Homeಎಕಾನಮಿನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ಬ್ಯಾಂಕಿಂಗ್, ಐಟಿ, ಆಟೋ ಮೊಬೈಲ್, ಸಿಮೆಂಟ್‌, ವಿದ್ಯುತ್‌ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಎಲ್‌.ಐ.ಸಿಯ ಕೋಟ್ಯಾಂತರ ಬೆಲೆ ಬಾಳುವ ಷೇರುಗಳನ್ನು ಹೊಂದಿದೆ. ಆದರೂ ಸರ್ಕಾರ ಇದನ್ನೇ ಮಾರಲು ಹೊರಟಿದೆ..

- Advertisement -
- Advertisement -

ದೇಶದ ಸಾರ್ವಜನಿಕ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ ದೇಶ-ವಿದೇಶಗಳ 65ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ನೂರಾರು ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಿದೆ. ಹೀಗೆ ಹೂಡಿಕೆ ಮಾಡಿರುವ ಶೇರುಗಳ ಡಿವಿಡೆಂಡ್ ಒಂದರಿಂದಲೇ ವಾರ್ಷಿಕ  1 ಲಕ್ಷ 76 ಸಾವಿರ ಕೋಟಿ ರೂಪಾಯಿ ಲಾಭಾಂಶ ಪಡೆದಿರುವ ಸಂಸ್ಥೆ ದೇಶಕ್ಕೆ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡುತ್ತಲೇ ಬರುತ್ತಿದೆ. ಲಾಭದ-ಪೈಪೋಟಿ ಜೊತೆಗೆ ಜನರ ವಿಶ್ವಾಸ ಗಳಿಸುತ್ತ ಸರ್ಕಾರಕ್ಕೂ ಲಾಭದ ಪಾಲು ಕೊಡುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಜೀವ ವಿಮಾ ನಿಗಮ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಹೂಡಿಕೆ ಮಾಡಿದೆ. ಸರ್ಕಾರಿ ಮತ್ತು ಖಾಸಗೀ ಸೇರಿಂದತೆ 21 ಬ್ಯಾಂಕ್ ಗಳಲ್ಲಿ ಕೋಟ್ಯಂತರ ರೂಪಾಯಿ ಶೇರುಗಳನ್ನು ಹೊಂದಿದೆ. ಐಡಿಬಿಐಯಲ್ಲಿ ಶೇ.51ರಷ್ಟು ಶೇರುಗಳನ್ನು ತೊಡಗಿಸಿದೆ.  ಆಕ್ಸಿಸ್ ಬ್ಯಾಂಕ್ ನಲ್ಲಿ ಶೇ.10.37ರಷ್ಟು, ಐಸಿಐಸಿಐ ಬ್ಯಾಂಕ್ ನಲ್ಲಿ ಶೆ.10.37ರಷ್ಟು, ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ 9.25ರಷ್ಟು, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ 7.4ರಷ್ಟು, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 7.3ರಷ್ಟು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶೇ.6.4ರಷ್ಟು, ಕರ್ನಾಟಕ ಬ್ಯಾಂಕ್ ನಲ್ಲಿ ಶೇ.4.97ರಷ್ಟು ಹೂಡಿಕೆ ಮಾಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ 5 ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಲ್ಲೂ ಎಲ್.ಐ.ಸಿ ಶೇರುಗಳನ್ನು ಹೂಡಿಕೆ ಮಾಡಿದೆ. ವಿಶ್ವದ ಐಟಿ ದಿಗ್ಗಜ ಇನ್ಫೋಸಿಸ್ ನಲ್ಲಿ ಶೇ.5.85ರಷ್ಟು ಶೇರುಗಳನ್ನು ತೊಡಗಿಸಿದೆ. ವಿಪ್ರೋದಲ್ಲಿ ಶೇ.4.81ರಷ್ಟು, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನಲ್ಲಿ ಶೇ.3.98 ಹಾಗೂ ಒರೆಕಲ್ ಪಿಸ್‌ನಲ್ಲಿ 2.12ರಷ್ಟು ಶೇರುಗಳನ್ನು ಹಾಕಿದೆ.

ಕನಿಷ್ಟ 5 ಯುಟಿಲಿಟಿ ಕಂಪನಿಗಳಲ್ಲೂ ಹೂಡಿಕೆ ಮಾಡಿರುವ ಎಲ್ಐಸಿ ಅಲ್ಲಿಂದಲೂ ಲಾಂಭಾಂಶ ಪಡೆಯುತ್ತಿದೆ. ಬಾಟ ಕಂಪನಿಯಲ್ಲಿ ಶೇ.3.05ರಷ್ಟು, ಪೆಡಿಲೈಟ್ ಇಂಡಸ್ಟ್ರೀಯಲ್ಲಿ 1.56ರಷ್ಟು, ವಿಡಿಯೋ ಕಾನ್ ಕಂಪನಿಯಲ್ಲಿ 4.56ರಷ್ಟು ಶೇರುಗಳನ್ನು ತೊಡಗಿಸಿದೆ. ಔಷಧಿ ಕಂಪನಿಗಳಲ್ಲೂ ಎಲ್ಐಸಿ ತನ್ನ ಪಾರುಪತ್ಯವನ್ನು ಮೆರೆದಿದೆ. ಐದು ಪ್ರತಿಷ್ಠಿತ ಕಂಪನಿಗಳಾದ ಸನ್ ಫಾರ್ಮ, ಡಾ.ರೆಡ್ಡಿ ಲ್ಯಾಬರೋಟರಿ, ಕೆಡಿಲಾ ಹೆಲ್ತ್ ಕೇರ್ ಕಂಪನಿಗಳಲ್ಲಿ  ಶೇ. 14ರಷ್ಟು ಹಣವನ್ನು ಹೂಡಿಕೆ ಮಾಡಿದೆ.

