Homeಮುಖಪುಟದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

ದೆಹಲಿಯ ಲೆಫ್ಟಿನೆಂಟ್ ಗವರ್ನರ್ ತಮ್ಮನ್ನೇ ನ್ಯಾಯಾಲಯ ಎಂದು ಭಾವಿಸಿರುವಂತಿದೆ: ಸುಪ್ರೀಂ ಕೋರ್ಟ್ ಕಿಡಿ

- Advertisement -
- Advertisement -

ಸುಪ್ರೀಂ ಕೋರ್ಟ್‌ ಆದೇಶ ಉಲ್ಲಂಘಿಸಿ ಉತ್ತರ ಅರಾವಳಿ ಚಿರತೆ ವನ್ಯಜೀವಿ ಕಾರಿಡಾರ್‌ ಆಗಿರುವ ದೆಹಲಿ ರಿಜ್‌ ಅರಣ್ಯ ಪ್ರದೇಶದಲ್ಲಿ ಸುಮಾರು 1,100 ಮರಗಳನ್ನು ಕಡಿಯಲು ನಿರ್ದೇಶನ ನೀಡುವಾಗ ದೆಹಲಿ ಅಭಿವೃದ್ಧಿ ಪ್ರಾಧಿಕಾರದ (ಡಿಡಿಎ) ಅಧ್ಯಕ್ಷರೂ ಆಗಿರುವ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು ತಮ್ಮ ವಿವೇಚನೆ ಬಳಸಿಲ್ಲ ಎಂದು ಸುಪ್ರೀಂ ಕೋರ್ಟ್‌ ಶುಕ್ರವಾರ ಕಿಡಿಕಾರಿದೆ.

ನ್ಯಾಯಾಲಯದ ಪೂರ್ವಾನುಮತಿ ಪಡೆಯದೆ ಮರಗಳನ್ನು ಕಡಿಯಲು ಲೆ. ಗವರ್ನರ್‌ ಅನುಮತಿಸಿದ್ದಕ್ಕೆ ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ ಮತ್ತು ಉಜ್ಜಲ್ ಭುಯಾನ್ ಅವರಿದ್ದ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಅಲ್ಲದೆ ತಮ್ಮ ಪಾತ್ರ ಮುಚ್ಚಿಡಲು ಲೆ. ಗವರ್ನರ್‌ ಯತ್ನಿಸಿದ್ದನ್ನು ಖಂಡಿಸಿತು. ಮರ ಕಡಿಯಲು ತಾನು ನಿರ್ದೇಶನ ನೀಡಿದ್ದಾಗಿ ವಿಚಾರಣೆಯ ಮೊದಲ ದಿನವೇ ಲೆ. ಗವರ್ನರ್‌ ತಿಳಿಸಬೇಕಿತ್ತು ಎಂದು ಪೀಠ ಹೇಳಿದೆ.

ಮೊದಲ ದಿನವೇ ಲೆ. ಗವರ್ನರ್‌ ನಿರ್ದೇಶನ ನೀಡಿದ್ದಾರೆ ಎಂಬುವುದನ್ನು ನಮಗೆ ತಿಳಿಸಬೇಕಿತ್ತು. ಮೂರು ದಿನ ಆ ವಿಷಯ ಮುಚ್ಚಿಡಲಾಯಿತು. ಅಲ್ಲದೆ ಲೆ. ಗವರ್ನರ್‌ ಸಕ್ಸೇನಾ ಅವರು ತಮ್ಮನ್ನು ತಾವೇ ನ್ಯಾಯಾಲಯ ಎಂದು ಭಾವಿಸಿದಂತಿದೆ ಎಂದು ನ್ಯಾಯಾಲಯ ಕಿಡಿಕಾರಿದೆ. ಲೆ. ಗವರ್ನರ್‌ ಸೇರಿದಂತೆ ಎಲ್ಲರೂ ಪ್ರಕರಣದಲ್ಲಿ ತಪ್ಪು ಮಾಡಿದ್ದು, ನ್ಯಾಯಾಲಯಕ್ಕೆ ಸ್ಪಷ್ಟೀಕರಣ ನೀಡುವ ಬದಲು ಕೃತ್ಯವನ್ನು ಮುಚ್ಚಿಡಲು ಮುಂದಾಗಿದ್ದಾರೆ ಎಂದಿದೆ.

ಈ ಬೆಳವಣಿಗೆಗಳು ವಿಷಾದಕರ ಎಂದಿರುವ ನ್ಯಾಯಾಲಯ ಲೆ. ಗವರ್ನರ್‌ ಕ್ರಮಗಳನ್ನು ಸಮರ್ಥಿಸಿಕೊಂಡಿದ್ದ ಅವರ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಇದೇ ವೇಳೆ ಮರ ಕಡಿಯಲು ಅನುಮತಿಸಲಾಗದು ಎಂದು ಲೆ. ಗವರ್ನರ್‌ಗೆ ತಿಳಿಸಲಾಗಿತ್ತೇ ಎಂಬ ಬಗ್ಗೆ ಸರ್ಕಾರಿ ಅಧಿಕಾರಿಗಳು ಮತ್ತು ಡಿಡಿಎ ಅಧಿಕಾರಿಗಳು ತನಗೆ ತಿಳಿಸಬೇಕು ಎಂದು ಸುಪ್ರೀಂ ಕೋರ್ಟ್‌ ತಿಳಿಸಿದೆ. ಅಲ್ಲದೆ ಲೆ. ಗವರ್ನರ್‌ ಅಣತಿಯಂತೆ ಮರ ಕಡಿಯಲು ನಿರ್ಧರಿಸಲಾಗಿತ್ತೇ ಅಥವಾ ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಲಾಗಿತ್ತೆ ಎಂಬುದನ್ನು ವಿವರಿಸುವಂತೆಯೂ ಡಿಡಿಎಗೆ ಅದು ನಿರ್ದೇಶಿಸಿದೆ.

