Homeಎಕಾನಮಿನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ನೂರಾರು ಕಂಪನಿಗಳಲ್ಲಿ ಸಾವಿರಾರು ಕೋಟಿ ಹೂಡಿರುವ ಎಲ್.ಐ.ಸಿ : ಆಗಿದ್ದರೂ ಮಾರುತ್ತಿರುವುದೇಕೆ?

ಬ್ಯಾಂಕಿಂಗ್, ಐಟಿ, ಆಟೋ ಮೊಬೈಲ್, ಸಿಮೆಂಟ್‌, ವಿದ್ಯುತ್‌ ಸೇರಿದಂತೆ ಹಲವು ಪ್ರತಿಷ್ಠಿತ ಕಂಪನಿಗಳಲ್ಲಿ ಎಲ್‌.ಐ.ಸಿಯ ಕೋಟ್ಯಾಂತರ ಬೆಲೆ ಬಾಳುವ ಷೇರುಗಳನ್ನು ಹೊಂದಿದೆ. ಆದರೂ ಸರ್ಕಾರ ಇದನ್ನೇ ಮಾರಲು ಹೊರಟಿದೆ..

- Advertisement -
- Advertisement -

ದೇಶದ ಸಾರ್ವಜನಿಕ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ ದೇಶ-ವಿದೇಶಗಳ 65ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳಲ್ಲಿ ನೂರಾರು ಕೋಟಿ ರೂಪಾಯಿ ಹಣವನ್ನು ಹೂಡಿಕೆ ಮಾಡಿದೆ. ಹೀಗೆ ಹೂಡಿಕೆ ಮಾಡಿರುವ ಶೇರುಗಳ ಡಿವಿಡೆಂಡ್ ಒಂದರಿಂದಲೇ ವಾರ್ಷಿಕ  1 ಲಕ್ಷ 76 ಸಾವಿರ ಕೋಟಿ ರೂಪಾಯಿ ಲಾಭಾಂಶ ಪಡೆದಿರುವ ಸಂಸ್ಥೆ ದೇಶಕ್ಕೆ ತನ್ನದೇ ಆದ ಮಹತ್ವದ ಕೊಡುಗೆಯನ್ನು ನೀಡುತ್ತಲೇ ಬರುತ್ತಿದೆ. ಲಾಭದ-ಪೈಪೋಟಿ ಜೊತೆಗೆ ಜನರ ವಿಶ್ವಾಸ ಗಳಿಸುತ್ತ ಸರ್ಕಾರಕ್ಕೂ ಲಾಭದ ಪಾಲು ಕೊಡುತ್ತಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ.

ಜೀವ ವಿಮಾ ನಿಗಮ ಬ್ಯಾಂಕಿಂಗ್ ಕ್ಷೇತ್ರದಲ್ಲೂ ಹೂಡಿಕೆ ಮಾಡಿದೆ. ಸರ್ಕಾರಿ ಮತ್ತು ಖಾಸಗೀ ಸೇರಿಂದತೆ 21 ಬ್ಯಾಂಕ್ ಗಳಲ್ಲಿ ಕೋಟ್ಯಂತರ ರೂಪಾಯಿ ಶೇರುಗಳನ್ನು ಹೊಂದಿದೆ. ಐಡಿಬಿಐಯಲ್ಲಿ ಶೇ.51ರಷ್ಟು ಶೇರುಗಳನ್ನು ತೊಡಗಿಸಿದೆ.  ಆಕ್ಸಿಸ್ ಬ್ಯಾಂಕ್ ನಲ್ಲಿ ಶೇ.10.37ರಷ್ಟು, ಐಸಿಐಸಿಐ ಬ್ಯಾಂಕ್ ನಲ್ಲಿ ಶೆ.10.37ರಷ್ಟು, ಭಾರತೀಯ ಸ್ಟೇಟ್ ಬ್ಯಾಂಕ್ ನಲ್ಲಿ 9.25ರಷ್ಟು, ಪಂಜಾಬ್ ಮತ್ತು ಸಿಂಧ್ ಬ್ಯಾಂಕ್ ನಲ್ಲಿ 7.4ರಷ್ಟು, ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 7.3ರಷ್ಟು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಶೇ.6.4ರಷ್ಟು, ಕರ್ನಾಟಕ ಬ್ಯಾಂಕ್ ನಲ್ಲಿ ಶೇ.4.97ರಷ್ಟು ಹೂಡಿಕೆ ಮಾಡಿದೆ.

