Homeಎಕಾನಮಿನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ಬ್ಯಾಂಕಿಂಗ್, ಐಟಿ, ಆಟೋ ಮೊಬೈಲ್, ಸಿಮೆಂಟ್‌, ವಿದ್ಯುತ್‌ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಎಲ್‌.ಐ.ಸಿಯ ಕೋಟ್ಯಾಂತರ ಬೆಲೆ ಬಾಳುವ ಷೇರುಗಳನ್ನು ಹೊಂದಿದೆ. ಆದರೂ ಸರ್ಕಾರ ಇದನ್ನೇ ಮಾರಲು ಹೊರಟಿದೆ..

- Advertisement -
- Advertisement -

ದೇಶದ ಸಾರ್ವಜನಿಕ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ ದೇಶ-ವಿದೇಶಗಳ 65ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ನೂರಾರು ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಿದೆ. ಹೀಗೆ ಹೂಡಿಕೆ ಮಾಡಿರುವ ಶೇರುಗಳ ಡಿವಿಡೆಂಡ್ ಒಂದರಿಂದಲೇ ವಾರ್ಷಿಕ  1 ಲಕ್ಷ 76 ಸಾವಿರ ಕೋಟಿ ರೂಪಾಯಿ ಲಾಭಾಂಶ ಪಡೆದಿರುವ ಸಂಸ್ಥೆ ದೇಶಕ್ಕೆ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡುತ್ತಲೇ ಬರುತ್ತಿದೆ. ಲಾಭದ-ಪೈಪೋಟಿ ಜೊತೆಗೆ ಜನರ ವಿಶ್ವಾಸ ಗಳಿಸುತ್ತ ಸರ್ಕಾರಕ್ಕೂ ಲಾಭದ ಪಾಲು ಕೊಡುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಜೀವ ವಿಮಾ ನಿಗಮ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಹೂಡಿಕೆ ಮಾಡಿದೆ. ಸರ್ಕಾರಿ ಮತ್ತು ಖಾಸಗೀ ಸೇರಿಂದತೆ 21 ಬ್ಯಾಂಕ್ ಗಳಲ್ಲಿ ಕೋಟ್ಯಂತರ ರೂಪಾಯಿ ಶೇರುಗಳನ್ನು ಹೊಂದಿದೆ. ಐಡಿಬಿಐಯಲ್ಲಿ ಶೇ.51ರಷ್ಟು ಶೇರುಗಳನ್ನು ತೊಡಗಿಸಿದೆ.  ಆಕ್ಸಿಸ್ ಬ್ಯಾಂಕ್ ನಲ್ಲಿ ಶೇ.10.37ರಷ್ಟು, ಐಸಿಐಸಿಐ ಬ್ಯಾಂಕ್ ನಲ್ಲಿ ಶೆ.10.37ರಷ್ಟು, ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ 9.25ರಷ್ಟು, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ 7.4ರಷ್ಟು, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 7.3ರಷ್ಟು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶೇ.6.4ರಷ್ಟು, ಕರ್ನಾಟಕ ಬ್ಯಾಂಕ್ ನಲ್ಲಿ ಶೇ.4.97ರಷ್ಟು ಹೂಡಿಕೆ ಮಾಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ 5 ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಲ್ಲೂ ಎಲ್.ಐ.ಸಿ ಶೇರುಗಳನ್ನು ಹೂಡಿಕೆ ಮಾಡಿದೆ. ವಿಶ್ವದ ಐಟಿ ದಿಗ್ಗಜ ಇನ್ಫೋಸಿಸ್ ನಲ್ಲಿ ಶೇ.5.85ರಷ್ಟು ಶೇರುಗಳನ್ನು ತೊಡಗಿಸಿದೆ. ವಿಪ್ರೋದಲ್ಲಿ ಶೇ.4.81ರಷ್ಟು, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನಲ್ಲಿ ಶೇ.3.98 ಹಾಗೂ ಒರೆಕಲ್ ಪಿಸ್‌ನಲ್ಲಿ 2.12ರಷ್ಟು ಶೇರುಗಳನ್ನು ಹಾಕಿದೆ.

