Homeಎಕಾನಮಿನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ಬ್ಯಾಂಕಿಂಗ್, ಐಟಿ, ಆಟೋ ಮೊಬೈಲ್, ಸಿಮೆಂಟ್‌, ವಿದ್ಯುತ್‌ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಎಲ್‌.ಐ.ಸಿಯ ಕೋಟ್ಯಾಂತರ ಬೆಲೆ ಬಾಳುವ ಷೇರುಗಳನ್ನು ಹೊಂದಿದೆ. ಆದರೂ ಸರ್ಕಾರ ಇದನ್ನೇ ಮಾರಲು ಹೊರಟಿದೆ..

- Advertisement -
- Advertisement -

ದೇಶದ ಸಾರ್ವಜನಿಕ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ ದೇಶ-ವಿದೇಶಗಳ 65ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ನೂರಾರು ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಿದೆ. ಹೀಗೆ ಹೂಡಿಕೆ ಮಾಡಿರುವ ಶೇರುಗಳ ಡಿವಿಡೆಂಡ್ ಒಂದರಿಂದಲೇ ವಾರ್ಷಿಕ  1 ಲಕ್ಷ 76 ಸಾವಿರ ಕೋಟಿ ರೂಪಾಯಿ ಲಾಭಾಂಶ ಪಡೆದಿರುವ ಸಂಸ್ಥೆ ದೇಶಕ್ಕೆ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡುತ್ತಲೇ ಬರುತ್ತಿದೆ. ಲಾಭದ-ಪೈಪೋಟಿ ಜೊತೆಗೆ ಜನರ ವಿಶ್ವಾಸ ಗಳಿಸುತ್ತ ಸರ್ಕಾರಕ್ಕೂ ಲಾಭದ ಪಾಲು ಕೊಡುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಜೀವ ವಿಮಾ ನಿಗಮ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಹೂಡಿಕೆ ಮಾಡಿದೆ. ಸರ್ಕಾರಿ ಮತ್ತು ಖಾಸಗೀ ಸೇರಿಂದತೆ 21 ಬ್ಯಾಂಕ್ ಗಳಲ್ಲಿ ಕೋಟ್ಯಂತರ ರೂಪಾಯಿ ಶೇರುಗಳನ್ನು ಹೊಂದಿದೆ. ಐಡಿಬಿಐಯಲ್ಲಿ ಶೇ.51ರಷ್ಟು ಶೇರುಗಳನ್ನು ತೊಡಗಿಸಿದೆ.  ಆಕ್ಸಿಸ್ ಬ್ಯಾಂಕ್ ನಲ್ಲಿ ಶೇ.10.37ರಷ್ಟು, ಐಸಿಐಸಿಐ ಬ್ಯಾಂಕ್ ನಲ್ಲಿ ಶೆ.10.37ರಷ್ಟು, ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ 9.25ರಷ್ಟು, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ 7.4ರಷ್ಟು, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 7.3ರಷ್ಟು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶೇ.6.4ರಷ್ಟು, ಕರ್ನಾಟಕ ಬ್ಯಾಂಕ್ ನಲ್ಲಿ ಶೇ.4.97ರಷ್ಟು ಹೂಡಿಕೆ ಮಾಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ 5 ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಲ್ಲೂ ಎಲ್.ಐ.ಸಿ ಶೇರುಗಳನ್ನು ಹೂಡಿಕೆ ಮಾಡಿದೆ. ವಿಶ್ವದ ಐಟಿ ದಿಗ್ಗಜ ಇನ್ಫೋಸಿಸ್ ನಲ್ಲಿ ಶೇ.5.85ರಷ್ಟು ಶೇರುಗಳನ್ನು ತೊಡಗಿಸಿದೆ. ವಿಪ್ರೋದಲ್ಲಿ ಶೇ.4.81ರಷ್ಟು, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನಲ್ಲಿ ಶೇ.3.98 ಹಾಗೂ ಒರೆಕಲ್ ಪಿಸ್‌ನಲ್ಲಿ 2.12ರಷ್ಟು ಶೇರುಗಳನ್ನು ಹಾಕಿದೆ.