ಮಾಹಿತಿ ತಂತ್ರಜ್ಞಾನ ಕ್ಷೇತ್ರದ 5 ಅಂತಾರಾಷ್ಟ್ರೀಯ ಮಟ್ಟದ ಸಂಸ್ಥೆಗಳಲ್ಲೂ ಎಲ್.ಐ.ಸಿ ಶೇರುಗಳನ್ನು ಹೂಡಿಕೆ ಮಾಡಿದೆ. ವಿಶ್ವದ ಐಟಿ ದಿಗ್ಗಜ ಇನ್ಫೋಸಿಸ್ ನಲ್ಲಿ ಶೇ.5.85ರಷ್ಟು ಶೇರುಗಳನ್ನು ತೊಡಗಿಸಿದೆ. ವಿಪ್ರೋದಲ್ಲಿ ಶೇ.4.81ರಷ್ಟು, ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ ನಲ್ಲಿ ಶೇ.3.98 ಹಾಗೂ ಒರೆಕಲ್ ಪಿಸ್‌ನಲ್ಲಿ 2.12ರಷ್ಟು ಶೇರುಗಳನ್ನು ಹಾಕಿದೆ.

ಕನಿಷ್ಟ 5 ಯುಟಿಲಿಟಿ ಕಂಪನಿಗಳಲ್ಲೂ ಹೂಡಿಕೆ ಮಾಡಿರುವ ಎಲ್ಐಸಿ ಅಲ್ಲಿಂದಲೂ ಲಾಂಭಾಂಶ ಪಡೆಯುತ್ತಿದೆ. ಬಾಟ ಕಂಪನಿಯಲ್ಲಿ ಶೇ.3.05ರಷ್ಟು, ಪೆಡಿಲೈಟ್ ಇಂಡಸ್ಟ್ರೀಯಲ್ಲಿ 1.56ರಷ್ಟು, ವಿಡಿಯೋ ಕಾನ್ ಕಂಪನಿಯಲ್ಲಿ 4.56ರಷ್ಟು ಶೇರುಗಳನ್ನು ತೊಡಗಿಸಿದೆ. ಔಷಧಿ ಕಂಪನಿಗಳಲ್ಲೂ ಎಲ್ಐಸಿ ತನ್ನ ಪಾರುಪತ್ಯವನ್ನು ಮೆರೆದಿದೆ. ಐದು ಪ್ರತಿಷ್ಠಿತ ಕಂಪನಿಗಳಾದ ಸನ್ ಫಾರ್ಮ, ಡಾ.ರೆಡ್ಡಿ ಲ್ಯಾಬರೋಟರಿ, ಕೆಡಿಲಾ ಹೆಲ್ತ್ ಕೇರ್ ಕಂಪನಿಗಳಲ್ಲಿ  ಶೇ. 14ರಷ್ಟು ಹಣವನ್ನು ಹೂಡಿಕೆ ಮಾಡಿದೆ.

ಅಖಿಲ ಭಾರತ ವಿಮಾ ನೌಕರರ ಸಂಘದ ಅಧ್ಯಕ್ಷ ನಂಜುಂಡಸ್ವಾಮಿ ಹೇಳುವಂತೆ, ವಿಮಾ ನಿಗಮದಲ್ಲಿ ಹೂಡಿಕೆ ವಿಭಾಗವಿದೆ. ಅದು ಯಾವ ಕಂಪನಿಗಳಲ್ಲಿ ಹೂಡಿಕೆ ಮಾಡಿದರೆ ಹೆಚ್ಚು ಲಾಭ ವರುತ್ತದೆ ಎಂಬ ಬಗ್ಗೆ ಆಲೋಚಿಸಿ ಹಣವನ್ನು ತೊಡಗಿಸುತ್ತದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಎಲ್ಐಸಿ ಕೂಡ ಮಾರುಕಟ್ಟೆಯಲ್ಲಿ ಇರಲೇಬೇಕು. ಹಾಗಾಗಿ ಹೂಡಿಕೆ ವಿಭಾಗ ಬ್ಲೂಚಿಪ್ ಕಂಪನಿಗಳಲ್ಲಿ ಹೂಡಿಕೆಗೆ ತೊಡಗುತ್ತದೆ. ಅತ್ಯಂತ ವಿಶ್ವಾಸಾರ್ಹ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕಂಪನಿಗಳಲ್ಲಿ ಹೂಡುವುದರಿಂದ ಲಾಭವೂ ಬರುತ್ತದೆ. ಪೈಪೋಟಿಯನ್ನೂ ನೀಡಿದಂತಾಗುತ್ತದೆ. ಪಾಲಿಸಿದಾರರು ಮತ್ತು ಸರ್ಕಾರಕ್ಕೆ ಲಾಭವನ್ನು ನೀಡಲು ಅನುಕೂಲವಾಗುತ್ತದೆ ಎನ್ನುತ್ತಾರೆ.