ಕನಿಷ್ಟ 5 ಯುಟಿಲಿಟಿ ಕಂಪನಿಗಳಲ್ಲೂ ಹೂಡಿಕೆ ಮಾಡಿರುವ ಎಲ್ಐಸಿ ಅಲ್ಲಿಂದಲೂ ಲಾಂಭಾಂಶ ಪಡೆಯುತ್ತಿದೆ. ಬಾಟ ಕಂಪನಿಯಲ್ಲಿ ಶೇ.3.05ರಷ್ಟು, ಪೆಡಿಲೈಟ್ ಇಂಡಸ್ಟ್ರೀಯಲ್ಲಿ 1.56ರಷ್ಟು, ವಿಡಿಯೋ ಕಾನ್ ಕಂಪನಿಯಲ್ಲಿ 4.56ರಷ್ಟು ಶೇರುಗಳನ್ನು ತೊಡಗಿಸಿದೆ. ಔಷಧಿ ಕಂಪನಿಗಳಲ್ಲೂ ಎಲ್ಐಸಿ ತನ್ನ ಪಾರುಪತ್ಯವನ್ನು ಮೆರೆದಿದೆ. ಐದು ಪ್ರತಿಷ್ಠಿತ ಕಂಪನಿಗಳಾದ ಸನ್ ಫಾರ್ಮ, ಡಾ.ರೆಡ್ಡಿ ಲ್ಯಾಬರೋಟರಿ, ಕೆಡಿಲಾ ಹೆಲ್ತ್ ಕೇರ್ ಕಂಪನಿಗಳಲ್ಲಿ  ಶೇ. 14ರಷ್ಟು ಹಣವನ್ನು ಹೂಡಿಕೆ ಮಾಡಿದೆ.

ಅಖಿಲ ಭಾರತ ವಿಮಾ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಹೇಳುವಂತೆ, ವಿಮಾ ನಿಗಮದಲ್ಲಿ ಹೂಡಿಕೆ ವಿಭಾಗವಿದೆ. ಅದು ಯಾವ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ವರುತ್ತದೆ ಎಂಬ ಬಗ್ಗೆ ಆಲೋಚಿಸಿ ಹಣವನ್ನು ತೊಡಗಿಸುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಐಸಿ ಕೂಡ ಮಾರುಕಟ್ಟೆಯಲ್ಲಿ ಇರಲೇಬೇಕು. ಹಾಗಾಗಿ ಹೂಡಿಕೆ ವಿಭಾಗ ಬ್ಲೂಚಿಪ್ ಕಂಪನಿಗಳಲ್ಲಿ ಹೂಡಿಕೆಗೆ ತೊಡಗುತ್ತದೆ. ಅತ್ಯಂತ ವಿಶ್ವಾಸಾರ್ಹ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳಲ್ಲಿ ಹೂಡುವುದರಿಂದ ಲಾಭವೂ ಬರುತ್ತದೆ. ಪೈಪೋಟಿಯನ್ನೂ ನೀಡಿದಂತಾಗುತ್ತದೆ. ಪಾಲಿಸಿದಾರರು ಮತ್ತು ಸರ್ಕಾರಕ್ಕೆ ಲಾಭವನ್ನು ನೀಡಲು ಅನುಕೂಲವಾಗುತ್ತದೆ ಎನ್ನುತ್ತಾರೆ.

ದೇಶದ 5 ಪ್ರಮುಖ ಆಟೋ ಮೊಬೈಲ್ ಕಂಪನಿಗಳಲ್ಲು ಎಲ್ಐಸಿ ಕೋಟ್ಯಂತರ ರೂಪಾಯಿ ಹೂಡಿದೆ. ಈ ಕಂಪನಿಗಳ ಪೈಕಿ ಟಿವಿಎಸ್ ನಲ್ಲಿ 1.7ರಷ್ಟು ಹೂಡಿಕೆ ಮಾಡಿದ್ದರೆ ಬಜಾಜ್ ಕಂಪನಿಯಲ್ಲಿ 4.6ರಷ್ಟು ಹಾಗೂ ಹಿರೋ ಹೋಂಡಾ ಕಂಪನಿಯಲ್ಲಿ ಶೇ.5.54ರಷ್ಟು ಮತ್ತು ಅಶೋಕ ಲೈಲ್ಯಾಂಡ್ ನಲ್ಲಿ 1.36ರಷ್ಟು ಶೇರುಗಳನ್ನು ತೊಡಗಿಸಲಾಗಿದೆ. ಜೊತೆಗೆ ಒಎಂಸಿ ಕಂಪನಿಗಳಲ್ಲೂ ಹಣ ತೊಡಗಿಸಲಾಗಿದೆ. ಕ್ಯಾಸ್ಟ್ರೋಲ್ ಕಂಪನಿಯಲ್ಲಿ 10.32ರಷ್ಟು, ಓಎನ್.ಜಿ.ಸಿಯಲ್ಲಿ 9.48ರಷ್ಟು ಐಓಸಿಎಲ್ ನಲ್ಲಿ 6.51 ಮತ್ತು ಬಿಪಿಸಿಲ್ ನಲ್ಲಿ 5.88ರಷ್ಟು ಶೇರುಗಳನ್ನು ಹೂಡಿಕೆ ಮಾಡಲಾಗಿದೆ.