ಅಖಿಲ ಭಾರತ ವಿಮಾ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಹೇಳುವಂತೆ, ವಿಮಾ ನಿಗಮದಲ್ಲಿ ಹೂಡಿಕೆ ವಿಭಾಗವಿದೆ. ಅದು ಯಾವ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ವರುತ್ತದೆ ಎಂಬ ಬಗ್ಗೆ ಆಲೋಚಿಸಿ ಹಣವನ್ನು ತೊಡಗಿಸುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಐಸಿ ಕೂಡ ಮಾರುಕಟ್ಟೆಯಲ್ಲಿ ಇರಲೇಬೇಕು. ಹಾಗಾಗಿ ಹೂಡಿಕೆ ವಿಭಾಗ ಬ್ಲೂಚಿಪ್ ಕಂಪನಿಗಳಲ್ಲಿ ಹೂಡಿಕೆಗೆ ತೊಡಗುತ್ತದೆ. ಅತ್ಯಂತ ವಿಶ್ವಾಸಾರ್ಹ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳಲ್ಲಿ ಹೂಡುವುದರಿಂದ ಲಾಭವೂ ಬರುತ್ತದೆ. ಪೈಪೋಟಿಯನ್ನೂ ನೀಡಿದಂತಾಗುತ್ತದೆ. ಪಾಲಿಸಿದಾರರು ಮತ್ತು ಸರ್ಕಾರಕ್ಕೆ ಲಾಭವನ್ನು ನೀಡಲು ಅನುಕೂಲವಾಗುತ್ತದೆ ಎನ್ನುತ್ತಾರೆ.

ದೇಶದ 5 ಪ್ರಮುಖ ಆಟೋ ಮೊಬೈಲ್ ಕಂಪನಿಗಳಲ್ಲು ಎಲ್ಐಸಿ ಕೋಟ್ಯಂತರ ರೂಪಾಯಿ ಹೂಡಿದೆ. ಈ ಕಂಪನಿಗಳ ಪೈಕಿ ಟಿವಿಎಸ್ ನಲ್ಲಿ 1.7ರಷ್ಟು ಹೂಡಿಕೆ ಮಾಡಿದ್ದರೆ ಬಜಾಜ್ ಕಂಪನಿಯಲ್ಲಿ 4.6ರಷ್ಟು ಹಾಗೂ ಹಿರೋ ಹೋಂಡಾ ಕಂಪನಿಯಲ್ಲಿ ಶೇ.5.54ರಷ್ಟು ಮತ್ತು ಅಶೋಕ ಲೈಲ್ಯಾಂಡ್ ನಲ್ಲಿ 1.36ರಷ್ಟು ಶೇರುಗಳನ್ನು ತೊಡಗಿಸಲಾಗಿದೆ. ಜೊತೆಗೆ ಒಎಂಸಿ ಕಂಪನಿಗಳಲ್ಲೂ ಹಣ ತೊಡಗಿಸಲಾಗಿದೆ. ಕ್ಯಾಸ್ಟ್ರೋಲ್ ಕಂಪನಿಯಲ್ಲಿ 10.32ರಷ್ಟು, ಓಎನ್.ಜಿ.ಸಿಯಲ್ಲಿ 9.48ರಷ್ಟು ಐಓಸಿಎಲ್ ನಲ್ಲಿ 6.51 ಮತ್ತು ಬಿಪಿಸಿಲ್ ನಲ್ಲಿ 5.88ರಷ್ಟು ಶೇರುಗಳನ್ನು ಹೂಡಿಕೆ ಮಾಡಲಾಗಿದೆ.