ದೇಶದ 5 ಪ್ರಮುಖ ಆಟೋ ಮೊಬೈಲ್ ಕಂಪನಿಗಳಲ್ಲು ಎಲ್ಐಸಿ ಕೋಟ್ಯಂತರ ರೂಪಾಯಿ ಹೂಡಿದೆ. ಈ ಕಂಪನಿಗಳ ಪೈಕಿ ಟಿವಿಎಸ್ ನಲ್ಲಿ 1.7ರಷ್ಟು ಹೂಡಿಕೆ ಮಾಡಿದ್ದರೆ ಬಜಾಜ್ ಕಂಪನಿಯಲ್ಲಿ 4.6ರಷ್ಟು ಹಾಗೂ ಹಿರೋ ಹೋಂಡಾ ಕಂಪನಿಯಲ್ಲಿ ಶೇ.5.54ರಷ್ಟು ಮತ್ತು ಅಶೋಕ ಲೈಲ್ಯಾಂಡ್ ನಲ್ಲಿ 1.36ರಷ್ಟು ಶೇರುಗಳನ್ನು ತೊಡಗಿಸಲಾಗಿದೆ. ಜೊತೆಗೆ ಒಎಂಸಿ ಕಂಪನಿಗಳಲ್ಲೂ ಹಣ ತೊಡಗಿಸಲಾಗಿದೆ. ಕ್ಯಾಸ್ಟ್ರೋಲ್ ಕಂಪನಿಯಲ್ಲಿ 10.32ರಷ್ಟು, ಓಎನ್.ಜಿ.ಸಿಯಲ್ಲಿ 9.48ರಷ್ಟು ಐಓಸಿಎಲ್ ನಲ್ಲಿ 6.51 ಮತ್ತು ಬಿಪಿಸಿಲ್ ನಲ್ಲಿ 5.88ರಷ್ಟು ಶೇರುಗಳನ್ನು ಹೂಡಿಕೆ ಮಾಡಲಾಗಿದೆ.

ವಿದ್ಯುತ್ ವಲಯದ 5 ಕಂಪನಿಗಳಾದ ಪವರ್ ಗ್ರೀಡ್ ನಲ್ಲಿ 4.89 ರಷ್ಟು ಕೆಇಸಿ ಇನ್  ನಲ್ಲಿ ಶೇ.1.7ರಷ್ಟು, ಜೆ.ಇ. ಪವರ್ ಕಂಪನಿಯಲ್ಲಿ 1.63ರಷ್ಟು ಶೇರುಗಳು ಇವೆ. ದೇಶದಲ್ಲಿ ಹೆಸರು ಮಾಡಿರುವ ಸಿಮೆಂಟ್ ಕಂಪನಿಗಳಲ್ಲೂ ಹಣ ಹೂಡಿಕೆ ಮಾಡಲಾಗಿದೆ. ಎಸಿಸಿ-6.5ರಷ್ಟು, ಅಂಬುಜ ಸಿಮೆಂಟ್ ಕಂಪನಿಯಲ್ಲಿ 4.80ರಷ್ಟು, ಲಕ್ಷ್ಮಿ ಸಿಮೆಂಟ್ ನಲ್ಲಿ 2.46ರಷ್ಟು ಆಲ್ಟ್ರಾಟೆಕ್ ನಲ್ಲಿ ಶೇ.4.06ರಷ್ಟು ಹೂಡಿಕೆಯಾಗಿದೆ. ಅಂದರೆ ನಾಲ್ಕು ಸಿಮೆಂಟ್ ಕಂಪನಿಗಳಲ್ಲಿ ನೂರಾರು ಕೋಟಿ ಹೂಡಿಕೆ ಮಾಡಿದ್ದು ಅಲ್ಲಿಂದಲೂ ಲಾಭದ ಹಣವನ್ನು ಎಲ್ಐಸಿ ಪಡೆದುಕೊಳ್ಳುತ್ತಿದೆ.