ಕನಿಷ್ಟ 5 ಯುಟಿಲಿಟಿ ಕಂಪನಿಗಳಲ್ಲೂ ಹೂಡಿಕೆ ಮಾಡಿರುವ ಎಲ್ಐಸಿ ಅಲ್ಲಿಂದಲೂ ಲಾಂಭಾಂಶ ಪಡೆಯುತ್ತಿದೆ. ಬಾಟ ಕಂಪನಿಯಲ್ಲಿ ಶೇ.3.05ರಷ್ಟು, ಪೆಡಿಲೈಟ್ ಇಂಡಸ್ಟ್ರೀಯಲ್ಲಿ 1.56ರಷ್ಟು, ವಿಡಿಯೋ ಕಾನ್ ಕಂಪನಿಯಲ್ಲಿ 4.56ರಷ್ಟು ಶೇರುಗಳನ್ನು ತೊಡಗಿಸಿದೆ. ಔಷಧಿ ಕಂಪನಿಗಳಲ್ಲೂ ಎಲ್ಐಸಿ ತನ್ನ ಪಾರುಪತ್ಯವನ್ನು ಮೆರೆದಿದೆ. ಐದು ಪ್ರತಿಷ್ಠಿತ ಕಂಪನಿಗಳಾದ ಸನ್ ಫಾರ್ಮ, ಡಾ.ರೆಡ್ಡಿ ಲ್ಯಾಬರೋಟರಿ, ಕೆಡಿಲಾ ಹೆಲ್ತ್ ಕೇರ್ ಕಂಪನಿಗಳಲ್ಲಿ  ಶೇ. 14ರಷ್ಟು ಹಣವನ್ನು ಹೂಡಿಕೆ ಮಾಡಿದೆ.

ಅಖಿಲ ಭಾರತ ವಿಮಾ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಹೇಳುವಂತೆ, ವಿಮಾ ನಿಗಮದಲ್ಲಿ ಹೂಡಿಕೆ ವಿಭಾಗವಿದೆ. ಅದು ಯಾವ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ವರುತ್ತದೆ ಎಂಬ ಬಗ್ಗೆ ಆಲೋಚಿಸಿ ಹಣವನ್ನು ತೊಡಗಿಸುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಐಸಿ ಕೂಡ ಮಾರುಕಟ್ಟೆಯಲ್ಲಿ ಇರಲೇಬೇಕು. ಹಾಗಾಗಿ ಹೂಡಿಕೆ ವಿಭಾಗ ಬ್ಲೂಚಿಪ್ ಕಂಪನಿಗಳಲ್ಲಿ ಹೂಡಿಕೆಗೆ ತೊಡಗುತ್ತದೆ. ಅತ್ಯಂತ ವಿಶ್ವಾಸಾರ್ಹ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳಲ್ಲಿ ಹೂಡುವುದರಿಂದ ಲಾಭವೂ ಬರುತ್ತದೆ. ಪೈಪೋಟಿಯನ್ನೂ ನೀಡಿದಂತಾಗುತ್ತದೆ. ಪಾಲಿಸಿದಾರರು ಮತ್ತು ಸರ್ಕಾರಕ್ಕೆ ಲಾಭವನ್ನು ನೀಡಲು ಅನುಕೂಲವಾಗುತ್ತದೆ ಎನ್ನುತ್ತಾರೆ.

ದೇಶದ 5 ಪ್ರಮುಖ ಆಟೋ ಮೊಬೈಲ್ ಕಂಪನಿಗಳಲ್ಲು ಎಲ್ಐಸಿ ಕೋಟ್ಯಂತರ ರೂಪಾಯಿ ಹೂಡಿದೆ. ಈ ಕಂಪನಿಗಳ ಪೈಕಿ ಟಿವಿಎಸ್ ನಲ್ಲಿ 1.7ರಷ್ಟು ಹೂಡಿಕೆ ಮಾಡಿದ್ದರೆ ಬಜಾಜ್ ಕಂಪನಿಯಲ್ಲಿ 4.6ರಷ್ಟು ಹಾಗೂ ಹಿರೋ ಹೋಂಡಾ ಕಂಪನಿಯಲ್ಲಿ ಶೇ.5.54ರಷ್ಟು ಮತ್ತು ಅಶೋಕ ಲೈಲ್ಯಾಂಡ್ ನಲ್ಲಿ 1.36ರಷ್ಟು ಶೇರುಗಳನ್ನು ತೊಡಗಿಸಲಾಗಿದೆ. ಜೊತೆಗೆ ಒಎಂಸಿ ಕಂಪನಿಗಳಲ್ಲೂ ಹಣ ತೊಡಗಿಸಲಾಗಿದೆ. ಕ್ಯಾಸ್ಟ್ರೋಲ್ ಕಂಪನಿಯಲ್ಲಿ 10.32ರಷ್ಟು, ಓಎನ್.ಜಿ.ಸಿಯಲ್ಲಿ 9.48ರಷ್ಟು ಐಓಸಿಎಲ್ ನಲ್ಲಿ 6.51 ಮತ್ತು ಬಿಪಿಸಿಲ್ ನಲ್ಲಿ 5.88ರಷ್ಟು ಶೇರುಗಳನ್ನು ಹೂಡಿಕೆ ಮಾಡಲಾಗಿದೆ.

