಬಂತಹ ಭಾವವಿದೆ. ಈ ಅನೌಪಚಾರಿಕ ಶಿಕ್ಷಣ ಬರಿಯ ಇಂದಿರಾಗೆ ಮಾತ್ರವಲ್ಲ ಯಾವುದೇ ಓದುವ ಪ್ರೀತಿಯುಳ್ಳವನಿಗೆ ಸಂವೇದನೆಯನ್ನು ಉಂಟುಮಾಡಬಲ್ಲದು. ಓದುಗ ಮತ್ತು ಬರಹಗಾರನ ನಡುವೆ ಆತ್ಮೀಯತೆಯನ್ನು ಮೊಳೆಸಬಲ್ಲದು. ಆಪ್ತತೆಯನ್ನು ಬೆಸೆಯಬಲ್ಲದು. ಏನೇ ಆದರೂ ತಂದೆ ಮಗಳಿಗೆ ಬರೆದದ್ದು ಅಲ್ಲವೇ!

ಜಗತ್ತೆಂದರೆ ಹಲವು ರಾಷ್ಟ್ರಗಳ ಒಂದು ದೊಡ್ಡ ಕುಟುಂಬ ಎಂದು ಅರಿವಾಗಲೆಂಬ ನೆಹರೂರವರ ಆಶಯವನ್ನು ಈ ಪತ್ರಗಳ ಸಂಗ್ರಹ ಧ್ವನಿಸುವುದಂತೂ ಸತ್ಯ.

ಪ್ರೀತಿಯ ಇಂದಿರಾ ಎಂದು ಸಂಬೋಧಿಸುತ್ತಾ ಯಾವುದೇ ಕತೆ ಕಾದಂಬರಿಗಿಂತ ರೋಚಕವಾಗಿರುವ ಜಗತ್ತಿನ ಕತೆಯನ್ನು ತೆರೆದಿಡುವ ನೆಹರೂ ಓರ್ವ ತಂದೆಯಾಗಿ ಮಕ್ಕಳ ಶಿಕ್ಷಣದ ವಿಷಯದಲ್ಲಿ ಯಾವ ಪಾತ್ರ ವಹಿಸಬೇಕು ಎಂದು ಮಾದರಿಯಾಗಿ ನಿಲ್ಲುತ್ತಾರೆ.

ನೆಹರು ಮಗಳಿಗೆ ಇಂಗ್ಲಿಷಲ್ಲಿಯೇ ಪತ್ರಗಳನ್ನು ಬರೆದಿದ್ದು. ನಂತರ ಹಿಂದಿಯೇ ಮೊದಲಾದ ಭಾಷೆಗಳಿಗೆ ಅನುವಾದವಾಯ್ತು. ಶ್ರೀ ಕಪಟರಾಳ ಕೃಷ್ಣರಾಯರು ನೆಹರೂ ಜೊತೆಗೆ ಅನೇಕ ಪತ್ರ ವ್ಯವಹಾರಗಳನ್ನು ಮಾಡಿ, ತಪ್ಪುಒಪ್ಪುಗಳನ್ನೆಲ್ಲಾ ಗಮನಿಸಿಕೊಂಡು 1946ರಲ್ಲಿಯೇ ಕನ್ನಡಕ್ಕೆ ತಂದವರು. ಪ್ರಕಾಶಕರು ಹುಬ್ಬಳ್ಳಿಯ ಸಾಹಿತ್ಯ ಭಂಡಾರದ ಮಂಗಳೂರು ಗೋವಿಂದರಾಯರು.


ಇದನ್ನೂ ಓದಿ: ನೆಹರು ಒಬ್ಬ ನೈಜ ಭಾರತೀಯ ಜಾತ್ಯತೀತ ವ್ಯಕ್ತಿ: ಇಂದಿನ ಕೋಮುವಾದಕ್ಕೆ ಅವರನ್ನು ದೂರಬೇಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...