Homeಕರ್ನಾಟಕಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಎಂಬ ಸಂದೇಶ ಹರಡಿದ ಕಿಡಿಗೇಡಿಗಳನ್ನು ಮಟ್ಟ ಹಾಕಿ: ಹೆಚ್.ಡಿ. ಕುಮಾರಸ್ವಾಮಿ

ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಎಂಬ ಸಂದೇಶ ಹರಡಿದ ಕಿಡಿಗೇಡಿಗಳನ್ನು ಮಟ್ಟ ಹಾಕಿ: ಹೆಚ್.ಡಿ. ಕುಮಾರಸ್ವಾಮಿ

ಶಾಸಕರು, ಸಚಿವರಿದ್ದರೂ ಬಂಧಿಸಿ; ಸಮಾಜ ಒಡೆಯುವವರಿಗೆ ಬಹಿಷ್ಕಾರ ಹಾಕಿ ಎಂದು ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ

- Advertisement -
- Advertisement -

ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧ ಹೇರಿ ಎಂಬ ಸಂದೇಶ ಹರಡಿದ ಕಿಡಿಗೇಡಿಗಳನ್ನು ಮಟ್ಟ ಹಾಕಬೇಕಾಗಿದ್ದು, ಈ ವಿಷಯದಲ್ಲಿ ಸರಕಾರ ಸುಮ್ಮನಿರಬಾರದು ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ನಾಯಕ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದು, ಈ ಕೃತ್ಯಗಳಲ್ಲಿ ಶಾಸಕರು, ಸಚಿವರಿದ್ದರೂ ಬಂಧಿಸಿ, ಸಮಾಜ ಒಡೆಯುವವರಿಗೆ ಬಹಿಷ್ಕಾರ ಹಾಕಿ ಎಂದು ಮಂಗಳವಾರ ಬೆಂಗಳೂರಿನಲ್ಲಿ ಒತ್ತಾಯಿಸಿದ್ದಾರೆ.

ವಿಧಾನಸೌಧ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಇಷ್ಟೆಲ್ಲಾ ಆಗಿದ್ದರೂ ಸರಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಎಲ್ಲವನ್ನೂ ನೋಡಿಕೊಂಡು ಮುಖ್ಯಮಂತ್ರಿಗಳು ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇರಳ: ಹಿಂದೂ ಅಲ್ಲದ ಕಾರಣಕ್ಕೆ ಭರತನಾಟ್ಯ ಕಲಾವಿದೆಯ ಕಾರ್ಯಕ್ರಮ ರದ್ದುಮಾಡಿದ ದೇವಾಲಯ

“ಮುಖ್ಯಮಂತ್ರಿ ಮತ್ತು ಗೃಹ ಮಂತ್ರಿ ಒಂದು ಸಮುದಾಯಕ್ಕೆ ಮೀಸಲಲ್ಲ. ಆರೂವರೆ ಕೋಟಿ ಕನ್ನಡಿಗರಿಗೆ ಸೇರಿದವರು. ಎಲ್ಲರ ರಕ್ಷಣೆ ಸರಕಾರದ ಹೊಣೆ. ಒಂದು ಸಮುದಾಯವನ್ನು ರಕ್ಷಣೆ ಮಾಡಿಕೊಂಡು ಸರಕಾರ ನಡೆಸಲು ಆಗದು. ಇಂತದ್ದನ್ನು ಕನ್ನಡಿಗರು ಸಹಿಸುವುದಿಲ್ಲ. ಅವರನ್ನು ಕಿತ್ತು ಒಗೆಯುತ್ತಾರೆ” ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

“ನಾನು ವಾಟ್ಸಪ್ ನಲ್ಲಿ ಬಂದ ಈ ಸಂದೇಶವನ್ನು ಗಮನಿಸಿದೆ. ಇಂಥ ಕಿಡಿಗೇಡಿ ಸಂದೇಶಗಳನ್ನು ಯಾರು ಹರಡುತ್ತಿದ್ದಾರೆ? ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಮಟ್ಟ ಹಾಕಬೇಕು. ಒಂದು ವೇಳೆ ಶಾಸಕರು, ಸಚಿವರೇ ಇದ್ದರೂ ಅವರನ್ನು ಬಂಧಿಸಬೇಕು ಹಾಗೂ ಅವರಿಗೆ ಜನರೇ ಬಹಿಷ್ಕಾರ ಹಾಕಬೇಕು” ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