ವಿದ್ಯುತ್ ವಲಯದ 5 ಕಂಪನಿಗಳಾದ ಪವರ್ ಗ್ರೀಡ್ ನಲ್ಲಿ 4.89 ರಷ್ಟು ಕೆಇಸಿ ಇನ್  ನಲ್ಲಿ ಶೇ.1.7ರಷ್ಟು, ಜೆ.ಇ. ಪವರ್ ಕಂಪನಿಯಲ್ಲಿ 1.63ರಷ್ಟು ಶೇರುಗಳು ಇವೆ. ದೇಶದಲ್ಲಿ ಹೆಸರು ಮಾಡಿರುವ ಸಿಮೆಂಟ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಲಾಗಿದೆ. ಎಸಿಸಿ-6.5ರಷ್ಟು, ಅಂಬುಜ ಸಿಮೆಂಟ್ ಕಂಪನಿಯಲ್ಲಿ 4.80ರಷ್ಟು, ಲಕ್ಷ್ಮಿ ಸಿಮೆಂಟ್ ನಲ್ಲಿ 2.46ರಷ್ಟು ಆಲ್ಟ್ರಾಟೆಕ್ ನಲ್ಲಿ ಶೇ.4.06ರಷ್ಟು ಹೂಡಿಕೆಯಾಗಿದೆ. ಅಂದರೆ ನಾಲ್ಕು ಸಿಮೆಂಟ್ ಕಂಪನಿಗಳಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದು ಅಲ್ಲಿಂದಲೂ ಲಾಭದ ಹಣವನ್ನು ಎಲ್ಐಸಿ ಪಡೆದುಕೊಳ್ಳುತ್ತಿದೆ.

ಉಕ್ಕು ತಯಾರಿಕೆ ಕಂಪನಿಗಳಾದ ಎಸ್ಎಐಎಲ್ ನಲ್ಲಿ 9.6ರಷ್ಟು, ಟಾಟಾ ಸ್ಟೀಲ್ ಕಂಪನಿಯಲ್ಲಿ 9ರಷ್ಟು ವೇದಾಂತ ಕಂಪನಿಯಲ್ಲಿ 6.39ರಷ್ಟು, ನಾಲ್ಕೋದಲ್ಲಿ 5.27ರಷ್ಟು ಹೂಡಕೆಯಾಗಿದೆ. ಎರಡು ಖಾಸಗಿ ವಿಮಾ ಸಂಸ್ಥೆಗಳಲ್ಲೂ ಭಾರತೀಯ ಜೀವ ವಿಮಾ ನಿಗಮದಿಂದ ಹೂಡಿಕೆ ಮಾಡಿದ್ದು ಅಂತಾರಾಷ್ಟ್ರೀಯ ಮಟ್ಟದ ಐಟಿಸಿ 16.32ರಷ್ಟು ಎಲ್ ಅಂಡ್ ಟಿ ಕಂಪನಿಯಲ್ಲಿ 16.9ರಷ್ಟು ಶೇರುಗಳನ್ನು ತೊಡಗಿಸಿ ಪ್ರತಿಯೊಂದು ಕ್ಷೇತ್ರದಿಂದಲೂ ಲಾಭ ಮಾಡುತ್ತಿದೆ. 2017ರಲ್ಲಿ  ಶೇರುಗಳ ಡಿವಿಡೆಂಡ್ ನಿಂದ 1.59 ಲಕ್ಷ ಕೋಟಿ ರೂಪಾಯಿ ಲಾಭ ಬಂದಿದೆ. ಅದು 2018ನೇ ಸಾಲಿನಲ್ಲಿ ಲಾಭಾಂಶದಲ್ಲಿ ಶೇ. 0.17ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಅಂದರೆ 1.76 ಲಕ್ಷ ಕೋಟಿ ರೂಪಾಯಿ ಹಣ ಎಲ್ಐಸಿಗೆ ಬಂದಿದೆ.

ಎಲ್ಲಾ ವಲಯದಲ್ಲೂ ಹಣ ತೊಡಗಿಸಿ ಪೈಪೋಟಿ ನೀಡುತ್ತಿರುವ, ಲಾಭ ಗಳಿಸುತ್ತಿರುವ ಭಾರತೀಯ ಜೀವ ವಿಮಾ ನಿಗಮದ ಶೇರುಗಳನ್ನು ಸರ್ಕಾರ ಮಾರಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಯಾವುದೇ ಕಾರಣಕ್ಕೂ ಭಾರತ ಸರ್ಕಾರ ಇಂತಹ ಜನವಿರೋಧಿ ಕೃತ್ಯಕ್ಕೆ ಕೈಹಾಕದೆ ಸಾರ್ವಜನಿಕ ಉದ್ಯಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜನರಿಗೆ ಉದ್ಯೋಗ ನೀಡಬೇಕು. ಪಾಲಿಸಿದಾರರು ನೌಕರರ ಹಿತಕಾಯಲು ಮುಂದಾಗಬೇಕಾದ ಜರೂರತ್ತು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಂಟು ವರ್ಷ ಜೈಲಿನಲ್ಲಿ ಕಳೆದ ಬಳಿಕ ಯುಎಪಿಎ ಅಡಿ ಬಂಧಿತ ಇಬ್ಬರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲ ಜೈಲಿನಲ್ಲಿ ಕಳೆದ ನಂತರ, ದೆಹಲಿ ನ್ಯಾಯಾಲಯವು ಗುರುವಾರ (ಮಾರ್ಚ್ 19, 2026) ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಲ್ಪಟ್ಟ ಇಬ್ಬರು ವ್ಯಕ್ತಿಗಳನ್ನು ಖುಲಾಸೆಗೊಳಿಸಿದೆ...

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...