ಉಕ್ಕು ತಯಾರಿಕೆ ಕಂಪನಿಗಳಾದ ಎಸ್ಎಐಎಲ್ ನಲ್ಲಿ 9.6ರಷ್ಟು, ಟಾಟಾ ಸ್ಟೀಲ್ ಕಂಪನಿಯಲ್ಲಿ 9ರಷ್ಟು ವೇದಾಂತ ಕಂಪನಿಯಲ್ಲಿ 6.39ರಷ್ಟು, ನಾಲ್ಕೋದಲ್ಲಿ 5.27ರಷ್ಟು ಹೂಡಕೆಯಾಗಿದೆ. ಎರಡು ಖಾಸಗಿ ವಿಮಾ ಸಂಸ್ಥೆಗಳಲ್ಲೂ ಭಾರತೀಯ ಜೀವ ವಿಮಾ ನಿಗಮದಿಂದ ಹೂಡಿಕೆ ಮಾಡಿದ್ದು ಅಂತಾರಾಷ್ಟ್ರೀಯ ಮಟ್ಟದ ಐಟಿಸಿ 16.32ರಷ್ಟು ಎಲ್ ಅಂಡ್ ಟಿ ಕಂಪನಿಯಲ್ಲಿ 16.9ರಷ್ಟು ಶೇರುಗಳನ್ನು ತೊಡಗಿಸಿ ಪ್ರತಿಯೊಂದು ಕ್ಷೇತ್ರದಿಂದಲೂ ಲಾಭ ಮಾಡುತ್ತಿದೆ. 2017ರಲ್ಲಿ  ಶೇರುಗಳ ಡಿವಿಡೆಂಡ್ ನಿಂದ 1.59 ಲಕ್ಷ ಕೋಟಿ ರೂಪಾಯಿ ಲಾಭ ಬಂದಿದೆ. ಅದು 2018ನೇ ಸಾಲಿನಲ್ಲಿ ಲಾಭಾಂಶದಲ್ಲಿ ಶೇ. 0.17ರಷ್ಟು ಹೆಚ್ಚಳವಾಗಿರುವುದು ಕಂಡು ಬಂದಿದೆ. ಅಂದರೆ 1.76 ಲಕ್ಷ ಕೋಟಿ ರೂಪಾಯಿ ಹಣ ಎಲ್ಐಸಿಗೆ ಬಂದಿದೆ.

ಎಲ್ಲಾ ವಲಯದಲ್ಲೂ ಹಣ ತೊಡಗಿಸಿ ಪೈಪೋಟಿ ನೀಡುತ್ತಿರುವ, ಲಾಭ ಗಳಿಸುತ್ತಿರುವ ಭಾರತೀಯ ಜೀವ ವಿಮಾ ನಿಗಮದ ಶೇರುಗಳನ್ನು ಸರ್ಕಾರ ಮಾರಲು ಹೊರಟಿರುವುದು ಸರಿಯಾದ ಕ್ರಮವಲ್ಲ. ಯಾವುದೇ ಕಾರಣಕ್ಕೂ ಭಾರತ ಸರ್ಕಾರ ಇಂತಹ ಜನವಿರೋಧಿ ಕೃತ್ಯಕ್ಕೆ ಕೈಹಾಕದೆ ಸಾರ್ವಜನಿಕ ಉದ್ಯಮಗಳ ಅಭಿವೃದ್ಧಿಗೆ ಶ್ರಮಿಸಬೇಕು. ಜನರಿಗೆ ಉದ್ಯೋಗ ನೀಡಬೇಕು. ಪಾಲಿಸಿದಾರರು ನೌಕರರ ಹಿತಕಾಯಲು ಮುಂದಾಗಬೇಕಾದ ಜರೂರತ್ತು ಇದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...