ವಿದ್ಯುತ್ ವಲಯದ 5 ಕಂಪನಿಗಳಾದ ಪವರ್ ಗ್ರೀಡ್ ನಲ್ಲಿ 4.89 ರಷ್ಟು ಕೆಇಸಿ ಇನ್  ನಲ್ಲಿ ಶೇ.1.7ರಷ್ಟು, ಜೆ.ಇ. ಪವರ್ ಕಂಪನಿಯಲ್ಲಿ 1.63ರಷ್ಟು ಶೇರುಗಳು ಇವೆ. ದೇಶದಲ್ಲಿ ಹೆಸರು ಮಾಡಿರುವ ಸಿಮೆಂಟ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಲಾಗಿದೆ. ಎಸಿಸಿ-6.5ರಷ್ಟು, ಅಂಬುಜ ಸಿಮೆಂಟ್ ಕಂಪನಿಯಲ್ಲಿ 4.80ರಷ್ಟು, ಲಕ್ಷ್ಮಿ ಸಿಮೆಂಟ್ ನಲ್ಲಿ 2.46ರಷ್ಟು ಆಲ್ಟ್ರಾಟೆಕ್ ನಲ್ಲಿ ಶೇ.4.06ರಷ್ಟು ಹೂಡಿಕೆಯಾಗಿದೆ. ಅಂದರೆ ನಾಲ್ಕು ಸಿಮೆಂಟ್ ಕಂಪನಿಗಳಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದು ಅಲ್ಲಿಂದಲೂ ಲಾಭದ ಹಣವನ್ನು ಎಲ್ಐಸಿ ಪಡೆದುಕೊಳ್ಳುತ್ತಿದೆ.

ಉಕ್ಕು ತಯಾರಿಕೆ ಕಂಪನಿಗಳಾದ ಎಸ್ಎಐಎಲ್ ನಲ್ಲಿ 9.6ರಷ್ಟು, ಟಾಟಾ ಸ್ಟೀಲ್ ಕಂಪನಿಯಲ್ಲಿ 9ರಷ್ಟು ವೇದಾಂತ ಕಂಪನಿಯಲ್ಲಿ 6.39ರಷ್ಟು, ನಾಲ್ಕೋದಲ್ಲಿ 5.27ರಷ್ಟು ಹೂಡಕೆಯಾಗಿದೆ. ಎರಡು ಖಾಸಗಿ ವಿಮಾ ಸಂಸ್ಥೆಗಳಲ್ಲೂ ಭಾರತೀಯ ಜೀವ ವಿಮಾ ನಿಗಮದಿಂದ ಹೂಡಿಕೆ ಮಾಡಿದ್ದು ಅಂತಾರಾಷ್ಟ್ರೀಯ ಮಟ್ಟದ ಐಟಿಸಿ 16.32ರಷ್ಟು ಎಲ್ ಅಂಡ್ ಟಿ ಕಂಪನಿಯಲ್ಲಿ 16.9ರಷ್ಟು ಶೇರುಗಳನ್ನು ತೊಡಗಿಸಿ ಪ್ರತಿಯೊಂದು ಕ್ಷೇತ್ರದಿಂದಲೂ ಲಾಭ ಮಾಡುತ್ತಿದೆ. 2017ರಲ್ಲಿ  ಶೇರುಗಳ ಡಿವಿಡೆಂಡ್ ನಿಂದ 1.59 ಲಕ್ಷ ಕೋಟಿ ರೂಪಾಯಿ ಲಾಭ ಬಂದಿದೆ. ಅದು 2018ನೇ ಸಾಲಿನಲ್ಲಿ ಲಾಭಾಂಶದಲ್ಲಿ ಶೇ. 0.17ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಅಂದರೆ 1.76 ಲಕ್ಷ ಕೋಟಿ ರೂಪಾಯಿ ಹಣ ಎಲ್ಐಸಿಗೆ ಬಂದಿದೆ.

ಎಲ್ಲಾ ವಲಯದಲ್ಲೂ ಹಣ ತೊಡಗಿಸಿ ಪೈಪೋಟಿ ನೀಡುತ್ತಿರುವ, ಲಾಭ ಗಳಿಸುತ್ತಿರುವ ಭಾರತೀಯ ಜೀವ ವಿಮಾ ನಿಗಮದ ಶೇರುಗಳನ್ನು ಸರ್ಕಾರ ಮಾರಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಯಾವುದೇ ಕಾರಣಕ್ಕೂ ಭಾರತ ಸರ್ಕಾರ ಇಂತಹ ಜನವಿರೋಧಿ ಕೃತ್ಯಕ್ಕೆ ಕೈಹಾಕದೆ ಸಾರ್ವಜನಿಕ ಉದ್ಯಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜನರಿಗೆ ಉದ್ಯೋಗ ನೀಡಬೇಕು. ಪಾಲಿಸಿದಾರರು ನೌಕರರ ಹಿತಕಾಯಲು ಮುಂದಾಗಬೇಕಾದ ಜರೂರತ್ತು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...