“ಮುಸ್ಲಿಂ ಸಮುದಾಯದ ವ್ಯಾಪಾರಗಳಿಗೆ ನಿಷೇಧ ಹೇರಬೇಕು ಎಂದು ಜನರಿಗೆ ತಲೆ ಕೆಡಿಸುವ ಕೆಲಸ ಆಗುತ್ತಿದೆ. ಹಿಂದುಗಳ ಅಂಗಡಿಗಳಿಗೆ ಮಾತ್ರ ಹೋಗಿ ಅಂತ ಸಂದೇಶ ಹರಡುತ್ತಿದ್ದಾರೆ.‌ ಇವರು ನಮ್ಮ ದೇಶವನ್ನು ಎಲ್ಲಿಗೆ ಒಯ್ಯುತ್ತಿದ್ದಾರೆ? ಸರ್ವ ಜನಾಂಗದ ತೋಟವನ್ನು ಸರ್ವನಾಶ ಮಾಡುತ್ತಿದ್ದಾರೆ. ಇಂತವರನ್ನು ಸುಮ್ಮನೆ ಬಿಡಬಾರದು. ಹಿಂದೂಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ ಎಂದರೆ ಅರ್ಥವೇನು?” ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ.

“ನಾಡಿನ ಜನರು ಈ ಪರಿಸ್ಥಿತಿ ಅನುಭವಿಸಲಿಕ್ಕೆ ಒಂದು ಕಡೆ ಕಾಂಗ್ರೆಸ್, ಮತ್ತೊಂದು ಕಡೆ ಬಿಜೆಪಿಯವರೆ ಕಾರಣ. ಈ ಕಾರಣಕ್ಕೆ ನಾನು ಹಿಂದೂ ಸಮುದಾಯದ ಕೆಲ ಯುವಕರಿಗೆ ಕೈ ಮುಗಿದು ರಾಜ್ಯ ಹಾಳು ಮಾಡಿಕೊಳ್ಳಬೇಡಿ ಎಂದು ಹೇಳುತ್ತೇನೆ. ರಾಜಕೀಯಕ್ಕಾಗಿ ಮನಸುಗಳನ್ನು ಕೆಡಿಸುವ ಕಿಡಿಗೇಡಿಗಳ ಮಾತು ಕೇಳಬೇಡಿ. ಯಾರು ಕೂಡ ಇಲ್ಲಿ ಶಾಶ್ವತ ಅಲ್ಲ. ಕರ್ನಾಟಕ ಶಾಂತಿಯ ತೋಟ, ಇದನ್ನು ಹಾಳು ಮಾಡಬೇಡಿ” ಎಂದು ಅವರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಮುಸ್ಲಿಮರಿಗೆ ಜಾತ್ರೆಯಲ್ಲಿ ಬಹಿಷ್ಕಾರ: ರಾಜ್ಯ ಸರ್ಕಾರ ವಿರುದ್ದ ಬಿಜೆಪಿ MLC ಹೆಚ್‌. ವಿಶ್ವನಾಥ್‌ ಆಕ್ರೋಶ

“ಬಿಜೆಪಿಯವರು ರಾಜ್ಯವನ್ನು ಕೆಟ್ಟ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಈ ರಾಜ್ಯದಲ್ಲಿ ಸರ್ಕಾರ ಎನ್ನುವುದು ಇದೆಯಾ? ಏನು ಮಾಡುತ್ತಿದೆ ಸರ್ಕಾರ? ಸಿಎಂ ವಿರುದ್ಧ ಮಾತಾಡಿದ್ದಕ್ಕೆ ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಇಂಥ ವಿಚಾರಗಳ ಬಗ್ಗೆ ಪ್ರಚೋದನೆ ಮಾಡುವವರನ್ನು ಕೂಡ ಅರೆಸ್ಟ್ ಮಾಡಿ. ಈ ರೀತಿಯಲ್ಲಿ ಪ್ರಚೋದನೆ ಮಾಡಿದರೆ ಶಾಸಕನೇ ಆಗಿರಲಿ, ಸಚಿವನೇ ಆಗಿರಲಿ ಅವರನ್ನು ಕೂಡ ಅರೆಸ್ಟ್ ಮಾಡಿ” ಎಂದು ಅವರು ಆಗ್ರಹಿಸಿದ್ದಾರೆ.