ವಿದ್ಯುತ್ ವಲಯದ 5 ಕಂಪನಿಗಳಾದ ಪವರ್ ಗ್ರೀಡ್ ನಲ್ಲಿ 4.89 ರಷ್ಟು ಕೆಇಸಿ ಇನ್  ನಲ್ಲಿ ಶೇ.1.7ರಷ್ಟು, ಜೆ.ಇ. ಪವರ್ ಕಂಪನಿಯಲ್ಲಿ 1.63ರಷ್ಟು ಶೇರುಗಳು ಇವೆ. ದೇಶದಲ್ಲಿ ಹೆಸರು ಮಾಡಿರುವ ಸಿಮೆಂಟ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಲಾಗಿದೆ. ಎಸಿಸಿ-6.5ರಷ್ಟು, ಅಂಬುಜ ಸಿಮೆಂಟ್ ಕಂಪನಿಯಲ್ಲಿ 4.80ರಷ್ಟು, ಲಕ್ಷ್ಮಿ ಸಿಮೆಂಟ್ ನಲ್ಲಿ 2.46ರಷ್ಟು ಆಲ್ಟ್ರಾಟೆಕ್ ನಲ್ಲಿ ಶೇ.4.06ರಷ್ಟು ಹೂಡಿಕೆಯಾಗಿದೆ. ಅಂದರೆ ನಾಲ್ಕು ಸಿಮೆಂಟ್ ಕಂಪನಿಗಳಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದು ಅಲ್ಲಿಂದಲೂ ಲಾಭದ ಹಣವನ್ನು ಎಲ್ಐಸಿ ಪಡೆದುಕೊಳ್ಳುತ್ತಿದೆ.

ಉಕ್ಕು ತಯಾರಿಕೆ ಕಂಪನಿಗಳಾದ ಎಸ್ಎಐಎಲ್ ನಲ್ಲಿ 9.6ರಷ್ಟು, ಟಾಟಾ ಸ್ಟೀಲ್ ಕಂಪನಿಯಲ್ಲಿ 9ರಷ್ಟು ವೇದಾಂತ ಕಂಪನಿಯಲ್ಲಿ 6.39ರಷ್ಟು, ನಾಲ್ಕೋದಲ್ಲಿ 5.27ರಷ್ಟು ಹೂಡಕೆಯಾಗಿದೆ. ಎರಡು ಖಾಸಗಿ ವಿಮಾ ಸಂಸ್ಥೆಗಳಲ್ಲೂ ಭಾರತೀಯ ಜೀವ ವಿಮಾ ನಿಗಮದಿಂದ ಹೂಡಿಕೆ ಮಾಡಿದ್ದು ಅಂತಾರಾಷ್ಟ್ರೀಯ ಮಟ್ಟದ ಐಟಿಸಿ 16.32ರಷ್ಟು ಎಲ್ ಅಂಡ್ ಟಿ ಕಂಪನಿಯಲ್ಲಿ 16.9ರಷ್ಟು ಶೇರುಗಳನ್ನು ತೊಡಗಿಸಿ ಪ್ರತಿಯೊಂದು ಕ್ಷೇತ್ರದಿಂದಲೂ ಲಾಭ ಮಾಡುತ್ತಿದೆ. 2017ರಲ್ಲಿ  ಶೇರುಗಳ ಡಿವಿಡೆಂಡ್ ನಿಂದ 1.59 ಲಕ್ಷ ಕೋಟಿ ರೂಪಾಯಿ ಲಾಭ ಬಂದಿದೆ. ಅದು 2018ನೇ ಸಾಲಿನಲ್ಲಿ ಲಾಭಾಂಶದಲ್ಲಿ ಶೇ. 0.17ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಅಂದರೆ 1.76 ಲಕ್ಷ ಕೋಟಿ ರೂಪಾಯಿ ಹಣ ಎಲ್ಐಸಿಗೆ ಬಂದಿದೆ.

ಎಲ್ಲಾ ವಲಯದಲ್ಲೂ ಹಣ ತೊಡಗಿಸಿ ಪೈಪೋಟಿ ನೀಡುತ್ತಿರುವ, ಲಾಭ ಗಳಿಸುತ್ತಿರುವ ಭಾರತೀಯ ಜೀವ ವಿಮಾ ನಿಗಮದ ಶೇರುಗಳನ್ನು ಸರ್ಕಾರ ಮಾರಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಯಾವುದೇ ಕಾರಣಕ್ಕೂ ಭಾರತ ಸರ್ಕಾರ ಇಂತಹ ಜನವಿರೋಧಿ ಕೃತ್ಯಕ್ಕೆ ಕೈಹಾಕದೆ ಸಾರ್ವಜನಿಕ ಉದ್ಯಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜನರಿಗೆ ಉದ್ಯೋಗ ನೀಡಬೇಕು. ಪಾಲಿಸಿದಾರರು ನೌಕರರ ಹಿತಕಾಯಲು ಮುಂದಾಗಬೇಕಾದ ಜರೂರತ್ತು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...