ಯಾರ ಸೂಚನೆಯ ಮೇರೆಗೆ ಅವರು ಕ್ರಮಕ್ಕೆ ಮುಂದಾಗಿದ್ದಾರೆ ಎಂದು ತಿಳಿಸುವಂತೆ ಮರ ಕಡಿದಿದ್ದ ಗುತ್ತಿಗೆದಾರರಿಗೆ ನೋಟಿಸ್ ಜಾರಿ ಮಾಡಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಸರ್ಕಾರ ವಿವರಿಸಬೇಕು ಎಂದು ಕೂಡ ಪೀಠ ತಾಕೀತು ಮಾಡಿದೆ.

ಇದನ್ನೂ ಓದಿ : ಉಪ ಚುನಾವಣೆ : 13 ಕ್ಷೇತ್ರಗಳ ಪೈಕಿ 10ರಲ್ಲಿ ಇಂಡಿಯಾ ಒಕ್ಕೂಟದ ಪಕ್ಷಗಳಿಗೆ ಗೆಲುವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗಾಲ್ಯಾಂಡ್‌| ಕೇಂದ್ರದ ‘ವಂದೇ ಮಾತರಂ’ ಕಡ್ಡಾಯ ನಿರ್ದೇಶನ ವಿರೋಧಿಸಿ ನಾಗಾ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆ

ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ಸಮಯದಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರ ನೀಡಿರುವ ನಿರ್ದೇಶನವನ್ನು ವಿರೋಧಿಸಿ ಸೋಮವಾರ ನಾಗಾ ವಿದ್ಯಾರ್ಥಿ ಒಕ್ಕೂಟದ (ಎನ್‌ಎಸ್‌ಎಫ್) ಬ್ಯಾನರ್...

‘ಹೇಡಿತನದ, ಅವಿವೇಕದ ಹಿಂಸಾಚಾರ’: 400 ಜನರನ್ನು ಬಲಿತೆಗೆದುಕೊಂಡ ಕಾಬೂಲ್ ಆಸ್ಪತ್ರೆಯ ಮೇಲಿನ ಪಾಕ್ ದಾಳಿ ಖಂಡಿಸಿದ ಭಾರತ 

ಕಾಬೂಲ್‌ನ ಆಸ್ಪತ್ರೆಯ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯನ್ನು ಭಾರತ ಮಂಗಳವಾರ ಖಂಡಿಸಿದೆ. ಈ ದಾಳಿಯಲ್ಲಿ ಕನಿಷ್ಠ 400 ಜನರು ಅಸ್ವಸ್ಥರಾಗಿ 250 ಜನರು ಗಾಯಗೊಂಡಿದ್ದರು. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA)...

ಮೂಡುಬಿದಿರೆ ಠಾಣೆ ಇನ್‌ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ: ತನಿಖೆಗೆ ಕಮಿಷನರ್ ಆದೇಶ

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸಂದೇಶ್ ಬಿ.ಜಿ ವಿರುದ್ಧ ಮಹಿಳೆಯರಿಗೆ ಲೈಂಗಿಕ, ಮಾನಸಿಕ ಕಿರುಕುಳ ನೀಡಿದ್ದಲ್ಲದೆ, ಹಣ ಕೊಡುವಂತೆ ಪೀಡಿಸಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದ್ದು, ಈ...

ಅಸ್ಸಾಂ: ರಂಜಾನ್ ಆಹಾರ ವ್ಯವಸ್ಥೆಗಾಗಿ ಮೀನು ಹಿಡಿಯುತ್ತಿದ್ದ ಮುಸ್ಲಿಂ ಸಹೋದರರ ಮೇಲೆ ಬಿಎಸ್‌ಎಫ್ ಗುಂಡಿನ ದಾಳಿ: ಗಂಭೀರ ಗಾಯ

ಅಸ್ಸಾಂನ ದಕ್ಷಿಣ ಸಲ್ಮಾರಾ–ಮಂಕಚಾರ್ ಜಿಲ್ಲೆಯ ಇಬ್ಬರು ಸಹೋದರರು ಭಾರತದ ಭೂಪ್ರದೇಶದೊಳಗಿನ ನದಿನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿದ್ದಾಗ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಸಿಬ್ಬಂದಿ ಗುಂಡು ಹಾರಿಸಿ ಪ್ರಾಣಕ್ಕಾಗಿ ಹೋರಾಡುತ್ತಿದ್ದಾರೆ. ಈ ಘಟನೆ ಮಾರ್ಚ್ 8-9, 2026...

ಊನಾ ದಲಿತ ದೌರ್ಜನ್ಯ ಪ್ರಕರಣ: ಐವರು ದೋಷಿಗಳೆಂದು ತೀರ್ಪು ನೀಡಿದ ನ್ಯಾಯಾಲಯ; 37 ಆರೋಪಿಗಳು ಖುಲಾಸೆ

ದೇಶದಲ್ಲಿ ನಡೆಯುತ್ತಿರುವ ದಲಿತ ದೌರ್ಜನ್ಯ ಪ್ರಕರಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ಗುಜರಾತ್‌ನ ಊನಾ ದಲಿತರ ಮೇಲೆ ಹಲ್ಲೆ ಪ್ರಕರಣದಲ್ಲಿ, ಗಿರ್ ಸೋಮನಾಥ್ ಜಿಲ್ಲೆಯ ವೆರಾವಲ್ ನ್ಯಾಯಾಲಯವು ಸೋಮವಾರ ತನ್ನ ತೀರ್ಪು ನೀಡಿದ್ದು,...

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...