“ಸಮಾಜವನ್ನು ಒಡೆಯುವ ಇವರು ದೇಶ ಉಳಿಸುವವರಲ್ಲ. ದೇಶ ಉಳಿಸುವವರು ಜನರು, ಮುಗ್ಧ ಪ್ರಜೆಗಳು. ನಾನು ಯುವಕರಿಗೆ ಹೇಳುತ್ತೇನೆ, ಯುವಕರು ಇದಕ್ಕೆ ಬಲಿಯಾಗಬಾರದು. ಇದರಿಂದ ನಿಮ್ಮ ಭವಿಷ್ಯ ರೂಪಿಸಲು ಆಗಲ್ಲ. ಹಿಂದೂ ಯುವಕರಿಗೆ ಕೈ ಮುಗಿದು ಹೇಳುತ್ತೇನೆ. ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ” ಎಂದು ಅವರು ಕಿವಿಮಾತು ಹೇಳಿದ್ದಾರೆ.

“ಎಲ್ಲರೂ ಒಂದಲ್ಲ ಒಂದು ದಿನ ಮಣ್ಣಿಗೆ ಹೋಗುತ್ತಾರೆ. ಕಿಡಿಗೇಡಿಗಳು ಕೂಡ ಮಣ್ಣಿಗೆ ಹೋಗುತ್ತಾರೆ. ಕರ್ನಾಟಕ ರಾಜ್ಯ ಶಾಂತಿಯ ತೋಟ, ಹಾಳು ಮಾಡಬೇಡಿ. ಇಂತಹ ವ್ಯಕ್ತಿಗಳನ್ನು ಕರ್ನಾಟಕದ ಜನರು ಬಹಿಷ್ಕಾರ ಮಾಡಬೇಕು. ಸಮಾಜದಿಂದ ಹೊರ ಹಾಕಬೇಕು. ಇಲ್ಲದಿದ್ದರೆ ಮುಂದೆ ಕರ್ನಾಟಕಕ್ಕೆ ಒಳ್ಳೆಯ ದಿನಗಳು ಬರಲ್ಲ” ಎಂದು ಮಾಜಿ ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದ್ದಾರೆ.

“ರಾಜ್ಯದಲ್ಲಿ ಇಂಥ ಕೃತ್ಯಗಳು ನಡೆಯುತ್ತಿದ್ದರೆ ಸದನದಲ್ಲಿ ಸಭಾಧ್ಯಕ್ಷರು ಚುನಾವಣೆ ಸುಧಾರಣೆ ಬಗ್ಗೆ ಚರ್ಚೆ ಇಟ್ಟುಕೊಂಡಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಚರ್ಚೆ? ನನಗೆ ಈ ಕಲಾಪದಲ್ಲಿ ಭಾಗಿಯಾಗುವ ಉದ್ದೇಶ ಇರಲಿಲ್ಲ. ಆದರೆ ಇಂಥ ಸಮಾಜಘಾತುಕ ಸಂದೇಶಗಳ ಬಗ್ಗೆ, ಇವುಗಳ ಹಿಂದೆ ಇರುವವರನ್ನು ಹೊರಗೆ ಎಳೆಯಬೇಕು ಎನ್ನುವ ಬಗ್ಗೆ ಮಾತನಾಡಲು ಕಲಾಪಕ್ಕೆ ಬಂದೆ. ಸದನದಲ್ಲಿ ಇಂಥ ವಿಚಾರ ಚರ್ಚೆ ಆಗಬೇಕು” ಎಂದು ಕುಮಾರಸ್ವಾಮಿ ಅವರು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...